Homeಮುಖಪುಟಬೈರುತ್ ಅನ್ನು ಗಾಝಾದಂತೆ ಮಾಡುತ್ತೇವೆ: ನೆತನ್ಯಾಹು ಯುದ್ದೋನ್ಮಾದ

ಬೈರುತ್ ಅನ್ನು ಗಾಝಾದಂತೆ ಮಾಡುತ್ತೇವೆ: ನೆತನ್ಯಾಹು ಯುದ್ದೋನ್ಮಾದ

- Advertisement -
- Advertisement -

ಇಸ್ರೇಲ್-ಹಮಾಸ್‌ ನಡುವಿನ ಕದನಕ್ಕೆ ಕೈ ಹಾಕಿದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವಿನಾಶ ಸಂಭವಿಸಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಿಜ್ಬುಲ್ಲಾ ಗುಂಪಿಗೆ ಬೆದರಿಕೆ ಹಾಕಿದ್ದಾರೆ.

ಹಿಜ್ಬುಲ್ಲಾ ತಾನಾಗಿಯೇ ಹಮಾಸ್ ಜೊತೆ ಕೈ ಜೋಡಿಸಿ ನಮ್ಮ ಜೊತೆ ಯುದ್ಧಕ್ಕೆ ಬಂದರೆ ಬೈರುತ್ ಮತ್ತು ದಕ್ಷಿಣ ಲೆಬನಾನ್ ಅನ್ನು ಗಾಜಾ ಮತ್ತು ಖಾನ್ ಯೂನಿಸ್ ಆಗಿ ಪರಿವರ್ತಿಸುತ್ತೇವೆ. ಆ ಪ್ರದೇಶಗಳು ಗಾಝಾದಿಂದ ಬಹಳ ದೂರವೇನಿಲ್ಲ ಎಂದು ನೆತನ್ಯಾಹು ಹೇಳಿದ್ದಾರೆ.

ಗುರುವಾರ ಇಸ್ರೇಲ್ ರಕ್ಷಣಾ ಪಡೆಗಳ ಉತ್ತರ ಕಮಾಂಡ್‌ನ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನೆತನ್ಯಾಹು ಹಿಜ್ಬುಲ್ಲಾಗೆ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಗುಂಪು ಇಸ್ರೇಲ್‌ ಮೇಲೆ ದಾಳಿ ಮಾಡಿದ ನಂತರ ಲೆಬನಾನ್‌ನ ಗಡಿಯಲ್ಲಿ ಇಸ್ರೇಲ್ ಸೇನೆ ಮತ್ತು ಹಿಜ್ಬುಲ್ಲಾ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಗಳು ಹೇಳಿವೆ. ನಮ್ಮ ಸೇನೆ ದಾಳಿಗೆ ಸನ್ನದ್ದವಾಗಿದೆ ಎಂದು ನೆತನ್ಯಾಹು ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹಿಜ್ಬುಲ್ಲಾ ಈಗಾಗಲೇ ಹಮಾಸ್ ಗುಂಪಿಗೆ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಆದರೆ, ಅದು ನೇರವಾಗಿ ಇಸ್ರೇಲ್ ಜೊತೆ ಕಾದಾಟಕ್ಕೆ ಇಳಿದಿಲ್ಲ. ಹಿಜ್ಬುಲ್ಲಾ ಸಂಘರ್ಷದಲ್ಲಿ ಸೇರಿಕೊಂಡರೆ ಯುದ್ಧ ಲೆಬನಾನ್‌ಗೆ ವಿಸ್ತಾರಣೆಗೊಂಡು ಇನ್ನಷ್ಟು ಅಮಾಯಕ ಜೀವಗಳು ಬಲಿಯಾಗುವ ಆತಂಕವಿದೆ.

ನಾಲ್ಕು ದಿನಗಳ ಯುದ್ಧ ವಿರಾಮದ ಬಳಿಕ ಗಾಝಾ ಮೇಲಿನ ಇಸ್ರೇಲ್ ದಾಳಿ ಮುಂದುವರಿದೆ. ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು ಗಾಝಾದ ಇತ್ತೀಚಿನ ಪರಿಸ್ಥಿತಿ ಕುರಿತು ಬೆಂಜಮಿನ್ ನೆತನ್ಯಾಹು ಮತ್ತು ಜೋರ್ಡಾನ್‌ ರಾಜ ಅಬ್ದುಲ್ಲಾ II ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ.

ಅ.7ರಿಂದ ಪ್ರಾರಂಭವಾದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಗಾಝಾದ ಸುಮಾರು 17 ಸಾವಿರಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಇಲಾಖೆ ತಿಳಿಸಿದೆ. ಇಸ್ರೇಲ್‌ನಲ್ಲಿ 1,200 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಿಜ್ಬುಲ್ಲಾ ಎಂದರೆ ಯಾರು?

ಹರಾಕತ್ ಹಿಜ್ಬುಲ್ಲಾ ಅಲ್- ನುಜಾಬಾ (ನುಜಾಬಾ ಚಳವಳಿ) ವಿಶೇಷವಾಗಿ ಸಿರಿಯಾ ಮತ್ತು ಇರಾಕ್‌ನಲ್ಲಿ ಸಕ್ರಿಯವಾಗಿರುವ ಶಿಯಾ ಅರೆಸೈನಿಕ ಗುಂಪು . ಇಸ್ಲಾಮಿ ಬಂಡುಕೋರರ ವಿರುದ್ಧ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಅನ್ನು ಬೆಂಬಲಿಸಲು ಅಕ್ರಂ ಅಲ್-ಕಾಬಿ ಇದನ್ನು 2013 ರಲ್ಲಿ ಸ್ಥಾಪಿಸಿದರು.

ಇದನ್ನೂ ಓದಿ: ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...