Homeಮುಖಪುಟಏಪ್ರಿಲ್ 14 ರಂದು ಲಾಕ್‌ಡೌನ್ ಕೊನೆಗೊಳ್ಳುವುದೇ? ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದೇನು?

ಏಪ್ರಿಲ್ 14 ರಂದು ಲಾಕ್‌ಡೌನ್ ಕೊನೆಗೊಳ್ಳುವುದೇ? ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದೇನು?

- Advertisement -
- Advertisement -

ಕೊರೊನಾ ವೈರಸ್ ವಿರುದ್ಧ ಹೋರಾಡಲು ರಾಷ್ಟ್ರೀಯ ಲಾಕ್‌ಡೌನ್ ಅನ್ನು ಏಪ್ರಿಲ್ 15ರ ನಂತರವೂ ವಿಸ್ತರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ “ರಾಷ್ಟ್ರೀಯ ಹಿತದೃಷ್ಟಿಯಿಂದ. ಸರಿಯಾದ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

“ನಾವು ಪ್ರತಿ ನಿಮಿಷವೂ ವಿಶ್ವದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅದಕ್ಕಾಗಿಯೇ ತಜ್ಞರ ತಂಡ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸರಿಯಾದ ಸಮಯದಲ್ಲಿ ನಿರ್ಧಾರ ಘೋಷಿಸಲಾಗುವುದು” ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ವಿಡಿಯೋ ಲಿಂಕ್ ಮೂಲಕ ಕೇಂದ್ರ ಸಚಿವ ಸಂಪುಟದ ಸಭೆಯ ನಂತರ ಹೇಳಿದ್ದಾರೆ.

ಆದಾಗ್ಯೂ, ಉತ್ತರ ಪ್ರದೇಶದ ಉನ್ನತ ಅಧಿಕಾರಿಯೊಬ್ಬರು, COVID-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನರು ಇನ್ನೂ ಹೆಚ್ಚು ಸಮಯ ಕಾಯಬೇಕಾಗಬಹುದು ಎಂದು ಹೇಳಿದ್ದಾರೆ.

“ರಾಜ್ಯವು ಕೊರೋನಾ ಮುಕ್ತವಾಗಿದೆ ಎಂಬ ಖಚಿತ ಪರಿಸ್ಥಿತಿ ಇದ್ದಾಗ ಮಾತ್ರ ನಾವು ನಾವು ಲಾಕ್‌ಡೌನ್ ಅನ್ನು ತೆರವುಗೊಳಿಸಬಹುದು. ಒಬ್ಬ ಕೊರೋನಾ ಸಕಾರಾತ್ಮಕ ವ್ಯಕ್ತಿ ಉಳಿದಿದ್ದರೂ ಸಹ ಲಾಕ್‌ಡೌನ್ ತೆರೆಯುವುದು ತುಂಬಾ ಕಷ್ಟವಾಗುತ್ತದೆ. ಮತ್ತು ಅದಕ್ಕಾಗಿ ಇನ್ನು ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು” ಎಂದು ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದ್ದಾರೆ.

ಸರ್ಕಾರ ಲಾಕ್‌ ಡೌನ್‌ ಅನ್ನು ಮುಂದುವರಿಸುತ್ತದೆ ಎಂದು ಹಲವರು ನಂಬಿದ್ದಾರೆ. ಆದರೆ ಆರ್ಥಿಕ ವೆಚ್ಚಗಳು ಮತ್ತು ಅಗತ್ಯ ವಸ್ತುಗಳ ಅಗತ್ಯತೆ ಹೆಚ್ಚುತ್ತಿರುವುದರಿಂದ ಭಾಗಶಃ ತೆರವುಗೊಳಿಸಬಹುದು ಎಂದು ಇನ್ನು ಕೆಲವರು ನಂಬಿದ್ದಾರೆ.

ದೃಢೀಕರಿಸದ ವರದಿಗಳು ಹೇಳುವಂತೆ ಕೃಷಿ ಚಟುವಟಿಕೆಗಳಿಗೆ ವಿನಾಯಿತಿ ನೀಡಬಹುದು, ವಿಮಾನಗಳನ್ನು ಭಾಗಶಃ ತೆರೆಯಬಹುದು ಮತ್ತು ಸಂಪೂರ್ಣ ಲಾಕ್‌ಡೌನ್ ಹೆಚ್ಚು ಕೊರೊನಾ ಇರುವ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಬಹುದು ಎಂದು ಸೂಚನೆ ನೀಡಿವೆ.

ಲಾಕ್‌ಡೌನ್‌ ಕುರಿತು ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ನಿರ್ಧಾರ ತೆಗೆದುಕೊಳ್ಳುವ ತೀರ್ಮಾನವನ್ನು ಕೇಂದ್ರವು ರಾಜ್ಯಗಳಿಗೆ ನೀಡಬಹುದು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿನ್ನೆ ರಾಜ್ಯ ಸಂಸದರಿಗೆ ನೀಡಿದ ಸೂಚನೆಗಳು ಸಹ ಹಲವು ಊಹಾಪೋಹಗಳಿಗೆ ಉತ್ತೇಜನ ನೀಡಿವೆ. “ಏಪ್ರಿಲ್ 15 ರಂದು ಲಾಕ್‌ಡೌನ್‌ ಅನ್ನು ತೆಗೆದುಹಾಕಲಾಗುತ್ತದೆ. ಆದರೆ ಜನಸಂದಣಿ ಸೇರದಂತೆ ನಾವು ಖಚಿತಪಡಿಸಿಕೊಳ್ಳಬೇಕು. ಲಾಕ್‌ಡೌನ್ ಅನ್ನು ತೆಗೆದುಹಾಕಿದ ನಂತರ ಮತ್ತು ಜನಸಂದಣಿ ಸೇರಿದರೆ, ನಮ್ಮ ಎಲ್ಲಾ ಪ್ರಯತ್ನಗಳು ವ್ಯರ್ಥವಾಗುತ್ತವೆ” ಎಂದು ಹೇಳಿದ್ದಾರೆಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...