Homeಚಳವಳಿಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾವು ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಬೇಕು, ಹಕ್ಕುಪತ್ರ ನೀಡಿ ಉಳಿಸಿಕೊಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ಹೋರಾಡುತ್ತಿದ್ದ ಮಂಡ್ಯದ ಶ್ರಮಿಕರಿಗೆ ಮೊದಲ ಹಂತದ ಜಯ ಸಿಕ್ಕಿದೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕೆ.ಆರ್ ಪೇಟೆ ಕಡೆಗೆ ಪಾದಯಾತ್ರೆ ಹೊರಟಿದ್ದ ಪ್ರತಿಭಟನಾಕಾರನ್ನು ಪಾಂಡವಪುರದಲ್ಲಿ ಭೇಟಿ ಮಾಡಿ ಸಭೆ ನಡೆಸಿದ ಅಧಿಕಾರಿಗಳು 10 ದಿನಗಳ ಒಳಗೆ ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಲು ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಜುಲೈ 26ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಮತ್ತು ಪುರಸಭೆ ಅಧಿಕಾರಿಗಳು ಬಂದು ಕಾಳಪ್ಪ ಬಡಾವಣೆಯ ಮತ್ತು ಇನ್ನಿತರ ಶ್ರಮಿಕನಗರಗಳ (ಸ್ಲಂಗಳ) ಎಲ್ಲ ಸಮಸ್ಯೆಗಳನ್ನೂ ಚರ್ಚಿಸಲು ಜಿಲ್ಲಾಧಿಕಾರಿ ಕಛೇರಿಯಿಂದ ಕರೆಯಲಾಗಿರುವ ಸಭೆಯ ತಿಳುವಳಿಕೆ ಪತ್ರವನ್ನು ನೀಡಿದರು. ಅದೇ ರೀತಿ ಅಂತಿಮ ಘೋಷಣೆ ಹೊರಡಿಸಲು ಮತ್ತು ಹಕ್ಕುಪತ್ರ ನೀಡಲು ಪ್ರಕ್ರಿಯೆಯನ್ನು ಈ ತಕ್ಷಣದಿಂದಲೇ ಆರಂಭಿಸುವುದಾಗಿಯೂ ಹತ್ತು ದಿನದ ಒಳಗಾಗಿ ಮುಗಿಸುವುದಾಗಿಯೂ ಲಿಖಿತ ಪತ್ರ ನೀಡಿದರು.‌

ಇದಾದ ನಂತರ ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದರು.

ಹೋರಾಟದಲ್ಲಿ ಕಾಳಪ್ಪ ಬಡಾವಣೆಯ ಮುಖಂಡರಾದ ಆರ್ಮುಗಂ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು, ಕರ್ನಾಟಕ ಶ್ರಮಿಕ ಶಕ್ತಿಯ ನಾಯಕರಾದ ಸುಬ್ರಹ್ಮಣ್ಯ, ಶ್ರಮಿಕ ನಿವಾಸಿಗಳ ಒಕ್ಕೂಟದ ಪ್ರಕಾಶ್, ಕೃಷ್ಣಪ್ಪ, ರಾಜು, ನಿಂಗಮ್ಮ, ಮಹಿಳಾ ಮುನ್ನಡೆಯ ಕಮಲ, ಜ್ಯೋತಿ, ಶಿಲ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಂಜಲಿ, ಪುನೀತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...