Homeಮುಖಪುಟಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

ಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

- Advertisement -
- Advertisement -

ಗುಜರಾತ್‌ನ ಕಚ್‌ ಜಿಲ್ಲೆಯ ಮುಂದ್ರಾ ಗ್ರಾಮಸ್ಥರು 13 ವರ್ಷಗಳ ಕಾಲ ನಡೆಸಿದ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ 2005ರಲ್ಲಿ ಅದಾನಿ ಸಮೂಹಕ್ಕೆ ಮಂಜೂರು ಮಾಡಿದ್ದ 108 ಹೆಕ್ಟೇರ್‌ ಗೋಮಾಳದ ಜಾಗವನ್ನು ಮರಳಿ ಗ್ರಾಮಸ್ಥರಿಗೆ ನೀಡಲು ನಿರ್ಧಿರಿಸಿರುವುದಾಗಿ ಹೈಕೋರ್ಟ್‌ಗೆ ತಿಳಿಸಿದೆ.

ವಿಶೇಷ ಅರ್ಥಿಕ ವಲಯ (ಸೆಝ್) ಮತ್ತು ಅದಾನಿ ಬಂದರಿಗೆ 231 ಎಕರೆ ಗೋಮಾಳದ ಜಾಗವನ್ನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಸರ್ಕಾರ 2005ರಲ್ಲಿ ಜಮೀನು ಮಂಜೂರು ಮಾಡಿದ್ದರೂ ಈ ವಿಚಾರ ಗ್ರಾಮಸ್ಥರಿಗೆ ತಿಳಿದಿರಲಿಲ್ಲ. 2010ರಲ್ಲಿ ಅದಾನಿ ಬಂದರು ಮತ್ತು ಸೆಝ್ ಜಂಟಿಯಾಗಿ ತಮಗೆ ಮಂಜೂರಾದ ಜಮೀನಿಗೆ ಬೇಲಿ ಹಾಕಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕಾನೂನು ಹೋರಾಟಕ್ಕೆ ಧುಮುಕಿದ್ದರು.

ಗ್ರಾಮಸ್ಥರ ಪ್ರಕಾರ, 279 ಎಕರೆ ಗೋಮಾಳದ ಜಾಗದಲ್ಲಿ 45 ಎಕರೆ ಬಿಟ್ಟು ಉಳಿದ 231 ಎಕರೆಯನ್ನು ಕಾರ್ಪೋರೇಟ್ ವಲಯಕ್ಕೆ ಮಂಜೂರು ಮಾಡಲಾಗಿತ್ತು. ಗೋಮಾಳದ ಕೊರತೆ ಎದುರಿಸುತ್ತಿದ್ದ ಗ್ರಾಮಸ್ಥರಿಗೆ ಇದರಿಂದ ಇನ್ನಷ್ಟು ಸಮಸ್ಯೆ ಆಗಿತ್ತು. ಗೋಮಾಳದ ಜಾಗ ಸಮುದಾಯದ ಸಂಪನ್ಮೂಲ ಎಂದು ಅವರು ಪ್ರತಿಪಾದಿಸಿದ್ದರು.

2014ರಲ್ಲಿ ಹೆಚ್ಚುವರಿ 387 ಎಕರೆ ಸರ್ಕಾರಿ ಭೂಮಿಯನ್ನು ಗೋಮಾಳಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದ್ದ ಹಿನ್ನೆಲೆ ಹೈಕೋರ್ಟ್ ಪಿಐಎಲ್ ಇತ್ಯರ್ಥಪಡಿಸಿತ್ತು.

ಆದರೆ, ಅದು ಸಾಧ್ಯವಾಗದಿದ್ದಾಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. 2015 ರಲ್ಲಿ, ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಪಂಚಾಯಿತಿಗೆ ಹಂಚಿಕೆ ಮಾಡಲು ಲಭ್ಯವಿರುವ ಭೂಮಿ ಕೇವಲ 17 ಹೆಕ್ಟೇರ್‌ ಎಂದು ತಿಳಿಸಿತ್ತು.

ನಂತರ ರಾಜ್ಯ ಸರ್ಕಾರ ಸುಮಾರು 7 ಕಿಲೋ ಮೀಟರ್ ದೂರದಲ್ಲಿ ಉಳಿದ ಭೂಮಿಯನ್ನು ಮಂಜೂರು ಮಾಡುವುದಾಗಿ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಜಾನುವಾರುಗಳು ಅಷ್ಟು ದೂರ ಹೋಗಲು ಸಾಧ್ಯವಿಲ್ಲ ಎಂದಿದ್ದರು.

ಏಪ್ರಿಲ್ 2024 ರಲ್ಲಿ, ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಪ್ರಣವ್ ತ್ರಿವೇದಿ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪರಿಹಾರ ನೀಡುವಂತೆ ಸೂಚಿಸಿತ್ತು.

ಶುಕ್ರವಾರ (ಜುಲೈ 5,2024) ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ ಅದಾನಿ ಸೆಝ್‌ಗೆ ಹಂಚಲಾಗಿದ್ದ ಸುಮಾರು 108 ಹೆಕ್ಟೇರ್ ಅಥವಾ 266 ಎಕರೆ ಗೋಮಾಳದ ಜಾಗವನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಪೀಠಕ್ಕೆ ತಿಳಿಸಿದೆ.

ರಾಜ್ಯ ಸರ್ಕಾರವು 129 ಹೆಕ್ಟೇರ್ ಭೂಮಿಯನ್ನು ಗೋಮಾಳವಾಗಿ “ಮರುಪೂರಣ” ಮಾಡಿ ಅದನ್ನು ಗ್ರಾಮಕ್ಕೆ ಹಿಂದಿರುಗಿಸಲಿದೆ. ಇದಕ್ಕಾಗಿ ತನ್ನದೇ ಆದ ಕೆಲವು ಭೂಮಿಯನ್ನು ಬಳಸಲಿದೆ. 108 ಹೆಕ್ಟೇರ್ ಅನ್ನು ಅದಾನಿ ಸಮೂಹ ಸಂಸ್ಥೆಯಿಂದ ಹಿಂದಕ್ಕೆ ತೆಗೆದುಕೊಳ್ಳಲಿದೆ ಎಂದು ಕಂದಾಯ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.

ಹೈಕೋರ್ಟ್ ಪೀಠ ಈ ನಿರ್ಧಾರಕ್ಕೆ ತೃಪ್ತಿ ವ್ಯಕ್ತಪಡಿಸಿದ್ದು, ಈ ನಿರ್ಣಯವನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ : ಮಹಿಳಾ ಆಯೋಗದ ಮುಖ್ಯಸ್ಥೆ ಕುರಿತು ಪೋಸ್ಟ್‌; ಹೊಸ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಮಹುವಾ ವಿರುದ್ಧ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...