Homeಮುಖಪುಟಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್‌?

ಪಂಜಾಬ್‌ನ ಈ ಖಾಸಗಿ ವಿವಿ ಆಗಲಿದೆಯೇ ದೇಶದ ಅತಿದೊಡ್ಡ ಕೊರೊನಾ ಹಾಟ್‌ಸ್ಪಾಟ್‌?

ಹಿಂದೊಮ್ಮೆ ಈ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಭಾಗವಹಿಸಿದ್ದರು ಎಂಬುದು ಉಲ್ಲೇಖಾರ್ಹ.

- Advertisement -
- Advertisement -

ದೆಹಲಿ ಸರ್ಕಾರದ ಕಟ್ಟುನಿಟ್ಟಿನ ಆಜ್ಞೆಗಳ ನಡುವೆಯೂ ಸುಮಾರು 2,000 ಜನ ಇದ್ದ ದೆಹಲಿಯ ತಬ್ಲಿಘಿ ಜಮಾತ್ ಸಮಾವೇಶ ನಡೆಯಿತು. ಇದರಲ್ಲಿ ಭಾಗವಹಿಸಿದ ಕೆಲವರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಾಗ ದೇಶಾದಾದ್ಯಂತ ದೊಡ್ಡ ಅಲ್ಲೋಲಕಲ್ಲೋಲ ಸೃಷ್ಟಿಯಾಯಿತು. ಇದು ಕೊರೊನಾ ಹಾಟ್‌ಸ್ಪಾಟ್ ಆದಾಗ ಮುಖ್ಯವಾಹಿನಿ ಮಾಧ್ಯಮಗಳು ಒಂದು ಕೋಮಿನ ವಿರುದ್ಧ ಕೆಂಡಕಾರಿ, ಇಡೀ ಸಮುದಾಯವನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದವು. ತಬ್ಲಿಘಿ ವೈರಸ್‌, ಜಿಹಾದಿ ವೈರಸ್‌ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ ಆಗಿದ್ದವು.

ಈಗ ಪಂಜಾಬ್ ರಾಜ್ಯದ Lovely Professional University ದೇಶದ ಮತ್ತೊಂದು ಕೊರೊನಾ ಹಾಟ್‌‌ಸ್ಪಾಟ್‌ ಆಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಲಾಕ್‌ಡೌನ್‌ ಘೋಷಿಸಿ 25 ದಿನಗಳಾಗುತ್ತಿದ್ದರೂ 30,000 ವಿದ್ಯಾರ್ಥಿಗಳಿರುವ ದೇಶದ ಈ ದೊಡ್ಡ ಖಾಸಗಿ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಸಂಕೀರ್ಣಗಳಲ್ಲಿ 2100 ವಿದ್ಯಾರ್ಥಿಗಳು ಒಟ್ಟಿಗೆ ಇದ್ದು ಸಾಮಾಜಿಕ ಅಂತರ ಪಾಲಿಸಲಾಗಿಲ್ಲ ಎಂಬ ಭಯಾನಕ ಸುದ್ದಿ ಹೊರಬಿದ್ದಿದೆ. ಅಷ್ಟು ಮಾತ್ರವಲ್ಲದೇ ನೂರಾರು ವಿದೇಶಿ ವಿದ್ಯಾರ್ಥಿಗಳು ಇರುವ ಈ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಈ ಪ್ರಕರಣ ಇಡೀ ದೇಶಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಆದರೆ, ಈ ಕುರಿತು ಯಾವ ಮಾಧ್ಯಮಗಳೂ ದೊಡ್ಡದಾಗಿ ಸುದ್ದಿ ಮಾಡುತ್ತಿಲ್ಲದಿರುವುದು ಆಶ್ಚರ್ಯಕರವಾಗಿದೆ. ಇನ್ನೂ ಜನರಿಗಂತು ಇದು ಚರ್ಚೆಯ ವಿಷಯವೇ ಆಗಿಲ್ಲದಿರುವುದು ವಿಪರ್ಯಾಸ.

ಕೊರೋನಾ ಸೋಂಕು ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈಗಾಗಲೇ ದೇಶದ ಮೇಲೆ ಎರಡು ಬಾರಿ ಲಾಕ್‌ಡೌನ್‌ ಘೋಷಿಸಿದೆ. ಉತ್ಪಾದನಾ ವಲಯದಿಂದ ಶಾಲಾ-ಕಾಲೇಜಿನವರೆಗೆ ಎಲ್ಲಾ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ LPU ವಿಶ್ವವಿದ್ಯಾಲಯ ತನ್ನ ಎಲ್ಲಾ ವಿದ್ಯಾರ್ಥಿಗಳನ್ನೂ ಮನೆಗೆ ಕಳುಹಿಸಬೇಕಿತ್ತು. ಆದರೆ, ವಿದೇಶಿ ವಿದ್ಯಾರ್ಥಿಗಳನ್ನೂ ಕ್ಯಾಂಪಸ್‌ನಲ್ಲೇ ಇಟ್ಟುಕೊಂಡು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದೆ.

ಈ ಕುರಿತು ಏಪ್ರಿಲ್.16 ರಂದು ಫಾಗ್ವಾರ ಜಿಲ್ಲಾಧಿಕಾರಿಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗುರ್ವಿಂದರ್ ಸಿಂಗ್ ಜೋಹಾಲ್ ನೀಡಿರುವ ವರದಿಯಲ್ಲಿ, “ಕ್ಯಾಂಪಸ್‌ನೊಳಗೆ ಕೇವಲ 315 ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಮಾತ್ರ ವಾಸಿಸುತ್ತಿದ್ದಾರೆ ಎಂದು ವಿಶ್ವವಿದ್ಯಾನಿಲಯವು ಮೊದಲಿಗೆ ತಿಳಿಸಿತ್ತು. ಆದರೆ, ಈಗ ಭಾರತೀಯ ವಿದ್ಯಾರ್ಥಿಗಳೂ ಸೇರಿ 2,100 ಜನ ಕ್ಯಾಂಪಸ್ ಒಳಗೆ ಇದ್ದಾರೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಇದಲ್ಲದೆ, 570 ಮೆಸ್ ಕಾರ್ಮಿಕರು, 46 ವಾರ್ಡನ್‌ಗಳು ಮತ್ತು 179 ಬೋಧಕವರ್ಗದ ಸದಸ್ಯರೂ ಇದ್ದಾರೆ. ಈ ಪೈಕಿ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಪ್ರಕರಣ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಈ ನಡುವೆ ಶುಕ್ರವಾರ ಕ್ಯಾಂಪಸ್ ಎದುರು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು LPU ವಿಶ್ವವಿದ್ಯಾಲಯದ “ಪಂಜಾಬ್‌ನ ಹಾಟ್‌ಸ್ಪಾಟ್‌” ಆಗಿ ಮಾರ್ಪಟ್ಟಿದೆ. ಕ್ಯಾಂಪಸ್ ಸುತ್ತಲಿನ ಹಳ್ಳಿಗಳಿಗೂ ಈ ಮೂಲಕ ಆಘಾತವಾಗಿದೆ. ಹೀಗಾಗಿ ದೆಹಲಿಯ ಜಮಾಅತ್‌ ಮೇಲೆ ಆದಂತೆಯೇ ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ವಿಶ್ವವಿದ್ಯಾಲಯವನ್ನು ಮುಚ್ಚಬೇಕು ಎಂದು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ನಿರ್ಬಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ NOC ಯನ್ನು ಏಕೆ ಹಿಂಪಡೆಯಬಾರದು? ಎಂದು ಪಂಜಾಬ್‌ನ ಉನ್ನತ ಶಿಕ್ಷಣ ಮತ್ತು ಭಾಷಾ ಇಲಾಖೆ ಗುರುವಾರ ಈ ಸಂಸ್ಥೆಗೆ ಶೋಕಾಸ್ ನೋಟಿಸ್ ಸಹ ನೀಡಿದೆ.

ಹಿಂದೊಮ್ಮೆ ಈ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಭಾಗವಹಿಸಿದ್ದರು ಎಂಬುದು ಉಲ್ಲೇಖಾರ್ಹ.

ಈ ನಡುವೆ ದೇಶದ ಅತಿದೊಡ್ಡ ಖಾಸಗಿ ವಿಶ್ವವಿದ್ಯಾಲಯವಾಗಿ LPU ಆರಂಭವಾದದ್ದು ಹೇಗೆ? ಈ ವಿವಿಯ ಘಟಿಕೋತ್ಸವಕ್ಕೆ ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿಯವರೇ ಭಾಗವಹಿಸುವಷ್ಟು ಎತ್ತರಕ್ಕೆ ಬೆಳೆದದ್ದು ಹೇಗೆ ಎಂದು ಹುಡುಕುತ್ತಾ ಹೋದರೆ ದೊಡ್ಡ ಖಾಸಗಿ ಲಾಬಿಯೊಂದು ಕಣ್ಣಮುಂದೆ ತೆರೆದುಕೊಳ್ಳುತ್ತದೆ.

LPU ವಿಶ್ವವಿದ್ಯಾಲಯ ಮತ್ತು ಖಾಸಗಿ ಲಾಬಿ

ಪಂಜಾಬ್ ಮೂಲಕ ದಿವಂಗತ ಬಲ್ದೇವ್ ರಾಜ್ ಮಿತ್ತಲ್ ಮತ್ತು ಕುಟುಂಬ ಅನೇಕ ಯಶಸ್ವಿ ವ್ಯವಹಾರದಲ್ಲಿ ಕೈಹಾಕಿ ಯಶಸ್ಸು ಗಳಿಸಿದ ನಂತರ 2005ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದಾರೆ.

ಭಾರತದಲ್ಲಿ ಆವರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ಇತ್ತೇ ವಿನಃ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ಇರಲಿಲ್ಲ. ಆದರೆ, ಈ ಕುಟುಂಬಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 2005 ಪಂಜಾಬ್‌ನಲ್ಲಿ ಕಾನೂನನ್ನೇ ಬದಲಿಸಲಾಗಿತ್ತು.

ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಂದಿನ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ The Lovely Professional University Act, 2005 ಅನ್ನು ಮಂಡಿಸಿ ಅನುಮೋದನೆ ಪಡೆದಿತ್ತು. ಪರಿಣಾಮ ಇದೇ ಹೆಸರಿನಲ್ಲಿ 2006ರಿಂದ 24,000 ವಿದ್ಯಾರ್ಥಿಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭಿಸಿದ್ದ Lovely Professional University ಇಂದು ವಾರ್ಷಿಕ ಸಾವಿರಾರು ಕೋಟಿ ವ್ಯವಹಾರ ನಡೆಸುವ ಉದ್ಯಮವಾಗಿದೆ.

ಸ್ವತಃ ದೇಶದ ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನ ನಡೆಸುತ್ತಿರುವ ಸಮಯದಲ್ಲಿಯೇ ಸಂಸತ್‌ಗೆ ಬಾರದೇ ಈ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂದರೆ ಈ ವಿಶ್ವವಿದ್ಯಾಲಯದ ವರ್ಚಸ್ಸನ್ನು ತಿಳಿಯಬಹುದು.

ಇಂದು ಇದೇ ವಿಶ್ವವಿದ್ಯಾಲಯ ಕಾನೂನು ಉಲ್ಲಂಘಿಸಿದೆ. ದೆಹಲಿಯ ತಬ್ಲಿಘಿ ಮಾದರಿಯ ಮತ್ತೊಂದು ಅನಾಹುತಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಈ ದೇಶದ ಕಾನೂನು ವ್ಯವಸ್ಥೆ ನಿಜಕ್ಕೂ ತಬ್ಲಿಘಿ ಆಯೋಜಕರ ವಿರುದ್ಧ ನಡೆದುಕೊಂಡಂತೆಯೇ ಈ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾ? ಎಂಬುದನ್ನು ಮಾತ್ರ ಕಾದು ನೋಡಬೇಕಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...