Homeಚಳವಳಿಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾವು ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಬೇಕು, ಹಕ್ಕುಪತ್ರ ನೀಡಿ ಉಳಿಸಿಕೊಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ಹೋರಾಡುತ್ತಿದ್ದ ಮಂಡ್ಯದ ಶ್ರಮಿಕರಿಗೆ ಮೊದಲ ಹಂತದ ಜಯ ಸಿಕ್ಕಿದೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕೆ.ಆರ್ ಪೇಟೆ ಕಡೆಗೆ ಪಾದಯಾತ್ರೆ ಹೊರಟಿದ್ದ ಪ್ರತಿಭಟನಾಕಾರನ್ನು ಪಾಂಡವಪುರದಲ್ಲಿ ಭೇಟಿ ಮಾಡಿ ಸಭೆ ನಡೆಸಿದ ಅಧಿಕಾರಿಗಳು 10 ದಿನಗಳ ಒಳಗೆ ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಲು ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಜುಲೈ 26ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಮತ್ತು ಪುರಸಭೆ ಅಧಿಕಾರಿಗಳು ಬಂದು ಕಾಳಪ್ಪ ಬಡಾವಣೆಯ ಮತ್ತು ಇನ್ನಿತರ ಶ್ರಮಿಕನಗರಗಳ (ಸ್ಲಂಗಳ) ಎಲ್ಲ ಸಮಸ್ಯೆಗಳನ್ನೂ ಚರ್ಚಿಸಲು ಜಿಲ್ಲಾಧಿಕಾರಿ ಕಛೇರಿಯಿಂದ ಕರೆಯಲಾಗಿರುವ ಸಭೆಯ ತಿಳುವಳಿಕೆ ಪತ್ರವನ್ನು ನೀಡಿದರು. ಅದೇ ರೀತಿ ಅಂತಿಮ ಘೋಷಣೆ ಹೊರಡಿಸಲು ಮತ್ತು ಹಕ್ಕುಪತ್ರ ನೀಡಲು ಪ್ರಕ್ರಿಯೆಯನ್ನು ಈ ತಕ್ಷಣದಿಂದಲೇ ಆರಂಭಿಸುವುದಾಗಿಯೂ ಹತ್ತು ದಿನದ ಒಳಗಾಗಿ ಮುಗಿಸುವುದಾಗಿಯೂ ಲಿಖಿತ ಪತ್ರ ನೀಡಿದರು.‌

ಇದಾದ ನಂತರ ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದರು.

ಹೋರಾಟದಲ್ಲಿ ಕಾಳಪ್ಪ ಬಡಾವಣೆಯ ಮುಖಂಡರಾದ ಆರ್ಮುಗಂ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು, ಕರ್ನಾಟಕ ಶ್ರಮಿಕ ಶಕ್ತಿಯ ನಾಯಕರಾದ ಸುಬ್ರಹ್ಮಣ್ಯ, ಶ್ರಮಿಕ ನಿವಾಸಿಗಳ ಒಕ್ಕೂಟದ ಪ್ರಕಾಶ್, ಕೃಷ್ಣಪ್ಪ, ರಾಜು, ನಿಂಗಮ್ಮ, ಮಹಿಳಾ ಮುನ್ನಡೆಯ ಕಮಲ, ಜ್ಯೋತಿ, ಶಿಲ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಂಜಲಿ, ಪುನೀತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...