Homeಮುಖಪುಟಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ 'ತಲಪತಿ' ವಿಜಯ್?

ಶೀಘ್ರದಲ್ಲೇ ರಾಜಕೀಯ ಪಕ್ಷ ಪ್ರಾರಂಭಿಸಲಿದ್ದಾರೆ ‘ತಲಪತಿ’ ವಿಜಯ್?

- Advertisement -
- Advertisement -

ಪ್ರಸ್ತುತ ತಮಿಳುನಾಡಿನಲ್ಲಿ ಆಡಳಿತದಲ್ಲಿರುವ ಡಿಎಂಕೆ ಸೇರಿದಂತೆ ಹಿಂದೆ ಆಡಳಿತ ನಡೆಸಿದ ಎಐಎಡಿಎಂಕೆ ಪ್ರಾದೇಶಿಕ ಪಕ್ಷಗಳನ್ನು ಸಿನಿಮಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದವರು ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. ನಟ ಕಮಲ್ ಹಾಸನ್ ಕೂಡ ‘ಮಕ್ಕಳ್‌ ನೀದಿ ಮೈಯಂ’ ಪಕ್ಷ ಸ್ಥಾಪಿಸಿದ್ದಾರೆ. ಇದೀಗ ಆ ಸಾಲಿಗೆ ಮತ್ತೋರ್ವ ತಮಿಳು ನಟ ವಿಜಯ್ ಸೇರಿಕೊಂಡಿದ್ದು, ತಮಿಳುನಾಡಿನಲ್ಲಿ ತಮ್ಮದೇ ರಾಜಕೀಯ ಪಕ್ಷ ಆರಂಭಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಎನ್‌ಡಿಟಿವಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

‘ವಿಜಯ್ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾವು ಭಾರತೀಯ ಚುನಾವಣಾ ಆಯೋಗದಲ್ಲಿ ಪಕ್ಷವನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲಿದ್ದೇವೆ’ ಎಂದು ನಟನ ತಂಡದ ಪ್ರಮುಖ ಸದಸ್ಯರು ಹೇಳಿದ್ದಾರೆ.

ನೋಂದಣಿಗೆ ಮುನ್ನ ನಡೆದ ಪಕ್ಷದ ಸಾಮಾನ್ಯ ಮಂಡಳಿಯ ಸಭೆಯಲ್ಲಿ ಸುಮಾರು 200 ಸದಸ್ಯರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಯನ್ನೂ ನೇಮಿಸಲಾಗಿದೆ. ಕೇಂದ್ರ ಕಾರ್ಯಕಾರಿ ಸಮಿತಿಯನ್ನು ಸಹ ರಚಿಸಲಾಗಿದೆ. ಪಕ್ಷದ ಹೆಸರು ಮತ್ತು ನೋಂದಣಿಯನ್ನು ನಿರ್ಧರಿಸಲು ಮತ್ತು ಚುನಾವಣಾ ರಾಜಕೀಯಕ್ಕೆ ಧುಮುಕಲು ವಿಜಯ್ ಅವರಿಗೆ ಪರಿಷತ್ತು ಅಧಿಕಾರ ನೀಡಿದೆ ಎನ್ನಲಾಗಿದೆ.

ವಿಜಯ್ ಯಾವಾಗ ರಾಜಕೀಯಕ್ಕೆ ಧುಮುಕುತ್ತಾರೆ ಎಂಬುದರ ಕುರಿತು ನಿಖರವಾಗಿ ತಿಳಿದಿಲ್ಲವಾದರೂ, ತಮಿಳುನಾಡಿನಲ್ಲಿ 2026ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ರಾಜಕೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಪಕ್ಷವೂ ಖಂಡಿತವಾಗಿಯೂ ‘ಕಳಗಂ’ ಅನ್ನು ಹೊಂದಿರುತ್ತದೆ ಎಂದು ವಿಜಯ್ ಆಪ್ತರು ಹೇಳಿದ್ದಾರೆ.

ತಮಿಳು ಚಿತ್ರರಂಗದ ಮುಂದಿನ ರಜನಿಕಾಂತ್ ಎಂದು ಹೇಳುವ ವಿಜಯ್ ಅವರು ಈವರೆಗೆ 68 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕಳೆದ ಒಂದು ದಶಕದಿಂದ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೋಷಿಸುತ್ತಿದ್ದಾರೆ ಎನ್ನಲಾಗಿದೆ. ಉಚಿತ ಆಹಾರ ಕಿಟ್ ವಿತರಣೆ, ಶೈಕ್ಷಣಿಕ ವಿದ್ಯಾರ್ಥಿವೇತನಗಳು, ಗ್ರಂಥಾಲಯಗಳು, ಸಂಜೆಯ ಟ್ಯೂಷನ್ ಮತ್ತು ಕಾನೂನು ಸಹಾಯ ಸೇರಿದಂತೆ ಹಲವಾರು ಚಾರಿಟಿ, ಕಲ್ಯಾಣ ಕ್ರಮಗಳಲ್ಲಿ ಅವರು ತಮ್ಮ ಅಭಿಮಾನಿ ಸಂಘಗಳನ್ನು ತೊಡಗಿಸಿದ್ದಾರೆ.

ಇತ್ತೀಚೆಗೆ ಅವರು ಪಬ್ಲಿಕ್ ಪರೀಕ್ಷೆಗಳಲ್ಲಿ ಟಾಪರ್ ಆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಕ್ಷೇತ್ರವಾರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆಗ ಅವರು ವಿದ್ಯಾರ್ಥಿಗಳಿಗೆ “ಅಂಬೇಡ್ಕರ್, ಪೆರಿಯಾರ್, ಕಾಮರಾಜ್ ಅವರಂತಹ ನಾಯಕರ ಬಗ್ಗೆ ಓದಿ, ಒಳ್ಳೆಯದನ್ನು ತೆಗೆದುಕೊಳ್ಳಿ ಮತ್ತು ಉಳಿದದ್ದನ್ನು ಬಿಡಿ” ಎಂದು ಸಲಹೆ ನೀಡಿದ್ದರು.

ವಿಜಯ್ ಅವರ ತಂದೆ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಚಂದ್ರಶೇಖರ್. ವಿಜಯ್ ಅವರ ಚಲನಚಿತ್ರಗಳು ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಪ್ರಮುಖ ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಒಳಗೊಂಡಿರುತ್ತವೆ. ಅವರು ರಾಜ್ಯದಲ್ಲಿ ಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...