Homeಮುಖಪುಟಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

ಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

- Advertisement -
- Advertisement -

ಗುಜರಾತ್‌ನ ಕಚ್‌ ಜಿಲ್ಲೆಯ ಮುಂದ್ರಾ ಗ್ರಾಮಸ್ಥರು 13 ವರ್ಷಗಳ ಕಾಲ ನಡೆಸಿದ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ 2005ರಲ್ಲಿ ಅದಾನಿ ಸಮೂಹಕ್ಕೆ ಮಂಜೂರು ಮಾಡಿದ್ದ 108 ಹೆಕ್ಟೇರ್‌ ಗೋಮಾಳದ ಜಾಗವನ್ನು ಮರಳಿ ಗ್ರಾಮಸ್ಥರಿಗೆ ನೀಡಲು ನಿರ್ಧಿರಿಸಿರುವುದಾಗಿ ಹೈಕೋರ್ಟ್‌ಗೆ ತಿಳಿಸಿದೆ.

ವಿಶೇಷ ಅರ್ಥಿಕ ವಲಯ (ಸೆಝ್) ಮತ್ತು ಅದಾನಿ ಬಂದರಿಗೆ 231 ಎಕರೆ ಗೋಮಾಳದ ಜಾಗವನ್ನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಸರ್ಕಾರ 2005ರಲ್ಲಿ ಜಮೀನು ಮಂಜೂರು ಮಾಡಿದ್ದರೂ ಈ ವಿಚಾರ ಗ್ರಾಮಸ್ಥರಿಗೆ ತಿಳಿದಿರಲಿಲ್ಲ. 2010ರಲ್ಲಿ ಅದಾನಿ ಬಂದರು ಮತ್ತು ಸೆಝ್ ಜಂಟಿಯಾಗಿ ತಮಗೆ ಮಂಜೂರಾದ ಜಮೀನಿಗೆ ಬೇಲಿ ಹಾಕಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕಾನೂನು ಹೋರಾಟಕ್ಕೆ ಧುಮುಕಿದ್ದರು.

ಗ್ರಾಮಸ್ಥರ ಪ್ರಕಾರ, 279 ಎಕರೆ ಗೋಮಾಳದ ಜಾಗದಲ್ಲಿ 45 ಎಕರೆ ಬಿಟ್ಟು ಉಳಿದ 231 ಎಕರೆಯನ್ನು ಕಾರ್ಪೋರೇಟ್ ವಲಯಕ್ಕೆ ಮಂಜೂರು ಮಾಡಲಾಗಿತ್ತು. ಗೋಮಾಳದ ಕೊರತೆ ಎದುರಿಸುತ್ತಿದ್ದ ಗ್ರಾಮಸ್ಥರಿಗೆ ಇದರಿಂದ ಇನ್ನಷ್ಟು ಸಮಸ್ಯೆ ಆಗಿತ್ತು. ಗೋಮಾಳದ ಜಾಗ ಸಮುದಾಯದ ಸಂಪನ್ಮೂಲ ಎಂದು ಅವರು ಪ್ರತಿಪಾದಿಸಿದ್ದರು.

2014ರಲ್ಲಿ ಹೆಚ್ಚುವರಿ 387 ಎಕರೆ ಸರ್ಕಾರಿ ಭೂಮಿಯನ್ನು ಗೋಮಾಳಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದ್ದ ಹಿನ್ನೆಲೆ ಹೈಕೋರ್ಟ್ ಪಿಐಎಲ್ ಇತ್ಯರ್ಥಪಡಿಸಿತ್ತು.

ಆದರೆ, ಅದು ಸಾಧ್ಯವಾಗದಿದ್ದಾಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. 2015 ರಲ್ಲಿ, ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಪಂಚಾಯಿತಿಗೆ ಹಂಚಿಕೆ ಮಾಡಲು ಲಭ್ಯವಿರುವ ಭೂಮಿ ಕೇವಲ 17 ಹೆಕ್ಟೇರ್‌ ಎಂದು ತಿಳಿಸಿತ್ತು.

ನಂತರ ರಾಜ್ಯ ಸರ್ಕಾರ ಸುಮಾರು 7 ಕಿಲೋ ಮೀಟರ್ ದೂರದಲ್ಲಿ ಉಳಿದ ಭೂಮಿಯನ್ನು ಮಂಜೂರು ಮಾಡುವುದಾಗಿ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಜಾನುವಾರುಗಳು ಅಷ್ಟು ದೂರ ಹೋಗಲು ಸಾಧ್ಯವಿಲ್ಲ ಎಂದಿದ್ದರು.

ಏಪ್ರಿಲ್ 2024 ರಲ್ಲಿ, ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಪ್ರಣವ್ ತ್ರಿವೇದಿ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪರಿಹಾರ ನೀಡುವಂತೆ ಸೂಚಿಸಿತ್ತು.

ಶುಕ್ರವಾರ (ಜುಲೈ 5,2024) ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ ಅದಾನಿ ಸೆಝ್‌ಗೆ ಹಂಚಲಾಗಿದ್ದ ಸುಮಾರು 108 ಹೆಕ್ಟೇರ್ ಅಥವಾ 266 ಎಕರೆ ಗೋಮಾಳದ ಜಾಗವನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಪೀಠಕ್ಕೆ ತಿಳಿಸಿದೆ.

ರಾಜ್ಯ ಸರ್ಕಾರವು 129 ಹೆಕ್ಟೇರ್ ಭೂಮಿಯನ್ನು ಗೋಮಾಳವಾಗಿ “ಮರುಪೂರಣ” ಮಾಡಿ ಅದನ್ನು ಗ್ರಾಮಕ್ಕೆ ಹಿಂದಿರುಗಿಸಲಿದೆ. ಇದಕ್ಕಾಗಿ ತನ್ನದೇ ಆದ ಕೆಲವು ಭೂಮಿಯನ್ನು ಬಳಸಲಿದೆ. 108 ಹೆಕ್ಟೇರ್ ಅನ್ನು ಅದಾನಿ ಸಮೂಹ ಸಂಸ್ಥೆಯಿಂದ ಹಿಂದಕ್ಕೆ ತೆಗೆದುಕೊಳ್ಳಲಿದೆ ಎಂದು ಕಂದಾಯ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.

ಹೈಕೋರ್ಟ್ ಪೀಠ ಈ ನಿರ್ಧಾರಕ್ಕೆ ತೃಪ್ತಿ ವ್ಯಕ್ತಪಡಿಸಿದ್ದು, ಈ ನಿರ್ಣಯವನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ : ಮಹಿಳಾ ಆಯೋಗದ ಮುಖ್ಯಸ್ಥೆ ಕುರಿತು ಪೋಸ್ಟ್‌; ಹೊಸ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಮಹುವಾ ವಿರುದ್ಧ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...