Homeಮುಖಪುಟ"ಅವರು ಕಚ್ಚತೀವು ದ್ವೀಪವನ್ನು ವಾಪಸ್ ತೆಗೆದುಕೊಳ್ಳುತ್ತಾರಾ.."; ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಂಸದರ ಸವಾಲು

“ಅವರು ಕಚ್ಚತೀವು ದ್ವೀಪವನ್ನು ವಾಪಸ್ ತೆಗೆದುಕೊಳ್ಳುತ್ತಾರಾ..”; ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಂಸದರ ಸವಾಲು

- Advertisement -
- Advertisement -

ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಅವರು ಸೋಮವಾರ ಕಚ್ಚತೀವು ದ್ವೀಪದ ವಿವಾದದ ಕುರಿತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. “ತಮಿಳುನಾಡಿನ ಬಗ್ಗೆ ಅಷ್ಟು ಕಾಳಜಿ ಇದ್ದರೆ, ಶ್ರೀಲಂಕಾದಿಂದ ದ್ವೀಪವನ್ನು ಹಿಂದಕ್ಕೆ ತೆಗೆದುಕೊಳ್ಳುವ ಧೈರ್ಯ ಮಾಡುತ್ತಾರೆಯೇ” ಎಂದು ಸವಾಲು ಹಾಕಿದ್ದಾರೆ.

“ತಮಿಳುನಾಡಿನ ಬಗ್ಗೆ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಅವರು ಕಚ್ಚತೀವ್ ಅನ್ನು ಹಿಂಪಡೆಯುತ್ತಾರೆಯೇ? ನಾನು ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇನೆ. ಅವರು ವಿಫಲರಾಗಿದ್ದಾರೆ” ಎಂದು ಟ್ಯಾಗೋರ್ ಅವರು ಕಚ್ಚತೀವು ದ್ವೀಪದ ಕುರಿತ ಪ್ರಧಾನ ಮಂತ್ರಿಯ ‘ಎಕ್ಸ್’ ಪೋಸ್ಟ್ ಕುರಿತು ಕಿಡಿಕಾರಿದ್ದಾರೆ.

“ರಾಮನಾಡ್ ಜಿಲ್ಲೆಯಲ್ಲಿ ತಮಿಳು ಮೀನುಗಾರರ ಮೇಲೆ ದಾಳಿ ನಡೆದರೆ ಶ್ರೀಲಂಕಾದಿಂದ ದ್ವೀಪವನ್ನು ಹಿಂಪಡೆಯಲು ಕಾಂಗ್ರೆಸ್ ಧ್ವನಿ ಎತ್ತಲಿದೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಭರವಸೆ ನೀಡಿದ್ದಾರೆ.

“ನಮ್ಮ ಮೀನುಗಾರರು, ರಾಮನಾಡು ಜಿಲ್ಲೆಯ ನಮ್ಮ ಸಹೋದರರ ಮೇಲೆ ದಾಳಿಯಾದರೆ, ನಾವು ಕಚ್ಚತೀವನ್ನು ಹಿಂಪಡೆಯಲು ಧ್ವನಿ ಎತ್ತುತ್ತೇವೆ ಎಂಬುದು ನಮಗೆ ಸ್ಪಷ್ಟವಾಗಿದೆ. ಆದರೆ, 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅದನ್ನು ಮಾಡಲು ವಿಫಲರಾಗಿದ್ದಾರೆ” ಎಂದು ಟ್ಯಾಗೋರ್ ಹೇಳಿದರು.

ತಮಿಳುನಾಡಿನಲ್ಲಿ ಬಿಜೆಪಿಗೆ ಕಡಿಮೆ ಚುನಾವಣಾ ಅವಕಾಶಗಳಿವೆ ಎಂದು ಪ್ರತಿಪಾದಿಸಿದ ಟ್ಯಾಗೋರ್, “ಪ್ರಧಾನಿ ಮೋದಿ ಇಂತಹ ಅಗ್ಗದ ತಂತ್ರಗಳನ್ನು ನಿಲ್ಲಿಸಬೇಕು. ಅವರನ್ನು ತಮಿಳುನಾಡು ತಿರಸ್ಕರಿಸುತ್ತಿದೆ. ಅವರಿಗೆ ತಮಿಳುನಾಡಿನಲ್ಲಿ ಒಂದು ಸ್ಥಾನವೂ ಸಿಗುವುದಿಲ್ಲ. ಅಣ್ಣಾಮಲೈ ಅವರು ಒಳಗೆ ಬರುವುದಿಲ್ಲ. ಎರಡನೇ ಸ್ಥಾನವಲ್ಲ, ಅವರು ತಮಿಳುನಾಡಿನಲ್ಲಿ ಮೂರನೇ ಸ್ಥಾನಕ್ಕಾಗಿ ಹೆಣಗಾಡುತ್ತಿದ್ದಾರೆ” ಎಂದರು.

ತಮಿಳುನಾಡಿನಲ್ಲಿ ಜನರು ತಿರಸ್ಕರಿಸುತ್ತಿರುವುದರಿಂದ ಬಿಜೆಪಿಯು ತಮಿಳುನಾಡಿನಲ್ಲಿ “ದಿಕ್ಕು ತಪ್ಪಿಸುವ ತಂತ್ರಗಳನ್ನು” ಬಳಸುತ್ತಿದೆ ಎಂದು ಟ್ಯಾಗೋರ್ ಹೇಳಿದ್ದಾರೆ.

“ಬಿಜೆಪಿ, ಆರ್‌ಎಸ್‌ಎಸ್ ಮತ್ತು ಪ್ರಧಾನಿ ಮೋದಿಯವರ ಸಮಸ್ಯೆ ಎಂದರೆ, ತಮಿಳುನಾಡಿನಲ್ಲಿ ಜನರು ಅವರನ್ನು ತಿರಸ್ಕರಿಸುತ್ತಿದ್ದಾರೆ ಮತ್ತು ಅವರು ದಿಕ್ಕು ತಪ್ಪಿಸುವ ತಂತ್ರವನ್ನು ಬಯಸುತ್ತಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

“ತಮಿಳುನಾಡಿನ ಬಗ್ಗೆ ಅವರ ತಾರತಮ್ಯ ಎಲ್ಲರಿಗೂ ತಿಳಿದಿದೆ, ಮಧುರೈ ಎಐಐಎಂಎಸ್ ಇನ್ನೂ ಪ್ರಾರಂಭವಾಗಿಲ್ಲ, ತಮಿಳುನಾಡಿನ ಎಲ್ಲಾ ಯೋಜನೆಗಳು ಇನ್ನೂ ಪ್ರಾರಂಭವಾಗಿಲ್ಲ. ಕೇವಲ ಅಡಿಗಲ್ಲು ಇದೆ, ಎಲ್ಲೆಡೆ ಒಂದೇ ಇಟ್ಟಿಗೆ ಇದೆ… ಅದಕ್ಕಾಗಿ ಅವರು ಈ ವಿಚಾರ ಎತ್ತುತ್ತಿದ್ದಾರೆ” ಎಂದು ಅವರು ಹೇಳಿದರು.

ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ಐತಿಹಾಸಿಕ ಸಂದರ್ಭವನ್ನು ವಿವರಿಸಿದ ಟ್ಯಾಗೋರ್, “ಆ ಸಮಯದಲ್ಲಿ 6 ಲಕ್ಷ ತಮಿಳರನ್ನು ಉಳಿಸಲು ಇಂದಿರಾ ಗಾಂಧಿ ನೇತೃತ್ವದ ಭಾರತ ಸರ್ಕಾರವು ‘ಇಂದಿರಾ ಗಾಂಧಿ-ಸಿರಿಮಾವೋ ಬಂಡಾರನಾಯಕೆ’ ಎಂಬ ಒಪ್ಪಂದಕ್ಕೆ ಸಹಿ ಹಾಕಿತು.  ಅವರು ಹಳೆಯ ರಾಮನಾಡ್ ಜಿಲ್ಲೆಯ ಮೂಲನಿವಾಸಿಗಳಾಗಿರುವುದರಿಂದ, ಈ ಕಚ್ಚತೀವು ದ್ವೀಪವನ್ನು ಭಾರತ ಸರ್ಕಾರವು ಶ್ರೀಲಂಕಾ ಸರ್ಕಾರಕ್ಕೆ ನೀಡಿದೆ; ಇದನ್ನು ತಮಿಳರನ್ನು ಉಳಿಸಲು ಮಾಡಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ; ಕಚ್ಚತೀವು ದ್ವೀಪ ವಿವಾದ: ನೆಹರು ಕುರಿತ ಜೈಶಂಕರ್ ಹೇಳಿಕೆ ಖಂಡಿಸಿದ ಕಾಂಗ್ರೆಸ್ ನಾಯಕ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...