Homeಮುಖಪುಟ2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

- Advertisement -
- Advertisement -

ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ನಿತೀಶ್‌ ಕುಮಾರ್‌ ಮುಂದಿನ ಲೋಕಸಭೆ ಚುನಾವಣೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ,“ಅವರು 2014 ರಲ್ಲಿ ಗೆದ್ದರು, ಆದರೆ ಅವರು 2024 ಗೆಲ್ಲುತ್ತಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಒಗ್ಗಟ್ಟಿನತ್ತ ಕೆಲಸ ಮಾಡುವ ಬಗ್ಗೆ ನಿತೀಶ್ ಕುಮಾರ್ ಪದೇ ಪದೇ ಮಾತನಾಡುತ್ತಿದ್ದರೂ, ನೀವು ಪ್ರಧಾನಿ ಅಭ್ಯರ್ಥಿಯಾಗಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನಾನು ಯಾವುದಕ್ಕೂ ಸ್ಪರ್ಧಿಯಲ್ಲ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೇಳಲೇ ಬೇಕಾದ ಪ್ರಶ್ನೆಯೇನೆಂದರೆ, 2014 ರಲ್ಲಿ ಗೆದ್ದವರು 2024 ರಲ್ಲಿ ಮತ್ತೆ ಗೆಲ್ಲುತ್ತಾರೆಯೆ ಎಂದಾಗಿದೆ” ಎಂದು ಅವರು ಹೇಳಿದ್ದಾರೆ. ಬಿಹಾರದಲ್ಲಿ ಚುನಾವಣೆಗಳು ಕೇವಲ 2025 ರಲ್ಲಿ, ಲೋಕಸಭೆ ಸ್ಪರ್ಧೆಯ ನಂತರ ಒಂದು ವರ್ಷದ ನಂತರ ನಡೆಯಲಿದೆ.

ಇದನ್ನೂ ಓದಿ: ‘ಬಿಜೆಪಿ ಭಾರತ ಬಿಟ್ಟು ತೊಲಗು’ ಅಭಿಯಾನ ಬಿಹಾರದಲ್ಲಿ ಉತ್ತಮ ಆರಂಭ ಕಂಡಿದೆ: ಅಖಿಲೇಶ್ ಯಾದವ್

2024 ರಲ್ಲಿ ಕಾಂಗ್ರೆಸ್‌ ನಾಯಕತ್ವವನ್ನು ಪಡೆಯದಿದ್ದರೆ ನಿತೀಶ್ ಕುಮಾರ್‌ ಅವರು 2024 ರಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷದ ಅಭ್ಯರ್ಥಿಯಾಗಬಹುದು ಎಂಬ ವಿಚಾರವನ್ನು ರಾಜಕೀಯ ವಿಶ್ಲೇಷಕರು ವರ್ಷಗಳಿಂದ ತೇಲಿ ಬಿಡುತ್ತಿದ್ದಾರೆ. ಆದರೆ ಅವರು ಮೈತ್ರಿ ಪಕ್ಷಗಳನ್ನು ಬಿಟ್ಟು ಹಲವು ಭಾರಿ ಮೈತ್ರಿ ತೊರೆದ್ದು ಕೂಡಾ 2024 ರ ಚುನಾವಣೆಯ ಮೈತ್ರಿಕೂಟದ ರಚನೆಯಲ್ಲಿ ಗಣನೆಗೆ ಬರಲಿದೆ.

ಜೆಡಿಯು-ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಯ ಮೊದಲ ‘ಮಹಾಘಟಬಂಧನ್’ 2015 ರಲ್ಲಿ ಅಧಿಕಾರವನ್ನು ಗೆದ್ದಿತ್ತು. ಆದರೆ ನಂತರ ಈ ಮೈತ್ರಿಯನ್ನು ತೊರೆದು, ಬಿಜೆಪಿಯೊಂದಿಗೆ ಅಧಿಕಾರಕ್ಕೆ ಏರಿದ್ದರು. ಇದೀಗ ಮತ್ತ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಸ್ಪರ್ಧಿಸಿ ಎರಡು ವರ್ಷಗಳ ನಂತರ ಬಿಜೆಪಿಯ ಮೈತ್ರಿಯನ್ನು ತೊರೆದಿದ್ದಾರೆ.

ನಿತೀಶ್ ಕುಮಾರ್‌ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ನರೇಂದ್ರ ಮೋದಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ ವಿಶೇಷವಾಗಿ 2002 ರ ಗುಜರಾತ್ ಗಲಭೆಗಳ ವಿಚಾರಕ್ಕೆ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದರು. ಆದರೆ ನಂತರ ಅವರು 2017 ರಲ್ಲಿ ಮತ್ತೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬಿಹಾರದ ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

2020 ರಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಗೆದ್ದ ನಂತರ ತಾನು ಮುಖ್ಯಮಂತ್ರಿಯಾಗಲು ಬಯಸಿರಲಿಲ್ಲ ಎಂದು ಅವರು ಹೇಳಿದ್ದಾರೆ. “ಪಕ್ಷದ (ಜೆಡಿಯು) ಜನರೊಂದಿಗೆ ಕೇಳಿ, ಅವರು ನಮಗೆ ಏನು ಮಾಡಿದ್ದಾರೆ ಎಂದು. ನನಗೆ ಸಿಎಂ ಆಗಲು ಇಷ್ಟವಿರಲಿಲ್ಲ. ಆದರೆ ನನ್ನ ಮೇಲೆ ಒತ್ತಡ ಹೇರಲಾಯಿತು. ನಂತರ ಏನಾಯಿತು ಎಂದು ನೀವೇ ನೋಡಿ. ನಾನು ಪತ್ರಕರ್ತರೊಂದಿಗೆ ಮಾತನಾಡದೆ ಎರಡು ತಿಂಗಳಾಯಿತು” ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಜೆಡಿಯು ಶಾಸಕರ ಸಂಖ್ಯಾಬಲ ಕುಸಿತದತ್ತ ಕೂಡಾ ಅವರು ಬೊಟ್ಟು ಮಾಡಿದ್ದಾರೆ. “2015ರಲ್ಲಿ ನಾವು ಎಷ್ಟು ಸೀಟು ಗೆದ್ದಿದ್ದೆವು? ಆಮೇಲೆ ನಾವು ಬಿಜೆಪಿ ಜೊತೆಗೆ ಚುನಾವಣೆಗೆ ಹೋಗಿದ್ದೆವು. ಆದರೆ ನಮ್ಮ ಸಂಖ್ಯಾಬಲ ಯಾವ ಮಟ್ಟಕ್ಕೆ ಇಳಿಯಿತು ನೋಡಿ” ಜೆಡಿಯುನಲ್ಲಿರುವವರಲ್ಲದೆ, ತೇಜಸ್ವಿ ಯಾದವ್ ಕೂಡ ಬಿಜೆಪಿ “ತನ್ನ ಪಾಲುದಾರರನ್ನು ಕಸಿದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

243 ಸಂಖ್ಯಾ ಬಲವಿರುವ ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಅವರ ಪಕ್ಷವಾದ ಜೆಡಿಯು 71 ಸ್ಥಾನಗಳನ್ನು 2015 ರಲ್ಲಿ ಗೆದ್ದಿತ್ತು. ಆರ್‌ಜೆಡಿ 80 ಸ್ಥಾನದೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಒಪ್ಪಂದದ ಭಾಗವಾಗಿ ನಿತೀಶ್ ಕುಮಾರ್‌ ಅವರೇ ರಾಜ್ಯದ ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಸದ್ಯಕ್ಕೆ ಜೆಡಿಯು 45 ಸ್ಥಾನಗಳನ್ನು ಹೊಂದಿದ್ದು, 77 ಸ್ಥಾನಗಳನ್ನು ಹೊಂದಿರುವ ಬಿಜೆಪಿ 2020 ರಲ್ಲಿ ನಿತೀಶ್ ಕುಮಾರ್‌‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...