Homeಸಿನಿಮಾಕ್ರೀಡೆವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

- Advertisement -
- Advertisement -

ವಿಶ್ವ ಟೆನಿಸ್ ಅಭಿಮಾನಿಗಳು ಕಳೆದ ಎರಡು ವರ್ಷಗಳಿಂದ ಕಾತರದಿಂದ ಕಾಯುತ್ತಿದ್ದ ಪ್ರತಿಷ್ಠಿತ ಇಂಗ್ಲೆಂಡ್-ವಿಂಬಲ್ಡನ್ ಟೆನಿಸ್ ಟೂರ್ನಿ ಕೊನೆಗೂ ಸೋಮವಾರದಿಂದ ಭರ್ಜರಿಯಾಗಿ ಆರಂಭವಾಗಿದೆ. ಆಸ್ಟ್ರೇಲಿಯಾ ಓಪನ್, ಫ್ರೆಂಚ್ ಓಪನ್, ಯುಎಸ್ ಓಪನ್ ಸೇರಿದಂತೆ ಟೆನಿಸ್ ಜಗತ್ತಿನಲ್ಲಿ ನಾಲ್ಕು ಜನಪ್ರಿಯ ಗ್ರ್ಯಾಂಡ್ ಸ್ಲಾಂ ಟೂರ್ನಿಗಳು ಇದ್ದಾಗ್ಯೂ ವಿಂಬಲ್ಡನ್‌ಗೇ ಅತ್ಯಂತ ಹೆಚ್ಚು ಪ್ರಾಶಸ್ತ್ಯ ಎಂದರೆ ತಪ್ಪಾಗಲಾರದು. 2019ರಲ್ಲಿ ನಡೆದ ಕೊನೆಯ ವಿಂಬಲ್ಡನ್ ಟೂರ್ನಿಯಲ್ಲಿ ಸರ್ಬಿಯಾದ ನಂಬರ್.1 ಆಟಗಾರ ನೊವಾಕ್ ಜಾಕೋವಿಚ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರೆ, ಮಹಿಳಾ ವಿಭಾಗದಲ್ಲಿ ಸೈಮನ್ ಹೆಲಿಪ್ ಮೊದಲ ಬಾರಿಗೆ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟಿದ್ದರು.

ಆದರೆ, ಕಳೆದ ವರ್ಷ 2020ರಲ್ಲಿ ಮಾರಕ ಕೊರೊನಾ ವೈರಸ್ ಇಡೀ ವಿಶ್ವವನ್ನು ತಲ್ಲಣಕ್ಕೆ ದೂಡಿತ್ತು. ಪರಿಣಾಮ ಎಲ್ಲಾ ಕ್ರೀಡಾ ಕ್ಷೇತ್ರಗಳೂ ನಿಂತ ನೀರಾಗಿದ್ದವು. ಟೆನಿಸ್ ಜಗತ್ತಿನಲ್ಲೂ ಸಹ ಎಲ್ಲಾ ಪ್ರಮುಖ ಟೂರ್ನಿಗಳನ್ನು ಮುಂದೂಡಲಾಗಿತ್ತು. ಇದಕ್ಕೂ ಮುನ್ನ ಈ ರೀತಿ ಆಗಿದ್ದು ಯುದ್ಧದ ಸಮಯದಲ್ಲಿ! 1915-18ರ ಅವಧಿಯಲ್ಲಿ ನಾಲ್ಕು ವರ್ಷ ಮೊದಲ ಮಹಾಯುದ್ಧದ ಕಾರಣಕ್ಕೆ ಈ ಟೂರ್ನಿಯನ್ನು ನಡೆಸಿರಲಿಲ್ಲ. ಅದರ ನಂತರ 2020ರಲ್ಲಿಯೇ ಕೊರೊನಾದಿಂದ ವಿಂಬಲ್ಡನ್‌ಗೆ ಬ್ರೇಕ್ ಬಿದ್ದದ್ದು. ಆದರೆ, ಈಗ ಆತಂಕಗಳು ನಿವಾರಣೆಯಾಗುತ್ತಿದ್ದು, ಟೂರ್ನಿ ಆರಂಭವಾಗಿದೆ.

ವಿಂಬಲ್ಡನ್ ಆರಂಭ ಮತ್ತು ಇತಿಹಾಸ

ಆಲ್ ಇಂಗ್ಲೆಂಡ್ ಲಾನ್ ಟೆನಿಸ್ ಮತ್ತು ಕ್ರೋಕೆ ಕ್ಲಬ್ ಎರಡೂ ಜಂಟಿಯಾಗಿ 23 ಜುಲೈ 1868ರಂದು ಖಾಸಗಿ ಕ್ಲಬ್ ಒಂದನ್ನು ಸ್ಥಾಪಿಸಿದವು. ಇದನ್ನು ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಕ್ಲಬ್’ ಎಂದು ಕರೆಯಲಾಯಿತು. ಈ ಕ್ಲಬ್‌ನ ಟೆನಿಸ್ ಮೈದಾನ ವಿಂಬಲ್ಡನ್‌ನ ವರ್ಪಲ್ ರಸ್ತೆಯ ನರ್ಸರಿ ರಸ್ತೆಯಲ್ಲಿತ್ತು.

PC : Wikipedia, (ಸ್ಪೆನ್ಸರ್ ಗೋರ್)

1876ರಲ್ಲಿ ಮೇಜರ್ ವಾಲ್ಟರ್ ಕ್ಲೋಪ್ಟನ್ ವಿಂಗ್ಫೀಲ್ಡ್ ಮೊದಲ ಬಾರಿಗೆ ಹೊರಾಂಗಣ ಟೆನಿಸ್ ಅಂಕಣವನ್ನು ನಿರ್ಮಿಸಿದರು. 1877ರ ಜುಲೈ ತಿಂಗಳಲ್ಲಿ ಈ ಕ್ಲಬ್‌ಗೆ ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಅಂಡ್ ಲಾನ್ ಟೆನಿಸ್ ಕ್ಲಬ್’ ಎಂದು ಮರುನಾಮಕರಣ ಮಾಡಲಾಯಿತು ಮತ್ತು ಸಾಂಪ್ರದಾಯಿಕ ಟೆನಿಸ್‌ನ ಮೊದಲ ಅಂತಾರಾಷ್ಟ್ರೀಯ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಗೆ ಚಾಲನೆ ನೀಡಲಾಯಿತು.

1877ರ ಉದ್ಘಾಟನಾ ವಿಂಬಲ್ಡನ್ ಚಾಂಪಿಯನ್‌ಶಿಪ್ 9 ಜುಲೈ, 1877ರಂದು ಪ್ರಾರಂಭವಾಯಿತು. ಮೊದಲ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಮಾತ್ರ ಆಯೋ ಜಿಸಲಾಗಿತ್ತು. ಆ ವರ್ಷದಲ್ಲಿ 22 ಜನ ಭಾಗವಹಿಸಿದ್ದರು. ತದನಂತರದ ಕಾಲಘಟ್ಟಗಳಲ್ಲಿ ಮಹಿಳಾ ಸಿಂಗಲ್ಸ್, ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ಟೂರ್ನಿಗಳನ್ನೂ ಸಹ ಆರಂಭಿ ಸಲಾಯಿತು. ಅಂದಿನಿಂದ ಇಂದಿನವರೆಗೆ ವಿಂಬಲ್ಡನ್ ಟೂರ್ನಿ ಪ್ರತಿ ವರ್ಷ ಜೂನ್ ಕೊನೆಯ ಅಥವಾ ಜುಲೈ ಮೊದಲ ವಾರದಲ್ಲಿ ಪ್ರಾರಂಭಿಸುವುದು ವಾಡಿಕೆ.

ಮೊದಲ ವಿಂಬಲ್ಡನ್ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಸ್ಪೆನ್ಸರ್ ಗೋರ್ ಎಂಬವರು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಈತ ಕ್ರಿಕೆಟ್ ಆಟಗಾರನೂ ಆಗಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸರ್ರೆ ತಂಡವನ್ನೂ ಪ್ರತಿನಿಧಿಸಿದ್ದರು ಎಂಬುದು ಉಲ್ಲೇಖಾರ್ಹ. ಆನಂತರ ಹಲವು ಆಟಗಾರರು ಟಿನಿಸ್ ಲೋಕವನ್ನು ಆಳಿದ್ದಾರೆ. ಆದರೆ, ಸ್ಪೆಫಿ ಗ್ರಾಫ್ ಅವರನ್ನು ಟೆನಿಸ್ ದಂತಕಥೆ ಎಂದು ಬಣ್ಣಿಸಲಾಗುತ್ತಿದೆ. 8 ಬಾರಿ ವಿಂಬಲ್ಡನ್ ಟೆನಿಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಸ್ವಿಜಲೆಂಡ್‌ನ ರೋಜರ್ ಫೆಡರರ್ ಅತಿಹೆಚ್ಚು ಬಾರಿ ಈ ಪ್ರಶಸ್ತಿಯನ್ನು ಗೆದ್ದ ಆಟಗಾರ ಎಂಬ ಶ್ರೇಯಕ್ಕೆ ಪಾತ್ರವಾಗಿದ್ದಾರೆ.

ವಿಶೇಷವೆಂದರೆ ಈ ವರ್ಷವೂ ಟೆನಿಸ್ ದಂತಕಥೆ ರೋಜರ್ ಫೆಡರರ್ ಕಣದಲ್ಲಿದ್ದು, ಸರ್ಬಿಯಾದ ರನ್ನಿಂಗ್ ಚಾಂಪಿಯನ್ ನೊವಾಕ್ ಜಾಕೋವಿಚ್ ಮತ್ತು ರಫೇಲ್ ನಡಾಲ್ ಕಠಿಣ ಪೈಪೋಟಿ ನೀಡಲಿದ್ದಾರೆ ಎಂದು ಟೆನಿಸ್ ಅಭಿಮಾನಿಗಳು ಕಾತುರದಿಂದ ಎದುರುನೊಡುತ್ತಿದ್ದಾರೆ.

ಮಹಿಳಾ ಸಿಂಗಲ್ಸ್‌ನಲ್ಲಿ ದಂತೆಕಥೆಯಾಗಿರುವ ಸಹೋದರಿಯರು ಸೆರೆನಾ ವಿಲಿಯಮ್ಸ್-ವೀನಸ್ ವಿಲಿಯಮ್ಸ್, ಸೈಮನ್ ಹೆಲಿಪ್, ನದಿಯಾ ಪೊಡರೊಸ್ಕಾ, ಅಂಜೆಲಿಕಾ ಕೆರ್ಬರ್, ಎಲೀಸ್ ಮಾರ್ಟೆನ್ಸ್ ಸೇರಿದಂತೆ ಅನೇಕ ಪ್ರಮುಖ ಆಟಗಾರ್ತಿಯರಿದ್ದಾರೆ. ಪ್ರಶಸ್ತಿ ಯಾರ ಮುಡಿಗೇರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಮಹಾಯುದ್ಧದ ಕಾಲದಲ್ಲಿ ಈ ಅಂಗಳದಲ್ಲೂ ಬಿದ್ದಿತ್ತು ಬಾಂಬ್

ಮೊದಲ ಮಹಾಯುದ್ಧದ ಕಾಲದಲ್ಲಿ 1915 ರಿಂದ 1918ರ ವರೆಗೆ ಮೊದಲ ಬಾರಿಗೆ ವಿಂಬಲ್ಡನ್ ಟೂರ್ನಿಯನ್ನು ಆಯೋಜಿಸಲಾಗಿರಲಿಲ್ಲ. 1916ರಲ್ಲಿ ಇಲ್ಲಿನ ಟೆನಿಸ್ ಅಂಗಳದ ಮೇಲೆ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ್ದವು. ಪರಿಣಾಮ ನಂತರದ ದಿನಗಳಲ್ಲಿ ಸೆಂಟರ್ ಕೋರ್ಟ್ ಅನ್ನು ಮರುನಿರ್ಮಾಣ ಮಾಡಲಾಯಿತು.

ರೋಜರ್ ಫೆಡರರ್ ಹೆಸರಲ್ಲಿದೆ ವಿಶಿಷ್ಟ ದಾಖಲೆ

PC : Fox Sports, (ರೋಜರ್ ಫೆಡರರ್)

ವಿಂಬಲ್ಡನ್ ಗೆಲುವು ಪ್ರತಿಯೊಬ್ಬ ಟೆನಿಸ್ ಆಟಗಾರನಿಗೆ ಒಂದು ಮಹತ್ವದ ಮೈಲಿಗಲ್ಲು. ಆಟಗಾರರು ಒಮ್ಮೆ ವಿಂಬಲ್ಡನ್ ಗೆದ್ದರೆ ಅದು ಅವರ ಜೀವನ ಶೇಷ್ಠ ಸಾಧನೆ ಎಂದು ಪರಿಗಣಿಸಲಾಗುತ್ತದೆ. ಆದರೆ, ಸ್ವಿಜರ್ಲೆಂಡ್ ಮೂಲದ ರೋಜರ್ ಫೆಡರರ್ ಒಟ್ಟು 8 ಸಲ ವಿಂಬಲ್ಡನ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಅದರಲ್ಲೂ 2003ರಿಂದ 2007ರ ವರೆಗೆ ಸತತ 5 ಬಾರಿ ಈ ಟ್ರೋಫಿಯನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದರು. ಈ ಹಿಂದೆ ವಿಲಿಯಂ ರೆನ್ಶಾ ಎಂಬವರು 1981ರಿಂದ 1989ರ ಅವಧಿಯಲ್ಲಿ 7 ಬಾರಿ ಈ ಟ್ರೋಫಿಯನ್ನು ಗೆದ್ದದ್ದು ದಾಖಲೆಯಾಗಿ ಉಳಿದಿತ್ತು.

ವಿಂಬಲ್ಡನ್‌ನಲ್ಲಿ ಭಾರತದ ಸಾಧನೆ

ಕ್ರಿಕೆಟ್‌ಗೆ ಟೆನಿಸ್‌ಗಿಂತಲೂ ಅಥವಾ ಬೇರೆ ಯಾವುದೇ ಆಟಕ್ಕಿಂತಲೂ ಹೆಚ್ಚು ಪ್ರಾಶಸ್ತ್ಯ ನೀಡುವ ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ದಾಖಲೆಗಳು ಸಾಕಷ್ಟು ಕಡಿಮೆ. ಆದರಲ್ಲೂ ವಿಂಬಲ್ಡನ್‌ನಂತಹ ಗ್ರ್ಯಾಂಡ್‌ಸ್ಲ್ಯಾಮ್ ಟೂರ್ನಿಗಳಲ್ಲಿ ಭಾರತದ ಸಾಧನೆ ಹೇಳಿಕೊಳ್ಳುವ ಮಟ್ಟದ್ದಲ್ಲ. ಆದರೂ, 1960 ಮತ್ತು 1961ರಲ್ಲಿ ಸತತ ಎರಡು ಬಾರಿ ಭಾರತದ ಟೆನಿಸ್ ಆಟಗಾರ ರಾಮನಾಥನ್ ಕೃಷ್ಣನ್ ಎಂಬವರು ಸೆಮಿಫೈನಲ್‌ಗೆ ತಲುಪಿ ಸಾಧನೆ ಮಾಡಿದ್ದರು. ಆದರೆ, ಟ್ರೋಫಿಗೆ ಮುತ್ತಿಡುವುದು ಸಾಧ್ಯವಾಗಿರಲಿಲ್ಲ.

PC : The Bridge, (ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್)

1999ರಲ್ಲಿ ಭಾರತದ ಖ್ಯಾತ ಟೆನಿಸ್ ಜೋಡಿ ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್ ಮೊದಲ ಬಾರಿಗೆ ಪುರುಷರ ಡಬಲ್ಸ್‌ನಲ್ಲಿ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಜೋಡಿ ಅದೇ ವರ್ಷ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಯಲ್ಲೂ ಜಯ ಗಳಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿತ್ತು. ಆ ನಂತರ ಈ ಜೋಡಿ 2017ರವರೆಗೆ 18 ಬಾರಿ ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದದ್ದು ಇಂದು ಇತಿಹಾಸ.

ಇನ್ನು ಮಹಿಳಾ ಟೆನಿಸ್‌ನಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಾನಿಯಾ ಮಿರ್ಜಾ ಸಹ 2015ರಲ್ಲಿ ಸ್ವಿಜರ್ಲೆಂಡ್‌ನ ಮಾರ್ಟಿನಾ ಹಿಂಗಿಸ್ ಜೊತೆಗೂಡಿ ರಷ್ಯಾದ ಎಲೆನಾ ವೆಸ್ನೇನಾ ಮತ್ತು ಎಕಟೆರೀನಾ ಮಕರೋವಾ ಜೋಡಿಯನ್ನು ಸೋಲಿಸುವ ಮೂಲಕ ಮಹಿಳಾ ಡಬಲ್ಸ್‌ನಲ್ಲಿ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಆ ನಂತರದ ದಿನಗಳಿಂದ ಈವರೆಗೆ ಭಾರತ ಮಹಿಳಾ ಟೆನಿಸ್ ಕ್ರೀಡೆಯಲ್ಲಿ ಮತ್ತೊಂದು ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯ ಬರ ಎದುರಿಸುತ್ತಿದೆ.

ಈ ವರ್ಷ ವಿಂಬಲ್ಡನ್ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಭಾರತದ ಪರ ಕಣಕ್ಕಿಳಿದಿದ್ದರು. ಆದರೆ ಅರ್ಹತಾ ಸುತ್ತಿನಲ್ಲೇ ಅವರು ಆಸ್ಟ್ರೇಲಿಯಾದ ಮಾರ್ಕ್ ಪೋಮನ್ಸ್ ವಿರುದ್ಧ ಸೋಲುವ ಮೂಲಕ ವಿಂಬಲ್ಡನ್‌ನಲ್ಲಿ ಭಾರತದ ಪ್ರಾತಿನಿಧ್ಯವೇ ಇಲ್ಲದಂತಾಗಿದೆ!


ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...