Homeಮುಖಪುಟ2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

- Advertisement -
- Advertisement -

ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ನಿತೀಶ್‌ ಕುಮಾರ್‌ ಮುಂದಿನ ಲೋಕಸಭೆ ಚುನಾವಣೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ,“ಅವರು 2014 ರಲ್ಲಿ ಗೆದ್ದರು, ಆದರೆ ಅವರು 2024 ಗೆಲ್ಲುತ್ತಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಒಗ್ಗಟ್ಟಿನತ್ತ ಕೆಲಸ ಮಾಡುವ ಬಗ್ಗೆ ನಿತೀಶ್ ಕುಮಾರ್ ಪದೇ ಪದೇ ಮಾತನಾಡುತ್ತಿದ್ದರೂ, ನೀವು ಪ್ರಧಾನಿ ಅಭ್ಯರ್ಥಿಯಾಗಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನಾನು ಯಾವುದಕ್ಕೂ ಸ್ಪರ್ಧಿಯಲ್ಲ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೇಳಲೇ ಬೇಕಾದ ಪ್ರಶ್ನೆಯೇನೆಂದರೆ, 2014 ರಲ್ಲಿ ಗೆದ್ದವರು 2024 ರಲ್ಲಿ ಮತ್ತೆ ಗೆಲ್ಲುತ್ತಾರೆಯೆ ಎಂದಾಗಿದೆ” ಎಂದು ಅವರು ಹೇಳಿದ್ದಾರೆ. ಬಿಹಾರದಲ್ಲಿ ಚುನಾವಣೆಗಳು ಕೇವಲ 2025 ರಲ್ಲಿ, ಲೋಕಸಭೆ ಸ್ಪರ್ಧೆಯ ನಂತರ ಒಂದು ವರ್ಷದ ನಂತರ ನಡೆಯಲಿದೆ.

ಇದನ್ನೂ ಓದಿ: ‘ಬಿಜೆಪಿ ಭಾರತ ಬಿಟ್ಟು ತೊಲಗು’ ಅಭಿಯಾನ ಬಿಹಾರದಲ್ಲಿ ಉತ್ತಮ ಆರಂಭ ಕಂಡಿದೆ: ಅಖಿಲೇಶ್ ಯಾದವ್

2024 ರಲ್ಲಿ ಕಾಂಗ್ರೆಸ್‌ ನಾಯಕತ್ವವನ್ನು ಪಡೆಯದಿದ್ದರೆ ನಿತೀಶ್ ಕುಮಾರ್‌ ಅವರು 2024 ರಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷದ ಅಭ್ಯರ್ಥಿಯಾಗಬಹುದು ಎಂಬ ವಿಚಾರವನ್ನು ರಾಜಕೀಯ ವಿಶ್ಲೇಷಕರು ವರ್ಷಗಳಿಂದ ತೇಲಿ ಬಿಡುತ್ತಿದ್ದಾರೆ. ಆದರೆ ಅವರು ಮೈತ್ರಿ ಪಕ್ಷಗಳನ್ನು ಬಿಟ್ಟು ಹಲವು ಭಾರಿ ಮೈತ್ರಿ ತೊರೆದ್ದು ಕೂಡಾ 2024 ರ ಚುನಾವಣೆಯ ಮೈತ್ರಿಕೂಟದ ರಚನೆಯಲ್ಲಿ ಗಣನೆಗೆ ಬರಲಿದೆ.

ಜೆಡಿಯು-ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಯ ಮೊದಲ ‘ಮಹಾಘಟಬಂಧನ್’ 2015 ರಲ್ಲಿ ಅಧಿಕಾರವನ್ನು ಗೆದ್ದಿತ್ತು. ಆದರೆ ನಂತರ ಈ ಮೈತ್ರಿಯನ್ನು ತೊರೆದು, ಬಿಜೆಪಿಯೊಂದಿಗೆ ಅಧಿಕಾರಕ್ಕೆ ಏರಿದ್ದರು. ಇದೀಗ ಮತ್ತ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಸ್ಪರ್ಧಿಸಿ ಎರಡು ವರ್ಷಗಳ ನಂತರ ಬಿಜೆಪಿಯ ಮೈತ್ರಿಯನ್ನು ತೊರೆದಿದ್ದಾರೆ.

ನಿತೀಶ್ ಕುಮಾರ್‌ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ನರೇಂದ್ರ ಮೋದಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ ವಿಶೇಷವಾಗಿ 2002 ರ ಗುಜರಾತ್ ಗಲಭೆಗಳ ವಿಚಾರಕ್ಕೆ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದರು. ಆದರೆ ನಂತರ ಅವರು 2017 ರಲ್ಲಿ ಮತ್ತೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬಿಹಾರದ ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

2020 ರಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಗೆದ್ದ ನಂತರ ತಾನು ಮುಖ್ಯಮಂತ್ರಿಯಾಗಲು ಬಯಸಿರಲಿಲ್ಲ ಎಂದು ಅವರು ಹೇಳಿದ್ದಾರೆ. “ಪಕ್ಷದ (ಜೆಡಿಯು) ಜನರೊಂದಿಗೆ ಕೇಳಿ, ಅವರು ನಮಗೆ ಏನು ಮಾಡಿದ್ದಾರೆ ಎಂದು. ನನಗೆ ಸಿಎಂ ಆಗಲು ಇಷ್ಟವಿರಲಿಲ್ಲ. ಆದರೆ ನನ್ನ ಮೇಲೆ ಒತ್ತಡ ಹೇರಲಾಯಿತು. ನಂತರ ಏನಾಯಿತು ಎಂದು ನೀವೇ ನೋಡಿ. ನಾನು ಪತ್ರಕರ್ತರೊಂದಿಗೆ ಮಾತನಾಡದೆ ಎರಡು ತಿಂಗಳಾಯಿತು” ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಜೆಡಿಯು ಶಾಸಕರ ಸಂಖ್ಯಾಬಲ ಕುಸಿತದತ್ತ ಕೂಡಾ ಅವರು ಬೊಟ್ಟು ಮಾಡಿದ್ದಾರೆ. “2015ರಲ್ಲಿ ನಾವು ಎಷ್ಟು ಸೀಟು ಗೆದ್ದಿದ್ದೆವು? ಆಮೇಲೆ ನಾವು ಬಿಜೆಪಿ ಜೊತೆಗೆ ಚುನಾವಣೆಗೆ ಹೋಗಿದ್ದೆವು. ಆದರೆ ನಮ್ಮ ಸಂಖ್ಯಾಬಲ ಯಾವ ಮಟ್ಟಕ್ಕೆ ಇಳಿಯಿತು ನೋಡಿ” ಜೆಡಿಯುನಲ್ಲಿರುವವರಲ್ಲದೆ, ತೇಜಸ್ವಿ ಯಾದವ್ ಕೂಡ ಬಿಜೆಪಿ “ತನ್ನ ಪಾಲುದಾರರನ್ನು ಕಸಿದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

243 ಸಂಖ್ಯಾ ಬಲವಿರುವ ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಅವರ ಪಕ್ಷವಾದ ಜೆಡಿಯು 71 ಸ್ಥಾನಗಳನ್ನು 2015 ರಲ್ಲಿ ಗೆದ್ದಿತ್ತು. ಆರ್‌ಜೆಡಿ 80 ಸ್ಥಾನದೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಒಪ್ಪಂದದ ಭಾಗವಾಗಿ ನಿತೀಶ್ ಕುಮಾರ್‌ ಅವರೇ ರಾಜ್ಯದ ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಸದ್ಯಕ್ಕೆ ಜೆಡಿಯು 45 ಸ್ಥಾನಗಳನ್ನು ಹೊಂದಿದ್ದು, 77 ಸ್ಥಾನಗಳನ್ನು ಹೊಂದಿರುವ ಬಿಜೆಪಿ 2020 ರಲ್ಲಿ ನಿತೀಶ್ ಕುಮಾರ್‌‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...