Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...