Homeಮುಖಪುಟ'ಈಗ ಕ್ರಮ ಕೈಗೊಳ್ಳುತ್ತೀರಾ?': ಅದಾನಿ ಸೋದರಳಿಯನ ವಿರುದ್ಧದ 'ಇನ್‌ಸೈಡರ್ ಟ್ರೇಡಿಂಗ್' ಆರೋಪದ ಕುರಿತು ಸೆಬಿಗೆ ಕಾಂಗ್ರೆಸ್...

‘ಈಗ ಕ್ರಮ ಕೈಗೊಳ್ಳುತ್ತೀರಾ?’: ಅದಾನಿ ಸೋದರಳಿಯನ ವಿರುದ್ಧದ ‘ಇನ್‌ಸೈಡರ್ ಟ್ರೇಡಿಂಗ್’ ಆರೋಪದ ಕುರಿತು ಸೆಬಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಆಂತರಿಕ ದತ್ತಾಂಶ ಹಂಚಿಕೊಂಡ ಆರೋಪ ಹೊತ್ತಿರುವ ಗೌತಮ್ ಅದಾನಿ ಅವರ ಸೋದರಳಿಯ ಪ್ರಣವ್ ಅದಾನಿ ವಿರುದ್ಧ ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮೊಕದ್ದಮೆ ಹೂಡುತ್ತದೆಯೇ? ಎಂದು ಕಾಂಗ್ರೆಸ್ ಶನಿವಾರ (ಮೇ.3) ಪ್ರಶ್ನಿಸಿದೆ.

ಅದಾನಿಯವರ 24 ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆಯ ತನಿಖೆಯನ್ನು ಸೆಬಿ ಪೂರ್ಣಗೊಳಿಸಲು ಭಾರತದ ಜನರು ಇನ್ನೂ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಅದಾನಿ ಸಮೂಹದ ಹಲವು ಕಂಪನಿಗಳಿಗೆ ನಿರ್ದೇಶಕರಾಗಿರುವ ಗೌತಮ್ ಅದಾನಿಯವರ ಸೋದರಳಿಯ ಇನ್ನು ಪ್ರಕಟಗೊಳ್ಳದ ಗೌಪ್ಯ ಹಣಕಾಸಿನ ಮಾಹಿತಿಯನ್ನು ತಮ್ಮ ಭಾವನೊಂದಿಗೆ ಹಂಚಿಕೊಳ್ಳುವ ಮೂಲಕ ಇನ್‌ಸೈಡರ್‌ ಟ್ರೇಡಿಂಗ್ (ಆಂತರಿಕ ವ್ಯವಹಾರ) ಮಾಡಿದ್ದಾರೆ. ಇದರ ಪರಿಣಾಮವಾಗಿ 90 ಲಕ್ಷ ರೂಪಾಯಿಗಳಷ್ಟು ‘ಅಕ್ರಮ ಲಾಭ ಪಡೆದಿದ್ದಾರೆ” ಎಂದು ಜೈರಾಮ್ ರಮೇಶ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಸೆಬಿ ಮತ್ತೊಮ್ಮೆ ಪ್ರಧಾನಿಯವರ ನೆಚ್ಚಿನ ವ್ಯವಹಾರ ಸಮೂಹವನ್ನು ಸುಮ್ಮನೆ ಬಿಟ್ಟು ಬಿಡುತ್ತಾ? ಇಲ್ಲ ಕಾನೂನಿನ ಮೂಲಕ ಪೂರ್ಣ ಪ್ರಮಾಣದಲ್ಲಿ ಪ್ರಕರಣವನ್ನು ವಿಚಾರಣೆಗೆ ಒಳಪಡಿಸುತ್ತಾ?” ಎಂದು ಪ್ರಣವ್ ಆದಾನಿ ಆಂತರಿಕ ಡೇಟಾವನ್ನು ಹಂಚಿಕೊಂಡಿದ್ದಾರೆ ಎಂಬ ವರದಿಗಳನ್ನು ಹಂಚಿಕೊಳ್ಳುವಾಗ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಅದಾನಿಯವರ 24 ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆಯ ತನಿಖೆಯನ್ನು ಸೆಬಿ ಪೂರ್ಣಗೊಳಿಸಲು ಭಾರತದ ಜನರು ಇನ್ನೂ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಹಿಂಡೆನ್‌ಬರ್ಗ್‌ ವರದಿ ಅಕ್ರಮದ ಬಗ್ಗೆ ಬಹಿರಂಗಪಡಿಸಿದ ನಂತರ ಸೆಬಿಗೆ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶಿಸಿ 26 ತಿಂಗಳುಗಳಾಗಿವೆ” ಎಂದಿದ್ದಾರೆ.

2020 ಮತ್ತು 2024ರ ನಡುವೆ ಗೌತಮ್ ಅದಾನಿ ಮತ್ತು ಅವರ ಏಳು ಮಂದಿ ಆಪ್ತರು ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 2,000 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂಬುದಕ್ಕೆ ಪುರಾವೆಗಳು ದೊರೆತ ನಂತರ, ಸೆಬಿಯ ಅಮೆರಿಕದ ಪ್ರತಿರೂಪವಾದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್‌ಇಸಿ) ಹೆಚ್ಚು ಕಾರ್ಯಪ್ರವೃತ್ತವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2025ರ ಏಪ್ರಿಲ್ 25 ರ ಎಸ್‌ಇಸಿ ನೀಡಿದ ಅಪ್ಡೇಟ್ ಪ್ರಕಾರ, ಅದಾನಿ ವಿರುದ್ದ ಕಾನೂನು ಸಮನ್ಸ್ ಜಾರಿ ಮಾಡುವಲ್ಲಿ ಸಹಾಯ ಮಾಡುವಂತೆ ಎಸ್‌ಇಸಿ ಪದೇ ಪದೇ ವಿನಂತಿಸಿದರೂ, ಮೋದಿ ಸರ್ಕಾರ ನಿರಾಕರಿಸಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಶ್ರೀಲಂಕಾ ಕರಾವಳಿ ಕಾವಲು ಪಡೆ ಬಂಧಿಸಿದ್ದ ತಮಿಳುನಾಡಿನ 25 ಮೀನುಗಾರರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...