Homeಕರ್ನಾಟಕದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರವಾಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್‌‌ಗೆ ಇಂದು ಹೋರಾಟಗಾರರು ಕಾಲಿಟ್ಟಿದ್ದಾರೆ. ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ದಲಿತರು ಒಳಮೀಸಲಾತಿ ಜಾರಿಗಾಗಿ ಘೋಷಣೆ ಮೊಳಗಿಸಿದ್ದಾರೆ.

ಮೂವತ್ತು ವರ್ಷಗಳ ಹೋರಾಟಕ್ಕೆ ಯಾವುದೇ ಪಕ್ಷಗಳು ಸ್ಪಂದಿಸಲಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳೆಲ್ಲವೂ ಭರವಸೆಯನ್ನು ನೀಡಿ ವಂಚಿಸಿದ್ದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಒಳಮೀಸಲಾತಿ ಜಾರಿಗೊಳಿಸುವವರೆಗೂ ವಿರಮಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೆ ಜೈಭೀಮ್‌, ಜೈ ದಲಿತ ಎಂಬ ಘೋಷಣೆಗಳನ್ನು ಕೂಗಿದ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪ್ರತಿನಿಧಿಯಾಗಿ ವಸತಿ ಸಚಿವ ವಿ.ಸೋಮಣ್ಣ ಆಗಮಿಸುವಾಗಿ ಹೇಳಿದ ಕೂಡಲೇ ನೆರೆದಿದ್ದ ಯುವಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಸೇರಿದ್ದರೂ ಮುಖ್ಯಮಂತ್ರಿಯವರು ಬರುತ್ತಿಲ್ಲ ಎಂದು ಧಿಕ್ಕಾರ ಕೂಗಿದರು.

ಜೋರು ಮಳೆ ಆರಂಭವಾಗುವ ಮುನ್ನ ಸಚಿವ ವಿ.ಸೋಮಣ್ಣ ಅವರು ಫ್ರೀಡಂ ಪಾರ್ಕಿಗೆ ಬಂದರು. ಸಂಚಾರಿ ವೇದಿಕೆಯನ್ನು ಏರಿ ಸೋಮಣ್ಣ ಮಾತನಾಡಲಾರಂಭಿಸಿದರು. ಆದರೆ ಸೋಮಣ್ಣ ಮಾತು ಶುರು ಮಾಡಿದ ಕೂಡಲೇ ಗದ್ದಲು ಉಂಟಾಯಿತು. ಸೋಮಣ್ಣ ವೇದಿಕೆಯಿಂದ ಕೆಳಗಿಳಿಯಬೇಕು, ಮುಖ್ಯಮಂತ್ರಿ ಬರಬೇಕು ಎಂದು ಧಿಕ್ಕಾರ ಕೂಗಿದರು. ನೀಲಿ ಪತಾಕೆಗಳು ಹಾರಾಡತೊಡಗಿದವು.

“ಚಾಮರಾಜನಗರದಲ್ಲಿ ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣನವರನ್ನು ನಮ್ಮೊಂದಿಗೆ ಮಾತನಾಡಲು ಕಳಿಸಲಾಗಿದೆ. ಇದೆಂಥಾ ಅಸಡ್ಡೆ. ಚಳಿ, ಮಳೆಯೆನ್ನದೆ ಹೋರಾಟ ಮಾಡುತ್ತಿದ್ದೇವೆ, ಮೂವತ್ತು ವರ್ಷಗಳಿಂದಲೂ ನಾವು ಹೋರಾಟ ನಡೆಸುತ್ತಲೇ ಇದ್ದೇವೆ. ಮುಖ್ಯಮಂತ್ರಿಯವರು ಬರಬೇಕೆಂಬ ಸಾಮಾನ್ಯ ಪ್ರಜ್ಞೆ ಇಲ್ಲವೇ? ಸೋಮಣ್ಣ ಅವರು ವಾಪಸ್ ತೆರಳಿ ಮುಖ್ಯಮಂತ್ರಿಯವರನ್ನು ಸ್ಥಳಕ್ಕೆ ಕಳುಹಿಸಬೇಕು” ಎಂದು ಹೋರಾಟಗಾರರು ಆಗ್ರಹಿಸಿದರು. “ಡೌನ್‌ ಡೌನ್‌ ಸೋಮಣ್ಣ” ಎಂಬ ಘೋಷಣೆಗಳನ್ನು ಜನರು ಕೂಗಿದರು.

ಬಂದ ದಾರಿಗೆ ಸುಂಕವಿಲ್ಲವೆಂಬಂತೆ, ಧಿಕ್ಕಾರಗಳಿಂದ ಮುಜುಗರಗೊಂಡ ಸೋಮಣ್ಣ ಅವರು ಸಂಚಾರಿ ವೇದಿಕೆಯಿಂದ ಕೆಳಗಿಳಿದು ಕಾರು ಹತ್ತಿದರು. ಸೋಮಣ್ಣ ವಾಪಸ್ ಆದ ಬಳಿಕ ಮತ್ತೆ ಜೈ ಭೀಮ್‌ ಘೋಷಣೆಗಳು ಮೊಳಗಿದವು. “ಒಳಮೀಸಲಾತಿ ಜಾರಿಯಾಗಲೇಬೇಕು” ಎಂಬ ಆಗ್ರಹ ಮುಗಿಲುಮುಟ್ಟಿತು. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಬಿ.ಕೃಷ್ಣಪ್ಪ ಅವರ ಚಿತ್ರಗಳನ್ನೊಳಗೊಂಡ ನೀಲಿ ಬಾವುಟಗಳು ಹಾರಾಡತೊಡಗಿದವು. ಒಂದೇ ಸಮನೇ ಘೋಷಣೆಗಳು ಮೊಳಗಿದವು.

ಮೋಹನ್‌ ರಾಜ್ ಮಾತನಾಡಿ, “ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಎಲ್ಲರೂ ಒಳಮೀಸಲಾತಿ ವಿಚಾರದಲ್ಲಿ ವಂಚನೆ ಮಾಡಿದ್ದಾರೆ. ತುರ್ತಾಗಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು. ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆದ ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಬಸವರಾಜ ಬೊಮ್ಮಾಯಿಯವರು ಬಂದು ನಮ್ಮ ಹಕ್ಕೋತ್ತಾಯಗಳನ್ನು ಆಲಿಸುವವರೆಗೂ ನಾವು ಮನೆಗಳಿಗೆ ಹೋಗಲ್ಲ” ಎಂದು ಗುಡುಗಿದರು.

ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಮುಖ್ಯಮಂತ್ರಿ ಇಲ್ಲಿ ಬಂದು ಸಮಾಧಾನ ಮಾಡೋದಲ್ಲ. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...