Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...