Homeಅಂತರಾಷ್ಟ್ರೀಯಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

- Advertisement -
- Advertisement -

ವಸಾಹತುಶಾಹಿ ಆಳ್ವಿಕೆಗೂ ಹಿಂದೆ ಜಾಗತಿಕ ವಾಣಿಜ್ಯದಲ್ಲಿ ಮುಂಚೂಣಿಯಲ್ಲಿದ್ದ ಚೀನಾ ಮತ್ತು ಭಾರತಗಳು ವಸಾಹತು ಆಳ್ವಿಕೆಯಿಂದ ಕ್ರಮೇಣ ತಮ್ಮ ಸ್ವಾಯತ್ತತೆ ಸ್ವಾತಂತ್ರ ಕಳೆದುಕೊಂಡು ಮತ್ತೆ ಅದನ್ನು ಪಡೆಯಲು ಹರಸಾಹಸ ಮಾಡಬೇಕಾಗಿ ಬಂತು. ಕೋಟ್ಯಂತರ ಜನರ ತ್ಯಾಗ ಬಲಿದಾನಗಳಿಂದ ಎರಡೂ ರಾಷ್ಟ್ರಗಳು ಸ್ವಾತಂತ್ರ್ಯ ಪಡೆಯುವಂತಾಯಿತು. ಆ ಸ್ವಾತಂತ್ರ್ಯದ ಜೊತೆಗೆ ಭಾರತದ ವಿಭಜನೆಯೂ ಆಯಿತು. ನಂತರದ ಗಡಿವಿವಾದಗಳು ವಸಾಹತು ಗಡಿರೇಖೆಗಳಿಗೂ ಹೊಸದಾಗಿ ಸೃಷ್ಟಿಯಾಗಿದ್ದ ರಾಷ್ಟ್ರಗಳ ಕಾಲ್ಪನಿಕ ಅಖಂಡ ಸಾಮ್ರಾಜ್ಯದ ದೃಷ್ಟಿಕೋನದ ಗಡಿರೇಖೆಗಳಿಗೂ ಇರುವ ಸಂಘರ್ಷವೆಂದರೆ ತಪ್ಪಾಗಲಾರದು. ವಿಭಜನೆಯ ವೇಳೆಯಲ್ಲಿ ಧಾರ್ಮಿಕ ಅಡಿಪಾಯಕ್ಕೆ ಒತ್ತುಕೊಟ್ಟು ಸೃಷ್ಟಿಯಾದ ಪಾಕಿಸ್ತಾನ ಅವನತಿಯ ಹಾದಿ ಹಿಡಿದು ಜಾಗತಿಕ ಅಪಮಾನಕ್ಕೆ ಗುರಿಯಾದರೆ, ಜಾತ್ಯತೀತತೆಯ ಅಡಿಪಾಯಕ್ಕೆ ಒತ್ತು ಕೊಟ್ಟ ಭಾರತ ಎಪ್ಪತ್ತು ವರ್ಷಗಳಿಂದ ಪ್ರಪಂಚದಲ್ಲಿ ತನ್ನದೇ ರೀತಿಯ ಅಭಿವೃದ್ದಿ ಮಾದರಿಯಿಂದ ಜಾಗತೀಕ ಮಟ್ಟದಲ್ಲಿ ಯಾವುದೇ ವಿಷಯದಲ್ಲಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಿಗೆ ಪೈಪೋಟಿ ಕೊಡುವಷ್ಟು ಬೆಳೆದು ನಿಂತಿದೆ. ಭಾರತ ಪಾಕಿಸ್ತಾನ ಸೃಷ್ಟಿಯ ಸಮಯದಲ್ಲೇ ಚೀನಾ ಸಮಾಜವಾದಿ ಕ್ರಾಂತಿಯನ್ನು ಸಾಧಿಸಿತ್ತಾದರೂ ಈಗ ಬೃಹತ್ ಗಾತ್ರದ ಬಂಡವಾಳಶಾಹಿರಾಷ್ಟ್ರವಾಗಿ ಅಮೆರಿಕ ವಿರುದ್ದ ಪೈಪೋಟಿಗೆ ನಿಂತಿದೆ. ಮೂರು ರಾಷ್ಟ್ರಗಳಿಗೆ ತನ್ನದೇ ಆದ ಮಹತ್ವಾಕಾಂಕ್ಷೆಗಳು ಮತ್ತು ಸಮಸ್ಯೆಗಳು ಇದ್ದೇ ಇದೆ. ಚೀನಾ ಮತ್ತು ಪಾಕಿಸ್ತಾನದೊಂದಿಗೆ ಭಾರತ ದೊಡ್ಡ ಗಡಿ ಪ್ರದೇಶ ಹೊಂದಿದ್ದು, ಅದರಿಂದ ಬಗೆಹರಿಯದ ಗಡಿ ವಿವಾದದಿಂದಾಗಿ ಐದು ಬಾರಿ ಯುದ್ದಕ್ಕೂ ಹೋಗಿದೆ (ನಾಲ್ಕು ಬಾರಿ ಪಾಕಿಸ್ತಾನದ ವಿರುದ್ದ, ಒಂದು ಬಾರಿ ಚೀನಾ ವಿರುದ್ದ).

ಈಗ ಮತ್ತೆ ಅದೇ ಗಡಿ ವಿವಾದ ಭುಗಿಲೆದ್ದಿದೆ. ಚೀನಾ ಒಟ್ಟೂ ಮೂರು ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆಗೂ ಮುಂದೆ ಬಂದು ತನ್ನ ಐದು ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿ ರಸ್ತೆ ಮತ್ತು ಬಂಕರ್‍ಗಳನ್ನು ನಿರ್ಮಿಸುತ್ತಿದೆ. ಉತ್ತರ ಲಡಾಖಿನ ಗಾಲ್ವನ್ ಕಣಿವೆ ಪ್ರದೇಶದಲ್ಲಿ 4 ಕಿಲೋ ಮೀಟರ್, ಮಧ್ಯ ಲಡಾಖಿನ ಪೊಗೊಂಗ್ ತ್ಸೋ ಕೆರೆಯ 3ರಿಂದ 5 ಕಿಲೋಮೀಟರ್ ದೂರದವರೆಗೂ ಆಕ್ರಮಿಸಿಕೊಂಡಿದೆ. ಸಿಕ್ಕಿಂ ಗಡಿ ಪ್ರದೇಶದ ನಕುಲದಲ್ಲೂ ಇದೆ ವರದಿಯಾಗಿದೆ. ಸ್ವತಃ ರಕ್ಷಣಾ ಮಂತ್ರಿಯಾಗಿರುವ ರಾಜ್‍ನಾಥ್ ಸಿಂಗ್ ಅವರು ವಾಸ್ತವ ಗಡಿಪ್ರದೇಶದಿಂದ ಚೀನಾ ಸೈನಿಕರು ಒಳಬಂದಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದನ್ನು ಮುಂದೆ ಮಾತುಕತೆಯ ಮೂಲಕ ಇತ್ಯರ್ಥ ಮಾಡಲಾಗುತ್ತದೆ ಎಂದಿದ್ದಾರೆ.

ಹಾಗಿದ್ದರೆ ಅಧಿಕಾರಕ್ಕೆ ಬರುವ ಮುಂಚೆ ಚೀನಾವನ್ನು ಹಿಂದಿನ ಸರ್ಕಾರದ ಸಂತೃಪ್ತತೆ ಭಾವನೆಯ ದೃಷ್ಟಿಕೋನವನ್ನು ಬಿಟ್ಟು, ಕೆಂಗಣ್ಣಿನಿಂದ ನೋಡಬೇಕು ಎಂದು ಹೇಳಲಾಗಿದ್ದು ಏನಾಯಿತು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ‘ರಾಷ್ಟ್ರವಾದಿ’ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದರ ಬಗ್ಗೆ ಇದುವರೆಗೆ ಏನೂ ಮಾತಾಡಿಲ್ಲ. ಪಾಕಿಸ್ತಾನದ ವಿರುದ್ದ ‘ನಡೆಸಲಾದ’ ಕ್ಷಿಪ್ರ ಕಾರ್ಯಾಚರಣೆ -ಸರ್ಜಿಕಲ್ ಸ್ಟ್ರೈಕ್- ಮಾಡಿ ಚೀನಾ ಸೈನಿಕರನ್ನು ಹಿಂದಕ್ಕೆ ಕಳಿಸುವ ರೀತಿಯ ಮಾತುಗಳೇ ಕೇಳಿಬರಲಿಲ್ಲ. ಇದು ಆಶ್ಚರ್ಯಕರವೇ ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ ಎಂಬುದನ್ನೂ ಚರ್ಚಿಸಬೇಕಿದೆ. ಏಕೆಂದರೆ ವಾಸ್ತವ ಗಡಿ ರೇಖೆಗಿಂತ ಪಾಕಿಸ್ತಾನದ ಸೈನಿಕರು ಬಂದಿದ್ದರು ಎಂಬ ಕಾರಣಕ್ಕೇ ಕಾರ್ಗಿಲ್ ಯುದ್ಧವಾಗಿತ್ತು. ಈಗ ಚೀನಾದ ವಿಚಾರದಲ್ಲಿ ಮಾತ್ರ – ಅದರಲ್ಲೂ ಚೀನಾವನ್ನು ಬಾಯ್ಕಾಟ್ ಮಾಡಿ ಎಂದು ದೇಶದೊಳಗೆ ನಡೆಸಲಾಗುತ್ತಿರುವ ಆನ್‍ಲೈನ್ ಪ್ರಚಾರದಲ್ಲಿ ಸರ್ಕಾರದ ಬೆಂಬಲಿಗರೇ ಹೆಚ್ಚಾಗಿರುವಾಗ – ಆಫ್‍ಲೈನ್ ಸಂಘರ್ಷಕ್ಕೆ ಮುಂದಾಗುತ್ತಿಲ್ಲ.

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

ಚೀನಾವು ತನ್ನದೊಂದು ಹೆದ್ದಾರಿ ಯೋಜನೆಯನ್ನೂ ಕೈಗೊಂಡಿರುವುದು ಎಲ್ಲರಿಗೂ ಗೊತ್ತಿದೆ. ಟಿಬೆಟ್ ಪ್ರದೇಶವನ್ನು ಲಡಾಕ್ ಮೂಲಕ ಕಾಶ್ಮೀರದ ಮೇಲ್ಬಾಗದ ಕಷ್ಗರ್ ಪ್ರದೇಶಕ್ಕೆ ಸಂಪರ್ಕ ಒದಗಿಸುವ ಹೆದ್ದಾರಿ ಮತ್ತು ಮೂಲಸಂಪರ್ಕ ಒದಗಿಸುವ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಹೆದ್ದಾರಿಯೇ ಪಾಕಿಸ್ತಾನದ ಮೂಲಕ ಹೋಗುವ 46 ಬಿಲಿಯನ್ ಡಾಲರ್ ಮೊತ್ತದ ಚೀನಾ-ಪಾಕಿಸ್ತಾನ ವಾಣಿಜ್ಯ ಓಣಿ ಎಂದು ಬಿಂಬಿಸಲಾಗುತ್ತಿದೆ. ಮೋದಿ ಸರ್ಕಾರವು ಈ ಹೊತ್ತಿನಲ್ಲಿ ತೆಗೆದುಕೊಳ್ಳಬೇಕಾದ ತೀರ್ಮಾನಗಳಿಗೆ ವಿಶೇಷ ಮಹತ್ವವಿದೆ. ಏಕೆಂದರೆ ಈ ಪ್ರಾಂತದಲ್ಲಿ ಮಾತ್ರವಲ್ಲದೇ ಪ್ರಪಂಚದಲ್ಲೇ ಅತೀ ದೊಡ್ಡ ಶಕ್ತಿಯಾಗುವ ಚೀನಾದ ಮಹತ್ವಾಕಾಂಕ್ಷೆಯ ಭಾಗವಾಗಿಯೂ ಈ ಕಾರಿಡಾರ್ ನಿರ್ಮಾಣ ಸಾಗಿದೆ. ಹೀಗಿರುವಾಗ ತಮ್ಮ ಯೋಜನೆಯೇನು ಎಂದು ಸಹಜವಾಗಿಯೇ ಏಳುವ ಯಾವುದಕ್ಕೂ ನೇರ ಉತ್ತರ ನೀಡದೆ ಒಂದು ರೀತಿಯ ಉಡಾಫೆ ಹೇಳಿಕೆಗಳು ಹೊರಬಿದ್ದಿವೆ. ಇದೇ ಸಂದರ್ಭದಲ್ಲಿ ನೇಪಾಳ ಕೂಡ ಭಾರತದ ಉತ್ತರಾಖಂಡ್ ಗಡಿಭಾಗದ ಲಿಪುಲೆಖ್ ಪಾಸ್ ಬಳಿ ಭಾರತದ ರಸ್ತೆ ನಿರ್ಮಾಣಕ್ಕೆ ತಡೆಯೊಡ್ಡಿದೆ.

ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಯೋಜನೆಗಳು, ರಸ್ತೆ ಸಂಪರ್ಕಗಳನ್ನು ಮಾಡುವುದರ ಬದಲಿಗೆ ನಮ್ಮ ಸೈನಿಕರಿಗೆ ಚೀನಾದಿಂದ ಆಮದು ಮಾಡಿಕೊಂಡ ಬುಲೆಟ್ ಪ್ರೂಫ್ ಕವಚಗಳನ್ನು ಕೊಡುತ್ತಿರುವ ಆರೋಪವನ್ನು ಎದುರಿಸುತ್ತಿದೆ. ಸರ್ದಾರ್ ಪಟೇಲರ ಏಕತೆ ಪ್ರತಿಮೆಗೂ ಚೀನಾಗೆ 3000 ಕೋಟಿ ಕೊಟ್ಟು ಕಚ್ಚಾವಸ್ತು ಆಮದು ಮಾಡಿಕೊಂಡಿದೆ. ಅದೇ ಹೊತ್ತಿನಲ್ಲಿ ಚೀನಾದ ಟಿಕ್‍ಟಾಕ್ ಮತ್ತಿತರ ಮೊಬೈಲ್ ಅಪ್ಲಿಕೇಶನ್ಸ್‍ಗಳನ್ನು ಕಿತ್ತುಹಾಕಲು ಸರ್ಕಾರವನ್ನು ನಡೆಸುತ್ತಿರುವ ಪಕ್ಷದ ವಿವಿಧ ಐಟಿಸೆಲ್‍ಗಳೇ ಹೇಳುತ್ತಿವೆ. ಇದೊಂಥರಾ ಅಪಹಾಸ್ಯದ ಸನ್ನಿವೇಶವನ್ನು ಸೃಷ್ಟಿಸಿದೆ.

ಹಿಂದೆ ಡೋಕ್ಲಾಮ್ ಪ್ರದೇಶದಲ್ಲಿ ಬಂದಿಳಿದ ಚೀನಾದ ಸೈನಿಕರು ಮತ್ತೆ ವಾಪಸ್ಸು ಹೋಗಲಿಲ್ಲ. ಭಾರತವೇ ಮಣಿಯಿತು ಎಂಬ ವರದಿಗಳು ಆಗಲೇ ಬಂದವು. ವಿರೋಧಪಕ್ಷದವರೂ ಈ ಕುರಿತು ಸರ್ಕಾರವನ್ನು ಚುಚ್ಚಿ ಪ್ರಶ್ನೆ ಕೇಳಿದರು. ದೇಶದೊಳಗೆ ಈ ಎಲ್ಲಾ ಪ್ರಶ್ನೆಗಳನ್ನು ಎತ್ತದಂತೆ ಮಾಧ್ಯಮಗಳನ್ನು ಬಾಯಿಮುಚ್ಚಿಸುವ ಅಗತ್ಯವೂ ಇಲ್ಲದಂತೆ ಬಹುತೇಕ ಮಾಧ್ಯಮಗಳು ಸರ್ಕಾರದ ಸಾಧನೆಗಳನ್ನು ಮಾತ್ರ ಹೇಳುವ ಸಾಧನಗಳಾಗಿಬಿಟ್ಟಿದ್ದರೆ, ಉಳಿದ ಮಾಧ್ಯಮಗಳು ರಾಷ್ಟ್ರವಾದದ ಹೆಸರಿನಲ್ಲಿ ಬರುವ ಬಾಣಗಳಿಗೆ ಹೆದರಿ ಕುಳಿತಿರಬೇಕಿದೆ. ಆದರೆ ಸಾಮಾನ್ಯವಾಗಿ ಗಡಿ ವಿಚಾರದಲ್ಲೇ ಕೆರಳುವ ರಾಷ್ಟ್ರವಾದವು ಇಲ್ಲಿ ಗಡಿಯನ್ನೇ ಕಳೆದುಕೊಳ್ಳುತ್ತಿದೆಯೇ ಎಂಬ ಆತಂಕ ಕಾಡುತ್ತಿದೆ. ಅಂದರೆ ರಾಷ್ಟ್ರವಾದದ ಹೆಸರಿನಲ್ಲಿ ಆಳ್ವಿಕೆ ನಡೆಸುವ ಸರ್ಕಾರವೇ ದುರ್ಬಲ ಸ್ಥಿತಿಯಲ್ಲಿ ನಿಂತಿದೆಯೇ ಎಂಬ ಪ್ರಶ್ನೆಗಳಿಗೆ ಕೇಂದ್ರವು ಉತ್ತರ ನೀಡುವುದೊಳ್ಳೆಯದು. ಇಲ್ಲದಿದ್ದರೆ ವಿಶ್ವದ ಸೂಪರ್‍ಪವರ್ ಆಗುವ ಹೆಗ್ಗಳಿಕೆಯ ಕನಸು ಕಾಣುತ್ತಿರುವ ಭಾರತದ ಜನರಿಗೆ ಮುಂದೊಂದು ದಿನ ತಾವು ದೈನೇಸಿ ಸ್ಥಿತಿಯಲ್ಲಿದ್ದೇವೆ ಎಂಬ ಭೀಕರ ಪಾತಾಳಕ್ಕಿಳಿಯುವ ದುಸ್ಥಿತಿ ಬರಬಾರದು.


ಇದನ್ನು ಓದಿ: ನೇಪಾಳ ಪೊಲೀಸರ ಗುಂಡಿನ ದಾಳಿ; ಬಿಹಾರ ಗಡಿಯಲ್ಲಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಚೀನಾ ಪರವಾದ ಲೇಖನ. ಇಲ್ಲಿ ಪ್ರಧಾನ ಮಂತ್ರಿ ಅವರನ್ನು ಟೀಕಿಸುವ ಏಕಮಾತ್ರ ಉದ್ದೇಶದಿಂದ ಬರೆದಿದ್ದಾರೆ. ಇಲ್ಲಿ ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ಲೇಖನ ಬರೆಯಲಾಗಿದೆ. ಇದೊಂದು ಅಪಹಾಸ್ಯ ಕುಚೋದ್ಯ..

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...