Homeಸಿನಿಮಾಕ್ರೀಡೆವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

- Advertisement -
- Advertisement -

ವಿಶ್ವ ಟೆನಿಸ್ ಅಭಿಮಾನಿಗಳು ಕಳೆದ ಎರಡು ವರ್ಷಗಳಿಂದ ಕಾತರದಿಂದ ಕಾಯುತ್ತಿದ್ದ ಪ್ರತಿಷ್ಠಿತ ಇಂಗ್ಲೆಂಡ್-ವಿಂಬಲ್ಡನ್ ಟೆನಿಸ್ ಟೂರ್ನಿ ಕೊನೆಗೂ ಸೋಮವಾರದಿಂದ ಭರ್ಜರಿಯಾಗಿ ಆರಂಭವಾಗಿದೆ. ಆಸ್ಟ್ರೇಲಿಯಾ ಓಪನ್, ಫ್ರೆಂಚ್ ಓಪನ್, ಯುಎಸ್ ಓಪನ್ ಸೇರಿದಂತೆ ಟೆನಿಸ್ ಜಗತ್ತಿನಲ್ಲಿ ನಾಲ್ಕು ಜನಪ್ರಿಯ ಗ್ರ್ಯಾಂಡ್ ಸ್ಲಾಂ ಟೂರ್ನಿಗಳು ಇದ್ದಾಗ್ಯೂ ವಿಂಬಲ್ಡನ್‌ಗೇ ಅತ್ಯಂತ ಹೆಚ್ಚು ಪ್ರಾಶಸ್ತ್ಯ ಎಂದರೆ ತಪ್ಪಾಗಲಾರದು. 2019ರಲ್ಲಿ ನಡೆದ ಕೊನೆಯ ವಿಂಬಲ್ಡನ್ ಟೂರ್ನಿಯಲ್ಲಿ ಸರ್ಬಿಯಾದ ನಂಬರ್.1 ಆಟಗಾರ ನೊವಾಕ್ ಜಾಕೋವಿಚ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರೆ, ಮಹಿಳಾ ವಿಭಾಗದಲ್ಲಿ ಸೈಮನ್ ಹೆಲಿಪ್ ಮೊದಲ ಬಾರಿಗೆ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟಿದ್ದರು.

ಆದರೆ, ಕಳೆದ ವರ್ಷ 2020ರಲ್ಲಿ ಮಾರಕ ಕೊರೊನಾ ವೈರಸ್ ಇಡೀ ವಿಶ್ವವನ್ನು ತಲ್ಲಣಕ್ಕೆ ದೂಡಿತ್ತು. ಪರಿಣಾಮ ಎಲ್ಲಾ ಕ್ರೀಡಾ ಕ್ಷೇತ್ರಗಳೂ ನಿಂತ ನೀರಾಗಿದ್ದವು. ಟೆನಿಸ್ ಜಗತ್ತಿನಲ್ಲೂ ಸಹ ಎಲ್ಲಾ ಪ್ರಮುಖ ಟೂರ್ನಿಗಳನ್ನು ಮುಂದೂಡಲಾಗಿತ್ತು. ಇದಕ್ಕೂ ಮುನ್ನ ಈ ರೀತಿ ಆಗಿದ್ದು ಯುದ್ಧದ ಸಮಯದಲ್ಲಿ! 1915-18ರ ಅವಧಿಯಲ್ಲಿ ನಾಲ್ಕು ವರ್ಷ ಮೊದಲ ಮಹಾಯುದ್ಧದ ಕಾರಣಕ್ಕೆ ಈ ಟೂರ್ನಿಯನ್ನು ನಡೆಸಿರಲಿಲ್ಲ. ಅದರ ನಂತರ 2020ರಲ್ಲಿಯೇ ಕೊರೊನಾದಿಂದ ವಿಂಬಲ್ಡನ್‌ಗೆ ಬ್ರೇಕ್ ಬಿದ್ದದ್ದು. ಆದರೆ, ಈಗ ಆತಂಕಗಳು ನಿವಾರಣೆಯಾಗುತ್ತಿದ್ದು, ಟೂರ್ನಿ ಆರಂಭವಾಗಿದೆ.

ವಿಂಬಲ್ಡನ್ ಆರಂಭ ಮತ್ತು ಇತಿಹಾಸ

ಆಲ್ ಇಂಗ್ಲೆಂಡ್ ಲಾನ್ ಟೆನಿಸ್ ಮತ್ತು ಕ್ರೋಕೆ ಕ್ಲಬ್ ಎರಡೂ ಜಂಟಿಯಾಗಿ 23 ಜುಲೈ 1868ರಂದು ಖಾಸಗಿ ಕ್ಲಬ್ ಒಂದನ್ನು ಸ್ಥಾಪಿಸಿದವು. ಇದನ್ನು ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಕ್ಲಬ್’ ಎಂದು ಕರೆಯಲಾಯಿತು. ಈ ಕ್ಲಬ್‌ನ ಟೆನಿಸ್ ಮೈದಾನ ವಿಂಬಲ್ಡನ್‌ನ ವರ್ಪಲ್ ರಸ್ತೆಯ ನರ್ಸರಿ ರಸ್ತೆಯಲ್ಲಿತ್ತು.

PC : Wikipedia, (ಸ್ಪೆನ್ಸರ್ ಗೋರ್)

1876ರಲ್ಲಿ ಮೇಜರ್ ವಾಲ್ಟರ್ ಕ್ಲೋಪ್ಟನ್ ವಿಂಗ್ಫೀಲ್ಡ್ ಮೊದಲ ಬಾರಿಗೆ ಹೊರಾಂಗಣ ಟೆನಿಸ್ ಅಂಕಣವನ್ನು ನಿರ್ಮಿಸಿದರು. 1877ರ ಜುಲೈ ತಿಂಗಳಲ್ಲಿ ಈ ಕ್ಲಬ್‌ಗೆ ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಅಂಡ್ ಲಾನ್ ಟೆನಿಸ್ ಕ್ಲಬ್’ ಎಂದು ಮರುನಾಮಕರಣ ಮಾಡಲಾಯಿತು ಮತ್ತು ಸಾಂಪ್ರದಾಯಿಕ ಟೆನಿಸ್‌ನ ಮೊದಲ ಅಂತಾರಾಷ್ಟ್ರೀಯ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಗೆ ಚಾಲನೆ ನೀಡಲಾಯಿತು.

1877ರ ಉದ್ಘಾಟನಾ ವಿಂಬಲ್ಡನ್ ಚಾಂಪಿಯನ್‌ಶಿಪ್ 9 ಜುಲೈ, 1877ರಂದು ಪ್ರಾರಂಭವಾಯಿತು. ಮೊದಲ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಮಾತ್ರ ಆಯೋ ಜಿಸಲಾಗಿತ್ತು. ಆ ವರ್ಷದಲ್ಲಿ 22 ಜನ ಭಾಗವಹಿಸಿದ್ದರು. ತದನಂತರದ ಕಾಲಘಟ್ಟಗಳಲ್ಲಿ ಮಹಿಳಾ ಸಿಂಗಲ್ಸ್, ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ಟೂರ್ನಿಗಳನ್ನೂ ಸಹ ಆರಂಭಿ ಸಲಾಯಿತು. ಅಂದಿನಿಂದ ಇಂದಿನವರೆಗೆ ವಿಂಬಲ್ಡನ್ ಟೂರ್ನಿ ಪ್ರತಿ ವರ್ಷ ಜೂನ್ ಕೊನೆಯ ಅಥವಾ ಜುಲೈ ಮೊದಲ ವಾರದಲ್ಲಿ ಪ್ರಾರಂಭಿಸುವುದು ವಾಡಿಕೆ.

ಮೊದಲ ವಿಂಬಲ್ಡನ್ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಸ್ಪೆನ್ಸರ್ ಗೋರ್ ಎಂಬವರು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಈತ ಕ್ರಿಕೆಟ್ ಆಟಗಾರನೂ ಆಗಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸರ್ರೆ ತಂಡವನ್ನೂ ಪ್ರತಿನಿಧಿಸಿದ್ದರು ಎಂಬುದು ಉಲ್ಲೇಖಾರ್ಹ. ಆನಂತರ ಹಲವು ಆಟಗಾರರು ಟಿನಿಸ್ ಲೋಕವನ್ನು ಆಳಿದ್ದಾರೆ. ಆದರೆ, ಸ್ಪೆಫಿ ಗ್ರಾಫ್ ಅವರನ್ನು ಟೆನಿಸ್ ದಂತಕಥೆ ಎಂದು ಬಣ್ಣಿಸಲಾಗುತ್ತಿದೆ. 8 ಬಾರಿ ವಿಂಬಲ್ಡನ್ ಟೆನಿಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಸ್ವಿಜಲೆಂಡ್‌ನ ರೋಜರ್ ಫೆಡರರ್ ಅತಿಹೆಚ್ಚು ಬಾರಿ ಈ ಪ್ರಶಸ್ತಿಯನ್ನು ಗೆದ್ದ ಆಟಗಾರ ಎಂಬ ಶ್ರೇಯಕ್ಕೆ ಪಾತ್ರವಾಗಿದ್ದಾರೆ.

ವಿಶೇಷವೆಂದರೆ ಈ ವರ್ಷವೂ ಟೆನಿಸ್ ದಂತಕಥೆ ರೋಜರ್ ಫೆಡರರ್ ಕಣದಲ್ಲಿದ್ದು, ಸರ್ಬಿಯಾದ ರನ್ನಿಂಗ್ ಚಾಂಪಿಯನ್ ನೊವಾಕ್ ಜಾಕೋವಿಚ್ ಮತ್ತು ರಫೇಲ್ ನಡಾಲ್ ಕಠಿಣ ಪೈಪೋಟಿ ನೀಡಲಿದ್ದಾರೆ ಎಂದು ಟೆನಿಸ್ ಅಭಿಮಾನಿಗಳು ಕಾತುರದಿಂದ ಎದುರುನೊಡುತ್ತಿದ್ದಾರೆ.

ಮಹಿಳಾ ಸಿಂಗಲ್ಸ್‌ನಲ್ಲಿ ದಂತೆಕಥೆಯಾಗಿರುವ ಸಹೋದರಿಯರು ಸೆರೆನಾ ವಿಲಿಯಮ್ಸ್-ವೀನಸ್ ವಿಲಿಯಮ್ಸ್, ಸೈಮನ್ ಹೆಲಿಪ್, ನದಿಯಾ ಪೊಡರೊಸ್ಕಾ, ಅಂಜೆಲಿಕಾ ಕೆರ್ಬರ್, ಎಲೀಸ್ ಮಾರ್ಟೆನ್ಸ್ ಸೇರಿದಂತೆ ಅನೇಕ ಪ್ರಮುಖ ಆಟಗಾರ್ತಿಯರಿದ್ದಾರೆ. ಪ್ರಶಸ್ತಿ ಯಾರ ಮುಡಿಗೇರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಮಹಾಯುದ್ಧದ ಕಾಲದಲ್ಲಿ ಈ ಅಂಗಳದಲ್ಲೂ ಬಿದ್ದಿತ್ತು ಬಾಂಬ್

ಮೊದಲ ಮಹಾಯುದ್ಧದ ಕಾಲದಲ್ಲಿ 1915 ರಿಂದ 1918ರ ವರೆಗೆ ಮೊದಲ ಬಾರಿಗೆ ವಿಂಬಲ್ಡನ್ ಟೂರ್ನಿಯನ್ನು ಆಯೋಜಿಸಲಾಗಿರಲಿಲ್ಲ. 1916ರಲ್ಲಿ ಇಲ್ಲಿನ ಟೆನಿಸ್ ಅಂಗಳದ ಮೇಲೆ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ್ದವು. ಪರಿಣಾಮ ನಂತರದ ದಿನಗಳಲ್ಲಿ ಸೆಂಟರ್ ಕೋರ್ಟ್ ಅನ್ನು ಮರುನಿರ್ಮಾಣ ಮಾಡಲಾಯಿತು.

ರೋಜರ್ ಫೆಡರರ್ ಹೆಸರಲ್ಲಿದೆ ವಿಶಿಷ್ಟ ದಾಖಲೆ

PC : Fox Sports, (ರೋಜರ್ ಫೆಡರರ್)

ವಿಂಬಲ್ಡನ್ ಗೆಲುವು ಪ್ರತಿಯೊಬ್ಬ ಟೆನಿಸ್ ಆಟಗಾರನಿಗೆ ಒಂದು ಮಹತ್ವದ ಮೈಲಿಗಲ್ಲು. ಆಟಗಾರರು ಒಮ್ಮೆ ವಿಂಬಲ್ಡನ್ ಗೆದ್ದರೆ ಅದು ಅವರ ಜೀವನ ಶೇಷ್ಠ ಸಾಧನೆ ಎಂದು ಪರಿಗಣಿಸಲಾಗುತ್ತದೆ. ಆದರೆ, ಸ್ವಿಜರ್ಲೆಂಡ್ ಮೂಲದ ರೋಜರ್ ಫೆಡರರ್ ಒಟ್ಟು 8 ಸಲ ವಿಂಬಲ್ಡನ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಅದರಲ್ಲೂ 2003ರಿಂದ 2007ರ ವರೆಗೆ ಸತತ 5 ಬಾರಿ ಈ ಟ್ರೋಫಿಯನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದರು. ಈ ಹಿಂದೆ ವಿಲಿಯಂ ರೆನ್ಶಾ ಎಂಬವರು 1981ರಿಂದ 1989ರ ಅವಧಿಯಲ್ಲಿ 7 ಬಾರಿ ಈ ಟ್ರೋಫಿಯನ್ನು ಗೆದ್ದದ್ದು ದಾಖಲೆಯಾಗಿ ಉಳಿದಿತ್ತು.

ವಿಂಬಲ್ಡನ್‌ನಲ್ಲಿ ಭಾರತದ ಸಾಧನೆ

ಕ್ರಿಕೆಟ್‌ಗೆ ಟೆನಿಸ್‌ಗಿಂತಲೂ ಅಥವಾ ಬೇರೆ ಯಾವುದೇ ಆಟಕ್ಕಿಂತಲೂ ಹೆಚ್ಚು ಪ್ರಾಶಸ್ತ್ಯ ನೀಡುವ ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ದಾಖಲೆಗಳು ಸಾಕಷ್ಟು ಕಡಿಮೆ. ಆದರಲ್ಲೂ ವಿಂಬಲ್ಡನ್‌ನಂತಹ ಗ್ರ್ಯಾಂಡ್‌ಸ್ಲ್ಯಾಮ್ ಟೂರ್ನಿಗಳಲ್ಲಿ ಭಾರತದ ಸಾಧನೆ ಹೇಳಿಕೊಳ್ಳುವ ಮಟ್ಟದ್ದಲ್ಲ. ಆದರೂ, 1960 ಮತ್ತು 1961ರಲ್ಲಿ ಸತತ ಎರಡು ಬಾರಿ ಭಾರತದ ಟೆನಿಸ್ ಆಟಗಾರ ರಾಮನಾಥನ್ ಕೃಷ್ಣನ್ ಎಂಬವರು ಸೆಮಿಫೈನಲ್‌ಗೆ ತಲುಪಿ ಸಾಧನೆ ಮಾಡಿದ್ದರು. ಆದರೆ, ಟ್ರೋಫಿಗೆ ಮುತ್ತಿಡುವುದು ಸಾಧ್ಯವಾಗಿರಲಿಲ್ಲ.

PC : The Bridge, (ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್)

1999ರಲ್ಲಿ ಭಾರತದ ಖ್ಯಾತ ಟೆನಿಸ್ ಜೋಡಿ ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್ ಮೊದಲ ಬಾರಿಗೆ ಪುರುಷರ ಡಬಲ್ಸ್‌ನಲ್ಲಿ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಜೋಡಿ ಅದೇ ವರ್ಷ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಯಲ್ಲೂ ಜಯ ಗಳಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿತ್ತು. ಆ ನಂತರ ಈ ಜೋಡಿ 2017ರವರೆಗೆ 18 ಬಾರಿ ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದದ್ದು ಇಂದು ಇತಿಹಾಸ.

ಇನ್ನು ಮಹಿಳಾ ಟೆನಿಸ್‌ನಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಾನಿಯಾ ಮಿರ್ಜಾ ಸಹ 2015ರಲ್ಲಿ ಸ್ವಿಜರ್ಲೆಂಡ್‌ನ ಮಾರ್ಟಿನಾ ಹಿಂಗಿಸ್ ಜೊತೆಗೂಡಿ ರಷ್ಯಾದ ಎಲೆನಾ ವೆಸ್ನೇನಾ ಮತ್ತು ಎಕಟೆರೀನಾ ಮಕರೋವಾ ಜೋಡಿಯನ್ನು ಸೋಲಿಸುವ ಮೂಲಕ ಮಹಿಳಾ ಡಬಲ್ಸ್‌ನಲ್ಲಿ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಆ ನಂತರದ ದಿನಗಳಿಂದ ಈವರೆಗೆ ಭಾರತ ಮಹಿಳಾ ಟೆನಿಸ್ ಕ್ರೀಡೆಯಲ್ಲಿ ಮತ್ತೊಂದು ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯ ಬರ ಎದುರಿಸುತ್ತಿದೆ.

ಈ ವರ್ಷ ವಿಂಬಲ್ಡನ್ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಭಾರತದ ಪರ ಕಣಕ್ಕಿಳಿದಿದ್ದರು. ಆದರೆ ಅರ್ಹತಾ ಸುತ್ತಿನಲ್ಲೇ ಅವರು ಆಸ್ಟ್ರೇಲಿಯಾದ ಮಾರ್ಕ್ ಪೋಮನ್ಸ್ ವಿರುದ್ಧ ಸೋಲುವ ಮೂಲಕ ವಿಂಬಲ್ಡನ್‌ನಲ್ಲಿ ಭಾರತದ ಪ್ರಾತಿನಿಧ್ಯವೇ ಇಲ್ಲದಂತಾಗಿದೆ!


ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...