Homeಮುಖಪುಟಬೈರುತ್ ಅನ್ನು ಗಾಝಾದಂತೆ ಮಾಡುತ್ತೇವೆ: ನೆತನ್ಯಾಹು ಯುದ್ದೋನ್ಮಾದ

ಬೈರುತ್ ಅನ್ನು ಗಾಝಾದಂತೆ ಮಾಡುತ್ತೇವೆ: ನೆತನ್ಯಾಹು ಯುದ್ದೋನ್ಮಾದ

- Advertisement -
- Advertisement -

ಇಸ್ರೇಲ್-ಹಮಾಸ್‌ ನಡುವಿನ ಕದನಕ್ಕೆ ಕೈ ಹಾಕಿದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವಿನಾಶ ಸಂಭವಿಸಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಿಜ್ಬುಲ್ಲಾ ಗುಂಪಿಗೆ ಬೆದರಿಕೆ ಹಾಕಿದ್ದಾರೆ.

ಹಿಜ್ಬುಲ್ಲಾ ತಾನಾಗಿಯೇ ಹಮಾಸ್ ಜೊತೆ ಕೈ ಜೋಡಿಸಿ ನಮ್ಮ ಜೊತೆ ಯುದ್ಧಕ್ಕೆ ಬಂದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್ ಅನ್ನು ಗಾಜಾ ಮತ್ತು ಖಾನ್ ಯೂನಿಸ್ ಆಗಿ ಪರಿವರ್ತಿಸುತ್ತೇವೆ. ಆ ಪ್ರದೇಶಗಳು ಗಾಝಾದಿಂದ ಬಹಳ ದೂರವೇನಿಲ್ಲ ಎಂದು ನೆತನ್ಯಾಹು ಹೇಳಿದ್ದಾರೆ.

ಗುರುವಾರ ಇಸ್ರೇಲ್ ರಕ್ಷಣಾ ಪಡೆಗಳ ಉತ್ತರ ಕಮಾಂಡ್‌ನ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನೆತನ್ಯಾಹು ಹಿಜ್ಬುಲ್ಲಾಗೆ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಗುಂಪು ಇಸ್ರೇಲ್‌ ಮೇಲೆ ದಾಳಿ ಮಾಡಿದ ನಂತರ ಲೆಬನಾನ್‌ನ ಗಡಿಯಲ್ಲಿ ಇಸ್ರೇಲ್ ಸೇನೆ ಮತ್ತು ಹಿಜ್ಬುಲ್ಲಾ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಗಳು ಹೇಳಿವೆ. ನಮ್ಮ ಸೇನೆ ದಾಳಿಗೆ ಸನ್ನದ್ದವಾಗಿದೆ ಎಂದು ನೆತನ್ಯಾಹು ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹಿಜ್ಬುಲ್ಲಾ ಈಗಾಗಲೇ ಹಮಾಸ್ ಗುಂಪಿಗೆ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಆದರೆ, ಅದು ನೇರವಾಗಿ ಇಸ್ರೇಲ್ ಜೊತೆ ಕಾದಾಟಕ್ಕೆ ಇಳಿದಿಲ್ಲ. ಹಿಜ್ಬುಲ್ಲಾ ಸಂಘರ್ಷದಲ್ಲಿ ಸೇರಿಕೊಂಡರೆ ಯುದ್ಧ ಲೆಬನಾನ್‌ಗೆ ವಿಸ್ತಾರಣೆಗೊಂಡು ಇನ್ನಷ್ಟು ಅಮಾಯಕ ಜೀವಗಳು ಬಲಿಯಾಗುವ ಆತಂಕವಿದೆ.

ನಾಲ್ಕು ದಿನಗಳ ಯುದ್ಧ ವಿರಾಮದ ಬಳಿಕ ಗಾಝಾ ಮೇಲಿನ ಇಸ್ರೇಲ್ ದಾಳಿ ಮುಂದುವರಿದೆ. ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು ಗಾಝಾದ ಇತ್ತೀಚಿನ ಪರಿಸ್ಥಿತಿ ಕುರಿತು ಬೆಂಜಮಿನ್ ನೆತನ್ಯಾಹು ಮತ್ತು ಜೋರ್ಡಾನ್‌ ರಾಜ ಅಬ್ದುಲ್ಲಾ II ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ.

ಅ.7ರಿಂದ ಪ್ರಾರಂಭವಾದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಗಾಝಾದ ಸುಮಾರು 17 ಸಾವಿರಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಇಲಾಖೆ ತಿಳಿಸಿದೆ. ಇಸ್ರೇಲ್‌ನಲ್ಲಿ 1,200 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಿಜ್ಬುಲ್ಲಾ ಎಂದರೆ ಯಾರು?

ಹರಾಕತ್ ಹಿಜ್ಬುಲ್ಲಾ ಅಲ್- ನುಜಾಬಾ (ನುಜಾಬಾ ಚಳವಳಿ) ವಿಶೇಷವಾಗಿ ಸಿರಿಯಾ ಮತ್ತು ಇರಾಕ್‌ನಲ್ಲಿ ಸಕ್ರಿಯವಾಗಿರುವ ಶಿಯಾ ಅರೆಸೈನಿಕ ಗುಂಪು . ಇಸ್ಲಾಮಿ ಬಂಡುಕೋರರ ವಿರುದ್ಧ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಅನ್ನು ಬೆಂಬಲಿಸಲು ಅಕ್ರಂ ಅಲ್-ಕಾಬಿ ಇದನ್ನು 2013 ರಲ್ಲಿ ಸ್ಥಾಪಿಸಿದರು.

ಇದನ್ನೂ ಓದಿ: ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...