Homeಮುಖಪುಟಬಟ್ಟೆಯಿಂದ ಪ್ರಜೆಗಳನ್ನು ವಿಭಜಿಸುವವರು ಈ ಬಾಲಕನಿಂದ ಪಾಠ ಕಲಿಯುತ್ತಾರಾ?: ಮೋದಿ ವಿರುದ್ಧ ನಟ ಕಿಶೋರ್‌ ಪರೋಕ್ಷ...

ಬಟ್ಟೆಯಿಂದ ಪ್ರಜೆಗಳನ್ನು ವಿಭಜಿಸುವವರು ಈ ಬಾಲಕನಿಂದ ಪಾಠ ಕಲಿಯುತ್ತಾರಾ?: ಮೋದಿ ವಿರುದ್ಧ ನಟ ಕಿಶೋರ್‌ ಪರೋಕ್ಷ ಟೀಕೆ

- Advertisement -
- Advertisement -

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಕುರಿತು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ‘ಬಟ್ಟೆ ನೋಡಿ ಅವರನ್ನು ಗುರುತಿಸಬಹುದು’ ಎಂದು ಹೇಳಿಕೆ ನೀಡಿದ್ದರು. ಬಟ್ಟೆ ವಿಚಾರವಾಗಿಯೇ ಕಿಶೋರ್‌ ಕುಮಾರ್‌ ಅವರು ಮೋದಿಯವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಕಿಶೋರ್ ಹಂಚಿಕೊಂಡಿದ್ದು, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

ನಟ ಕಿಶೋರ್ ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ”ಭಲೇ ಬಾಲಕ, ನಮಗೆಲ್ಲ ಮಾದರಿಯಾದೆ ನೀನು..
ಒಮ್ಮೆ ಯೋಚಿಸಿ, ಇವರೇನಾದರೂ ಬಟ್ಟೆಯಿಂದ ಈ ಬಾಲಕನನ್ನು ಗುರುತಿಸಿಬಿಟ್ಟಿದ್ದರೆ? ಆ ರೈಲಿನ ಚಾಲಕ ದಿನಕ್ಕೊಂದು ವಂದೇಭಾರತ ರೈಲು ಬಿಡುವ ಪ್ರಧಾನ ಸೇವಕನಾಗಿದ್ದಿದ್ದರೆ?? ರೈಲನ್ನು ಸೀದಾ ಪಾಕಿಸ್ಥಾನಕ್ಕೇ ನುಗ್ಗಿಸಿಬಿಡುತ್ತಿದ್ದನೇನೊ??” ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದಾರೆ.

”ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಲಿ ಕಪಾಳಕ್ಕೆ ಹೊಡೆಸುವ, ಅವನ ಮನೆ ಬುಲ್ಡೊಜ್ ಮಾಡುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದ ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. Yes it is a crime and as such we are seeing these small things but we see our history how mohammadians and britishers treated our ancestors. But we are all human beings and most of common people not bother for religion and caste and all political parties to gain or get to vote dividing people. But our country should be ruled by totally dedicated person for country sake just like military individual who dedicated their life fir Nation over and above family and ftiends

  2. Yes Mr. Kishore absolutely told you truth, we all big big peoples and politicians and celebraties want to learn from children’s highness. Sometimes The bravest childrens teach lessons for us.

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...