Homeಮುಖಪುಟ"ಅವರು ಕಚ್ಚತೀವು ದ್ವೀಪವನ್ನು ವಾಪಸ್ ತೆಗೆದುಕೊಳ್ಳುತ್ತಾರಾ.."; ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಂಸದರ ಸವಾಲು

“ಅವರು ಕಚ್ಚತೀವು ದ್ವೀಪವನ್ನು ವಾಪಸ್ ತೆಗೆದುಕೊಳ್ಳುತ್ತಾರಾ..”; ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಂಸದರ ಸವಾಲು

- Advertisement -
- Advertisement -

ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಅವರು ಸೋಮವಾರ ಕಚ್ಚತೀವು ದ್ವೀಪದ ವಿವಾದದ ಕುರಿತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. “ತಮಿಳುನಾಡಿನ ಬಗ್ಗೆ ಅಷ್ಟು ಕಾಳಜಿ ಇದ್ದರೆ, ಶ್ರೀಲಂಕಾದಿಂದ ದ್ವೀಪವನ್ನು ಹಿಂದಕ್ಕೆ ತೆಗೆದುಕೊಳ್ಳುವ ಧೈರ್ಯ ಮಾಡುತ್ತಾರೆಯೇ” ಎಂದು ಸವಾಲು ಹಾಕಿದ್ದಾರೆ.

“ತಮಿಳುನಾಡಿನ ಬಗ್ಗೆ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಅವರು ಕಚ್ಚತೀವ್ ಅನ್ನು ಹಿಂಪಡೆಯುತ್ತಾರೆಯೇ? ನಾನು ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇನೆ. ಅವರು ವಿಫಲರಾಗಿದ್ದಾರೆ” ಎಂದು ಟ್ಯಾಗೋರ್ ಅವರು ಕಚ್ಚತೀವು ದ್ವೀಪದ ಕುರಿತ ಪ್ರಧಾನ ಮಂತ್ರಿಯ ‘ಎಕ್ಸ್’ ಪೋಸ್ಟ್ ಕುರಿತು ಕಿಡಿಕಾರಿದ್ದಾರೆ.

“ರಾಮನಾಡ್ ಜಿಲ್ಲೆಯಲ್ಲಿ ತಮಿಳು ಮೀನುಗಾರರ ಮೇಲೆ ದಾಳಿ ನಡೆದರೆ ಶ್ರೀಲಂಕಾದಿಂದ ದ್ವೀಪವನ್ನು ಹಿಂಪಡೆಯಲು ಕಾಂಗ್ರೆಸ್ ಧ್ವನಿ ಎತ್ತಲಿದೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಭರವಸೆ ನೀಡಿದ್ದಾರೆ.

“ನಮ್ಮ ಮೀನುಗಾರರು, ರಾಮನಾಡು ಜಿಲ್ಲೆಯ ನಮ್ಮ ಸಹೋದರರ ಮೇಲೆ ದಾಳಿಯಾದರೆ, ನಾವು ಕಚ್ಚತೀವನ್ನು ಹಿಂಪಡೆಯಲು ಧ್ವನಿ ಎತ್ತುತ್ತೇವೆ ಎಂಬುದು ನಮಗೆ ಸ್ಪಷ್ಟವಾಗಿದೆ. ಆದರೆ, 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅದನ್ನು ಮಾಡಲು ವಿಫಲರಾಗಿದ್ದಾರೆ” ಎಂದು ಟ್ಯಾಗೋರ್ ಹೇಳಿದರು.

ತಮಿಳುನಾಡಿನಲ್ಲಿ ಬಿಜೆಪಿಗೆ ಕಡಿಮೆ ಚುನಾವಣಾ ಅವಕಾಶಗಳಿವೆ ಎಂದು ಪ್ರತಿಪಾದಿಸಿದ ಟ್ಯಾಗೋರ್, “ಪ್ರಧಾನಿ ಮೋದಿ ಇಂತಹ ಅಗ್ಗದ ತಂತ್ರಗಳನ್ನು ನಿಲ್ಲಿಸಬೇಕು. ಅವರನ್ನು ತಮಿಳುನಾಡು ತಿರಸ್ಕರಿಸುತ್ತಿದೆ. ಅವರಿಗೆ ತಮಿಳುನಾಡಿನಲ್ಲಿ ಒಂದು ಸ್ಥಾನವೂ ಸಿಗುವುದಿಲ್ಲ. ಅಣ್ಣಾಮಲೈ ಅವರು ಒಳಗೆ ಬರುವುದಿಲ್ಲ. ಎರಡನೇ ಸ್ಥಾನವಲ್ಲ, ಅವರು ತಮಿಳುನಾಡಿನಲ್ಲಿ ಮೂರನೇ ಸ್ಥಾನಕ್ಕಾಗಿ ಹೆಣಗಾಡುತ್ತಿದ್ದಾರೆ” ಎಂದರು.

ತಮಿಳುನಾಡಿನಲ್ಲಿ ಜನರು ತಿರಸ್ಕರಿಸುತ್ತಿರುವುದರಿಂದ ಬಿಜೆಪಿಯು ತಮಿಳುನಾಡಿನಲ್ಲಿ “ದಿಕ್ಕು ತಪ್ಪಿಸುವ ತಂತ್ರಗಳನ್ನು” ಬಳಸುತ್ತಿದೆ ಎಂದು ಟ್ಯಾಗೋರ್ ಹೇಳಿದ್ದಾರೆ.

“ಬಿಜೆಪಿ, ಆರ್‌ಎಸ್‌ಎಸ್ ಮತ್ತು ಪ್ರಧಾನಿ ಮೋದಿಯವರ ಸಮಸ್ಯೆ ಎಂದರೆ, ತಮಿಳುನಾಡಿನಲ್ಲಿ ಜನರು ಅವರನ್ನು ತಿರಸ್ಕರಿಸುತ್ತಿದ್ದಾರೆ ಮತ್ತು ಅವರು ದಿಕ್ಕು ತಪ್ಪಿಸುವ ತಂತ್ರವನ್ನು ಬಯಸುತ್ತಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

“ತಮಿಳುನಾಡಿನ ಬಗ್ಗೆ ಅವರ ತಾರತಮ್ಯ ಎಲ್ಲರಿಗೂ ತಿಳಿದಿದೆ, ಮಧುರೈ ಎಐಐಎಂಎಸ್ ಇನ್ನೂ ಪ್ರಾರಂಭವಾಗಿಲ್ಲ, ತಮಿಳುನಾಡಿನ ಎಲ್ಲಾ ಯೋಜನೆಗಳು ಇನ್ನೂ ಪ್ರಾರಂಭವಾಗಿಲ್ಲ. ಕೇವಲ ಅಡಿಗಲ್ಲು ಇದೆ, ಎಲ್ಲೆಡೆ ಒಂದೇ ಇಟ್ಟಿಗೆ ಇದೆ… ಅದಕ್ಕಾಗಿ ಅವರು ಈ ವಿಚಾರ ಎತ್ತುತ್ತಿದ್ದಾರೆ” ಎಂದು ಅವರು ಹೇಳಿದರು.

ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ಐತಿಹಾಸಿಕ ಸಂದರ್ಭವನ್ನು ವಿವರಿಸಿದ ಟ್ಯಾಗೋರ್, “ಆ ಸಮಯದಲ್ಲಿ 6 ಲಕ್ಷ ತಮಿಳರನ್ನು ಉಳಿಸಲು ಇಂದಿರಾ ಗಾಂಧಿ ನೇತೃತ್ವದ ಭಾರತ ಸರ್ಕಾರವು ‘ಇಂದಿರಾ ಗಾಂಧಿ-ಸಿರಿಮಾವೋ ಬಂಡಾರನಾಯಕೆ’ ಎಂಬ ಒಪ್ಪಂದಕ್ಕೆ ಸಹಿ ಹಾಕಿತು.  ಅವರು ಹಳೆಯ ರಾಮನಾಡ್ ಜಿಲ್ಲೆಯ ಮೂಲನಿವಾಸಿಗಳಾಗಿರುವುದರಿಂದ, ಈ ಕಚ್ಚತೀವು ದ್ವೀಪವನ್ನು ಭಾರತ ಸರ್ಕಾರವು ಶ್ರೀಲಂಕಾ ಸರ್ಕಾರಕ್ಕೆ ನೀಡಿದೆ; ಇದನ್ನು ತಮಿಳರನ್ನು ಉಳಿಸಲು ಮಾಡಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ; ಕಚ್ಚತೀವು ದ್ವೀಪ ವಿವಾದ: ನೆಹರು ಕುರಿತ ಜೈಶಂಕರ್ ಹೇಳಿಕೆ ಖಂಡಿಸಿದ ಕಾಂಗ್ರೆಸ್ ನಾಯಕ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...