Homeಅಂತರಾಷ್ಟ್ರೀಯಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

- Advertisement -
- Advertisement -

ವಸಾಹತುಶಾಹಿ ಆಳ್ವಿಕೆಗೂ ಹಿಂದೆ ಜಾಗತಿಕ ವಾಣಿಜ್ಯದಲ್ಲಿ ಮುಂಚೂಣಿಯಲ್ಲಿದ್ದ ಚೀನಾ ಮತ್ತು ಭಾರತಗಳು ವಸಾಹತು ಆಳ್ವಿಕೆಯಿಂದ ಕ್ರಮೇಣ ತಮ್ಮ ಸ್ವಾಯತ್ತತೆ ಸ್ವಾತಂತ್ರ ಕಳೆದುಕೊಂಡು ಮತ್ತೆ ಅದನ್ನು ಪಡೆಯಲು ಹರಸಾಹಸ ಮಾಡಬೇಕಾಗಿ ಬಂತು. ಕೋಟ್ಯಂತರ ಜನರ ತ್ಯಾಗ ಬಲಿದಾನಗಳಿಂದ ಎರಡೂ ರಾಷ್ಟ್ರಗಳು ಸ್ವಾತಂತ್ರ್ಯ ಪಡೆಯುವಂತಾಯಿತು. ಆ ಸ್ವಾತಂತ್ರ್ಯದ ಜೊತೆಗೆ ಭಾರತದ ವಿಭಜನೆಯೂ ಆಯಿತು. ನಂತರದ ಗಡಿವಿವಾದಗಳು ವಸಾಹತು ಗಡಿರೇಖೆಗಳಿಗೂ ಹೊಸದಾಗಿ ಸೃಷ್ಟಿಯಾಗಿದ್ದ ರಾಷ್ಟ್ರಗಳ ಕಾಲ್ಪನಿಕ ಅಖಂಡ ಸಾಮ್ರಾಜ್ಯದ ದೃಷ್ಟಿಕೋನದ ಗಡಿರೇಖೆಗಳಿಗೂ ಇರುವ ಸಂಘರ್ಷವೆಂದರೆ ತಪ್ಪಾಗಲಾರದು. ವಿಭಜನೆಯ ವೇಳೆಯಲ್ಲಿ ಧಾರ್ಮಿಕ ಅಡಿಪಾಯಕ್ಕೆ ಒತ್ತುಕೊಟ್ಟು ಸೃಷ್ಟಿಯಾದ ಪಾಕಿಸ್ತಾನ ಅವನತಿಯ ಹಾದಿ ಹಿಡಿದು ಜಾಗತಿಕ ಅಪಮಾನಕ್ಕೆ ಗುರಿಯಾದರೆ, ಜಾತ್ಯತೀತತೆಯ ಅಡಿಪಾಯಕ್ಕೆ ಒತ್ತು ಕೊಟ್ಟ ಭಾರತ ಎಪ್ಪತ್ತು ವರ್ಷಗಳಿಂದ ಪ್ರಪಂಚದಲ್ಲಿ ತನ್ನದೇ ರೀತಿಯ ಅಭಿವೃದ್ದಿ ಮಾದರಿಯಿಂದ ಜಾಗತೀಕ ಮಟ್ಟದಲ್ಲಿ ಯಾವುದೇ ವಿಷಯದಲ್ಲಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಿಗೆ ಪೈಪೋಟಿ ಕೊಡುವಷ್ಟು ಬೆಳೆದು ನಿಂತಿದೆ. ಭಾರತ ಪಾಕಿಸ್ತಾನ ಸೃಷ್ಟಿಯ ಸಮಯದಲ್ಲೇ ಚೀನಾ ಸಮಾಜವಾದಿ ಕ್ರಾಂತಿಯನ್ನು ಸಾಧಿಸಿತ್ತಾದರೂ ಈಗ ಬೃಹತ್ ಗಾತ್ರದ ಬಂಡವಾಳಶಾಹಿರಾಷ್ಟ್ರವಾಗಿ ಅಮೆರಿಕ ವಿರುದ್ದ ಪೈಪೋಟಿಗೆ ನಿಂತಿದೆ. ಮೂರು ರಾಷ್ಟ್ರಗಳಿಗೆ ತನ್ನದೇ ಆದ ಮಹತ್ವಾಕಾಂಕ್ಷೆಗಳು ಮತ್ತು ಸಮಸ್ಯೆಗಳು ಇದ್ದೇ ಇದೆ. ಚೀನಾ ಮತ್ತು ಪಾಕಿಸ್ತಾನದೊಂದಿಗೆ ಭಾರತ ದೊಡ್ಡ ಗಡಿ ಪ್ರದೇಶ ಹೊಂದಿದ್ದು, ಅದರಿಂದ ಬಗೆಹರಿಯದ ಗಡಿ ವಿವಾದದಿಂದಾಗಿ ಐದು ಬಾರಿ ಯುದ್ದಕ್ಕೂ ಹೋಗಿದೆ (ನಾಲ್ಕು ಬಾರಿ ಪಾಕಿಸ್ತಾನದ ವಿರುದ್ದ, ಒಂದು ಬಾರಿ ಚೀನಾ ವಿರುದ್ದ).

ಈಗ ಮತ್ತೆ ಅದೇ ಗಡಿ ವಿವಾದ ಭುಗಿಲೆದ್ದಿದೆ. ಚೀನಾ ಒಟ್ಟೂ ಮೂರು ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆಗೂ ಮುಂದೆ ಬಂದು ತನ್ನ ಐದು ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿ ರಸ್ತೆ ಮತ್ತು ಬಂಕರ್‍ಗಳನ್ನು ನಿರ್ಮಿಸುತ್ತಿದೆ. ಉತ್ತರ ಲಡಾಖಿನ ಗಾಲ್ವನ್ ಕಣಿವೆ ಪ್ರದೇಶದಲ್ಲಿ 4 ಕಿಲೋ ಮೀಟರ್, ಮಧ್ಯ ಲಡಾಖಿನ ಪೊಗೊಂಗ್ ತ್ಸೋ ಕೆರೆಯ 3ರಿಂದ 5 ಕಿಲೋಮೀಟರ್ ದೂರದವರೆಗೂ ಆಕ್ರಮಿಸಿಕೊಂಡಿದೆ. ಸಿಕ್ಕಿಂ ಗಡಿ ಪ್ರದೇಶದ ನಕುಲದಲ್ಲೂ ಇದೆ ವರದಿಯಾಗಿದೆ. ಸ್ವತಃ ರಕ್ಷಣಾ ಮಂತ್ರಿಯಾಗಿರುವ ರಾಜ್‍ನಾಥ್ ಸಿಂಗ್ ಅವರು ವಾಸ್ತವ ಗಡಿಪ್ರದೇಶದಿಂದ ಚೀನಾ ಸೈನಿಕರು ಒಳಬಂದಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದನ್ನು ಮುಂದೆ ಮಾತುಕತೆಯ ಮೂಲಕ ಇತ್ಯರ್ಥ ಮಾಡಲಾಗುತ್ತದೆ ಎಂದಿದ್ದಾರೆ.

ಹಾಗಿದ್ದರೆ ಅಧಿಕಾರಕ್ಕೆ ಬರುವ ಮುಂಚೆ ಚೀನಾವನ್ನು ಹಿಂದಿನ ಸರ್ಕಾರದ ಸಂತೃಪ್ತತೆ ಭಾವನೆಯ ದೃಷ್ಟಿಕೋನವನ್ನು ಬಿಟ್ಟು, ಕೆಂಗಣ್ಣಿನಿಂದ ನೋಡಬೇಕು ಎಂದು ಹೇಳಲಾಗಿದ್ದು ಏನಾಯಿತು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ‘ರಾಷ್ಟ್ರವಾದಿ’ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದರ ಬಗ್ಗೆ ಇದುವರೆಗೆ ಏನೂ ಮಾತಾಡಿಲ್ಲ. ಪಾಕಿಸ್ತಾನದ ವಿರುದ್ದ ‘ನಡೆಸಲಾದ’ ಕ್ಷಿಪ್ರ ಕಾರ್ಯಾಚರಣೆ -ಸರ್ಜಿಕಲ್ ಸ್ಟ್ರೈಕ್- ಮಾಡಿ ಚೀನಾ ಸೈನಿಕರನ್ನು ಹಿಂದಕ್ಕೆ ಕಳಿಸುವ ರೀತಿಯ ಮಾತುಗಳೇ ಕೇಳಿಬರಲಿಲ್ಲ. ಇದು ಆಶ್ಚರ್ಯಕರವೇ ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ ಎಂಬುದನ್ನೂ ಚರ್ಚಿಸಬೇಕಿದೆ. ಏಕೆಂದರೆ ವಾಸ್ತವ ಗಡಿ ರೇಖೆಗಿಂತ ಪಾಕಿಸ್ತಾನದ ಸೈನಿಕರು ಬಂದಿದ್ದರು ಎಂಬ ಕಾರಣಕ್ಕೇ ಕಾರ್ಗಿಲ್ ಯುದ್ಧವಾಗಿತ್ತು. ಈಗ ಚೀನಾದ ವಿಚಾರದಲ್ಲಿ ಮಾತ್ರ – ಅದರಲ್ಲೂ ಚೀನಾವನ್ನು ಬಾಯ್ಕಾಟ್ ಮಾಡಿ ಎಂದು ದೇಶದೊಳಗೆ ನಡೆಸಲಾಗುತ್ತಿರುವ ಆನ್‍ಲೈನ್ ಪ್ರಚಾರದಲ್ಲಿ ಸರ್ಕಾರದ ಬೆಂಬಲಿಗರೇ ಹೆಚ್ಚಾಗಿರುವಾಗ – ಆಫ್‍ಲೈನ್ ಸಂಘರ್ಷಕ್ಕೆ ಮುಂದಾಗುತ್ತಿಲ್ಲ.

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

ಚೀನಾವು ತನ್ನದೊಂದು ಹೆದ್ದಾರಿ ಯೋಜನೆಯನ್ನೂ ಕೈಗೊಂಡಿರುವುದು ಎಲ್ಲರಿಗೂ ಗೊತ್ತಿದೆ. ಟಿಬೆಟ್ ಪ್ರದೇಶವನ್ನು ಲಡಾಕ್ ಮೂಲಕ ಕಾಶ್ಮೀರದ ಮೇಲ್ಬಾಗದ ಕಷ್ಗರ್ ಪ್ರದೇಶಕ್ಕೆ ಸಂಪರ್ಕ ಒದಗಿಸುವ ಹೆದ್ದಾರಿ ಮತ್ತು ಮೂಲಸಂಪರ್ಕ ಒದಗಿಸುವ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಹೆದ್ದಾರಿಯೇ ಪಾಕಿಸ್ತಾನದ ಮೂಲಕ ಹೋಗುವ 46 ಬಿಲಿಯನ್ ಡಾಲರ್ ಮೊತ್ತದ ಚೀನಾ-ಪಾಕಿಸ್ತಾನ ವಾಣಿಜ್ಯ ಓಣಿ ಎಂದು ಬಿಂಬಿಸಲಾಗುತ್ತಿದೆ. ಮೋದಿ ಸರ್ಕಾರವು ಈ ಹೊತ್ತಿನಲ್ಲಿ ತೆಗೆದುಕೊಳ್ಳಬೇಕಾದ ತೀರ್ಮಾನಗಳಿಗೆ ವಿಶೇಷ ಮಹತ್ವವಿದೆ. ಏಕೆಂದರೆ ಈ ಪ್ರಾಂತದಲ್ಲಿ ಮಾತ್ರವಲ್ಲದೇ ಪ್ರಪಂಚದಲ್ಲೇ ಅತೀ ದೊಡ್ಡ ಶಕ್ತಿಯಾಗುವ ಚೀನಾದ ಮಹತ್ವಾಕಾಂಕ್ಷೆಯ ಭಾಗವಾಗಿಯೂ ಈ ಕಾರಿಡಾರ್ ನಿರ್ಮಾಣ ಸಾಗಿದೆ. ಹೀಗಿರುವಾಗ ತಮ್ಮ ಯೋಜನೆಯೇನು ಎಂದು ಸಹಜವಾಗಿಯೇ ಏಳುವ ಯಾವುದಕ್ಕೂ ನೇರ ಉತ್ತರ ನೀಡದೆ ಒಂದು ರೀತಿಯ ಉಡಾಫೆ ಹೇಳಿಕೆಗಳು ಹೊರಬಿದ್ದಿವೆ. ಇದೇ ಸಂದರ್ಭದಲ್ಲಿ ನೇಪಾಳ ಕೂಡ ಭಾರತದ ಉತ್ತರಾಖಂಡ್ ಗಡಿಭಾಗದ ಲಿಪುಲೆಖ್ ಪಾಸ್ ಬಳಿ ಭಾರತದ ರಸ್ತೆ ನಿರ್ಮಾಣಕ್ಕೆ ತಡೆಯೊಡ್ಡಿದೆ.

ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಯೋಜನೆಗಳು, ರಸ್ತೆ ಸಂಪರ್ಕಗಳನ್ನು ಮಾಡುವುದರ ಬದಲಿಗೆ ನಮ್ಮ ಸೈನಿಕರಿಗೆ ಚೀನಾದಿಂದ ಆಮದು ಮಾಡಿಕೊಂಡ ಬುಲೆಟ್ ಪ್ರೂಫ್ ಕವಚಗಳನ್ನು ಕೊಡುತ್ತಿರುವ ಆರೋಪವನ್ನು ಎದುರಿಸುತ್ತಿದೆ. ಸರ್ದಾರ್ ಪಟೇಲರ ಏಕತೆ ಪ್ರತಿಮೆಗೂ ಚೀನಾಗೆ 3000 ಕೋಟಿ ಕೊಟ್ಟು ಕಚ್ಚಾವಸ್ತು ಆಮದು ಮಾಡಿಕೊಂಡಿದೆ. ಅದೇ ಹೊತ್ತಿನಲ್ಲಿ ಚೀನಾದ ಟಿಕ್‍ಟಾಕ್ ಮತ್ತಿತರ ಮೊಬೈಲ್ ಅಪ್ಲಿಕೇಶನ್ಸ್‍ಗಳನ್ನು ಕಿತ್ತುಹಾಕಲು ಸರ್ಕಾರವನ್ನು ನಡೆಸುತ್ತಿರುವ ಪಕ್ಷದ ವಿವಿಧ ಐಟಿಸೆಲ್‍ಗಳೇ ಹೇಳುತ್ತಿವೆ. ಇದೊಂಥರಾ ಅಪಹಾಸ್ಯದ ಸನ್ನಿವೇಶವನ್ನು ಸೃಷ್ಟಿಸಿದೆ.

ಹಿಂದೆ ಡೋಕ್ಲಾಮ್ ಪ್ರದೇಶದಲ್ಲಿ ಬಂದಿಳಿದ ಚೀನಾದ ಸೈನಿಕರು ಮತ್ತೆ ವಾಪಸ್ಸು ಹೋಗಲಿಲ್ಲ. ಭಾರತವೇ ಮಣಿಯಿತು ಎಂಬ ವರದಿಗಳು ಆಗಲೇ ಬಂದವು. ವಿರೋಧಪಕ್ಷದವರೂ ಈ ಕುರಿತು ಸರ್ಕಾರವನ್ನು ಚುಚ್ಚಿ ಪ್ರಶ್ನೆ ಕೇಳಿದರು. ದೇಶದೊಳಗೆ ಈ ಎಲ್ಲಾ ಪ್ರಶ್ನೆಗಳನ್ನು ಎತ್ತದಂತೆ ಮಾಧ್ಯಮಗಳನ್ನು ಬಾಯಿಮುಚ್ಚಿಸುವ ಅಗತ್ಯವೂ ಇಲ್ಲದಂತೆ ಬಹುತೇಕ ಮಾಧ್ಯಮಗಳು ಸರ್ಕಾರದ ಸಾಧನೆಗಳನ್ನು ಮಾತ್ರ ಹೇಳುವ ಸಾಧನಗಳಾಗಿಬಿಟ್ಟಿದ್ದರೆ, ಉಳಿದ ಮಾಧ್ಯಮಗಳು ರಾಷ್ಟ್ರವಾದದ ಹೆಸರಿನಲ್ಲಿ ಬರುವ ಬಾಣಗಳಿಗೆ ಹೆದರಿ ಕುಳಿತಿರಬೇಕಿದೆ. ಆದರೆ ಸಾಮಾನ್ಯವಾಗಿ ಗಡಿ ವಿಚಾರದಲ್ಲೇ ಕೆರಳುವ ರಾಷ್ಟ್ರವಾದವು ಇಲ್ಲಿ ಗಡಿಯನ್ನೇ ಕಳೆದುಕೊಳ್ಳುತ್ತಿದೆಯೇ ಎಂಬ ಆತಂಕ ಕಾಡುತ್ತಿದೆ. ಅಂದರೆ ರಾಷ್ಟ್ರವಾದದ ಹೆಸರಿನಲ್ಲಿ ಆಳ್ವಿಕೆ ನಡೆಸುವ ಸರ್ಕಾರವೇ ದುರ್ಬಲ ಸ್ಥಿತಿಯಲ್ಲಿ ನಿಂತಿದೆಯೇ ಎಂಬ ಪ್ರಶ್ನೆಗಳಿಗೆ ಕೇಂದ್ರವು ಉತ್ತರ ನೀಡುವುದೊಳ್ಳೆಯದು. ಇಲ್ಲದಿದ್ದರೆ ವಿಶ್ವದ ಸೂಪರ್‍ಪವರ್ ಆಗುವ ಹೆಗ್ಗಳಿಕೆಯ ಕನಸು ಕಾಣುತ್ತಿರುವ ಭಾರತದ ಜನರಿಗೆ ಮುಂದೊಂದು ದಿನ ತಾವು ದೈನೇಸಿ ಸ್ಥಿತಿಯಲ್ಲಿದ್ದೇವೆ ಎಂಬ ಭೀಕರ ಪಾತಾಳಕ್ಕಿಳಿಯುವ ದುಸ್ಥಿತಿ ಬರಬಾರದು.


ಇದನ್ನು ಓದಿ: ನೇಪಾಳ ಪೊಲೀಸರ ಗುಂಡಿನ ದಾಳಿ; ಬಿಹಾರ ಗಡಿಯಲ್ಲಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಚೀನಾ ಪರವಾದ ಲೇಖನ. ಇಲ್ಲಿ ಪ್ರಧಾನ ಮಂತ್ರಿ ಅವರನ್ನು ಟೀಕಿಸುವ ಏಕಮಾತ್ರ ಉದ್ದೇಶದಿಂದ ಬರೆದಿದ್ದಾರೆ. ಇಲ್ಲಿ ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ಲೇಖನ ಬರೆಯಲಾಗಿದೆ. ಇದೊಂದು ಅಪಹಾಸ್ಯ ಕುಚೋದ್ಯ..

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...