Homeಮುಖಪುಟಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್‌?

ಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್‌?

ಹಿಂದೊಮ್ಮೆ ಈ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಭಾಗವಹಿಸಿದ್ದರು ಎಂಬುದು ಉಲ್ಲೇಖಾರ್ಹ.

- Advertisement -
- Advertisement -

ದೆಹಲಿ ಸರ್ಕಾರದ ಕಟ್ಟುನಿಟ್ಟಿನ ಆಜ್ಞೆಗಳ ನಡುವೆಯೂ ಸುಮಾರು 2,000 ಜನ ಇದ್ದ ದೆಹಲಿಯ ತಬ್ಲಿಘಿ ಜಮಾತ್ ಸಮಾವೇಶ ನಡೆಯಿತು. ಇದರಲ್ಲಿ ಭಾಗವಹಿಸಿದ ಕೆಲವರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಾಗ ದೇಶಾದಾದ್ಯಂತ ದೊಡ್ಡ ಅಲ್ಲೋಲಕಲ್ಲೋಲ ಸೃಷ್ಟಿಯಾಯಿತು. ಇದು ಕೊರೊನಾ ಹಾಟ್‌ಸ್ಪಾಟ್ ಆದಾಗ ಮುಖ್ಯವಾಹಿನಿ ಮಾಧ್ಯಮಗಳು ಒಂದು ಕೋಮಿನ ವಿರುದ್ಧ ಕೆಂಡಕಾರಿ, ಇಡೀ ಸಮುದಾಯವನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದವು. ತಬ್ಲಿಘಿ ವೈರಸ್‌, ಜಿಹಾದಿ ವೈರಸ್‌ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ ಆಗಿದ್ದವು.

ಈಗ ಪಂಜಾಬ್ ರಾಜ್ಯದ Lovely Professional University ದೇಶದ ಮತ್ತೊಂದು ಕೊರೊನಾ ಹಾಟ್‌‌ಸ್ಪಾಟ್‌ ಆಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಲಾಕ್‌ಡೌನ್‌ ಘೋಷಿಸಿ 25 ದಿನಗಳಾಗುತ್ತಿದ್ದರೂ 30,000 ವಿದ್ಯಾರ್ಥಿಗಳಿರುವ ದೇಶದ ಈ ದೊಡ್ಡ ಖಾಸಗಿ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಸಂಕೀರ್ಣಗಳಲ್ಲಿ 2100 ವಿದ್ಯಾರ್ಥಿಗಳು ಒಟ್ಟಿಗೆ ಇದ್ದು ಸಾಮಾಜಿಕ ಅಂತರ ಪಾಲಿಸಲಾಗಿಲ್ಲ ಎಂಬ ಭಯಾನಕ ಸುದ್ದಿ ಹೊರಬಿದ್ದಿದೆ. ಅಷ್ಟು ಮಾತ್ರವಲ್ಲದೇ ನೂರಾರು ವಿದೇಶಿ ವಿದ್ಯಾರ್ಥಿಗಳು ಇರುವ ಈ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಈ ಪ್ರಕರಣ ಇಡೀ ದೇಶಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಆದರೆ, ಈ ಕುರಿತು ಯಾವ ಮಾಧ್ಯಮಗಳೂ ದೊಡ್ಡದಾಗಿ ಸುದ್ದಿ ಮಾಡುತ್ತಿಲ್ಲದಿರುವುದು ಆಶ್ಚರ್ಯಕರವಾಗಿದೆ. ಇನ್ನೂ ಜನರಿಗಂತು ಇದು ಚರ್ಚೆಯ ವಿಷಯವೇ ಆಗಿಲ್ಲದಿರುವುದು ವಿಪರ್ಯಾಸ.

ಕೊರೋನಾ ಸೋಂಕು ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈಗಾಗಲೇ ದೇಶದ ಮೇಲೆ ಎರಡು ಬಾರಿ ಲಾಕ್‌ಡೌನ್‌ ಘೋಷಿಸಿದೆ. ಉತ್ಪಾದನಾ ವಲಯದಿಂದ ಶಾಲಾ-ಕಾಲೇಜಿನವರೆಗೆ ಎಲ್ಲಾ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ LPU ವಿಶ್ವವಿದ್ಯಾಲಯ ತನ್ನ ಎಲ್ಲಾ ವಿದ್ಯಾರ್ಥಿಗಳನ್ನೂ ಮನೆಗೆ ಕಳುಹಿಸಬೇಕಿತ್ತು. ಆದರೆ, ವಿದೇಶಿ ವಿದ್ಯಾರ್ಥಿಗಳನ್ನೂ ಕ್ಯಾಂಪಸ್‌ನಲ್ಲೇ ಇಟ್ಟುಕೊಂಡು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದೆ.

ಈ ಕುರಿತು ಏಪ್ರಿಲ್.16 ರಂದು ಫಾಗ್ವಾರ ಜಿಲ್ಲಾಧಿಕಾರಿಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗುರ್ವಿಂದರ್ ಸಿಂಗ್ ಜೋಹಾಲ್ ನೀಡಿರುವ ವರದಿಯಲ್ಲಿ, “ಕ್ಯಾಂಪಸ್‌ನೊಳಗೆ ಕೇವಲ 315 ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಮಾತ್ರ ವಾಸಿಸುತ್ತಿದ್ದಾರೆ ಎಂದು ವಿಶ್ವವಿದ್ಯಾನಿಲಯವು ಮೊದಲಿಗೆ ತಿಳಿಸಿತ್ತು. ಆದರೆ, ಈಗ ಭಾರತೀಯ ವಿದ್ಯಾರ್ಥಿಗಳೂ ಸೇರಿ 2,100 ಜನ ಕ್ಯಾಂಪಸ್ ಒಳಗೆ ಇದ್ದಾರೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಇದಲ್ಲದೆ, 570 ಮೆಸ್ ಕಾರ್ಮಿಕರು, 46 ವಾರ್ಡನ್‌ಗಳು ಮತ್ತು 179 ಬೋಧಕವರ್ಗದ ಸದಸ್ಯರೂ ಇದ್ದಾರೆ. ಈ ಪೈಕಿ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಪ್ರಕರಣ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಈ ನಡುವೆ ಶುಕ್ರವಾರ ಕ್ಯಾಂಪಸ್ ಎದುರು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು LPU ವಿಶ್ವವಿದ್ಯಾಲಯದ “ಪಂಜಾಬ್‌ನ ಹಾಟ್‌ಸ್ಪಾಟ್‌” ಆಗಿ ಮಾರ್ಪಟ್ಟಿದೆ. ಕ್ಯಾಂಪಸ್ ಸುತ್ತಲಿನ ಹಳ್ಳಿಗಳಿಗೂ ಈ ಮೂಲಕ ಆಘಾತವಾಗಿದೆ. ಹೀಗಾಗಿ ದೆಹಲಿಯ ಜಮಾಅತ್‌ ಮೇಲೆ ಆದಂತೆಯೇ ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ವಿಶ್ವವಿದ್ಯಾಲಯವನ್ನು ಮುಚ್ಚಬೇಕು ಎಂದು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ನಿರ್ಬಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ NOC ಯನ್ನು ಏಕೆ ಹಿಂಪಡೆಯಬಾರದು? ಎಂದು ಪಂಜಾಬ್‌ನ ಉನ್ನತ ಶಿಕ್ಷಣ ಮತ್ತು ಭಾಷಾ ಇಲಾಖೆ ಗುರುವಾರ ಈ ಸಂಸ್ಥೆಗೆ ಶೋಕಾಸ್ ನೋಟಿಸ್ ಸಹ ನೀಡಿದೆ.

ಹಿಂದೊಮ್ಮೆ ಈ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಭಾಗವಹಿಸಿದ್ದರು ಎಂಬುದು ಉಲ್ಲೇಖಾರ್ಹ.

ಈ ನಡುವೆ ದೇಶದ ಅತಿದೊಡ್ಡ ಖಾಸಗಿ ವಿಶ್ವವಿದ್ಯಾಲಯವಾಗಿ LPU ಆರಂಭವಾದದ್ದು ಹೇಗೆ? ಈ ವಿವಿಯ ಘಟಿಕೋತ್ಸವಕ್ಕೆ ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿಯವರೇ ಭಾಗವಹಿಸುವಷ್ಟು ಎತ್ತರಕ್ಕೆ ಬೆಳೆದದ್ದು ಹೇಗೆ ಎಂದು ಹುಡುಕುತ್ತಾ ಹೋದರೆ ದೊಡ್ಡ ಖಾಸಗಿ ಲಾಬಿಯೊಂದು ಕಣ್ಣಮುಂದೆ ತೆರೆದುಕೊಳ್ಳುತ್ತದೆ.

LPU ವಿಶ್ವವಿದ್ಯಾಲಯ ಮತ್ತು ಖಾಸಗಿ ಲಾಬಿ

ಪಂಜಾಬ್ ಮೂಲಕ ದಿವಂಗತ ಬಲ್ದೇವ್ ರಾಜ್ ಮಿತ್ತಲ್ ಮತ್ತು ಕುಟುಂಬ ಅನೇಕ ಯಶಸ್ವಿ ವ್ಯವಹಾರದಲ್ಲಿ ಕೈಹಾಕಿ ಯಶಸ್ಸು ಗಳಿಸಿದ ನಂತರ 2005ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದಾರೆ.

ಭಾರತದಲ್ಲಿ ಆವರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ಇತ್ತೇ ವಿನಃ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ಇರಲಿಲ್ಲ. ಆದರೆ, ಈ ಕುಟುಂಬಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 2005 ಪಂಜಾಬ್‌ನಲ್ಲಿ ಕಾನೂನನ್ನೇ ಬದಲಿಸಲಾಗಿತ್ತು.

ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಂದಿನ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ The Lovely Professional University Act, 2005 ಅನ್ನು ಮಂಡಿಸಿ ಅನುಮೋದನೆ ಪಡೆದಿತ್ತು. ಪರಿಣಾಮ ಇದೇ ಹೆಸರಿನಲ್ಲಿ 2006ರಿಂದ 24,000 ವಿದ್ಯಾರ್ಥಿಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭಿಸಿದ್ದ Lovely Professional University ಇಂದು ವಾರ್ಷಿಕ ಸಾವಿರಾರು ಕೋಟಿ ವ್ಯವಹಾರ ನಡೆಸುವ ಉದ್ಯಮವಾಗಿದೆ.

ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನ ನಡೆಸುತ್ತಿರುವ ಸಮಯದಲ್ಲಿಯೇ ಸಂಸತ್‌ಗೆ ಬಾರದೇ ಈ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂದರೆ ಈ ವಿಶ್ವವಿದ್ಯಾಲಯದ ವರ್ಚಸ್ಸನ್ನು ತಿಳಿಯಬಹುದು.

ಇಂದು ಇದೇ ವಿಶ್ವವಿದ್ಯಾಲಯ ಕಾನೂನು ಉಲ್ಲಂಘಿಸಿದೆ. ದೆಹಲಿಯ ತಬ್ಲಿಘಿ ಮಾದರಿಯ ಮತ್ತೊಂದು ಅನಾಹುತಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಈ ದೇಶದ ಕಾನೂನು ವ್ಯವಸ್ಥೆ ನಿಜಕ್ಕೂ ತಬ್ಲಿಘಿ ಆಯೋಜಕರ ವಿರುದ್ಧ ನಡೆದುಕೊಂಡಂತೆಯೇ ಈ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾ? ಎಂಬುದನ್ನು ಮಾತ್ರ ಕಾದು ನೋಡಬೇಕಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...