Homeಅಂಕಣಗಳುಬಹುಜನ ಭಾರತ; ಕೆಡವಲಾದ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?

ಬಹುಜನ ಭಾರತ; ಕೆಡವಲಾದ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?

- Advertisement -
- Advertisement -

ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದ ಕುರಿತು ಸುಪ್ರೀಮ್ ಕೋರ್ಟ್ ನೀಡಿದ ತೀರ್ಪಿನಿಂದ ಸ್ಫೂರ್ತಿ ಪಡೆದಿರುವ ಶಕ್ತಿಗಳು ಕಾಶಿ-ಮಥುರಾ ವಿವಾದಗಳನ್ನು ಬಡಿದೆಬ್ಬಿಸಲು ತೊಡಗಿವೆ. ಹಿಂದೂ ದೇವಾಲಯಗಳನ್ನು ಕೆಡವಿ ಕಟ್ಟಿರುವ ಮಸೀದಿಗಳಿವು ಎಂಬುದು ಈ ಶಕ್ತಿಗಳ ವಾದ. ಮುಸ್ಲಿಮ್ ದಾಳಿಕೋರರು- ದೊರೆಗಳು ಹಲವು ದೇವಾಲಯಗಳನ್ನು ಕೆಡವಿದ್ದು ಹೌದು. ಆದರೆ ಹಿಂದು ರಾಜರು ಕೂಡ ಹಿಂದೂ ಧರ್ಮದ ಪುನರುತ್ಥಾನದ ಹೆಸರಿನಲ್ಲಿ ಬೌದ್ಧ ಮತ್ತು ಜೈನ ಧಾರ್ಮಿಕ ನೆಲೆಗಳನ್ನು ಕೆಡವಿರುವ ಹೇರಳ ಉದಾಹರಣೆಗಳಿವೆ.

ಸೋಮೇಶ್ವರ ದೇವಾಲಯವನ್ನು ಅಪವಿತ್ರಗೊಳಿಸಿ ಮೂರ್ತಿಯನ್ನು ಭಂಗ ಮಾಡಿದ ಮಹಮ್ಮದ್ ಘಜನಿ ಮುಲ್ತಾನದ ಮಸೀದಿಗಳ ಮೇಲೆಯೂ ದಾಳಿ ನಡೆಸಿದ್ದ ಮತ್ತು ಐವತ್ತು ಸಾವಿರ ಮಂದಿ ಶಿಯಾ ಮುಸಲ್ಮಾನರನ್ನೂ ಕೊಂದುಹಾಕಿದ್ದ ಎಂಬ ಸಂಗತಿಗೆ ಹೆಚ್ಚು ಪ್ರಚಾರ ಸಿಕ್ಕಿಲ್ಲ. ವಿವಾದಗಳನ್ನು ಕೆದಕುವವರು ಇತಿಹಾಸವನ್ನು ಓದಿಕೊಳ್ಳಬೇಕಿದೆ.

ಸಾಮಾಜಿಕ ಸಾಮರಸ್ಯದಿಂದ ಕೂಡಿದ್ದು, ಧಾರ್ಮಿಕ ಹಿಂಸಾಚಾರವೇ ಇಲ್ಲದ ಸುವರ್ಣಯುಗ ಎಂಬ ಪ್ರಾಚೀನ ಭಾರತದ ಕಾಲಮಾನದ ಬಣ್ಣನೆಯನ್ನು ಇತಿಹಾಸಜ್ಞ ದ್ವಿಜೇಂದ್ರ ನಾರಾಯಣ ಝಾ ಅವರು ಒಪ್ಪಿಲ್ಲ.

ಎದುರಾಳಿಗಳ ಧಾರ್ಮಿಕ ಸಂಸ್ಥೆಗಳು ಮತ್ತು ಅವುಗಳಲ್ಲಿನ ಪ್ರತಿಮೆಗಳನ್ನು ನೆಲಸಮಗೊಳಿಸಿ ಅಪವಿತ್ರಗೊಳಿಸುವುದೇ ಅಲ್ಲದೆ ಅವುಗಳ ಸ್ವಾಧೀನ- ಬಳಕೆಯು ಇಸ್ಲಾಮ್ ಆಗಮಿಸುವ ಮುನ್ನವೇ ಭಾರತದಲ್ಲಿ ರೂಢಿಯಲ್ಲಿತ್ತು ಎಂದು ಝಾ ವಿವರಿಸಿದ್ದಾರೆ.

ಭಾರತದ ಪ್ರಾಚೀನ ಮತ್ತು ಮಧ್ಯಕಾಲೀನ ಇತಿಹಾಸ ತಜ್ಞರಾದ ಝಾ ಅವರು “Against the Grain- Notes on Identity, Intolerance and History” ಎಂಬ ತಮ್ಮ ಕೃತಿಯಲ್ಲಿ ಈ ಸಂಗತಿಯನ್ನು ವಿಷದವಾಗಿ ತಿಳಿಸಿದ್ದಾರೆ.

ಬೌದ್ಧ ಮಠಗಳು, ಸ್ತೂಪಗಳು ಹಾಗೂ ಇತರೆ ಕಟ್ಟಡಗಳನ್ನು ಬ್ರಾಹ್ಮಣ್ಯ ಶಕ್ತಿಗಳು ಅಪವಿತ್ರಗೊಳಿಸಿ, ಕೆಡವಿ, ಸ್ವಾಧೀನಕ್ಕೆ ಪಡೆದು ಬಳಸಿರುವುದಕ್ಕೆ ಸಾಕ್ಷ್ಯಗಳಿವೆ. ಇಂತಹ ಸಾಕ್ಷ್ಯಗಳು ಅಶೋಕನ ಆಳ್ವಿಕೆಯ ಅಂತ್ಯದವರೆಗೆ ವಿಸ್ತರಿಸಿವೆ.

ಅಶೋಕನ ಮಕ್ಕಳಲ್ಲೊಬ್ಬನಾದ ಜಾಲೌಕನು ವೈಷ್ಣವನಾಗಿದ್ದ. ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿದ ಕುರಿತು ಹನ್ನೆರಡನೆಯ ಶತಮಾನದ ಕಲ್ಹಣನ ಕಾಶ್ಮೀರಿ ಪಠ್ಯ ’ರಾಜತರಂಗಿಣಿ’ಯಲ್ಲಿ ಉಲ್ಲೇಖವಿದೆ. ಈ ಪುರಾವೆಯನ್ನು ಗಮನಿಸಿದರೆ ಶ್ರಮಣ ಧರ್ಮಗಳ ಮೇಲಿನ ದಾಳಿ ಅಶೋಕನ ಜೀವಿತಕಾಲ ಇಲ್ಲವೇ ಆತನ ಮರಣದ ತಕ್ಷಣವೇ ಆರಂಭವಾಯಿತು ಎಂಬುದಕ್ಕೆ ಈ ಉಲ್ಲೇಖವೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ಮೌರ್ಯರ ಆಳ್ವಿಕೆಯ ನಂತರದ ಅವಧಿಯ ಶ್ರಮಣರನ್ನು ಕಾಡಿದ ಸಾಕ್ಷ್ಯವನ್ನು ದಿವ್ಯವದನ ಎಂಬ ಬೌದ್ಧ- ಸಂಸ್ಕೃತ ಪಂಡಿತನು ದಾಖಲಿಸಿದ್ದಾನೆ. ಪುಷ್ಯಮಿತ್ರ ಶುಂಗನೆಂಬ ಬ್ರಾಹ್ಮಣ ದೊರೆಯು ಬೌದ್ಧ ಧರ್ಮದ ಮಹಾನ್ ಪೀಡಕನೆಂದು ಗುರುತಿಸಿದ್ದಾನೆ. ಅವನ ಭಾರೀ ಸೇನೆಯು ಸ್ತೂಪಗಳನ್ನು ಹಾಳುಗೆಡವುತ್ತ, ವಿಹಾರಗಳನ್ನು ಸುಡುತ್ತ, ಭಿಕ್ಷುಗಳನ್ನು ಕೊಲ್ಲುತ್ತ ಸಾಕಲದ ಕಡೆಗೆ (ಈಗಿನ ಸಿಯಾಲ್ ಕೋಟ್) ಸಾಗಿತು. ಪ್ರತಿ ಶ್ರಮಣನ ತಲೆಗೆ ನೂರು ವರಹಗಳ ಬಹುಮಾನವನ್ನು ಶುಂಗನು ಸಾಕಲದಲ್ಲಿ ಘೋಷಿಸಿದ. ಬ್ರಾಹ್ಮಣರು ಮತ್ತು ಶ್ರಮಣರು ಹಾವು ಮುಂಗುಸಿಗಳಂತೆ ಶಾಶ್ವತ ಶತ್ರುಗಳು ಎಂದು ಪತಂಜಲಿಯ ತನ್ನ ಮಹಾಭಾಷ್ಯ ಕೃತಿಯಲ್ಲಿ ಬಣ್ಣಿಸಿದ್ದಾನೆ. ವಿಶೇಷವಾಗಿ ಮಧ್ಯಪ್ರದೇಶದ ಅನೇಕ ಬೌದ್ಧ ಕೇಂದ್ರಗಳಲ್ಲಿ ಕಂಡು ಬಂದಿರುವ ಅವಶೇಷಗಳ ರಾಶಿಯ ಪದರಗಳು ಬೌದ್ಧ ಸ್ಮಾರಕಗಳ ಮೇಲೆ ಶುಂಗನು ನಡೆಸಿದ ದಾಳಿಯ ಸಾಧ್ಯತೆಯನ್ನು ಗಟ್ಟಿಗೊಳಿಸುತ್ತವೆ. ಉದಾಹರಣೆಗೆ ಅಶೋಕನ ಕಾಲದಿಂದ ಪ್ರಮುಖ ಬೌದ್ಧ ತಾಣವಾಗಿದ್ದ ಸಾಂಚಿಯು ಶುಂಗನ ಕಾಲದಲ್ಲಿ ಹಲವು ಸೌಧಗಳನ್ನು ಒಡೆದು ಹಾಕಿದ ಪುರಾವೆಗಳತ್ತ ಬೆರಳು ಮಾಡುತ್ತದೆ. ಸುತ್ತಮುತ್ತಲ ಕಟನಿ ಮತ್ತು ರೇವಾ ಜಿಲ್ಲೆಗಳ ಸತಧಾರ ಮತ್ತು ದೂರಕೊಥಾರದಂತಹ ಜಾಗಗಳಲ್ಲಿಯೂ ಇಂತಹುದೇ ಪುರಾವೆಗಳು ದೊರೆಯುತ್ತವೆ ಎಂದು ಝಾ ವಿವರಿಸಿದ್ದಾರೆ.

ಇಂತಹ ದಾಳಿಗಳು ಮಧ್ಯಪ್ರದೇಶದಲ್ಲಿ ಶುಂಗನ ನಂತರವೂ ನಡೆಯುತ್ತವೆ. ಉದಾಹರಣೆಗೆ ಅಹ್ಮದ್‌ಪುರದಲ್ಲಿ ಐದನೆಯ ಶತಮಾನದ ಸ್ತೂಪವೊಂದರ ಮೇಲೆ ಬ್ರಾಹ್ಮಣ ದೇಗುಲವನ್ನು ಕಟ್ಟಿದಂತೆ ತೋರುತ್ತದೆ. ವಿದಿಶಾದ ಸುತ್ತಮುತ್ತ ಎಂಟನೆಯ ಶತಮಾನದಲ್ಲಿ ಬೌದ್ಧ ಕೇಂದ್ರಗಳು ಶೈವ ಅಥವಾ ಜೈನ ಪೂಜಾ ಸ್ಥಾನಗಳಾಗಿ ಬದಲಾಗಿರುವ ಹಲವು ತಾಣಗಳು ಪತ್ತೆಯಾಗಿವೆ. ವಿದಿಶಾದ ಈಶಾನ್ಯ ದಿಕ್ಕಿನಲ್ಲಿ 250ಕಿ.ಮೀ. ದೂರದಲ್ಲಿ ಹತ್ತನೆಯ ಶತಮಾನದ ನಂತರ ಚಾಂದೇಲರ ಆಳ್ವಿಕೆಯಲ್ಲಿ ದೇವಾಲಯ ನಗರವಾಗಿ ಖಜುರಾಹೋ ತಲೆಯೆತ್ತುವ ಮುನ್ನ ಅಲ್ಲಿದ್ದದ್ದು ಬೌದ್ಧ ನೆಲೆ. ಐದನೆಯ ಶತಮಾನದ ಸ್ತೂಪದ ತಳಹದಿಯ ಮೇಲೆ ಬ್ರಾಹ್ಮಣ ದೇವಾಲಯವನ್ನು ನಿರ್ಮಿಸಿರುವಂತೆ ಕಂಡುಬಂದಿದೆ. ಸುತ್ತಮುತ್ತ ಪ್ರತೀಕಗಳು ಪತ್ತೆಯಾಗಿವೆ. ಇದೇ ತಾಣದಲ್ಲಿ ಬೌದ್ಧ ಸ್ಮಾರಕವೊಂದರ ಅವಶೇಷಗಳ ಮೇಲೆ ಒಂಬತ್ತನೆಯ ಅಥವಾ ಹತ್ತನೆಯ ಶತಮಾನದಲ್ಲಿ ಘಂಟೈ ದೇವಾಲಯವನ್ನು ಆಗಿನ ಕಾಲಮಾನದಲ್ಲಿ ಪ್ರಬಲ ನೆಲೆ ಹೊಂದಿದ್ದ ಜೈನರು ನಿರ್ಮಿಸಿದ್ದಾಗಿ ತೋರುತ್ತದೆ.

ಪಶ್ಚಿಮ ಉತ್ತರಪ್ರದೇಶದ ಮಥುರಾದಲ್ಲಿ ಕುಶಾನರ ಕಾಲದಲ್ಲಿ ಈಗ ನೆಲೆ ನಿಂತಿರುವ ಭೂತೇಶ್ವರ ಮತ್ತು ಗೋಕರ್ಣೇಶ್ವರ ದೇವಾಲಯಗಳು ಪ್ರಾಚೀನಕಾಲದ ಬೌದ್ಧ ಕೇಂದ್ರಗಳಾಗಿದ್ದವು. ಅಲಹಾಬಾದಿನ ಸನಿಹದ ಕೌಶಾಂಬಿಯಲ್ಲಿ ಘೋಸಿತಾರಂ ಎಂಬ ಮಹಾನ್ ಬೌದ್ಧ ಮಠವನ್ನು ಸುಟ್ಟು ಹಾಕಿ ಧ್ವಂಸ ಮಾಡಿದ ಕೃತ್ಯ ಪುಷ್ಯಮಿತ್ರ ಶುಂಗನದೇ. ಬುದ್ಧ ತನ್ನ ಮೊದಲ ಪ್ರವಚನ ನೀಡಿದ ವಾರಾಣಸಿ ಬಳಿಯ ಸಾರನಾಥ ಕೂಡ ಬ್ರಾಹ್ಮಣ ದಾಳಿಗೆ ಗುರಿಯಾಯಿತು. ಮೌರ್ಯರ ಕಾಲದ ವಸ್ತುಗಳನ್ನು ಮರುಬಳಸಿ ಬ್ರಾಹ್ಮಣ ಕಟ್ಟಡಗಳನ್ನು ನಿರ್ಮಿಸಲಾಯಿತು. ಬುದ್ಧನು ತನ್ನ ಬಹುಪಾಲು ಜೀವಿತಕಾಲವನ್ನು ಕಳೆದ ಶ್ರಾವಸ್ತಿಯ ಕುಶಾನ ಬೌದ್ಧ ತಾಣವನ್ನು ಬ್ರಾಹ್ಮಣರು ಸ್ವಾಧೀನಪಡಿಸಿಕೊಂಡು ಗುಪ್ತರ ಕಾಲದಲ್ಲಿ ರಾಮಾಯಣ ಗೋಡೆ ಚಿತ್ರಗಳ ಗುಡಿಯನ್ನು ನಿರ್ಮಿಸಿದರು. ಈ ಮಾತಿಗೆ ಐದನೆಯ ಶತಮಾನದ ಚೀನೀ ಯಾತ್ರಿಕ ಫಾಹಿಯಾನನ ಉಲ್ಲೇಖವೇ ಸಾಕ್ಷಿ ಎಂದು ಝಾ ಹೇಳಿದ್ದಾರೆ.

ದ್ವಿಜೇಂದ್ರ ನಾರಾಯಣ ಝಾ

ಬೌದ್ಧ ಮತದ ಮೇಲೆ ಬ್ರಾಹ್ಮಣವಾದವು ಅಂತಿಮ ವಿಜಯ ಸಾಧಿಸಿದ ನಂತರ ಉತ್ತರಪ್ರದೇಶದ ಸುಲ್ತಾನಪುರ ಜಿಲ್ಲೆಯೊಂದರಲ್ಲೇ 49 ಬೌದ್ಧ ತಾಣಗಳಿಗೆ ಬೆಂಕಿ ಇಟ್ಟು ನಾಶ ಮಾಡಿರುವುದಾಗಿ ಕಂಡುಬಂದಿದೆ. ಪುರಾತತ್ವ ಶಾಸ್ತ್ರಜ್ಞ ಆಲೋಯ್ಸ್ ಆಂಟನ್ ಫೂಹ್ರರ್ ಅವರ ಸಂಶೋಧನಾ ಪ್ರಬಂಧವೊಂದು ಈ ಸಂಗತಿಯ ಮೇಲೆ ಬೆಳಕು ಚೆಲ್ಲಿದೆ.

ಆರನೆಯ ಶತಮಾನದ ಹೂಣ ರಾಜ ಮಿಹಿರಕುಲನು ಶಿವನ ಆರಾಧಕ. ಸುಮಾರು 1,600 ಬೌದ್ಧ ಸ್ತೂಪಗಳು ಮತ್ತು ವಿಹಾರಗಳನ್ನು ನಾಶ ಮಾಡಿದ್ದಷ್ಟೇ ಅಲ್ಲದೆ ಸಾವಿರಾರು ಮಂದಿ ಭಿಕ್ಷುಗಳನ್ನು ಕೊಂದು ಹಾಕಿದ. ಗಾಂಧಾರದ ಸಾವಿರ ಸಂಘಾರಾಮಗಳು ಅಳಿದು ಅವಶೇಷಗಳಾದವು. ಉಡ್ಡಿಯಾನದ 1,400 ಸಂಘಾರಾಮಗಳಿಗೂ ಇದೇ ಸ್ಥಿತಿ ಒದಗಿತ್ತು ಎಂದು ಗುಪ್ತರ ಆಳ್ವಿಕೆಯ ನಂತರದ ಶತಮಾನಗಳಲ್ಲಿ 631ರಿಂದ 645ರ ನಡುವೆ ಹರ್ಷವರ್ಧನನ ಆಳ್ವಿಕೆಯಲ್ಲಿ ಪ್ರವಾಸ ನಡೆಸಿದ ಚೀನೀ ಯಾತ್ರಿಕ ಹ್ಯೂಯೆನ್ ತ್ಸಾಂಗ್ ದಾಖಲಿಸಿದ್ದಾನೆ. ಗೌಡದೇಶದ ರಾಜ ಶಶಾಂಕನು ಬಿಹಾರದ ಬೋಧ ಗಯಾದ ಬೋಧಿವೃಕ್ಷವನ್ನು ಕಡಿದು ಹಾಕಿಸಿದ. ಸ್ಥಳೀಯ ದೇವಾಲಯವೊಂದರಿಂದ ಬುದ್ಧನ ಪ್ರತಿಮೆಯನ್ನು ತೆಗೆದು ಮಹೇಶ್ವರನ ವಿಗ್ರಹವನ್ನು ಇರಿಸುವಂತೆ ಆದೇಶ ನೀಡಿದನೆಂದೂ ಹ್ಯೂಯೆನ್ ತ್ಸಾಂಗ್ ಹೇಳಿದ್ದಾನೆ. ಬೋಧ ಗಯಾ ಪುನಃ ಬೌದ್ಧರ ಸುಪರ್ದಿಗೆ ಬಂದದ್ದು ಬೌದ್ಧ ಮತಾವಲಂಬಿ ಪಾಲ ಸಂತತಿಯ ದೊರೆಗಳ ಕಾಲದಲ್ಲಿ. ಅಂತಾರಾಷ್ಟ್ರೀಯ ಖ್ಯಾತಿಯ ನಳಂದ ವಿಶ್ವವಿದ್ಯಾಲಯದ ವಿಶಾಲ ಸಮುಚ್ಚಯದಲ್ಲಿ ಹ್ಯೂಯೆನ್ ತ್ಸಾಂಗ್ ಐದು ವರ್ಷಗಳಿಗೂ ಹೆಚ್ಚು ಕಾಲ ವಾಸವಿದ್ದ. ಈ ವಿಶ್ವವಿದ್ಯಾಲಯದ ಗ್ರಂಥಾಲಯವನ್ನು ಸುಟ್ಟು ಹಾಕಿದ್ದು ಭಕ್ತಿಯಾರ್ ಖಿಲ್ಜಿ ಎಂಬ ಪ್ರಚಾರದಲ್ಲಿ ತಥ್ಯಾಂಶವಿಲ್ಲ ಎಂದು ಝಾ ಹೇಳುತ್ತಾರೆ. ಹನ್ನೆರಡನೆಯ ಶತಮಾನದಲ್ಲಿ ನಿರ್ಮಿಸಲಾದ ಪುರಿಯ ಜಗನ್ನಾಥ ಮಂದಿರದ ಕೂಡ ತಲೆಯೆತ್ತಿದ್ದು ಬೌದ್ಧ ತಾಣದ ಮೇಲೆಯೇ. ಸ್ವಾಮಿ ವಿವೇಕಾನಂದರು ಕೂಡ ಈ ಅಂಶವನ್ನು ಪುಷ್ಟೀಕರಿಸಿದ್ದಾರೆ. ಜಗನ್ನಾಥ ರಥೋತ್ಸವದ ಜಗನ್ನಾಥ, ಬಲರಾಮ ಹಾಗೂ ಸುಭದ್ರರ ಪ್ರತಿಮೆಗಳ ಮೆರವಣಿಗೆಯು ಬೌದ್ಧ ಧರ್ಮದ ಬುದ್ಧ, ಧಮ್ಮ ಹಾಗೂ ಸಂಘದ ರಥೋತ್ಸವವನ್ನು ಆಧರಿಸಿದಂತಹವು ಎಂದು ಬಂಕಿಮಚಂದ್ರ ಚಟರ್ಜಿ ಕೂಡ ಹೇಳಿದ್ದಾರೆ.

ಪುರಿ ಜಿಲ್ಲೆಯ ಪೂರ್ಣೇಶ್ವರ, ಕಾಂತೇಶ್ವರ, ಕೇದಾರೇಶ್ವರ, ಸೋಮೇಶ್ವರ ಹಾಗೂ ಅಂಗೇಶ್ವರ ದೇವಾಲಯಗಳನ್ನು ಬೌದ್ಧ ವಿಹಾರಗಳ ಮೇಲೆ ಕಟ್ಟಲಾಗಿದೆ ಇಲ್ಲವೇ ಬೌದ್ಧ ವಿಹಾರಗಳ ಸಾಮಗ್ರಿಗಳಿಂದ ಕಟ್ಟಲಾಗಿದೆ ಎಂಬುದು ಝಾ ವಾದ.

ಎಪಿಗ್ರಾಫಿಯಾ ಇಂಡಿಯಾದ ಇಪ್ಪತ್ತನಾಲ್ಕನೆಯ ಸಂಪುಟದ 141-144 ಪುಟಗಳಲ್ಲಿ ದಾಖಲಾಗಿರುವ ಸಂಗತಿಯಿದು- ’ದಕ್ಷಿಣ ಭಾರತದ ರಾಜ ವೀರ ಗೊಗ್ಗಿದೇವ ತನ್ನನ್ನು ತಾನು ಜೈನ ಶಾಸನಗಳ ಪಾಲಿನ ಬೆಂಕಿ ಎಂದೂ, ಜಿನ ಅನುಯಾಯಿಗಳೆಂಬ ವನ್ಯಮೃಗಗಳ ಬೇಟೆಗಾರನೆಂದೂ, ಬೌದ್ಧ ಕಟ್ಟಳೆಗಳ ನೆಲಸಮಗಾರನೆಂದೂ’ ಬಣ್ಣಿಸಿಕೊಂಡಿದ್ದಾನೆ. ಲೋಕಾಯತ-ಚಾರ್ವಾಕ ಮುಂತಾದ ಬ್ರಾಹ್ಮಣೇತರ ಕೃತಿಗಳ ಉದ್ದೇಶಪೂರ್ವಕ ನಾಶವನ್ನು ಈ ಸಂಪುಟದಲ್ಲಿ ಬಣ್ಣಿಸಲಾಗಿದೆ. ನಾಗಾರ್ಜುನಕೊಂಡದಂತಹ ಬೃಹತ್ ಬೌದ್ಧ ವಿಹಾರವನ್ನು ನಾಶಪಡಿಸಲಾಗುತ್ತದೆ. ಶಂಕರದಿಗ್ವಿಜಯದ ಪ್ರಕಾರ ಹೊಸದಾಗಿ ನಿಯುಕ್ತರಾದ ಬ್ರಹ್ಮಕ್ಷತ್ರ ರಾಜರು ಬೌದ್ಧ ಮತಾವಲಂಬಿಗಳನ್ನು ಕೊಲ್ಲುವಂತೆಯೂ, ಅವರನ್ನು ಕೊಲ್ಲಲು ಒಪ್ಪದವರನ್ನು ಕೂಡ ಸಂಹರಿಸಲು ಕ್ಷತ್ರಿಯರಿಗೆ ಆದೇಶ ನೀಡುತ್ತಾರೆ.

ಈಗ, ಕೆಡವಲಾದ ಈ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?


ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...