Homeಮುಖಪುಟಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

ಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

- Advertisement -
- Advertisement -

ಗುಜರಾತ್‌ನ ಕಚ್‌ ಜಿಲ್ಲೆಯ ಮುಂದ್ರಾ ಗ್ರಾಮಸ್ಥರು 13 ವರ್ಷಗಳ ಕಾಲ ನಡೆಸಿದ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ 2005ರಲ್ಲಿ ಅದಾನಿ ಸಮೂಹಕ್ಕೆ ಮಂಜೂರು ಮಾಡಿದ್ದ 108 ಹೆಕ್ಟೇರ್‌ ಗೋಮಾಳದ ಜಾಗವನ್ನು ಮರಳಿ ಗ್ರಾಮಸ್ಥರಿಗೆ ನೀಡಲು ನಿರ್ಧಿರಿಸಿರುವುದಾಗಿ ಹೈಕೋರ್ಟ್‌ಗೆ ತಿಳಿಸಿದೆ.

ವಿಶೇಷ ಅರ್ಥಿಕ ವಲಯ (ಸೆಝ್) ಮತ್ತು ಅದಾನಿ ಬಂದರಿಗೆ 231 ಎಕರೆ ಗೋಮಾಳದ ಜಾಗವನ್ನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಸರ್ಕಾರ 2005ರಲ್ಲಿ ಜಮೀನು ಮಂಜೂರು ಮಾಡಿದ್ದರೂ ಈ ವಿಚಾರ ಗ್ರಾಮಸ್ಥರಿಗೆ ತಿಳಿದಿರಲಿಲ್ಲ. 2010ರಲ್ಲಿ ಅದಾನಿ ಬಂದರು ಮತ್ತು ಸೆಝ್ ಜಂಟಿಯಾಗಿ ತಮಗೆ ಮಂಜೂರಾದ ಜಮೀನಿಗೆ ಬೇಲಿ ಹಾಕಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕಾನೂನು ಹೋರಾಟಕ್ಕೆ ಧುಮುಕಿದ್ದರು.

ಗ್ರಾಮಸ್ಥರ ಪ್ರಕಾರ, 279 ಎಕರೆ ಗೋಮಾಳದ ಜಾಗದಲ್ಲಿ 45 ಎಕರೆ ಬಿಟ್ಟು ಉಳಿದ 231 ಎಕರೆಯನ್ನು ಕಾರ್ಪೋರೇಟ್ ವಲಯಕ್ಕೆ ಮಂಜೂರು ಮಾಡಲಾಗಿತ್ತು. ಗೋಮಾಳದ ಕೊರತೆ ಎದುರಿಸುತ್ತಿದ್ದ ಗ್ರಾಮಸ್ಥರಿಗೆ ಇದರಿಂದ ಇನ್ನಷ್ಟು ಸಮಸ್ಯೆ ಆಗಿತ್ತು. ಗೋಮಾಳದ ಜಾಗ ಸಮುದಾಯದ ಸಂಪನ್ಮೂಲ ಎಂದು ಅವರು ಪ್ರತಿಪಾದಿಸಿದ್ದರು.

2014ರಲ್ಲಿ ಹೆಚ್ಚುವರಿ 387 ಎಕರೆ ಸರ್ಕಾರಿ ಭೂಮಿಯನ್ನು ಗೋಮಾಳಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದ್ದ ಹಿನ್ನೆಲೆ ಹೈಕೋರ್ಟ್ ಪಿಐಎಲ್ ಇತ್ಯರ್ಥಪಡಿಸಿತ್ತು.

ಆದರೆ, ಅದು ಸಾಧ್ಯವಾಗದಿದ್ದಾಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. 2015 ರಲ್ಲಿ, ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಪಂಚಾಯಿತಿಗೆ ಹಂಚಿಕೆ ಮಾಡಲು ಲಭ್ಯವಿರುವ ಭೂಮಿ ಕೇವಲ 17 ಹೆಕ್ಟೇರ್‌ ಎಂದು ತಿಳಿಸಿತ್ತು.

ನಂತರ ರಾಜ್ಯ ಸರ್ಕಾರ ಸುಮಾರು 7 ಕಿಲೋ ಮೀಟರ್ ದೂರದಲ್ಲಿ ಉಳಿದ ಭೂಮಿಯನ್ನು ಮಂಜೂರು ಮಾಡುವುದಾಗಿ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಜಾನುವಾರುಗಳು ಅಷ್ಟು ದೂರ ಹೋಗಲು ಸಾಧ್ಯವಿಲ್ಲ ಎಂದಿದ್ದರು.

ಏಪ್ರಿಲ್ 2024 ರಲ್ಲಿ, ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಪ್ರಣವ್ ತ್ರಿವೇದಿ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪರಿಹಾರ ನೀಡುವಂತೆ ಸೂಚಿಸಿತ್ತು.

ಶುಕ್ರವಾರ (ಜುಲೈ 5,2024) ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ ಅದಾನಿ ಸೆಝ್‌ಗೆ ಹಂಚಲಾಗಿದ್ದ ಸುಮಾರು 108 ಹೆಕ್ಟೇರ್ ಅಥವಾ 266 ಎಕರೆ ಗೋಮಾಳದ ಜಾಗವನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಪೀಠಕ್ಕೆ ತಿಳಿಸಿದೆ.

ರಾಜ್ಯ ಸರ್ಕಾರವು 129 ಹೆಕ್ಟೇರ್ ಭೂಮಿಯನ್ನು ಗೋಮಾಳವಾಗಿ “ಮರುಪೂರಣ” ಮಾಡಿ ಅದನ್ನು ಗ್ರಾಮಕ್ಕೆ ಹಿಂದಿರುಗಿಸಲಿದೆ. ಇದಕ್ಕಾಗಿ ತನ್ನದೇ ಆದ ಕೆಲವು ಭೂಮಿಯನ್ನು ಬಳಸಲಿದೆ. 108 ಹೆಕ್ಟೇರ್ ಅನ್ನು ಅದಾನಿ ಸಮೂಹ ಸಂಸ್ಥೆಯಿಂದ ಹಿಂದಕ್ಕೆ ತೆಗೆದುಕೊಳ್ಳಲಿದೆ ಎಂದು ಕಂದಾಯ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.

ಹೈಕೋರ್ಟ್ ಪೀಠ ಈ ನಿರ್ಧಾರಕ್ಕೆ ತೃಪ್ತಿ ವ್ಯಕ್ತಪಡಿಸಿದ್ದು, ಈ ನಿರ್ಣಯವನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ : ಮಹಿಳಾ ಆಯೋಗದ ಮುಖ್ಯಸ್ಥೆ ಕುರಿತು ಪೋಸ್ಟ್‌; ಹೊಸ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಮಹುವಾ ವಿರುದ್ಧ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...