Homeಅಂಕಣಗಳುಬಹುಜನ ಭಾರತ; ಕೆಡವಲಾದ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?

ಬಹುಜನ ಭಾರತ; ಕೆಡವಲಾದ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?

- Advertisement -
- Advertisement -

ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದ ಕುರಿತು ಸುಪ್ರೀಮ್ ಕೋರ್ಟ್ ನೀಡಿದ ತೀರ್ಪಿನಿಂದ ಸ್ಫೂರ್ತಿ ಪಡೆದಿರುವ ಶಕ್ತಿಗಳು ಕಾಶಿ-ಮಥುರಾ ವಿವಾದಗಳನ್ನು ಬಡಿದೆಬ್ಬಿಸಲು ತೊಡಗಿವೆ. ಹಿಂದೂ ದೇವಾಲಯಗಳನ್ನು ಕೆಡವಿ ಕಟ್ಟಿರುವ ಮಸೀದಿಗಳಿವು ಎಂಬುದು ಈ ಶಕ್ತಿಗಳ ವಾದ. ಮುಸ್ಲಿಮ್ ದಾಳಿಕೋರರು- ದೊರೆಗಳು ಹಲವು ದೇವಾಲಯಗಳನ್ನು ಕೆಡವಿದ್ದು ಹೌದು. ಆದರೆ ಹಿಂದು ರಾಜರು ಕೂಡ ಹಿಂದೂ ಧರ್ಮದ ಪುನರುತ್ಥಾನದ ಹೆಸರಿನಲ್ಲಿ ಬೌದ್ಧ ಮತ್ತು ಜೈನ ಧಾರ್ಮಿಕ ನೆಲೆಗಳನ್ನು ಕೆಡವಿರುವ ಹೇರಳ ಉದಾಹರಣೆಗಳಿವೆ.

ಸೋಮೇಶ್ವರ ದೇವಾಲಯವನ್ನು ಅಪವಿತ್ರಗೊಳಿಸಿ ಮೂರ್ತಿಯನ್ನು ಭಂಗ ಮಾಡಿದ ಮಹಮ್ಮದ್ ಘಜನಿ ಮುಲ್ತಾನದ ಮಸೀದಿಗಳ ಮೇಲೆಯೂ ದಾಳಿ ನಡೆಸಿದ್ದ ಮತ್ತು ಐವತ್ತು ಸಾವಿರ ಮಂದಿ ಶಿಯಾ ಮುಸಲ್ಮಾನರನ್ನೂ ಕೊಂದುಹಾಕಿದ್ದ ಎಂಬ ಸಂಗತಿಗೆ ಹೆಚ್ಚು ಪ್ರಚಾರ ಸಿಕ್ಕಿಲ್ಲ. ವಿವಾದಗಳನ್ನು ಕೆದಕುವವರು ಇತಿಹಾಸವನ್ನು ಓದಿಕೊಳ್ಳಬೇಕಿದೆ.

ಸಾಮಾಜಿಕ ಸಾಮರಸ್ಯದಿಂದ ಕೂಡಿದ್ದು, ಧಾರ್ಮಿಕ ಹಿಂಸಾಚಾರವೇ ಇಲ್ಲದ ಸುವರ್ಣಯುಗ ಎಂಬ ಪ್ರಾಚೀನ ಭಾರತದ ಕಾಲಮಾನದ ಬಣ್ಣನೆಯನ್ನು ಇತಿಹಾಸಜ್ಞ ದ್ವಿಜೇಂದ್ರ ನಾರಾಯಣ ಝಾ ಅವರು ಒಪ್ಪಿಲ್ಲ.

ಎದುರಾಳಿಗಳ ಧಾರ್ಮಿಕ ಸಂಸ್ಥೆಗಳು ಮತ್ತು ಅವುಗಳಲ್ಲಿನ ಪ್ರತಿಮೆಗಳನ್ನು ನೆಲಸಮಗೊಳಿಸಿ ಅಪವಿತ್ರಗೊಳಿಸುವುದೇ ಅಲ್ಲದೆ ಅವುಗಳ ಸ್ವಾಧೀನ- ಬಳಕೆಯು ಇಸ್ಲಾಮ್ ಆಗಮಿಸುವ ಮುನ್ನವೇ ಭಾರತದಲ್ಲಿ ರೂಢಿಯಲ್ಲಿತ್ತು ಎಂದು ಝಾ ವಿವರಿಸಿದ್ದಾರೆ.

ಭಾರತದ ಪ್ರಾಚೀನ ಮತ್ತು ಮಧ್ಯಕಾಲೀನ ಇತಿಹಾಸ ತಜ್ಞರಾದ ಝಾ ಅವರು “Against the Grain- Notes on Identity, Intolerance and History” ಎಂಬ ತಮ್ಮ ಕೃತಿಯಲ್ಲಿ ಈ ಸಂಗತಿಯನ್ನು ವಿಷದವಾಗಿ ತಿಳಿಸಿದ್ದಾರೆ.

ಬೌದ್ಧ ಮಠಗಳು, ಸ್ತೂಪಗಳು ಹಾಗೂ ಇತರೆ ಕಟ್ಟಡಗಳನ್ನು ಬ್ರಾಹ್ಮಣ್ಯ ಶಕ್ತಿಗಳು ಅಪವಿತ್ರಗೊಳಿಸಿ, ಕೆಡವಿ, ಸ್ವಾಧೀನಕ್ಕೆ ಪಡೆದು ಬಳಸಿರುವುದಕ್ಕೆ ಸಾಕ್ಷ್ಯಗಳಿವೆ. ಇಂತಹ ಸಾಕ್ಷ್ಯಗಳು ಅಶೋಕನ ಆಳ್ವಿಕೆಯ ಅಂತ್ಯದವರೆಗೆ ವಿಸ್ತರಿಸಿವೆ.

ಅಶೋಕನ ಮಕ್ಕಳಲ್ಲೊಬ್ಬನಾದ ಜಾಲೌಕನು ವೈಷ್ಣವನಾಗಿದ್ದ. ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿದ ಕುರಿತು ಹನ್ನೆರಡನೆಯ ಶತಮಾನದ ಕಲ್ಹಣನ ಕಾಶ್ಮೀರಿ ಪಠ್ಯ ’ರಾಜತರಂಗಿಣಿ’ಯಲ್ಲಿ ಉಲ್ಲೇಖವಿದೆ. ಈ ಪುರಾವೆಯನ್ನು ಗಮನಿಸಿದರೆ ಶ್ರಮಣ ಧರ್ಮಗಳ ಮೇಲಿನ ದಾಳಿ ಅಶೋಕನ ಜೀವಿತಕಾಲ ಇಲ್ಲವೇ ಆತನ ಮರಣದ ತಕ್ಷಣವೇ ಆರಂಭವಾಯಿತು ಎಂಬುದಕ್ಕೆ ಈ ಉಲ್ಲೇಖವೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ಮೌರ್ಯರ ಆಳ್ವಿಕೆಯ ನಂತರದ ಅವಧಿಯ ಶ್ರಮಣರನ್ನು ಕಾಡಿದ ಸಾಕ್ಷ್ಯವನ್ನು ದಿವ್ಯವದನ ಎಂಬ ಬೌದ್ಧ- ಸಂಸ್ಕೃತ ಪಂಡಿತನು ದಾಖಲಿಸಿದ್ದಾನೆ. ಪುಷ್ಯಮಿತ್ರ ಶುಂಗನೆಂಬ ಬ್ರಾಹ್ಮಣ ದೊರೆಯು ಬೌದ್ಧ ಧರ್ಮದ ಮಹಾನ್ ಪೀಡಕನೆಂದು ಗುರುತಿಸಿದ್ದಾನೆ. ಅವನ ಭಾರೀ ಸೇನೆಯು ಸ್ತೂಪಗಳನ್ನು ಹಾಳುಗೆಡವುತ್ತ, ವಿಹಾರಗಳನ್ನು ಸುಡುತ್ತ, ಭಿಕ್ಷುಗಳನ್ನು ಕೊಲ್ಲುತ್ತ ಸಾಕಲದ ಕಡೆಗೆ (ಈಗಿನ ಸಿಯಾಲ್ ಕೋಟ್) ಸಾಗಿತು. ಪ್ರತಿ ಶ್ರಮಣನ ತಲೆಗೆ ನೂರು ವರಹಗಳ ಬಹುಮಾನವನ್ನು ಶುಂಗನು ಸಾಕಲದಲ್ಲಿ ಘೋಷಿಸಿದ. ಬ್ರಾಹ್ಮಣರು ಮತ್ತು ಶ್ರಮಣರು ಹಾವು ಮುಂಗುಸಿಗಳಂತೆ ಶಾಶ್ವತ ಶತ್ರುಗಳು ಎಂದು ಪತಂಜಲಿಯ ತನ್ನ ಮಹಾಭಾಷ್ಯ ಕೃತಿಯಲ್ಲಿ ಬಣ್ಣಿಸಿದ್ದಾನೆ. ವಿಶೇಷವಾಗಿ ಮಧ್ಯಪ್ರದೇಶದ ಅನೇಕ ಬೌದ್ಧ ಕೇಂದ್ರಗಳಲ್ಲಿ ಕಂಡು ಬಂದಿರುವ ಅವಶೇಷಗಳ ರಾಶಿಯ ಪದರಗಳು ಬೌದ್ಧ ಸ್ಮಾರಕಗಳ ಮೇಲೆ ಶುಂಗನು ನಡೆಸಿದ ದಾಳಿಯ ಸಾಧ್ಯತೆಯನ್ನು ಗಟ್ಟಿಗೊಳಿಸುತ್ತವೆ. ಉದಾಹರಣೆಗೆ ಅಶೋಕನ ಕಾಲದಿಂದ ಪ್ರಮುಖ ಬೌದ್ಧ ತಾಣವಾಗಿದ್ದ ಸಾಂಚಿಯು ಶುಂಗನ ಕಾಲದಲ್ಲಿ ಹಲವು ಸೌಧಗಳನ್ನು ಒಡೆದು ಹಾಕಿದ ಪುರಾವೆಗಳತ್ತ ಬೆರಳು ಮಾಡುತ್ತದೆ. ಸುತ್ತಮುತ್ತಲ ಕಟನಿ ಮತ್ತು ರೇವಾ ಜಿಲ್ಲೆಗಳ ಸತಧಾರ ಮತ್ತು ದೂರಕೊಥಾರದಂತಹ ಜಾಗಗಳಲ್ಲಿಯೂ ಇಂತಹುದೇ ಪುರಾವೆಗಳು ದೊರೆಯುತ್ತವೆ ಎಂದು ಝಾ ವಿವರಿಸಿದ್ದಾರೆ.

ಇಂತಹ ದಾಳಿಗಳು ಮಧ್ಯಪ್ರದೇಶದಲ್ಲಿ ಶುಂಗನ ನಂತರವೂ ನಡೆಯುತ್ತವೆ. ಉದಾಹರಣೆಗೆ ಅಹ್ಮದ್‌ಪುರದಲ್ಲಿ ಐದನೆಯ ಶತಮಾನದ ಸ್ತೂಪವೊಂದರ ಮೇಲೆ ಬ್ರಾಹ್ಮಣ ದೇಗುಲವನ್ನು ಕಟ್ಟಿದಂತೆ ತೋರುತ್ತದೆ. ವಿದಿಶಾದ ಸುತ್ತಮುತ್ತ ಎಂಟನೆಯ ಶತಮಾನದಲ್ಲಿ ಬೌದ್ಧ ಕೇಂದ್ರಗಳು ಶೈವ ಅಥವಾ ಜೈನ ಪೂಜಾ ಸ್ಥಾನಗಳಾಗಿ ಬದಲಾಗಿರುವ ಹಲವು ತಾಣಗಳು ಪತ್ತೆಯಾಗಿವೆ. ವಿದಿಶಾದ ಈಶಾನ್ಯ ದಿಕ್ಕಿನಲ್ಲಿ 250ಕಿ.ಮೀ. ದೂರದಲ್ಲಿ ಹತ್ತನೆಯ ಶತಮಾನದ ನಂತರ ಚಾಂದೇಲರ ಆಳ್ವಿಕೆಯಲ್ಲಿ ದೇವಾಲಯ ನಗರವಾಗಿ ಖಜುರಾಹೋ ತಲೆಯೆತ್ತುವ ಮುನ್ನ ಅಲ್ಲಿದ್ದದ್ದು ಬೌದ್ಧ ನೆಲೆ. ಐದನೆಯ ಶತಮಾನದ ಸ್ತೂಪದ ತಳಹದಿಯ ಮೇಲೆ ಬ್ರಾಹ್ಮಣ ದೇವಾಲಯವನ್ನು ನಿರ್ಮಿಸಿರುವಂತೆ ಕಂಡುಬಂದಿದೆ. ಸುತ್ತಮುತ್ತ ಪ್ರತೀಕಗಳು ಪತ್ತೆಯಾಗಿವೆ. ಇದೇ ತಾಣದಲ್ಲಿ ಬೌದ್ಧ ಸ್ಮಾರಕವೊಂದರ ಅವಶೇಷಗಳ ಮೇಲೆ ಒಂಬತ್ತನೆಯ ಅಥವಾ ಹತ್ತನೆಯ ಶತಮಾನದಲ್ಲಿ ಘಂಟೈ ದೇವಾಲಯವನ್ನು ಆಗಿನ ಕಾಲಮಾನದಲ್ಲಿ ಪ್ರಬಲ ನೆಲೆ ಹೊಂದಿದ್ದ ಜೈನರು ನಿರ್ಮಿಸಿದ್ದಾಗಿ ತೋರುತ್ತದೆ.

ಪಶ್ಚಿಮ ಉತ್ತರಪ್ರದೇಶದ ಮಥುರಾದಲ್ಲಿ ಕುಶಾನರ ಕಾಲದಲ್ಲಿ ಈಗ ನೆಲೆ ನಿಂತಿರುವ ಭೂತೇಶ್ವರ ಮತ್ತು ಗೋಕರ್ಣೇಶ್ವರ ದೇವಾಲಯಗಳು ಪ್ರಾಚೀನಕಾಲದ ಬೌದ್ಧ ಕೇಂದ್ರಗಳಾಗಿದ್ದವು. ಅಲಹಾಬಾದಿನ ಸನಿಹದ ಕೌಶಾಂಬಿಯಲ್ಲಿ ಘೋಸಿತಾರಂ ಎಂಬ ಮಹಾನ್ ಬೌದ್ಧ ಮಠವನ್ನು ಸುಟ್ಟು ಹಾಕಿ ಧ್ವಂಸ ಮಾಡಿದ ಕೃತ್ಯ ಪುಷ್ಯಮಿತ್ರ ಶುಂಗನದೇ. ಬುದ್ಧ ತನ್ನ ಮೊದಲ ಪ್ರವಚನ ನೀಡಿದ ವಾರಾಣಸಿ ಬಳಿಯ ಸಾರನಾಥ ಕೂಡ ಬ್ರಾಹ್ಮಣ ದಾಳಿಗೆ ಗುರಿಯಾಯಿತು. ಮೌರ್ಯರ ಕಾಲದ ವಸ್ತುಗಳನ್ನು ಮರುಬಳಸಿ ಬ್ರಾಹ್ಮಣ ಕಟ್ಟಡಗಳನ್ನು ನಿರ್ಮಿಸಲಾಯಿತು. ಬುದ್ಧನು ತನ್ನ ಬಹುಪಾಲು ಜೀವಿತಕಾಲವನ್ನು ಕಳೆದ ಶ್ರಾವಸ್ತಿಯ ಕುಶಾನ ಬೌದ್ಧ ತಾಣವನ್ನು ಬ್ರಾಹ್ಮಣರು ಸ್ವಾಧೀನಪಡಿಸಿಕೊಂಡು ಗುಪ್ತರ ಕಾಲದಲ್ಲಿ ರಾಮಾಯಣ ಗೋಡೆ ಚಿತ್ರಗಳ ಗುಡಿಯನ್ನು ನಿರ್ಮಿಸಿದರು. ಈ ಮಾತಿಗೆ ಐದನೆಯ ಶತಮಾನದ ಚೀನೀ ಯಾತ್ರಿಕ ಫಾಹಿಯಾನನ ಉಲ್ಲೇಖವೇ ಸಾಕ್ಷಿ ಎಂದು ಝಾ ಹೇಳಿದ್ದಾರೆ.

ದ್ವಿಜೇಂದ್ರ ನಾರಾಯಣ ಝಾ

ಬೌದ್ಧ ಮತದ ಮೇಲೆ ಬ್ರಾಹ್ಮಣವಾದವು ಅಂತಿಮ ವಿಜಯ ಸಾಧಿಸಿದ ನಂತರ ಉತ್ತರಪ್ರದೇಶದ ಸುಲ್ತಾನಪುರ ಜಿಲ್ಲೆಯೊಂದರಲ್ಲೇ 49 ಬೌದ್ಧ ತಾಣಗಳಿಗೆ ಬೆಂಕಿ ಇಟ್ಟು ನಾಶ ಮಾಡಿರುವುದಾಗಿ ಕಂಡುಬಂದಿದೆ. ಪುರಾತತ್ವ ಶಾಸ್ತ್ರಜ್ಞ ಆಲೋಯ್ಸ್ ಆಂಟನ್ ಫೂಹ್ರರ್ ಅವರ ಸಂಶೋಧನಾ ಪ್ರಬಂಧವೊಂದು ಈ ಸಂಗತಿಯ ಮೇಲೆ ಬೆಳಕು ಚೆಲ್ಲಿದೆ.

ಆರನೆಯ ಶತಮಾನದ ಹೂಣ ರಾಜ ಮಿಹಿರಕುಲನು ಶಿವನ ಆರಾಧಕ. ಸುಮಾರು 1,600 ಬೌದ್ಧ ಸ್ತೂಪಗಳು ಮತ್ತು ವಿಹಾರಗಳನ್ನು ನಾಶ ಮಾಡಿದ್ದಷ್ಟೇ ಅಲ್ಲದೆ ಸಾವಿರಾರು ಮಂದಿ ಭಿಕ್ಷುಗಳನ್ನು ಕೊಂದು ಹಾಕಿದ. ಗಾಂಧಾರದ ಸಾವಿರ ಸಂಘಾರಾಮಗಳು ಅಳಿದು ಅವಶೇಷಗಳಾದವು. ಉಡ್ಡಿಯಾನದ 1,400 ಸಂಘಾರಾಮಗಳಿಗೂ ಇದೇ ಸ್ಥಿತಿ ಒದಗಿತ್ತು ಎಂದು ಗುಪ್ತರ ಆಳ್ವಿಕೆಯ ನಂತರದ ಶತಮಾನಗಳಲ್ಲಿ 631ರಿಂದ 645ರ ನಡುವೆ ಹರ್ಷವರ್ಧನನ ಆಳ್ವಿಕೆಯಲ್ಲಿ ಪ್ರವಾಸ ನಡೆಸಿದ ಚೀನೀ ಯಾತ್ರಿಕ ಹ್ಯೂಯೆನ್ ತ್ಸಾಂಗ್ ದಾಖಲಿಸಿದ್ದಾನೆ. ಗೌಡದೇಶದ ರಾಜ ಶಶಾಂಕನು ಬಿಹಾರದ ಬೋಧ ಗಯಾದ ಬೋಧಿವೃಕ್ಷವನ್ನು ಕಡಿದು ಹಾಕಿಸಿದ. ಸ್ಥಳೀಯ ದೇವಾಲಯವೊಂದರಿಂದ ಬುದ್ಧನ ಪ್ರತಿಮೆಯನ್ನು ತೆಗೆದು ಮಹೇಶ್ವರನ ವಿಗ್ರಹವನ್ನು ಇರಿಸುವಂತೆ ಆದೇಶ ನೀಡಿದನೆಂದೂ ಹ್ಯೂಯೆನ್ ತ್ಸಾಂಗ್ ಹೇಳಿದ್ದಾನೆ. ಬೋಧ ಗಯಾ ಪುನಃ ಬೌದ್ಧರ ಸುಪರ್ದಿಗೆ ಬಂದದ್ದು ಬೌದ್ಧ ಮತಾವಲಂಬಿ ಪಾಲ ಸಂತತಿಯ ದೊರೆಗಳ ಕಾಲದಲ್ಲಿ. ಅಂತಾರಾಷ್ಟ್ರೀಯ ಖ್ಯಾತಿಯ ನಳಂದ ವಿಶ್ವವಿದ್ಯಾಲಯದ ವಿಶಾಲ ಸಮುಚ್ಚಯದಲ್ಲಿ ಹ್ಯೂಯೆನ್ ತ್ಸಾಂಗ್ ಐದು ವರ್ಷಗಳಿಗೂ ಹೆಚ್ಚು ಕಾಲ ವಾಸವಿದ್ದ. ಈ ವಿಶ್ವವಿದ್ಯಾಲಯದ ಗ್ರಂಥಾಲಯವನ್ನು ಸುಟ್ಟು ಹಾಕಿದ್ದು ಭಕ್ತಿಯಾರ್ ಖಿಲ್ಜಿ ಎಂಬ ಪ್ರಚಾರದಲ್ಲಿ ತಥ್ಯಾಂಶವಿಲ್ಲ ಎಂದು ಝಾ ಹೇಳುತ್ತಾರೆ. ಹನ್ನೆರಡನೆಯ ಶತಮಾನದಲ್ಲಿ ನಿರ್ಮಿಸಲಾದ ಪುರಿಯ ಜಗನ್ನಾಥ ಮಂದಿರದ ಕೂಡ ತಲೆಯೆತ್ತಿದ್ದು ಬೌದ್ಧ ತಾಣದ ಮೇಲೆಯೇ. ಸ್ವಾಮಿ ವಿವೇಕಾನಂದರು ಕೂಡ ಈ ಅಂಶವನ್ನು ಪುಷ್ಟೀಕರಿಸಿದ್ದಾರೆ. ಜಗನ್ನಾಥ ರಥೋತ್ಸವದ ಜಗನ್ನಾಥ, ಬಲರಾಮ ಹಾಗೂ ಸುಭದ್ರರ ಪ್ರತಿಮೆಗಳ ಮೆರವಣಿಗೆಯು ಬೌದ್ಧ ಧರ್ಮದ ಬುದ್ಧ, ಧಮ್ಮ ಹಾಗೂ ಸಂಘದ ರಥೋತ್ಸವವನ್ನು ಆಧರಿಸಿದಂತಹವು ಎಂದು ಬಂಕಿಮಚಂದ್ರ ಚಟರ್ಜಿ ಕೂಡ ಹೇಳಿದ್ದಾರೆ.

ಪುರಿ ಜಿಲ್ಲೆಯ ಪೂರ್ಣೇಶ್ವರ, ಕಾಂತೇಶ್ವರ, ಕೇದಾರೇಶ್ವರ, ಸೋಮೇಶ್ವರ ಹಾಗೂ ಅಂಗೇಶ್ವರ ದೇವಾಲಯಗಳನ್ನು ಬೌದ್ಧ ವಿಹಾರಗಳ ಮೇಲೆ ಕಟ್ಟಲಾಗಿದೆ ಇಲ್ಲವೇ ಬೌದ್ಧ ವಿಹಾರಗಳ ಸಾಮಗ್ರಿಗಳಿಂದ ಕಟ್ಟಲಾಗಿದೆ ಎಂಬುದು ಝಾ ವಾದ.

ಎಪಿಗ್ರಾಫಿಯಾ ಇಂಡಿಯಾದ ಇಪ್ಪತ್ತನಾಲ್ಕನೆಯ ಸಂಪುಟದ 141-144 ಪುಟಗಳಲ್ಲಿ ದಾಖಲಾಗಿರುವ ಸಂಗತಿಯಿದು- ’ದಕ್ಷಿಣ ಭಾರತದ ರಾಜ ವೀರ ಗೊಗ್ಗಿದೇವ ತನ್ನನ್ನು ತಾನು ಜೈನ ಶಾಸನಗಳ ಪಾಲಿನ ಬೆಂಕಿ ಎಂದೂ, ಜಿನ ಅನುಯಾಯಿಗಳೆಂಬ ವನ್ಯಮೃಗಗಳ ಬೇಟೆಗಾರನೆಂದೂ, ಬೌದ್ಧ ಕಟ್ಟಳೆಗಳ ನೆಲಸಮಗಾರನೆಂದೂ’ ಬಣ್ಣಿಸಿಕೊಂಡಿದ್ದಾನೆ. ಲೋಕಾಯತ-ಚಾರ್ವಾಕ ಮುಂತಾದ ಬ್ರಾಹ್ಮಣೇತರ ಕೃತಿಗಳ ಉದ್ದೇಶಪೂರ್ವಕ ನಾಶವನ್ನು ಈ ಸಂಪುಟದಲ್ಲಿ ಬಣ್ಣಿಸಲಾಗಿದೆ. ನಾಗಾರ್ಜುನಕೊಂಡದಂತಹ ಬೃಹತ್ ಬೌದ್ಧ ವಿಹಾರವನ್ನು ನಾಶಪಡಿಸಲಾಗುತ್ತದೆ. ಶಂಕರದಿಗ್ವಿಜಯದ ಪ್ರಕಾರ ಹೊಸದಾಗಿ ನಿಯುಕ್ತರಾದ ಬ್ರಹ್ಮಕ್ಷತ್ರ ರಾಜರು ಬೌದ್ಧ ಮತಾವಲಂಬಿಗಳನ್ನು ಕೊಲ್ಲುವಂತೆಯೂ, ಅವರನ್ನು ಕೊಲ್ಲಲು ಒಪ್ಪದವರನ್ನು ಕೂಡ ಸಂಹರಿಸಲು ಕ್ಷತ್ರಿಯರಿಗೆ ಆದೇಶ ನೀಡುತ್ತಾರೆ.

ಈಗ, ಕೆಡವಲಾದ ಈ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?


ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...