Homeಮುಖಪುಟ'ಈಗ ಕ್ರಮ ಕೈಗೊಳ್ಳುತ್ತೀರಾ?': ಅದಾನಿ ಸೋದರಳಿಯನ ವಿರುದ್ಧದ 'ಇನ್‌ಸೈಡರ್ ಟ್ರೇಡಿಂಗ್' ಆರೋಪದ ಕುರಿತು ಸೆಬಿಗೆ ಕಾಂಗ್ರೆಸ್...

‘ಈಗ ಕ್ರಮ ಕೈಗೊಳ್ಳುತ್ತೀರಾ?’: ಅದಾನಿ ಸೋದರಳಿಯನ ವಿರುದ್ಧದ ‘ಇನ್‌ಸೈಡರ್ ಟ್ರೇಡಿಂಗ್’ ಆರೋಪದ ಕುರಿತು ಸೆಬಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಆಂತರಿಕ ದತ್ತಾಂಶ ಹಂಚಿಕೊಂಡ ಆರೋಪ ಹೊತ್ತಿರುವ ಗೌತಮ್ ಅದಾನಿ ಅವರ ಸೋದರಳಿಯ ಪ್ರಣವ್ ಅದಾನಿ ವಿರುದ್ಧ ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮೊಕದ್ದಮೆ ಹೂಡುತ್ತದೆಯೇ? ಎಂದು ಕಾಂಗ್ರೆಸ್ ಶನಿವಾರ (ಮೇ.3) ಪ್ರಶ್ನಿಸಿದೆ.

ಅದಾನಿಯವರ 24 ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆಯ ತನಿಖೆಯನ್ನು ಸೆಬಿ ಪೂರ್ಣಗೊಳಿಸಲು ಭಾರತದ ಜನರು ಇನ್ನೂ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಅದಾನಿ ಸಮೂಹದ ಹಲವು ಕಂಪನಿಗಳಿಗೆ ನಿರ್ದೇಶಕರಾಗಿರುವ ಗೌತಮ್ ಅದಾನಿಯವರ ಸೋದರಳಿಯ ಇನ್ನು ಪ್ರಕಟಗೊಳ್ಳದ ಗೌಪ್ಯ ಹಣಕಾಸಿನ ಮಾಹಿತಿಯನ್ನು ತಮ್ಮ ಭಾವನೊಂದಿಗೆ ಹಂಚಿಕೊಳ್ಳುವ ಮೂಲಕ ಇನ್‌ಸೈಡರ್‌ ಟ್ರೇಡಿಂಗ್ (ಆಂತರಿಕ ವ್ಯವಹಾರ) ಮಾಡಿದ್ದಾರೆ. ಇದರ ಪರಿಣಾಮವಾಗಿ 90 ಲಕ್ಷ ರೂಪಾಯಿಗಳಷ್ಟು ‘ಅಕ್ರಮ ಲಾಭ ಪಡೆದಿದ್ದಾರೆ” ಎಂದು ಜೈರಾಮ್ ರಮೇಶ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಸೆಬಿ ಮತ್ತೊಮ್ಮೆ ಪ್ರಧಾನಿಯವರ ನೆಚ್ಚಿನ ವ್ಯವಹಾರ ಸಮೂಹವನ್ನು ಸುಮ್ಮನೆ ಬಿಟ್ಟು ಬಿಡುತ್ತಾ? ಇಲ್ಲ ಕಾನೂನಿನ ಮೂಲಕ ಪೂರ್ಣ ಪ್ರಮಾಣದಲ್ಲಿ ಪ್ರಕರಣವನ್ನು ವಿಚಾರಣೆಗೆ ಒಳಪಡಿಸುತ್ತಾ?” ಎಂದು ಪ್ರಣವ್ ಆದಾನಿ ಆಂತರಿಕ ಡೇಟಾವನ್ನು ಹಂಚಿಕೊಂಡಿದ್ದಾರೆ ಎಂಬ ವರದಿಗಳನ್ನು ಹಂಚಿಕೊಳ್ಳುವಾಗ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಅದಾನಿಯವರ 24 ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆಯ ತನಿಖೆಯನ್ನು ಸೆಬಿ ಪೂರ್ಣಗೊಳಿಸಲು ಭಾರತದ ಜನರು ಇನ್ನೂ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಹಿಂಡೆನ್‌ಬರ್ಗ್‌ ವರದಿ ಅಕ್ರಮದ ಬಗ್ಗೆ ಬಹಿರಂಗಪಡಿಸಿದ ನಂತರ ಸೆಬಿಗೆ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶಿಸಿ 26 ತಿಂಗಳುಗಳಾಗಿವೆ” ಎಂದಿದ್ದಾರೆ.

2020 ಮತ್ತು 2024ರ ನಡುವೆ ಗೌತಮ್ ಅದಾನಿ ಮತ್ತು ಅವರ ಏಳು ಮಂದಿ ಆಪ್ತರು ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 2,000 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂಬುದಕ್ಕೆ ಪುರಾವೆಗಳು ದೊರೆತ ನಂತರ, ಸೆಬಿಯ ಅಮೆರಿಕದ ಪ್ರತಿರೂಪವಾದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್‌ಇಸಿ) ಹೆಚ್ಚು ಕಾರ್ಯಪ್ರವೃತ್ತವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2025ರ ಏಪ್ರಿಲ್ 25 ರ ಎಸ್‌ಇಸಿ ನೀಡಿದ ಅಪ್ಡೇಟ್ ಪ್ರಕಾರ, ಅದಾನಿ ವಿರುದ್ದ ಕಾನೂನು ಸಮನ್ಸ್ ಜಾರಿ ಮಾಡುವಲ್ಲಿ ಸಹಾಯ ಮಾಡುವಂತೆ ಎಸ್‌ಇಸಿ ಪದೇ ಪದೇ ವಿನಂತಿಸಿದರೂ, ಮೋದಿ ಸರ್ಕಾರ ನಿರಾಕರಿಸಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಶ್ರೀಲಂಕಾ ಕರಾವಳಿ ಕಾವಲು ಪಡೆ ಬಂಧಿಸಿದ್ದ ತಮಿಳುನಾಡಿನ 25 ಮೀನುಗಾರರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...