Homeಚಳವಳಿಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾವು ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಬೇಕು, ಹಕ್ಕುಪತ್ರ ನೀಡಿ ಉಳಿಸಿಕೊಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ಹೋರಾಡುತ್ತಿದ್ದ ಮಂಡ್ಯದ ಶ್ರಮಿಕರಿಗೆ ಮೊದಲ ಹಂತದ ಜಯ ಸಿಕ್ಕಿದೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕೆ.ಆರ್ ಪೇಟೆ ಕಡೆಗೆ ಪಾದಯಾತ್ರೆ ಹೊರಟಿದ್ದ ಪ್ರತಿಭಟನಾಕಾರನ್ನು ಪಾಂಡವಪುರದಲ್ಲಿ ಭೇಟಿ ಮಾಡಿ ಸಭೆ ನಡೆಸಿದ ಅಧಿಕಾರಿಗಳು 10 ದಿನಗಳ ಒಳಗೆ ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಲು ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಜುಲೈ 26ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಮತ್ತು ಪುರಸಭೆ ಅಧಿಕಾರಿಗಳು ಬಂದು ಕಾಳಪ್ಪ ಬಡಾವಣೆಯ ಮತ್ತು ಇನ್ನಿತರ ಶ್ರಮಿಕನಗರಗಳ (ಸ್ಲಂಗಳ) ಎಲ್ಲ ಸಮಸ್ಯೆಗಳನ್ನೂ ಚರ್ಚಿಸಲು ಜಿಲ್ಲಾಧಿಕಾರಿ ಕಛೇರಿಯಿಂದ ಕರೆಯಲಾಗಿರುವ ಸಭೆಯ ತಿಳುವಳಿಕೆ ಪತ್ರವನ್ನು ನೀಡಿದರು. ಅದೇ ರೀತಿ ಅಂತಿಮ ಘೋಷಣೆ ಹೊರಡಿಸಲು ಮತ್ತು ಹಕ್ಕುಪತ್ರ ನೀಡಲು ಪ್ರಕ್ರಿಯೆಯನ್ನು ಈ ತಕ್ಷಣದಿಂದಲೇ ಆರಂಭಿಸುವುದಾಗಿಯೂ ಹತ್ತು ದಿನದ ಒಳಗಾಗಿ ಮುಗಿಸುವುದಾಗಿಯೂ ಲಿಖಿತ ಪತ್ರ ನೀಡಿದರು.‌

ಇದಾದ ನಂತರ ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದರು.

ಹೋರಾಟದಲ್ಲಿ ಕಾಳಪ್ಪ ಬಡಾವಣೆಯ ಮುಖಂಡರಾದ ಆರ್ಮುಗಂ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು, ಕರ್ನಾಟಕ ಶ್ರಮಿಕ ಶಕ್ತಿಯ ನಾಯಕರಾದ ಸುಬ್ರಹ್ಮಣ್ಯ, ಶ್ರಮಿಕ ನಿವಾಸಿಗಳ ಒಕ್ಕೂಟದ ಪ್ರಕಾಶ್, ಕೃಷ್ಣಪ್ಪ, ರಾಜು, ನಿಂಗಮ್ಮ, ಮಹಿಳಾ ಮುನ್ನಡೆಯ ಕಮಲ, ಜ್ಯೋತಿ, ಶಿಲ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಂಜಲಿ, ಪುನೀತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...