Homeಮುಖಪುಟನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಎಂಪಿ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಭಾನುವಾರ ”ಲೈ ಡಿಟೆಕ್ಟರ್ ನಾರ್ಕೋ” ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಹೇಳಿದ್ದಾರೆ. ಆದರೆ ಅವರು ತಮ್ಮ ಜೊತೆಗೆ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಕೂಡ ಪರೀಕ್ಷೆಗೆ ಒಳಗಾಗಬೇಕು ಎಂದು ಶರತ್ತು ಷರತ್ತು ಹಾಕಿದ್ದಾರೆ.

ಈ ಬಗ್ಗೆ ಭಾನುವಾರ ಸಿಂಗ್ ಅವರು ಫೇಸ್‌ಬುಕ್ ಪೋಸ್ಟ್ ಮಾಡಿದ್ದು, ”ನನ್ನ ನಾರ್ಕೋ ಪರೀಕ್ಷೆ, ಪಾಲಿಗ್ರಾಫಿ ಪರೀಕ್ಷೆ ಅಥವಾ ಸುಳ್ಳು ಪತ್ತೆ ಮಾಡುವ ಪರೀಕ್ಷೆಗೆ ನಾನು ಸಿದ್ಧನಿದ್ದೇನೆ ಆದರೆ ನನ್ನ ಷರತ್ತು ಏನೆಂದರೆ ನನ್ನ ಜೊತೆಗೆ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕೂಡ ಈ ಪರೀಕ್ಷೆಗಳಿಗೆ ಒಳಗಾಗಬೇಕು. ಇಬ್ಬರೂ ಕುಸ್ತಿಪಟುಗಳು ತಮ್ಮ ಪರೀಕ್ಷೆಯನ್ನು ಪೂರ್ಣಗೊಳಿಸಲು ಸಿದ್ಧರಿದ್ದರೆ, ನಂತರ ಪತ್ರಿಕಾಗೋಷ್ಠಿಯನ್ನು ಕರೆದು ಘೋಷಿಸಿ ಮತ್ತು ನಾನು ಇದಕ್ಕೆ ಸಿದ್ಧನಿದ್ದೇನೆ ಎಂದು ನಾನು ಭರವಸೆ ನೀಡುತ್ತೇನೆ… ನಾನು ಈಗಲೂ ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಮತ್ತು ದೇಶವಾಸಿಗಳಿಗೆ ಶಾಶ್ವತವಾಗಿ ದೃಢವಾಗಿರಲು ಭರವಸೆ ನೀಡುತ್ತೇನೆ.
ರಘುಕುಲ ಸಂಪ್ರದಾಯ ಮೊದಲಿನಿಂದಲೂ ಇದೆ. ಜೀವನ ಹೋಗಬಹುದು ಆದರೆ ಭರವಸೆ ಹೋಗದಿರಬಹುದು….. ಜೈ ಶ್ರೀ ರಾಮ್” ಎಂದು ಬರೆದುಕೊಂಡಿದ್ದಾರೆ.

ಏನಿದು ‘ಲೈ ಡಿಟೆಕ್ಟರ್ ನಾರ್ಕೋ ಪರೀಕ್ಷೆ’?

ಈ ಪರೀಕ್ಷೆಯಲ್ಲಿ, ತಪ್ಪೊಪ್ಪಿಗೆಯನ್ನು ಪಡೆಯುವ ಪ್ರಯತ್ನ ಮಾಡಲಾಗುತ್ತದೆ. ಶಂಕಿತರಿಗೆ ಸೋಡಿಯಂ ಪೆಂಟೋಥಾಲ್ ಎಂಬ ಔಷಧಿಯ ಇಂಜೆಕ್ಷನ್ ಚುಚ್ಚಲಾಗುತ್ತದೆ. ಔಷಧವು ಆತಂಕವನ್ನು ಕರಗಿಸುತ್ತದೆ, ಇದರಿಂದಾಗಿ ಅವರಿಗೆ ನಿರ್ಬಂಧಗಳಿಲ್ಲದೆ ಮಾತನಾಡಲು ಅವಕಾಶ ನೀಡುತ್ತದೆ.

ಏಪ್ರಿಲ್ 23ರಿಂದ ಸಿಂಗ್ ಬಂಧನಕ್ಕೆ ಒತ್ತಾಯಿಸಿ ದೇಶದ ಅಗ್ರ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದೀಗ ಸಿಂಗ್ ಅವರು, ತಮ್ಮ ಮೇಲೆ ಮಾಡಲಾಗುತ್ತಿರುವ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ಪರೀಕ್ಷೆಗೆ ಒಳಗಾಗಲು ಒಪ್ಪಿದ್ದಾರೆ.

ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹಿಂದೇಟು ಹಾಕಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಸಿದ್ದರಿಂದ ಆ ನಂತರ ಅವರ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಲು ಸಿಂಗ್ ನಿರಾಕರಿಸಿದ್ದಾರೆ. ಇದು ಕಾಂಗ್ರೆಸ್ ಮತ್ತು ಕೆಲವು ಕೈಗಾರಿಕೋದ್ಯಮಿಗಳ ಪ್ರಚೋದನೆಯಿಂದ ನಡೆಯುತ್ತಿರುವ ಪ್ರತಿಭಟನೆ ಎಂದು ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಕುಸ್ತಿ ಸಂಘದ ವಿಷಯದಲ್ಲಿ ಪ್ರಧಾನಮಂತ್ರಿಗಳ ಅಸಹಾಯಕತೆಯೇನು?

ಬಿಜೆಪಿ ಸಂಸದರೂ ಆಗಿರುವ ಸಿಂಗ್, ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದ ಸಭೆಯೊಂದರಲ್ಲಿ ಎಲ್ಲಾ ಜಾತಿ ಮತ್ತು ಧರ್ಮದ ಜನರು ತಮ್ಮನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಾಲ್ಕು ತಿಂಗಳ ನಂತರವೂ ನನ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅವರ ಬಳಿ ಯಾವುದೇ ಆಡಿಯೋ, ವಿಡಿಯೋ ಅಥವಾ ಇತರ ಯಾವುದೇ ರೆಕಾರ್ಡಿಂಗ್ ಇಲ್ಲ ಎಂದು ಅವರು ಹೇಳಿದ್ದಾರೆ. ”ನನ್ನ ವಿರುದ್ಧ ಸುಳ್ಳು ಕಥೆ ಕಟ್ಟಿ ಅದನ್ನೇ ಹೇಲುತ್ತಿದ್ದಾರೆ. ಇವತ್ತು ಇಡೀ ದೇಶವೇ ಸಿಟ್ಟಿಗೆದ್ದಿದೆ ಎಂಬುದನ್ನು ಅವರು ಅರಿಯಬೇಕು” ಎಂದು ಹೇಳಿದ್ದಾರೆ.

”ಮೇ 7 ರಂದು, ಸಿಂಗ್ ತನ್ನ ವಿರುದ್ಧದ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದರು. ನಾನು ಇನ್ನೂ ನನ್ನ ಮಾತುಗಳಿಗೆ ಬದ್ಧನಾಗಿರುತ್ತೇನೆ ಮತ್ತು ಈಗಲೂ ದೇಶವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದರು.

ಹಲವಾರು ಅಥ್ಲೀಟ್‌ಗಳು ಹಾಗೂ ರೈತ ಸಂಘಟನೆಗಳು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿವೆ. ಪ್ರತಿಭಟನೆ ಪ್ರಾರಂಭವಾದ ನಂತರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಲೈಂಗಿಕ ಕಿರುಕುಳ ತಡೆ ಕಾಯಿದೆ, 2013ರ ಅಗತ್ಯತೆಗಳನ್ನು ಅನುಸರಿಸಲು ವಿಫಲವಾದ ಕಾರಣಕ್ಕಾಗಿ ರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳು ಮತ್ತು ಕೇಂದ್ರ ಕ್ರೀಡಾ ಸಚಿವಾಲಯ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ನೋಟಿಸ್‌ಗಳನ್ನು ನೀಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...