Homeಅಂತರಾಷ್ಟ್ರೀಯಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

- Advertisement -
- Advertisement -

ವಸಾಹತುಶಾಹಿ ಆಳ್ವಿಕೆಗೂ ಹಿಂದೆ ಜಾಗತಿಕ ವಾಣಿಜ್ಯದಲ್ಲಿ ಮುಂಚೂಣಿಯಲ್ಲಿದ್ದ ಚೀನಾ ಮತ್ತು ಭಾರತಗಳು ವಸಾಹತು ಆಳ್ವಿಕೆಯಿಂದ ಕ್ರಮೇಣ ತಮ್ಮ ಸ್ವಾಯತ್ತತೆ ಸ್ವಾತಂತ್ರ ಕಳೆದುಕೊಂಡು ಮತ್ತೆ ಅದನ್ನು ಪಡೆಯಲು ಹರಸಾಹಸ ಮಾಡಬೇಕಾಗಿ ಬಂತು. ಕೋಟ್ಯಂತರ ಜನರ ತ್ಯಾಗ ಬಲಿದಾನಗಳಿಂದ ಎರಡೂ ರಾಷ್ಟ್ರಗಳು ಸ್ವಾತಂತ್ರ್ಯ ಪಡೆಯುವಂತಾಯಿತು. ಆ ಸ್ವಾತಂತ್ರ್ಯದ ಜೊತೆಗೆ ಭಾರತದ ವಿಭಜನೆಯೂ ಆಯಿತು. ನಂತರದ ಗಡಿವಿವಾದಗಳು ವಸಾಹತು ಗಡಿರೇಖೆಗಳಿಗೂ ಹೊಸದಾಗಿ ಸೃಷ್ಟಿಯಾಗಿದ್ದ ರಾಷ್ಟ್ರಗಳ ಕಾಲ್ಪನಿಕ ಅಖಂಡ ಸಾಮ್ರಾಜ್ಯದ ದೃಷ್ಟಿಕೋನದ ಗಡಿರೇಖೆಗಳಿಗೂ ಇರುವ ಸಂಘರ್ಷವೆಂದರೆ ತಪ್ಪಾಗಲಾರದು. ವಿಭಜನೆಯ ವೇಳೆಯಲ್ಲಿ ಧಾರ್ಮಿಕ ಅಡಿಪಾಯಕ್ಕೆ ಒತ್ತುಕೊಟ್ಟು ಸೃಷ್ಟಿಯಾದ ಪಾಕಿಸ್ತಾನ ಅವನತಿಯ ಹಾದಿ ಹಿಡಿದು ಜಾಗತಿಕ ಅಪಮಾನಕ್ಕೆ ಗುರಿಯಾದರೆ, ಜಾತ್ಯತೀತತೆಯ ಅಡಿಪಾಯಕ್ಕೆ ಒತ್ತು ಕೊಟ್ಟ ಭಾರತ ಎಪ್ಪತ್ತು ವರ್ಷಗಳಿಂದ ಪ್ರಪಂಚದಲ್ಲಿ ತನ್ನದೇ ರೀತಿಯ ಅಭಿವೃದ್ದಿ ಮಾದರಿಯಿಂದ ಜಾಗತೀಕ ಮಟ್ಟದಲ್ಲಿ ಯಾವುದೇ ವಿಷಯದಲ್ಲಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಿಗೆ ಪೈಪೋಟಿ ಕೊಡುವಷ್ಟು ಬೆಳೆದು ನಿಂತಿದೆ. ಭಾರತ ಪಾಕಿಸ್ತಾನ ಸೃಷ್ಟಿಯ ಸಮಯದಲ್ಲೇ ಚೀನಾ ಸಮಾಜವಾದಿ ಕ್ರಾಂತಿಯನ್ನು ಸಾಧಿಸಿತ್ತಾದರೂ ಈಗ ಬೃಹತ್ ಗಾತ್ರದ ಬಂಡವಾಳಶಾಹಿರಾಷ್ಟ್ರವಾಗಿ ಅಮೆರಿಕ ವಿರುದ್ದ ಪೈಪೋಟಿಗೆ ನಿಂತಿದೆ. ಮೂರು ರಾಷ್ಟ್ರಗಳಿಗೆ ತನ್ನದೇ ಆದ ಮಹತ್ವಾಕಾಂಕ್ಷೆಗಳು ಮತ್ತು ಸಮಸ್ಯೆಗಳು ಇದ್ದೇ ಇದೆ. ಚೀನಾ ಮತ್ತು ಪಾಕಿಸ್ತಾನದೊಂದಿಗೆ ಭಾರತ ದೊಡ್ಡ ಗಡಿ ಪ್ರದೇಶ ಹೊಂದಿದ್ದು, ಅದರಿಂದ ಬಗೆಹರಿಯದ ಗಡಿ ವಿವಾದದಿಂದಾಗಿ ಐದು ಬಾರಿ ಯುದ್ದಕ್ಕೂ ಹೋಗಿದೆ (ನಾಲ್ಕು ಬಾರಿ ಪಾಕಿಸ್ತಾನದ ವಿರುದ್ದ, ಒಂದು ಬಾರಿ ಚೀನಾ ವಿರುದ್ದ).

ಈಗ ಮತ್ತೆ ಅದೇ ಗಡಿ ವಿವಾದ ಭುಗಿಲೆದ್ದಿದೆ. ಚೀನಾ ಒಟ್ಟೂ ಮೂರು ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆಗೂ ಮುಂದೆ ಬಂದು ತನ್ನ ಐದು ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿ ರಸ್ತೆ ಮತ್ತು ಬಂಕರ್‍ಗಳನ್ನು ನಿರ್ಮಿಸುತ್ತಿದೆ. ಉತ್ತರ ಲಡಾಖಿನ ಗಾಲ್ವನ್ ಕಣಿವೆ ಪ್ರದೇಶದಲ್ಲಿ 4 ಕಿಲೋ ಮೀಟರ್, ಮಧ್ಯ ಲಡಾಖಿನ ಪೊಗೊಂಗ್ ತ್ಸೋ ಕೆರೆಯ 3ರಿಂದ 5 ಕಿಲೋಮೀಟರ್ ದೂರದವರೆಗೂ ಆಕ್ರಮಿಸಿಕೊಂಡಿದೆ. ಸಿಕ್ಕಿಂ ಗಡಿ ಪ್ರದೇಶದ ನಕುಲದಲ್ಲೂ ಇದೆ ವರದಿಯಾಗಿದೆ. ಸ್ವತಃ ರಕ್ಷಣಾ ಮಂತ್ರಿಯಾಗಿರುವ ರಾಜ್‍ನಾಥ್ ಸಿಂಗ್ ಅವರು ವಾಸ್ತವ ಗಡಿಪ್ರದೇಶದಿಂದ ಚೀನಾ ಸೈನಿಕರು ಒಳಬಂದಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದನ್ನು ಮುಂದೆ ಮಾತುಕತೆಯ ಮೂಲಕ ಇತ್ಯರ್ಥ ಮಾಡಲಾಗುತ್ತದೆ ಎಂದಿದ್ದಾರೆ.

ಹಾಗಿದ್ದರೆ ಅಧಿಕಾರಕ್ಕೆ ಬರುವ ಮುಂಚೆ ಚೀನಾವನ್ನು ಹಿಂದಿನ ಸರ್ಕಾರದ ಸಂತೃಪ್ತತೆ ಭಾವನೆಯ ದೃಷ್ಟಿಕೋನವನ್ನು ಬಿಟ್ಟು, ಕೆಂಗಣ್ಣಿನಿಂದ ನೋಡಬೇಕು ಎಂದು ಹೇಳಲಾಗಿದ್ದು ಏನಾಯಿತು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ‘ರಾಷ್ಟ್ರವಾದಿ’ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದರ ಬಗ್ಗೆ ಇದುವರೆಗೆ ಏನೂ ಮಾತಾಡಿಲ್ಲ. ಪಾಕಿಸ್ತಾನದ ವಿರುದ್ದ ‘ನಡೆಸಲಾದ’ ಕ್ಷಿಪ್ರ ಕಾರ್ಯಾಚರಣೆ -ಸರ್ಜಿಕಲ್ ಸ್ಟ್ರೈಕ್- ಮಾಡಿ ಚೀನಾ ಸೈನಿಕರನ್ನು ಹಿಂದಕ್ಕೆ ಕಳಿಸುವ ರೀತಿಯ ಮಾತುಗಳೇ ಕೇಳಿಬರಲಿಲ್ಲ. ಇದು ಆಶ್ಚರ್ಯಕರವೇ ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ ಎಂಬುದನ್ನೂ ಚರ್ಚಿಸಬೇಕಿದೆ. ಏಕೆಂದರೆ ವಾಸ್ತವ ಗಡಿ ರೇಖೆಗಿಂತ ಪಾಕಿಸ್ತಾನದ ಸೈನಿಕರು ಬಂದಿದ್ದರು ಎಂಬ ಕಾರಣಕ್ಕೇ ಕಾರ್ಗಿಲ್ ಯುದ್ಧವಾಗಿತ್ತು. ಈಗ ಚೀನಾದ ವಿಚಾರದಲ್ಲಿ ಮಾತ್ರ – ಅದರಲ್ಲೂ ಚೀನಾವನ್ನು ಬಾಯ್ಕಾಟ್ ಮಾಡಿ ಎಂದು ದೇಶದೊಳಗೆ ನಡೆಸಲಾಗುತ್ತಿರುವ ಆನ್‍ಲೈನ್ ಪ್ರಚಾರದಲ್ಲಿ ಸರ್ಕಾರದ ಬೆಂಬಲಿಗರೇ ಹೆಚ್ಚಾಗಿರುವಾಗ – ಆಫ್‍ಲೈನ್ ಸಂಘರ್ಷಕ್ಕೆ ಮುಂದಾಗುತ್ತಿಲ್ಲ.

ಪಾಕಿಸ್ತಾನದ ವಿರುದ್ದ ಯುದ್ದಕ್ಕೆ ಚೀರಾಡುವ, ಪ್ರಚೋದಿಸುವ ಸುದ್ದಿ ವಾಹಿನಿಗಳಿಗೂ ಚೀನಾದ ನುಸುಳುವಿಕೆ ಮತ್ತು ಜಾಗದ ಒತ್ತುವರಿಯು ಪ್ರತಿನಿತ್ಯದ ಪ್ರೈಮ್‍ಟೈಮ್ ಚರ್ಚೆಯ ವಿಚಾರ ಆಗಲಿಲ್ಲ. ಪಾಕಿಸ್ತಾನದ ಮೇಲೆ ಬಳಸುವ ಪ್ರಚೋದನಾ ಭಾಷೆಯನ್ನು ಚೀನಾದ ಮೇಲೆ ಬಳಸುತ್ತಿಲ್ಲ. ರಾಷ್ಟ್ರವಾದವು ಎದುರಾಳಿಯ ಸಾಮಥ್ರ್ಯದ ಮೇಲೂ ಅವಲಂಬಿತವಾಗಿರುತ್ತದೆಯೇ ಎಂಬ ಪ್ರಶ್ನೆಯು ಇಲ್ಲಿ ಏಳುವಂತಾಗಿದೆ.

ಚೀನಾವು ತನ್ನದೊಂದು ಹೆದ್ದಾರಿ ಯೋಜನೆಯನ್ನೂ ಕೈಗೊಂಡಿರುವುದು ಎಲ್ಲರಿಗೂ ಗೊತ್ತಿದೆ. ಟಿಬೆಟ್ ಪ್ರದೇಶವನ್ನು ಲಡಾಕ್ ಮೂಲಕ ಕಾಶ್ಮೀರದ ಮೇಲ್ಬಾಗದ ಕಷ್ಗರ್ ಪ್ರದೇಶಕ್ಕೆ ಸಂಪರ್ಕ ಒದಗಿಸುವ ಹೆದ್ದಾರಿ ಮತ್ತು ಮೂಲಸಂಪರ್ಕ ಒದಗಿಸುವ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಹೆದ್ದಾರಿಯೇ ಪಾಕಿಸ್ತಾನದ ಮೂಲಕ ಹೋಗುವ 46 ಬಿಲಿಯನ್ ಡಾಲರ್ ಮೊತ್ತದ ಚೀನಾ-ಪಾಕಿಸ್ತಾನ ವಾಣಿಜ್ಯ ಓಣಿ ಎಂದು ಬಿಂಬಿಸಲಾಗುತ್ತಿದೆ. ಮೋದಿ ಸರ್ಕಾರವು ಈ ಹೊತ್ತಿನಲ್ಲಿ ತೆಗೆದುಕೊಳ್ಳಬೇಕಾದ ತೀರ್ಮಾನಗಳಿಗೆ ವಿಶೇಷ ಮಹತ್ವವಿದೆ. ಏಕೆಂದರೆ ಈ ಪ್ರಾಂತದಲ್ಲಿ ಮಾತ್ರವಲ್ಲದೇ ಪ್ರಪಂಚದಲ್ಲೇ ಅತೀ ದೊಡ್ಡ ಶಕ್ತಿಯಾಗುವ ಚೀನಾದ ಮಹತ್ವಾಕಾಂಕ್ಷೆಯ ಭಾಗವಾಗಿಯೂ ಈ ಕಾರಿಡಾರ್ ನಿರ್ಮಾಣ ಸಾಗಿದೆ. ಹೀಗಿರುವಾಗ ತಮ್ಮ ಯೋಜನೆಯೇನು ಎಂದು ಸಹಜವಾಗಿಯೇ ಏಳುವ ಯಾವುದಕ್ಕೂ ನೇರ ಉತ್ತರ ನೀಡದೆ ಒಂದು ರೀತಿಯ ಉಡಾಫೆ ಹೇಳಿಕೆಗಳು ಹೊರಬಿದ್ದಿವೆ. ಇದೇ ಸಂದರ್ಭದಲ್ಲಿ ನೇಪಾಳ ಕೂಡ ಭಾರತದ ಉತ್ತರಾಖಂಡ್ ಗಡಿಭಾಗದ ಲಿಪುಲೆಖ್ ಪಾಸ್ ಬಳಿ ಭಾರತದ ರಸ್ತೆ ನಿರ್ಮಾಣಕ್ಕೆ ತಡೆಯೊಡ್ಡಿದೆ.

ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಯೋಜನೆಗಳು, ರಸ್ತೆ ಸಂಪರ್ಕಗಳನ್ನು ಮಾಡುವುದರ ಬದಲಿಗೆ ನಮ್ಮ ಸೈನಿಕರಿಗೆ ಚೀನಾದಿಂದ ಆಮದು ಮಾಡಿಕೊಂಡ ಬುಲೆಟ್ ಪ್ರೂಫ್ ಕವಚಗಳನ್ನು ಕೊಡುತ್ತಿರುವ ಆರೋಪವನ್ನು ಎದುರಿಸುತ್ತಿದೆ. ಸರ್ದಾರ್ ಪಟೇಲರ ಏಕತೆ ಪ್ರತಿಮೆಗೂ ಚೀನಾಗೆ 3000 ಕೋಟಿ ಕೊಟ್ಟು ಕಚ್ಚಾವಸ್ತು ಆಮದು ಮಾಡಿಕೊಂಡಿದೆ. ಅದೇ ಹೊತ್ತಿನಲ್ಲಿ ಚೀನಾದ ಟಿಕ್‍ಟಾಕ್ ಮತ್ತಿತರ ಮೊಬೈಲ್ ಅಪ್ಲಿಕೇಶನ್ಸ್‍ಗಳನ್ನು ಕಿತ್ತುಹಾಕಲು ಸರ್ಕಾರವನ್ನು ನಡೆಸುತ್ತಿರುವ ಪಕ್ಷದ ವಿವಿಧ ಐಟಿಸೆಲ್‍ಗಳೇ ಹೇಳುತ್ತಿವೆ. ಇದೊಂಥರಾ ಅಪಹಾಸ್ಯದ ಸನ್ನಿವೇಶವನ್ನು ಸೃಷ್ಟಿಸಿದೆ.

ಹಿಂದೆ ಡೋಕ್ಲಾಮ್ ಪ್ರದೇಶದಲ್ಲಿ ಬಂದಿಳಿದ ಚೀನಾದ ಸೈನಿಕರು ಮತ್ತೆ ವಾಪಸ್ಸು ಹೋಗಲಿಲ್ಲ. ಭಾರತವೇ ಮಣಿಯಿತು ಎಂಬ ವರದಿಗಳು ಆಗಲೇ ಬಂದವು. ವಿರೋಧಪಕ್ಷದವರೂ ಈ ಕುರಿತು ಸರ್ಕಾರವನ್ನು ಚುಚ್ಚಿ ಪ್ರಶ್ನೆ ಕೇಳಿದರು. ದೇಶದೊಳಗೆ ಈ ಎಲ್ಲಾ ಪ್ರಶ್ನೆಗಳನ್ನು ಎತ್ತದಂತೆ ಮಾಧ್ಯಮಗಳನ್ನು ಬಾಯಿಮುಚ್ಚಿಸುವ ಅಗತ್ಯವೂ ಇಲ್ಲದಂತೆ ಬಹುತೇಕ ಮಾಧ್ಯಮಗಳು ಸರ್ಕಾರದ ಸಾಧನೆಗಳನ್ನು ಮಾತ್ರ ಹೇಳುವ ಸಾಧನಗಳಾಗಿಬಿಟ್ಟಿದ್ದರೆ, ಉಳಿದ ಮಾಧ್ಯಮಗಳು ರಾಷ್ಟ್ರವಾದದ ಹೆಸರಿನಲ್ಲಿ ಬರುವ ಬಾಣಗಳಿಗೆ ಹೆದರಿ ಕುಳಿತಿರಬೇಕಿದೆ. ಆದರೆ ಸಾಮಾನ್ಯವಾಗಿ ಗಡಿ ವಿಚಾರದಲ್ಲೇ ಕೆರಳುವ ರಾಷ್ಟ್ರವಾದವು ಇಲ್ಲಿ ಗಡಿಯನ್ನೇ ಕಳೆದುಕೊಳ್ಳುತ್ತಿದೆಯೇ ಎಂಬ ಆತಂಕ ಕಾಡುತ್ತಿದೆ. ಅಂದರೆ ರಾಷ್ಟ್ರವಾದದ ಹೆಸರಿನಲ್ಲಿ ಆಳ್ವಿಕೆ ನಡೆಸುವ ಸರ್ಕಾರವೇ ದುರ್ಬಲ ಸ್ಥಿತಿಯಲ್ಲಿ ನಿಂತಿದೆಯೇ ಎಂಬ ಪ್ರಶ್ನೆಗಳಿಗೆ ಕೇಂದ್ರವು ಉತ್ತರ ನೀಡುವುದೊಳ್ಳೆಯದು. ಇಲ್ಲದಿದ್ದರೆ ವಿಶ್ವದ ಸೂಪರ್‍ಪವರ್ ಆಗುವ ಹೆಗ್ಗಳಿಕೆಯ ಕನಸು ಕಾಣುತ್ತಿರುವ ಭಾರತದ ಜನರಿಗೆ ಮುಂದೊಂದು ದಿನ ತಾವು ದೈನೇಸಿ ಸ್ಥಿತಿಯಲ್ಲಿದ್ದೇವೆ ಎಂಬ ಭೀಕರ ಪಾತಾಳಕ್ಕಿಳಿಯುವ ದುಸ್ಥಿತಿ ಬರಬಾರದು.


ಇದನ್ನು ಓದಿ: ನೇಪಾಳ ಪೊಲೀಸರ ಗುಂಡಿನ ದಾಳಿ; ಬಿಹಾರ ಗಡಿಯಲ್ಲಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಚೀನಾ ಪರವಾದ ಲೇಖನ. ಇಲ್ಲಿ ಪ್ರಧಾನ ಮಂತ್ರಿ ಅವರನ್ನು ಟೀಕಿಸುವ ಏಕಮಾತ್ರ ಉದ್ದೇಶದಿಂದ ಬರೆದಿದ್ದಾರೆ. ಇಲ್ಲಿ ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ಲೇಖನ ಬರೆಯಲಾಗಿದೆ. ಇದೊಂದು ಅಪಹಾಸ್ಯ ಕುಚೋದ್ಯ..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....