Homeಮುಖಪುಟಬೈರುತ್ ಅನ್ನು ಗಾಝಾದಂತೆ ಮಾಡುತ್ತೇವೆ: ನೆತನ್ಯಾಹು ಯುದ್ದೋನ್ಮಾದ

ಬೈರುತ್ ಅನ್ನು ಗಾಝಾದಂತೆ ಮಾಡುತ್ತೇವೆ: ನೆತನ್ಯಾಹು ಯುದ್ದೋನ್ಮಾದ

- Advertisement -
- Advertisement -

ಇಸ್ರೇಲ್-ಹಮಾಸ್‌ ನಡುವಿನ ಕದನಕ್ಕೆ ಕೈ ಹಾಕಿದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವಿನಾಶ ಸಂಭವಿಸಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಿಜ್ಬುಲ್ಲಾ ಗುಂಪಿಗೆ ಬೆದರಿಕೆ ಹಾಕಿದ್ದಾರೆ.

ಹಿಜ್ಬುಲ್ಲಾ ತಾನಾಗಿಯೇ ಹಮಾಸ್ ಜೊತೆ ಕೈ ಜೋಡಿಸಿ ನಮ್ಮ ಜೊತೆ ಯುದ್ಧಕ್ಕೆ ಬಂದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್ ಅನ್ನು ಗಾಜಾ ಮತ್ತು ಖಾನ್ ಯೂನಿಸ್ ಆಗಿ ಪರಿವರ್ತಿಸುತ್ತೇವೆ. ಆ ಪ್ರದೇಶಗಳು ಗಾಝಾದಿಂದ ಬಹಳ ದೂರವೇನಿಲ್ಲ ಎಂದು ನೆತನ್ಯಾಹು ಹೇಳಿದ್ದಾರೆ.

ಗುರುವಾರ ಇಸ್ರೇಲ್ ರಕ್ಷಣಾ ಪಡೆಗಳ ಉತ್ತರ ಕಮಾಂಡ್‌ನ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನೆತನ್ಯಾಹು ಹಿಜ್ಬುಲ್ಲಾಗೆ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಗುಂಪು ಇಸ್ರೇಲ್‌ ಮೇಲೆ ದಾಳಿ ಮಾಡಿದ ನಂತರ ಲೆಬನಾನ್‌ನ ಗಡಿಯಲ್ಲಿ ಇಸ್ರೇಲ್ ಸೇನೆ ಮತ್ತು ಹಿಜ್ಬುಲ್ಲಾ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಗಳು ಹೇಳಿವೆ. ನಮ್ಮ ಸೇನೆ ದಾಳಿಗೆ ಸನ್ನದ್ದವಾಗಿದೆ ಎಂದು ನೆತನ್ಯಾಹು ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹಿಜ್ಬುಲ್ಲಾ ಈಗಾಗಲೇ ಹಮಾಸ್ ಗುಂಪಿಗೆ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಆದರೆ, ಅದು ನೇರವಾಗಿ ಇಸ್ರೇಲ್ ಜೊತೆ ಕಾದಾಟಕ್ಕೆ ಇಳಿದಿಲ್ಲ. ಹಿಜ್ಬುಲ್ಲಾ ಸಂಘರ್ಷದಲ್ಲಿ ಸೇರಿಕೊಂಡರೆ ಯುದ್ಧ ಲೆಬನಾನ್‌ಗೆ ವಿಸ್ತಾರಣೆಗೊಂಡು ಇನ್ನಷ್ಟು ಅಮಾಯಕ ಜೀವಗಳು ಬಲಿಯಾಗುವ ಆತಂಕವಿದೆ.

ನಾಲ್ಕು ದಿನಗಳ ಯುದ್ಧ ವಿರಾಮದ ಬಳಿಕ ಗಾಝಾ ಮೇಲಿನ ಇಸ್ರೇಲ್ ದಾಳಿ ಮುಂದುವರಿದೆ. ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು ಗಾಝಾದ ಇತ್ತೀಚಿನ ಪರಿಸ್ಥಿತಿ ಕುರಿತು ಬೆಂಜಮಿನ್ ನೆತನ್ಯಾಹು ಮತ್ತು ಜೋರ್ಡಾನ್‌ ರಾಜ ಅಬ್ದುಲ್ಲಾ II ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ.

ಅ.7ರಿಂದ ಪ್ರಾರಂಭವಾದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಗಾಝಾದ ಸುಮಾರು 17 ಸಾವಿರಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಇಲಾಖೆ ತಿಳಿಸಿದೆ. ಇಸ್ರೇಲ್‌ನಲ್ಲಿ 1,200 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಿಜ್ಬುಲ್ಲಾ ಎಂದರೆ ಯಾರು?

ಹರಾಕತ್ ಹಿಜ್ಬುಲ್ಲಾ ಅಲ್- ನುಜಾಬಾ (ನುಜಾಬಾ ಚಳವಳಿ) ವಿಶೇಷವಾಗಿ ಸಿರಿಯಾ ಮತ್ತು ಇರಾಕ್‌ನಲ್ಲಿ ಸಕ್ರಿಯವಾಗಿರುವ ಶಿಯಾ ಅರೆಸೈನಿಕ ಗುಂಪು . ಇಸ್ಲಾಮಿ ಬಂಡುಕೋರರ ವಿರುದ್ಧ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಅನ್ನು ಬೆಂಬಲಿಸಲು ಅಕ್ರಂ ಅಲ್-ಕಾಬಿ ಇದನ್ನು 2013 ರಲ್ಲಿ ಸ್ಥಾಪಿಸಿದರು.

ಇದನ್ನೂ ಓದಿ: ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...