Homeಚಳವಳಿಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾವು ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಬೇಕು, ಹಕ್ಕುಪತ್ರ ನೀಡಿ ಉಳಿಸಿಕೊಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ಹೋರಾಡುತ್ತಿದ್ದ ಮಂಡ್ಯದ ಶ್ರಮಿಕರಿಗೆ ಮೊದಲ ಹಂತದ ಜಯ ಸಿಕ್ಕಿದೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕೆ.ಆರ್ ಪೇಟೆ ಕಡೆಗೆ ಪಾದಯಾತ್ರೆ ಹೊರಟಿದ್ದ ಪ್ರತಿಭಟನಾಕಾರನ್ನು ಪಾಂಡವಪುರದಲ್ಲಿ ಭೇಟಿ ಮಾಡಿ ಸಭೆ ನಡೆಸಿದ ಅಧಿಕಾರಿಗಳು 10 ದಿನಗಳ ಒಳಗೆ ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಲು ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಜುಲೈ 26ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಮತ್ತು ಪುರಸಭೆ ಅಧಿಕಾರಿಗಳು ಬಂದು ಕಾಳಪ್ಪ ಬಡಾವಣೆಯ ಮತ್ತು ಇನ್ನಿತರ ಶ್ರಮಿಕನಗರಗಳ (ಸ್ಲಂಗಳ) ಎಲ್ಲ ಸಮಸ್ಯೆಗಳನ್ನೂ ಚರ್ಚಿಸಲು ಜಿಲ್ಲಾಧಿಕಾರಿ ಕಛೇರಿಯಿಂದ ಕರೆಯಲಾಗಿರುವ ಸಭೆಯ ತಿಳುವಳಿಕೆ ಪತ್ರವನ್ನು ನೀಡಿದರು. ಅದೇ ರೀತಿ ಅಂತಿಮ ಘೋಷಣೆ ಹೊರಡಿಸಲು ಮತ್ತು ಹಕ್ಕುಪತ್ರ ನೀಡಲು ಪ್ರಕ್ರಿಯೆಯನ್ನು ಈ ತಕ್ಷಣದಿಂದಲೇ ಆರಂಭಿಸುವುದಾಗಿಯೂ ಹತ್ತು ದಿನದ ಒಳಗಾಗಿ ಮುಗಿಸುವುದಾಗಿಯೂ ಲಿಖಿತ ಪತ್ರ ನೀಡಿದರು.‌

ಇದಾದ ನಂತರ ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದರು.

ಹೋರಾಟದಲ್ಲಿ ಕಾಳಪ್ಪ ಬಡಾವಣೆಯ ಮುಖಂಡರಾದ ಆರ್ಮುಗಂ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು, ಕರ್ನಾಟಕ ಶ್ರಮಿಕ ಶಕ್ತಿಯ ನಾಯಕರಾದ ಸುಬ್ರಹ್ಮಣ್ಯ, ಶ್ರಮಿಕ ನಿವಾಸಿಗಳ ಒಕ್ಕೂಟದ ಪ್ರಕಾಶ್, ಕೃಷ್ಣಪ್ಪ, ರಾಜು, ನಿಂಗಮ್ಮ, ಮಹಿಳಾ ಮುನ್ನಡೆಯ ಕಮಲ, ಜ್ಯೋತಿ, ಶಿಲ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಂಜಲಿ, ಪುನೀತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...