Homeಅಂತರಾಷ್ಟ್ರೀಯಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

- Advertisement -
- Advertisement -

ವಸಾಹತುಶಾಹಿ ಆಳ್ವಿಕೆಗೂ ಹಿಂದೆ ಜಾಗತಿಕ ವಾಣಿಜ್ಯದಲ್ಲಿ ಮುಂಚೂಣಿಯಲ್ಲಿದ್ದ ಚೀನಾ ಮತ್ತು ಭಾರತಗಳು ವಸಾಹತು ಆಳ್ವಿಕೆಯಿಂದ ಕ್ರಮೇಣ ತಮ್ಮ ಸ್ವಾಯತ್ತತೆ ಸ್ವಾತಂತ್ರ ಕಳೆದುಕೊಂಡು ಮತ್ತೆ ಅದನ್ನು ಪಡೆಯಲು ಹರಸಾಹಸ ಮಾಡಬೇಕಾಗಿ ಬಂತು. ಕೋಟ್ಯಂತರ ಜನರ ತ್ಯಾಗ ಬಲಿದಾನಗಳಿಂದ ಎರಡೂ ರಾಷ್ಟ್ರಗಳು ಸ್ವಾತಂತ್ರ್ಯ ಪಡೆಯುವಂತಾಯಿತು. ಆ ಸ್ವಾತಂತ್ರ್ಯದ ಜೊತೆಗೆ ಭಾರತದ ವಿಭಜನೆಯೂ ಆಯಿತು. ನಂತರದ ಗಡಿವಿವಾದಗಳು ವಸಾಹತು ಗಡಿರೇಖೆಗಳಿಗೂ ಹೊಸದಾಗಿ ಸೃಷ್ಟಿಯಾಗಿದ್ದ ರಾಷ್ಟ್ರಗಳ ಕಾಲ್ಪನಿಕ ಅಖಂಡ ಸಾಮ್ರಾಜ್ಯದ ದೃಷ್ಟಿಕೋನದ ಗಡಿರೇಖೆಗಳಿಗೂ ಇರುವ ಸಂಘರ್ಷವೆಂದರೆ ತಪ್ಪಾಗಲಾರದು. ವಿಭಜನೆಯ ವೇಳೆಯಲ್ಲಿ ಧಾರ್ಮಿಕ ಅಡಿಪಾಯಕ್ಕೆ ಒತ್ತುಕೊಟ್ಟು ಸೃಷ್ಟಿಯಾದ ಪಾಕಿಸ್ತಾನ ಅವನತಿಯ ಹಾದಿ ಹಿಡಿದು ಜಾಗತಿಕ ಅಪಮಾನಕ್ಕೆ ಗುರಿಯಾದರೆ, ಜಾತ್ಯತೀತತೆಯ ಅಡಿಪಾಯಕ್ಕೆ ಒತ್ತು ಕೊಟ್ಟ ಭಾರತ ಎಪ್ಪತ್ತು ವರ್ಷಗಳಿಂದ ಪ್ರಪಂಚದಲ್ಲಿ ತನ್ನದೇ ರೀತಿಯ ಅಭಿವೃದ್ದಿ ಮಾದರಿಯಿಂದ ಜಾಗತೀಕ ಮಟ್ಟದಲ್ಲಿ ಯಾವುದೇ ವಿಷಯದಲ್ಲಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಿಗೆ ಪೈಪೋಟಿ ಕೊಡುವಷ್ಟು ಬೆಳೆದು ನಿಂತಿದೆ. ಭಾರತ ಪಾಕಿಸ್ತಾನ ಸೃಷ್ಟಿಯ ಸಮಯದಲ್ಲೇ ಚೀನಾ ಸಮಾಜವಾದಿ ಕ್ರಾಂತಿಯನ್ನು ಸಾಧಿಸಿತ್ತಾದರೂ ಈಗ ಬೃಹತ್ ಗಾತ್ರದ ಬಂಡವಾಳಶಾಹಿರಾಷ್ಟ್ರವಾಗಿ ಅಮೆರಿಕ ವಿರುದ್ದ ಪೈಪೋಟಿಗೆ ನಿಂತಿದೆ. ಮೂರು ರಾಷ್ಟ್ರಗಳಿಗೆ ತನ್ನದೇ ಆದ ಮಹತ್ವಾಕಾಂಕ್ಷೆಗಳು ಮತ್ತು ಸಮಸ್ಯೆಗಳು ಇದ್ದೇ ಇದೆ. ಚೀನಾ ಮತ್ತು ಪಾಕಿಸ್ತಾನದೊಂದಿಗೆ ಭಾರತ ದೊಡ್ಡ ಗಡಿ ಪ್ರದೇಶ ಹೊಂದಿದ್ದು, ಅದರಿಂದ ಬಗೆಹರಿಯದ ಗಡಿ ವಿವಾದದಿಂದಾಗಿ ಐದು ಬಾರಿ ಯುದ್ದಕ್ಕೂ ಹೋಗಿದೆ (ನಾಲ್ಕು ಬಾರಿ ಪಾಕಿಸ್ತಾನದ ವಿರುದ್ದ, ಒಂದು ಬಾರಿ ಚೀನಾ ವಿರುದ್ದ).

ಈಗ ಮತ್ತೆ ಅದೇ ಗಡಿ ವಿವಾದ ಭುಗಿಲೆದ್ದಿದೆ. ಚೀನಾ ಒಟ್ಟೂ ಮೂರು ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆಗೂ ಮುಂದೆ ಬಂದು ತನ್ನ ಐದು ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿ ರಸ್ತೆ ಮತ್ತು ಬಂಕರ್‍ಗಳನ್ನು ನಿರ್ಮಿಸುತ್ತಿದೆ. ಉತ್ತರ ಲಡಾಖಿನ ಗಾಲ್ವನ್ ಕಣಿವೆ ಪ್ರದೇಶದಲ್ಲಿ 4 ಕಿಲೋ ಮೀಟರ್, ಮಧ್ಯ ಲಡಾಖಿನ ಪೊಗೊಂಗ್ ತ್ಸೋ ಕೆರೆಯ 3ರಿಂದ 5 ಕಿಲೋಮೀಟರ್ ದೂರದವರೆಗೂ ಆಕ್ರಮಿಸಿಕೊಂಡಿದೆ. ಸಿಕ್ಕಿಂ ಗಡಿ ಪ್ರದೇಶದ ನಕುಲದಲ್ಲೂ ಇದೆ ವರದಿಯಾಗಿದೆ. ಸ್ವತಃ ರಕ್ಷಣಾ ಮಂತ್ರಿಯಾಗಿರುವ ರಾಜ್‍ನಾಥ್ ಸಿಂಗ್ ಅವರು ವಾಸ್ತವ ಗಡಿಪ್ರದೇಶದಿಂದ ಚೀನಾ ಸೈನಿಕರು ಒಳಬಂದಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದನ್ನು ಮುಂದೆ ಮಾತುಕತೆಯ ಮೂಲಕ ಇತ್ಯರ್ಥ ಮಾಡಲಾಗುತ್ತದೆ ಎಂದಿದ್ದಾರೆ.

ಹಾಗಿದ್ದರೆ ಅಧಿಕಾರಕ್ಕೆ ಬರುವ ಮುಂಚೆ ಚೀನಾವನ್ನು ಹಿಂದಿನ ಸರ್ಕಾರದ ಸಂತೃಪ್ತತೆ ಭಾವನೆಯ ದೃಷ್ಟಿಕೋನವನ್ನು ಬಿಟ್ಟು, ಕೆಂಗಣ್ಣಿನಿಂದ ನೋಡಬೇಕು ಎಂದು ಹೇಳಲಾಗಿದ್ದು ಏನಾಯಿತು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ‘ರಾಷ್ಟ್ರವಾದಿ’ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದರ ಬಗ್ಗೆ ಇದುವರೆಗೆ ಏನೂ ಮಾತಾಡಿಲ್ಲ. ಪಾಕಿಸ್ತಾನದ ವಿರುದ್ದ ‘ನಡೆಸಲಾದ’ ಕ್ಷಿಪ್ರ ಕಾರ್ಯಾಚರಣೆ -ಸರ್ಜಿಕಲ್ ಸ್ಟ್ರೈಕ್- ಮಾಡಿ ಚೀನಾ ಸೈನಿಕರನ್ನು ಹಿಂದಕ್ಕೆ ಕಳಿಸುವ ರೀತಿಯ ಮಾತುಗಳೇ ಕೇಳಿಬರಲಿಲ್ಲ. ಇದು ಆಶ್ಚರ್ಯಕರವೇ ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ ಎಂಬುದನ್ನೂ ಚರ್ಚಿಸಬೇಕಿದೆ. ಏಕೆಂದರೆ ವಾಸ್ತವ ಗಡಿ ರೇಖೆಗಿಂತ ಪಾಕಿಸ್ತಾನದ ಸೈನಿಕರು ಬಂದಿದ್ದರು ಎಂಬ ಕಾರಣಕ್ಕೇ ಕಾರ್ಗಿಲ್ ಯುದ್ಧವಾಗಿತ್ತು. ಈಗ ಚೀನಾದ ವಿಚಾರದಲ್ಲಿ ಮಾತ್ರ – ಅದರಲ್ಲೂ ಚೀನಾವನ್ನು ಬಾಯ್ಕಾಟ್ ಮಾಡಿ ಎಂದು ದೇಶದೊಳಗೆ ನಡೆಸಲಾಗುತ್ತಿರುವ ಆನ್‍ಲೈನ್ ಪ್ರಚಾರದಲ್ಲಿ ಸರ್ಕಾರದ ಬೆಂಬಲಿಗರೇ ಹೆಚ್ಚಾಗಿರುವಾಗ – ಆಫ್‍ಲೈನ್ ಸಂಘರ್ಷಕ್ಕೆ ಮುಂದಾಗುತ್ತಿಲ್ಲ.

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

ಚೀನಾವು ತನ್ನದೊಂದು ಹೆದ್ದಾರಿ ಯೋಜನೆಯನ್ನೂ ಕೈಗೊಂಡಿರುವುದು ಎಲ್ಲರಿಗೂ ಗೊತ್ತಿದೆ. ಟಿಬೆಟ್ ಪ್ರದೇಶವನ್ನು ಲಡಾಕ್ ಮೂಲಕ ಕಾಶ್ಮೀರದ ಮೇಲ್ಬಾಗದ ಕಷ್ಗರ್ ಪ್ರದೇಶಕ್ಕೆ ಸಂಪರ್ಕ ಒದಗಿಸುವ ಹೆದ್ದಾರಿ ಮತ್ತು ಮೂಲಸಂಪರ್ಕ ಒದಗಿಸುವ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಹೆದ್ದಾರಿಯೇ ಪಾಕಿಸ್ತಾನದ ಮೂಲಕ ಹೋಗುವ 46 ಬಿಲಿಯನ್ ಡಾಲರ್ ಮೊತ್ತದ ಚೀನಾ-ಪಾಕಿಸ್ತಾನ ವಾಣಿಜ್ಯ ಓಣಿ ಎಂದು ಬಿಂಬಿಸಲಾಗುತ್ತಿದೆ. ಮೋದಿ ಸರ್ಕಾರವು ಈ ಹೊತ್ತಿನಲ್ಲಿ ತೆಗೆದುಕೊಳ್ಳಬೇಕಾದ ತೀರ್ಮಾನಗಳಿಗೆ ವಿಶೇಷ ಮಹತ್ವವಿದೆ. ಏಕೆಂದರೆ ಈ ಪ್ರಾಂತದಲ್ಲಿ ಮಾತ್ರವಲ್ಲದೇ ಪ್ರಪಂಚದಲ್ಲೇ ಅತೀ ದೊಡ್ಡ ಶಕ್ತಿಯಾಗುವ ಚೀನಾದ ಮಹತ್ವಾಕಾಂಕ್ಷೆಯ ಭಾಗವಾಗಿಯೂ ಈ ಕಾರಿಡಾರ್ ನಿರ್ಮಾಣ ಸಾಗಿದೆ. ಹೀಗಿರುವಾಗ ತಮ್ಮ ಯೋಜನೆಯೇನು ಎಂದು ಸಹಜವಾಗಿಯೇ ಏಳುವ ಯಾವುದಕ್ಕೂ ನೇರ ಉತ್ತರ ನೀಡದೆ ಒಂದು ರೀತಿಯ ಉಡಾಫೆ ಹೇಳಿಕೆಗಳು ಹೊರಬಿದ್ದಿವೆ. ಇದೇ ಸಂದರ್ಭದಲ್ಲಿ ನೇಪಾಳ ಕೂಡ ಭಾರತದ ಉತ್ತರಾಖಂಡ್ ಗಡಿಭಾಗದ ಲಿಪುಲೆಖ್ ಪಾಸ್ ಬಳಿ ಭಾರತದ ರಸ್ತೆ ನಿರ್ಮಾಣಕ್ಕೆ ತಡೆಯೊಡ್ಡಿದೆ.

ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಯೋಜನೆಗಳು, ರಸ್ತೆ ಸಂಪರ್ಕಗಳನ್ನು ಮಾಡುವುದರ ಬದಲಿಗೆ ನಮ್ಮ ಸೈನಿಕರಿಗೆ ಚೀನಾದಿಂದ ಆಮದು ಮಾಡಿಕೊಂಡ ಬುಲೆಟ್ ಪ್ರೂಫ್ ಕವಚಗಳನ್ನು ಕೊಡುತ್ತಿರುವ ಆರೋಪವನ್ನು ಎದುರಿಸುತ್ತಿದೆ. ಸರ್ದಾರ್ ಪಟೇಲರ ಏಕತೆ ಪ್ರತಿಮೆಗೂ ಚೀನಾಗೆ 3000 ಕೋಟಿ ಕೊಟ್ಟು ಕಚ್ಚಾವಸ್ತು ಆಮದು ಮಾಡಿಕೊಂಡಿದೆ. ಅದೇ ಹೊತ್ತಿನಲ್ಲಿ ಚೀನಾದ ಟಿಕ್‍ಟಾಕ್ ಮತ್ತಿತರ ಮೊಬೈಲ್ ಅಪ್ಲಿಕೇಶನ್ಸ್‍ಗಳನ್ನು ಕಿತ್ತುಹಾಕಲು ಸರ್ಕಾರವನ್ನು ನಡೆಸುತ್ತಿರುವ ಪಕ್ಷದ ವಿವಿಧ ಐಟಿಸೆಲ್‍ಗಳೇ ಹೇಳುತ್ತಿವೆ. ಇದೊಂಥರಾ ಅಪಹಾಸ್ಯದ ಸನ್ನಿವೇಶವನ್ನು ಸೃಷ್ಟಿಸಿದೆ.

ಹಿಂದೆ ಡೋಕ್ಲಾಮ್ ಪ್ರದೇಶದಲ್ಲಿ ಬಂದಿಳಿದ ಚೀನಾದ ಸೈನಿಕರು ಮತ್ತೆ ವಾಪಸ್ಸು ಹೋಗಲಿಲ್ಲ. ಭಾರತವೇ ಮಣಿಯಿತು ಎಂಬ ವರದಿಗಳು ಆಗಲೇ ಬಂದವು. ವಿರೋಧಪಕ್ಷದವರೂ ಈ ಕುರಿತು ಸರ್ಕಾರವನ್ನು ಚುಚ್ಚಿ ಪ್ರಶ್ನೆ ಕೇಳಿದರು. ದೇಶದೊಳಗೆ ಈ ಎಲ್ಲಾ ಪ್ರಶ್ನೆಗಳನ್ನು ಎತ್ತದಂತೆ ಮಾಧ್ಯಮಗಳನ್ನು ಬಾಯಿಮುಚ್ಚಿಸುವ ಅಗತ್ಯವೂ ಇಲ್ಲದಂತೆ ಬಹುತೇಕ ಮಾಧ್ಯಮಗಳು ಸರ್ಕಾರದ ಸಾಧನೆಗಳನ್ನು ಮಾತ್ರ ಹೇಳುವ ಸಾಧನಗಳಾಗಿಬಿಟ್ಟಿದ್ದರೆ, ಉಳಿದ ಮಾಧ್ಯಮಗಳು ರಾಷ್ಟ್ರವಾದದ ಹೆಸರಿನಲ್ಲಿ ಬರುವ ಬಾಣಗಳಿಗೆ ಹೆದರಿ ಕುಳಿತಿರಬೇಕಿದೆ. ಆದರೆ ಸಾಮಾನ್ಯವಾಗಿ ಗಡಿ ವಿಚಾರದಲ್ಲೇ ಕೆರಳುವ ರಾಷ್ಟ್ರವಾದವು ಇಲ್ಲಿ ಗಡಿಯನ್ನೇ ಕಳೆದುಕೊಳ್ಳುತ್ತಿದೆಯೇ ಎಂಬ ಆತಂಕ ಕಾಡುತ್ತಿದೆ. ಅಂದರೆ ರಾಷ್ಟ್ರವಾದದ ಹೆಸರಿನಲ್ಲಿ ಆಳ್ವಿಕೆ ನಡೆಸುವ ಸರ್ಕಾರವೇ ದುರ್ಬಲ ಸ್ಥಿತಿಯಲ್ಲಿ ನಿಂತಿದೆಯೇ ಎಂಬ ಪ್ರಶ್ನೆಗಳಿಗೆ ಕೇಂದ್ರವು ಉತ್ತರ ನೀಡುವುದೊಳ್ಳೆಯದು. ಇಲ್ಲದಿದ್ದರೆ ವಿಶ್ವದ ಸೂಪರ್‍ಪವರ್ ಆಗುವ ಹೆಗ್ಗಳಿಕೆಯ ಕನಸು ಕಾಣುತ್ತಿರುವ ಭಾರತದ ಜನರಿಗೆ ಮುಂದೊಂದು ದಿನ ತಾವು ದೈನೇಸಿ ಸ್ಥಿತಿಯಲ್ಲಿದ್ದೇವೆ ಎಂಬ ಭೀಕರ ಪಾತಾಳಕ್ಕಿಳಿಯುವ ದುಸ್ಥಿತಿ ಬರಬಾರದು.


ಇದನ್ನು ಓದಿ: ನೇಪಾಳ ಪೊಲೀಸರ ಗುಂಡಿನ ದಾಳಿ; ಬಿಹಾರ ಗಡಿಯಲ್ಲಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಚೀನಾ ಪರವಾದ ಲೇಖನ. ಇಲ್ಲಿ ಪ್ರಧಾನ ಮಂತ್ರಿ ಅವರನ್ನು ಟೀಕಿಸುವ ಏಕಮಾತ್ರ ಉದ್ದೇಶದಿಂದ ಬರೆದಿದ್ದಾರೆ. ಇಲ್ಲಿ ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ಲೇಖನ ಬರೆಯಲಾಗಿದೆ. ಇದೊಂದು ಅಪಹಾಸ್ಯ ಕುಚೋದ್ಯ..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...