Homeಚಳವಳಿಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾವು ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಬೇಕು, ಹಕ್ಕುಪತ್ರ ನೀಡಿ ಉಳಿಸಿಕೊಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ಹೋರಾಡುತ್ತಿದ್ದ ಮಂಡ್ಯದ ಶ್ರಮಿಕರಿಗೆ ಮೊದಲ ಹಂತದ ಜಯ ಸಿಕ್ಕಿದೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕೆ.ಆರ್ ಪೇಟೆ ಕಡೆಗೆ ಪಾದಯಾತ್ರೆ ಹೊರಟಿದ್ದ ಪ್ರತಿಭಟನಾಕಾರನ್ನು ಪಾಂಡವಪುರದಲ್ಲಿ ಭೇಟಿ ಮಾಡಿ ಸಭೆ ನಡೆಸಿದ ಅಧಿಕಾರಿಗಳು 10 ದಿನಗಳ ಒಳಗೆ ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಲು ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಜುಲೈ 26ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಮತ್ತು ಪುರಸಭೆ ಅಧಿಕಾರಿಗಳು ಬಂದು ಕಾಳಪ್ಪ ಬಡಾವಣೆಯ ಮತ್ತು ಇನ್ನಿತರ ಶ್ರಮಿಕನಗರಗಳ (ಸ್ಲಂಗಳ) ಎಲ್ಲ ಸಮಸ್ಯೆಗಳನ್ನೂ ಚರ್ಚಿಸಲು ಜಿಲ್ಲಾಧಿಕಾರಿ ಕಛೇರಿಯಿಂದ ಕರೆಯಲಾಗಿರುವ ಸಭೆಯ ತಿಳುವಳಿಕೆ ಪತ್ರವನ್ನು ನೀಡಿದರು. ಅದೇ ರೀತಿ ಅಂತಿಮ ಘೋಷಣೆ ಹೊರಡಿಸಲು ಮತ್ತು ಹಕ್ಕುಪತ್ರ ನೀಡಲು ಪ್ರಕ್ರಿಯೆಯನ್ನು ಈ ತಕ್ಷಣದಿಂದಲೇ ಆರಂಭಿಸುವುದಾಗಿಯೂ ಹತ್ತು ದಿನದ ಒಳಗಾಗಿ ಮುಗಿಸುವುದಾಗಿಯೂ ಲಿಖಿತ ಪತ್ರ ನೀಡಿದರು.‌

ಇದಾದ ನಂತರ ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದರು.

ಹೋರಾಟದಲ್ಲಿ ಕಾಳಪ್ಪ ಬಡಾವಣೆಯ ಮುಖಂಡರಾದ ಆರ್ಮುಗಂ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು, ಕರ್ನಾಟಕ ಶ್ರಮಿಕ ಶಕ್ತಿಯ ನಾಯಕರಾದ ಸುಬ್ರಹ್ಮಣ್ಯ, ಶ್ರಮಿಕ ನಿವಾಸಿಗಳ ಒಕ್ಕೂಟದ ಪ್ರಕಾಶ್, ಕೃಷ್ಣಪ್ಪ, ರಾಜು, ನಿಂಗಮ್ಮ, ಮಹಿಳಾ ಮುನ್ನಡೆಯ ಕಮಲ, ಜ್ಯೋತಿ, ಶಿಲ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಂಜಲಿ, ಪುನೀತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...