Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...