Homeಸಿನಿಮಾಕ್ರೀಡೆವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

- Advertisement -
- Advertisement -

ವಿಶ್ವ ಟೆನಿಸ್ ಅಭಿಮಾನಿಗಳು ಕಳೆದ ಎರಡು ವರ್ಷಗಳಿಂದ ಕಾತರದಿಂದ ಕಾಯುತ್ತಿದ್ದ ಪ್ರತಿಷ್ಠಿತ ಇಂಗ್ಲೆಂಡ್-ವಿಂಬಲ್ಡನ್ ಟೆನಿಸ್ ಟೂರ್ನಿ ಕೊನೆಗೂ ಸೋಮವಾರದಿಂದ ಭರ್ಜರಿಯಾಗಿ ಆರಂಭವಾಗಿದೆ. ಆಸ್ಟ್ರೇಲಿಯಾ ಓಪನ್, ಫ್ರೆಂಚ್ ಓಪನ್, ಯುಎಸ್ ಓಪನ್ ಸೇರಿದಂತೆ ಟೆನಿಸ್ ಜಗತ್ತಿನಲ್ಲಿ ನಾಲ್ಕು ಜನಪ್ರಿಯ ಗ್ರ್ಯಾಂಡ್ ಸ್ಲಾಂ ಟೂರ್ನಿಗಳು ಇದ್ದಾಗ್ಯೂ ವಿಂಬಲ್ಡನ್‌ಗೇ ಅತ್ಯಂತ ಹೆಚ್ಚು ಪ್ರಾಶಸ್ತ್ಯ ಎಂದರೆ ತಪ್ಪಾಗಲಾರದು. 2019ರಲ್ಲಿ ನಡೆದ ಕೊನೆಯ ವಿಂಬಲ್ಡನ್ ಟೂರ್ನಿಯಲ್ಲಿ ಸರ್ಬಿಯಾದ ನಂಬರ್.1 ಆಟಗಾರ ನೊವಾಕ್ ಜಾಕೋವಿಚ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರೆ, ಮಹಿಳಾ ವಿಭಾಗದಲ್ಲಿ ಸೈಮನ್ ಹೆಲಿಪ್ ಮೊದಲ ಬಾರಿಗೆ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟಿದ್ದರು.

ಆದರೆ, ಕಳೆದ ವರ್ಷ 2020ರಲ್ಲಿ ಮಾರಕ ಕೊರೊನಾ ವೈರಸ್ ಇಡೀ ವಿಶ್ವವನ್ನು ತಲ್ಲಣಕ್ಕೆ ದೂಡಿತ್ತು. ಪರಿಣಾಮ ಎಲ್ಲಾ ಕ್ರೀಡಾ ಕ್ಷೇತ್ರಗಳೂ ನಿಂತ ನೀರಾಗಿದ್ದವು. ಟೆನಿಸ್ ಜಗತ್ತಿನಲ್ಲೂ ಸಹ ಎಲ್ಲಾ ಪ್ರಮುಖ ಟೂರ್ನಿಗಳನ್ನು ಮುಂದೂಡಲಾಗಿತ್ತು. ಇದಕ್ಕೂ ಮುನ್ನ ಈ ರೀತಿ ಆಗಿದ್ದು ಯುದ್ಧದ ಸಮಯದಲ್ಲಿ! 1915-18ರ ಅವಧಿಯಲ್ಲಿ ನಾಲ್ಕು ವರ್ಷ ಮೊದಲ ಮಹಾಯುದ್ಧದ ಕಾರಣಕ್ಕೆ ಈ ಟೂರ್ನಿಯನ್ನು ನಡೆಸಿರಲಿಲ್ಲ. ಅದರ ನಂತರ 2020ರಲ್ಲಿಯೇ ಕೊರೊನಾದಿಂದ ವಿಂಬಲ್ಡನ್‌ಗೆ ಬ್ರೇಕ್ ಬಿದ್ದದ್ದು. ಆದರೆ, ಈಗ ಆತಂಕಗಳು ನಿವಾರಣೆಯಾಗುತ್ತಿದ್ದು, ಟೂರ್ನಿ ಆರಂಭವಾಗಿದೆ.

ವಿಂಬಲ್ಡನ್ ಆರಂಭ ಮತ್ತು ಇತಿಹಾಸ

ಆಲ್ ಇಂಗ್ಲೆಂಡ್ ಲಾನ್ ಟೆನಿಸ್ ಮತ್ತು ಕ್ರೋಕೆ ಕ್ಲಬ್ ಎರಡೂ ಜಂಟಿಯಾಗಿ 23 ಜುಲೈ 1868ರಂದು ಖಾಸಗಿ ಕ್ಲಬ್ ಒಂದನ್ನು ಸ್ಥಾಪಿಸಿದವು. ಇದನ್ನು ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಕ್ಲಬ್’ ಎಂದು ಕರೆಯಲಾಯಿತು. ಈ ಕ್ಲಬ್‌ನ ಟೆನಿಸ್ ಮೈದಾನ ವಿಂಬಲ್ಡನ್‌ನ ವರ್ಪಲ್ ರಸ್ತೆಯ ನರ್ಸರಿ ರಸ್ತೆಯಲ್ಲಿತ್ತು.

PC : Wikipedia, (ಸ್ಪೆನ್ಸರ್ ಗೋರ್)

1876ರಲ್ಲಿ ಮೇಜರ್ ವಾಲ್ಟರ್ ಕ್ಲೋಪ್ಟನ್ ವಿಂಗ್ಫೀಲ್ಡ್ ಮೊದಲ ಬಾರಿಗೆ ಹೊರಾಂಗಣ ಟೆನಿಸ್ ಅಂಕಣವನ್ನು ನಿರ್ಮಿಸಿದರು. 1877ರ ಜುಲೈ ತಿಂಗಳಲ್ಲಿ ಈ ಕ್ಲಬ್‌ಗೆ ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಅಂಡ್ ಲಾನ್ ಟೆನಿಸ್ ಕ್ಲಬ್’ ಎಂದು ಮರುನಾಮಕರಣ ಮಾಡಲಾಯಿತು ಮತ್ತು ಸಾಂಪ್ರದಾಯಿಕ ಟೆನಿಸ್‌ನ ಮೊದಲ ಅಂತಾರಾಷ್ಟ್ರೀಯ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಗೆ ಚಾಲನೆ ನೀಡಲಾಯಿತು.

1877ರ ಉದ್ಘಾಟನಾ ವಿಂಬಲ್ಡನ್ ಚಾಂಪಿಯನ್‌ಶಿಪ್ 9 ಜುಲೈ, 1877ರಂದು ಪ್ರಾರಂಭವಾಯಿತು. ಮೊದಲ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಮಾತ್ರ ಆಯೋ ಜಿಸಲಾಗಿತ್ತು. ಆ ವರ್ಷದಲ್ಲಿ 22 ಜನ ಭಾಗವಹಿಸಿದ್ದರು. ತದನಂತರದ ಕಾಲಘಟ್ಟಗಳಲ್ಲಿ ಮಹಿಳಾ ಸಿಂಗಲ್ಸ್, ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ಟೂರ್ನಿಗಳನ್ನೂ ಸಹ ಆರಂಭಿ ಸಲಾಯಿತು. ಅಂದಿನಿಂದ ಇಂದಿನವರೆಗೆ ವಿಂಬಲ್ಡನ್ ಟೂರ್ನಿ ಪ್ರತಿ ವರ್ಷ ಜೂನ್ ಕೊನೆಯ ಅಥವಾ ಜುಲೈ ಮೊದಲ ವಾರದಲ್ಲಿ ಪ್ರಾರಂಭಿಸುವುದು ವಾಡಿಕೆ.

ಮೊದಲ ವಿಂಬಲ್ಡನ್ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಸ್ಪೆನ್ಸರ್ ಗೋರ್ ಎಂಬವರು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಈತ ಕ್ರಿಕೆಟ್ ಆಟಗಾರನೂ ಆಗಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸರ್ರೆ ತಂಡವನ್ನೂ ಪ್ರತಿನಿಧಿಸಿದ್ದರು ಎಂಬುದು ಉಲ್ಲೇಖಾರ್ಹ. ಆನಂತರ ಹಲವು ಆಟಗಾರರು ಟಿನಿಸ್ ಲೋಕವನ್ನು ಆಳಿದ್ದಾರೆ. ಆದರೆ, ಸ್ಪೆಫಿ ಗ್ರಾಫ್ ಅವರನ್ನು ಟೆನಿಸ್ ದಂತಕಥೆ ಎಂದು ಬಣ್ಣಿಸಲಾಗುತ್ತಿದೆ. 8 ಬಾರಿ ವಿಂಬಲ್ಡನ್ ಟೆನಿಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಸ್ವಿಜಲೆಂಡ್‌ನ ರೋಜರ್ ಫೆಡರರ್ ಅತಿಹೆಚ್ಚು ಬಾರಿ ಈ ಪ್ರಶಸ್ತಿಯನ್ನು ಗೆದ್ದ ಆಟಗಾರ ಎಂಬ ಶ್ರೇಯಕ್ಕೆ ಪಾತ್ರವಾಗಿದ್ದಾರೆ.

ವಿಶೇಷವೆಂದರೆ ಈ ವರ್ಷವೂ ಟೆನಿಸ್ ದಂತಕಥೆ ರೋಜರ್ ಫೆಡರರ್ ಕಣದಲ್ಲಿದ್ದು, ಸರ್ಬಿಯಾದ ರನ್ನಿಂಗ್ ಚಾಂಪಿಯನ್ ನೊವಾಕ್ ಜಾಕೋವಿಚ್ ಮತ್ತು ರಫೇಲ್ ನಡಾಲ್ ಕಠಿಣ ಪೈಪೋಟಿ ನೀಡಲಿದ್ದಾರೆ ಎಂದು ಟೆನಿಸ್ ಅಭಿಮಾನಿಗಳು ಕಾತುರದಿಂದ ಎದುರುನೊಡುತ್ತಿದ್ದಾರೆ.

ಮಹಿಳಾ ಸಿಂಗಲ್ಸ್‌ನಲ್ಲಿ ದಂತೆಕಥೆಯಾಗಿರುವ ಸಹೋದರಿಯರು ಸೆರೆನಾ ವಿಲಿಯಮ್ಸ್-ವೀನಸ್ ವಿಲಿಯಮ್ಸ್, ಸೈಮನ್ ಹೆಲಿಪ್, ನದಿಯಾ ಪೊಡರೊಸ್ಕಾ, ಅಂಜೆಲಿಕಾ ಕೆರ್ಬರ್, ಎಲೀಸ್ ಮಾರ್ಟೆನ್ಸ್ ಸೇರಿದಂತೆ ಅನೇಕ ಪ್ರಮುಖ ಆಟಗಾರ್ತಿಯರಿದ್ದಾರೆ. ಪ್ರಶಸ್ತಿ ಯಾರ ಮುಡಿಗೇರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಮಹಾಯುದ್ಧದ ಕಾಲದಲ್ಲಿ ಈ ಅಂಗಳದಲ್ಲೂ ಬಿದ್ದಿತ್ತು ಬಾಂಬ್

ಮೊದಲ ಮಹಾಯುದ್ಧದ ಕಾಲದಲ್ಲಿ 1915 ರಿಂದ 1918ರ ವರೆಗೆ ಮೊದಲ ಬಾರಿಗೆ ವಿಂಬಲ್ಡನ್ ಟೂರ್ನಿಯನ್ನು ಆಯೋಜಿಸಲಾಗಿರಲಿಲ್ಲ. 1916ರಲ್ಲಿ ಇಲ್ಲಿನ ಟೆನಿಸ್ ಅಂಗಳದ ಮೇಲೆ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ್ದವು. ಪರಿಣಾಮ ನಂತರದ ದಿನಗಳಲ್ಲಿ ಸೆಂಟರ್ ಕೋರ್ಟ್ ಅನ್ನು ಮರುನಿರ್ಮಾಣ ಮಾಡಲಾಯಿತು.

ರೋಜರ್ ಫೆಡರರ್ ಹೆಸರಲ್ಲಿದೆ ವಿಶಿಷ್ಟ ದಾಖಲೆ

PC : Fox Sports, (ರೋಜರ್ ಫೆಡರರ್)

ವಿಂಬಲ್ಡನ್ ಗೆಲುವು ಪ್ರತಿಯೊಬ್ಬ ಟೆನಿಸ್ ಆಟಗಾರನಿಗೆ ಒಂದು ಮಹತ್ವದ ಮೈಲಿಗಲ್ಲು. ಆಟಗಾರರು ಒಮ್ಮೆ ವಿಂಬಲ್ಡನ್ ಗೆದ್ದರೆ ಅದು ಅವರ ಜೀವನ ಶೇಷ್ಠ ಸಾಧನೆ ಎಂದು ಪರಿಗಣಿಸಲಾಗುತ್ತದೆ. ಆದರೆ, ಸ್ವಿಜರ್ಲೆಂಡ್ ಮೂಲದ ರೋಜರ್ ಫೆಡರರ್ ಒಟ್ಟು 8 ಸಲ ವಿಂಬಲ್ಡನ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಅದರಲ್ಲೂ 2003ರಿಂದ 2007ರ ವರೆಗೆ ಸತತ 5 ಬಾರಿ ಈ ಟ್ರೋಫಿಯನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದರು. ಈ ಹಿಂದೆ ವಿಲಿಯಂ ರೆನ್ಶಾ ಎಂಬವರು 1981ರಿಂದ 1989ರ ಅವಧಿಯಲ್ಲಿ 7 ಬಾರಿ ಈ ಟ್ರೋಫಿಯನ್ನು ಗೆದ್ದದ್ದು ದಾಖಲೆಯಾಗಿ ಉಳಿದಿತ್ತು.

ವಿಂಬಲ್ಡನ್‌ನಲ್ಲಿ ಭಾರತದ ಸಾಧನೆ

ಕ್ರಿಕೆಟ್‌ಗೆ ಟೆನಿಸ್‌ಗಿಂತಲೂ ಅಥವಾ ಬೇರೆ ಯಾವುದೇ ಆಟಕ್ಕಿಂತಲೂ ಹೆಚ್ಚು ಪ್ರಾಶಸ್ತ್ಯ ನೀಡುವ ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ದಾಖಲೆಗಳು ಸಾಕಷ್ಟು ಕಡಿಮೆ. ಆದರಲ್ಲೂ ವಿಂಬಲ್ಡನ್‌ನಂತಹ ಗ್ರ್ಯಾಂಡ್‌ಸ್ಲ್ಯಾಮ್ ಟೂರ್ನಿಗಳಲ್ಲಿ ಭಾರತದ ಸಾಧನೆ ಹೇಳಿಕೊಳ್ಳುವ ಮಟ್ಟದ್ದಲ್ಲ. ಆದರೂ, 1960 ಮತ್ತು 1961ರಲ್ಲಿ ಸತತ ಎರಡು ಬಾರಿ ಭಾರತದ ಟೆನಿಸ್ ಆಟಗಾರ ರಾಮನಾಥನ್ ಕೃಷ್ಣನ್ ಎಂಬವರು ಸೆಮಿಫೈನಲ್‌ಗೆ ತಲುಪಿ ಸಾಧನೆ ಮಾಡಿದ್ದರು. ಆದರೆ, ಟ್ರೋಫಿಗೆ ಮುತ್ತಿಡುವುದು ಸಾಧ್ಯವಾಗಿರಲಿಲ್ಲ.

PC : The Bridge, (ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್)

1999ರಲ್ಲಿ ಭಾರತದ ಖ್ಯಾತ ಟೆನಿಸ್ ಜೋಡಿ ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್ ಮೊದಲ ಬಾರಿಗೆ ಪುರುಷರ ಡಬಲ್ಸ್‌ನಲ್ಲಿ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಜೋಡಿ ಅದೇ ವರ್ಷ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಯಲ್ಲೂ ಜಯ ಗಳಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿತ್ತು. ಆ ನಂತರ ಈ ಜೋಡಿ 2017ರವರೆಗೆ 18 ಬಾರಿ ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದದ್ದು ಇಂದು ಇತಿಹಾಸ.

ಇನ್ನು ಮಹಿಳಾ ಟೆನಿಸ್‌ನಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಾನಿಯಾ ಮಿರ್ಜಾ ಸಹ 2015ರಲ್ಲಿ ಸ್ವಿಜರ್ಲೆಂಡ್‌ನ ಮಾರ್ಟಿನಾ ಹಿಂಗಿಸ್ ಜೊತೆಗೂಡಿ ರಷ್ಯಾದ ಎಲೆನಾ ವೆಸ್ನೇನಾ ಮತ್ತು ಎಕಟೆರೀನಾ ಮಕರೋವಾ ಜೋಡಿಯನ್ನು ಸೋಲಿಸುವ ಮೂಲಕ ಮಹಿಳಾ ಡಬಲ್ಸ್‌ನಲ್ಲಿ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಆ ನಂತರದ ದಿನಗಳಿಂದ ಈವರೆಗೆ ಭಾರತ ಮಹಿಳಾ ಟೆನಿಸ್ ಕ್ರೀಡೆಯಲ್ಲಿ ಮತ್ತೊಂದು ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯ ಬರ ಎದುರಿಸುತ್ತಿದೆ.

ಈ ವರ್ಷ ವಿಂಬಲ್ಡನ್ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಭಾರತದ ಪರ ಕಣಕ್ಕಿಳಿದಿದ್ದರು. ಆದರೆ ಅರ್ಹತಾ ಸುತ್ತಿನಲ್ಲೇ ಅವರು ಆಸ್ಟ್ರೇಲಿಯಾದ ಮಾರ್ಕ್ ಪೋಮನ್ಸ್ ವಿರುದ್ಧ ಸೋಲುವ ಮೂಲಕ ವಿಂಬಲ್ಡನ್‌ನಲ್ಲಿ ಭಾರತದ ಪ್ರಾತಿನಿಧ್ಯವೇ ಇಲ್ಲದಂತಾಗಿದೆ!


ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...