Homeಮುಖಪುಟಬಟ್ಟೆಯಿಂದ ಪ್ರಜೆಗಳನ್ನು ವಿಭಜಿಸುವವರು ಈ ಬಾಲಕನಿಂದ ಪಾಠ ಕಲಿಯುತ್ತಾರಾ?: ಮೋದಿ ವಿರುದ್ಧ ನಟ ಕಿಶೋರ್‌ ಪರೋಕ್ಷ...

ಬಟ್ಟೆಯಿಂದ ಪ್ರಜೆಗಳನ್ನು ವಿಭಜಿಸುವವರು ಈ ಬಾಲಕನಿಂದ ಪಾಠ ಕಲಿಯುತ್ತಾರಾ?: ಮೋದಿ ವಿರುದ್ಧ ನಟ ಕಿಶೋರ್‌ ಪರೋಕ್ಷ ಟೀಕೆ

- Advertisement -
- Advertisement -

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಕುರಿತು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ‘ಬಟ್ಟೆ ನೋಡಿ ಅವರನ್ನು ಗುರುತಿಸಬಹುದು’ ಎಂದು ಹೇಳಿಕೆ ನೀಡಿದ್ದರು. ಬಟ್ಟೆ ವಿಚಾರವಾಗಿಯೇ ಕಿಶೋರ್‌ ಕುಮಾರ್‌ ಅವರು ಮೋದಿಯವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಕಿಶೋರ್ ಹಂಚಿಕೊಂಡಿದ್ದು, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

ನಟ ಕಿಶೋರ್ ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ”ಭಲೇ ಬಾಲಕ, ನಮಗೆಲ್ಲ ಮಾದರಿಯಾದೆ ನೀನು..
ಒಮ್ಮೆ ಯೋಚಿಸಿ, ಇವರೇನಾದರೂ ಬಟ್ಟೆಯಿಂದ ಈ ಬಾಲಕನನ್ನು ಗುರುತಿಸಿಬಿಟ್ಟಿದ್ದರೆ? ಆ ರೈಲಿನ ಚಾಲಕ ದಿನಕ್ಕೊಂದು ವಂದೇಭಾರತ ರೈಲು ಬಿಡುವ ಪ್ರಧಾನ ಸೇವಕನಾಗಿದ್ದಿದ್ದರೆ?? ರೈಲನ್ನು ಸೀದಾ ಪಾಕಿಸ್ಥಾನಕ್ಕೇ ನುಗ್ಗಿಸಿಬಿಡುತ್ತಿದ್ದನೇನೊ??” ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದಾರೆ.

”ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಲಿ ಕಪಾಳಕ್ಕೆ ಹೊಡೆಸುವ, ಅವನ ಮನೆ ಬುಲ್ಡೊಜ್ ಮಾಡುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದ ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes it is a crime and as such we are seeing these small things but we see our history how mohammadians and britishers treated our ancestors. But we are all human beings and most of common people not bother for religion and caste and all political parties to gain or get to vote dividing people. But our country should be ruled by totally dedicated person for country sake just like military individual who dedicated their life fir Nation over and above family and ftiends

  2. Yes Mr. Kishore absolutely told you truth, we all big big peoples and politicians and celebraties want to learn from children’s highness. Sometimes The bravest childrens teach lessons for us.

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...