Homeಅಂಕಣಗಳುಚರ್ಚಿಲ್ ಮಾತು ನಿಜವಾಯಿತು ಎನ್ನುವ ಸ್ಥಿತಿ ಭಾರತಕ್ಕೆ ಬರಬಾರದು..

ಚರ್ಚಿಲ್ ಮಾತು ನಿಜವಾಯಿತು ಎನ್ನುವ ಸ್ಥಿತಿ ಭಾರತಕ್ಕೆ ಬರಬಾರದು..

ಭಾರತಕ್ಕೆ ಸ್ವಾತಂತ್ರ್ಯ ದೊರೆತಾಗ ಇಂಗ್ಲೆಂಡಿನ ಮಾಜಿ ಪ್ರಧಾನಿ ಚರ್ಚಿಲ್ ಆಗಿನ ಪ್ರಧಾನಮಂತ್ರಿಯಾಗಿದ್ದ ಲಾರ್ಡ್ ಅಟ್ಲೀ ಅವರಿಗೆ ಹೇಳುವ ಮಾತು ಇದು. ‘ಸ್ಕೌಂಡ್ರಲ್ಸ್ ಮತ್ತು ಥಗ್ಸ್ ಕೈಯಲ್ಲಿ ಭಾರತವನ್ನು ಕೊಟ್ಟು ಬಂದಿದ್ದೀರಿ’ ಎಂದು

- Advertisement -
- Advertisement -

ಬಿಜೆಪಿಯ ಅಧ್ಯಕ್ಷರು ಮತ್ತು ಕೇಂದ್ರ ಗೃಹಮಂತ್ರಿಗಳೂ ಆದ ಅಮಿತ್ ಷಾ ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ಕಾರ್ಯಾಚರಣೆ (Coup) ಒಂದು ರಾಜಕೀಯ ಕ್ರೀಡೆ ಎನ್ನುತ್ತಾರೆ. ರಾಜಕೀಯ ಒಂದು ಚದುರಂಗದಾಟ ಎಂದು ಷಾ ಭಾವಿಸಿರುವಂತಿದೆ. ರಾಜಮಹಾರಾಜರ ಕಾಲದಲ್ಲಿ ರಾಜಕೀಯ ಒಂದು ಚದುರಂಗದಾಟ ಆಗಿತ್ತು. ಷಾ ಇನ್ನೂ ರಾಜರ ಕಾಲದಲ್ಲೆ ಇದ್ದಾರೆ. ಮೋದಿ ಮತ್ತು ಷಾ ಜೋಡಿ ಗುಜರಾತಿನಲ್ಲಿ ಮಾಡಿದ್ದೂ ಅದನ್ನೇ. ಅವರು ಆ ಆಟದಲ್ಲಿ ಗೆಲುವು ಸಾಧಿಸಿದ್ದರಿಂದ ಅದೇ ಚದುರಂಗದಾಟದಿಂದ ಹುರುಪುಗೊಂಡು ಎಲ್ಲಾ ರಾಜ್ಯಗಳಿಗೂ ವಿಸ್ತರಿಸಲು ತೊಡಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ಚದುರಂಗದಾಟ ಆಡಲು ಹೋಗಿ ಪ್ರಥಮ ಚುಂಬನದಲ್ಲೇ ದಂತಭಗ್ನ ಮಾಡಿಕೊಂಡಿದ್ದಾರೆ. ಮೋದಿ ಮತ್ತು ಷಾ ಪ್ರಜಾಪ್ರಭುತ್ವದ ವಿರೋಧಿಗಳು, ಅಧಿಕಾರ ಹಿಡಿಯುವ ಅಮಲಿನಲ್ಲಿ ಅವರು ಮಾಡಬಾರದ್ದನ್ನು ಮಾಡುತ್ತಾರೆ. ರಾಜಕೀಯ ತನ್ನ ಪವಿತ್ರತೆಯನ್ನು ಉಳಿಸಿಕೊಳ್ಳಬೇಕು, ರಾಜ್ಯಾಂಗವನ್ನು ಗೌರವಿಸಬೇಕು. ಅದು ಬಿಟ್ಟು ರಾಜಕೀಯ ಅಪಮಾರ್ಗ ಹಿಡಿಯುವುದು ಆತಂಕಕಾರಿ ವಿಷಯ.

ಚುನಾವಣೆ ಒಂದು ಆಟ ಅಲ್ಲ. ಹುಡುಗಾಟ ಅಲ್ಲವೇ ಅಲ್ಲ. ದೇಶದ ಭವಿಷ್ಯವನ್ನು ರೂಪಿಸುವ ಜನಪ್ರತಿನಿಧಿಗಳನ್ನು ಮುತುವರ್ಜಿಯಿಂದ ಆಯ್ಕೆ ಮಾಡುವ ಸಾಧನ ಚುನಾವಣೆ. ಅದು ಹುಡುಗಾಟವಾದರೆ ಗೂಂಡಾಗಳು, ಸಮಯಸಾಧಕರು, ಪಟ್ಟಭದ್ರರು ಸರ್ಕಾರವನ್ನು ಕಬ್ಜಾ ಮಾಡುತ್ತಾರೆ. ಅವರು ಈ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಈಗ ಮಹಾರಾಷ್ಟ್ರದಲ್ಲಿ ಆ ಪ್ರಯೋಗವನ್ನು ಮೋದಿ, ಷಾಗಳು ರೂಪಿಸಿದರು.

ಈ ಸಾರಿಯ ಚುನಾವಣೆಯಲ್ಲಿ, ಬಿಜೆಪಿ ಬಹುಮತ ಪಡೆಯಲಿಲ್ಲ. ಶರದ್ ಪವಾರರ ಎನ್.ಸಿ.ಪಿ., ಶಿವಸೇನೆ ಯಾವುದಕ್ಕೂ ಬಹುಮತ ಬರಲಿಲ್ಲ. ಎಂದಿನಂತೆ ಬಿಜೆಪಿ ಶಿವಸೇನಾ ಜೊತೆ ಸೇರಿಕೊಂಡು ಮಂತ್ರಿಮಂಡಲ ರಚಿಸುವ ನಿರೀಕ್ಷೆ ಇತ್ತು. ಆದರೆ ಶಿವಸೇನೆ ತನಗೆ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಪದವಿ ಬಿಟ್ಟು ಕೊಡಬೇಕೆಂದು ಷರತ್ತು ಹಾಕಿತು. ಬಿಜೆಪಿಯು ಶಿವಸೇನೆಯ ಈ ಡಿಮ್ಯಾಂಡನ್ನು ಒಪ್ಪಿಕೊಳ್ಳಲಿಲ್ಲ. ಆಗ ಶಿವಸೇನಾ, ಎನ್.ಸಿ.ಪಿ ಮತ್ತು ಕಾಂಗ್ರೆಸ್ ಬೆಂಬಲದಿಂದ ಸರ್ಕಾರ ರಚಿಸುವ ಪ್ರಸ್ತಾವನೆಯನ್ನು ಶರದ್ ಪವಾರ್ ಮುಂದೆ ಇಟ್ಟಿತು.

ಶರದ್ ಪವಾರ್, ಶಿವಸೇನೆಯೊಡನೆ ಕೈಜೋಡಿಸಲು ಒಪ್ಪಿ ಕಾಂಗ್ರೆಸ್‍ನ ನೆರವನ್ನು ಪಡೆಯಲು ಮುಂದಾದರು. ಆದರೆ ಕಾಂಗ್ರೆಸ್ಸಿಗೆ, ಶಿವಸೇನೆಯೊಡನೆ ಕೂಡಿಕೊಂಡು ಸರ್ಕಾರ ನಡೆಸುವುದು ಕಷ್ಟಸಾಧ್ಯವೆನಿಸಿತು. ಏಕೆಂದರೆ ಶಿವಸೇನೆ ಬಿಜೆಪಿಯಂತೆಯೇ ಕೋಮುವಾದಿ ಪಕ್ಷ. ಬಿಜೆಪಿ ಜೊತೆಗೆ ಇದ್ದುಕೊಂಡು ಸಮಸ್ಯೆಗಳನ್ನೂ ಸೃಷ್ಟಿಸಿ ಸದಾ ಗುದ್ದಾಡುತ್ತಲೇ ಕಾಲಕಳೆಯುವ ಪಕ್ಷ. ಈ ಪಕ್ಷದೊಡನೆ ಹೊಂದಾಣಿಕೆ ಮಾಡಿಕೊಳ್ಳುವುದು ಅಸಾಧ್ಯ ಎಂಬುದು ಕಾಂಗ್ರೆಸ್ಸಿನ ನಿಲುವು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಮಹಾರಾಷ್ಟ್ರದಲ್ಲಿ ಅಧಿಕಾರದಿಂದ ದೂರ ಇಡಲು ಇದು ಸದವಕಾಶ ಎಂಬ ದೃಷ್ಟಿಯಿಂದ ಕಾಂಗ್ರೆಸ್ ಶರದ್ ಪವಾರ್ ಜೊತೆಗೂಡಲು ನಿರ್ಧರಿಸಿತು. ಇದನ್ನರಿತ ಮೋದಿ, ಷಾದ್ವಯರು ಎನ್.ಸಿ.ಪಿಯಲ್ಲಿ ಒಂದು ಕ್ಷಿಪ್ರ ಕಾರ್ಯಾಚರಣೆ (Coup) ನಡೆಸಲು ಮುಂದಾದರು.

ಎನ್.ಸಿ.ಪಿಯ ಅಧ್ಯಕ್ಷ ಶರದ್ ಪವಾರ್ ಅವರ ಅಣ್ಣನ ಮಗ ಅಜಿತ್‍ಪವಾರರನ್ನು ಬಳಸಿಕೊಂಡು ಎನ್.ಸಿ.ಪಿಯನ್ನು ಒಡೆಯುವ ಯತ್ನ ನಡೆಯಿತು. ಫಡ್ನವಿಸ್‍ಗೆ ಮುಖ್ಯಮಂತ್ರಿ ಅಜಿತ್ ಪವಾರ್‍ಗೆ ಉಪಮುಖ್ಯಮಂತ್ರಿ ಪದವಿ ನೀಡುವ ಹುನ್ನಾರಕ್ಕೆ ಕೈ ಹಾಕಿತು, ರಾಜಕೀಯ ಒಂದು ಚದುರಂಗದಾಟ ಎನ್ನುವ ಅಮಿತ್ ಷಾ ಈ ‘ಕ್ಷಿಪ್ರ ಕಾರ್ಯಾಚರಣೆ’ಗೆ ಅಧ್ವರ್ಯುವಾಗಿ ನಿಂತರು.

ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್, ಕಾಂಗ್ರೆಸ್ಸಿನೊಡನೆ ಸಂಧಾನ ನಡೆಸುತ್ತಿದ್ದಾಗಲೇ ರಾತ್ರೋರಾತ್ರಿ ರಾಷ್ಟ್ರಾಧ್ಯಕ್ಷರ ಆಡಳಿತ ರದ್ದುಗೊಳಿಸಿ, ಬಿಜೆಪಿಯ ಫಡ್ನವೀಸರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಎಂದೂ ಅಜಿತ್ ಪವಾರರನ್ನು ಉಪಮುಖ್ಯಮಂತ್ರಿಯೆಂದೂ ಹೆಸರಿಸಿ ಅವರಿಗೆ ಬೆಳಗಿನ ಜಾವ ಪಟ್ಟ ಕಟ್ಟಿಯೇ ಬಿಟ್ಟರು. ಈ ಸುದ್ದಿ ತಿಳಿದ ಶರದ್ ಪವಾರ್‍ಗೆ ಶಾಕ್ ಆಯಿತು.

ಶರದ್ ಪವಾರ್ ತಡಮಾಡದೆ ತನ್ನ ಪಕ್ಷದ ಶಾಸಕರನ್ನು ತನ್ನೊಂದಿಗಿಟ್ಟುಕೊಳ್ಳಲು ತೊಡಗಿದರು. ಶಿವಸೇನೆ ಎನ್.ಸಿ.ಪಿ. ಕಾಂಗ್ರೆಸ್ ಒಟ್ಟುಗೂಡಿ ಸರ್ವೋಚ್ಚ ನ್ಯಾಯಾಲಯಕ್ಕೆ ಇದರ ಕುರಿತು ತನಿಖೆ ಮಾಡಲು ಅರ್ಜಿ ಸಲ್ಲಿಸಿದರು. 24 ಗಂಟೆಯೊಳಗೆ ಶಾಸನಸಭೆ ಕರೆದು ತಮಗೆ ಬಹುಮತ ಇದೆಯೆಂದು ಸಾಬೀತು ಮಾಡಬೇಕೆಂದು ನ್ಯಾಯಾಲಯ ತೀರ್ಮಾನಿಸಿತು. ಫಡ್ನವಿಸ್ ತನಗೆ ಬಹುಮತವಿಲ್ಲವೆಂದು ಅರಿತು ಶಾಸನಸಭೆ ಕರೆಯದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಇತ್ತರು.

ಬಿಜೆಪಿಗೆ ಅದರಲ್ಲೂ ಮುಖ್ಯವಾಗಿ ಮೋದಿ ಮತ್ತು ಷಾ ಅವರಿಗೆ ತಮ್ಮ ಆಟ ನಡೆಯದಿದ್ದಕ್ಕೆ ನಿರಾಸೆ ಆಯಿತು. ಅರ್ಥಾತ್ ಷಾ ಮತ್ತು ಮೋದಿಯವರ ಭಾರತೀಯ ಜನತಾ ಪಕ್ಷದ ಮಧ್ಯರಾತ್ರಿಯ ತಂತ್ರಗಾರಿಕೆ ಇಂತಿದೆ. ಕಳೆದ ಭಾನುವಾರ ರಾತ್ರಿ 11.45ಕ್ಕೆ ಬಿಜೆಪಿಯು ಎನ್‍ಸಿಪಿ ಲೀಡರ್ ಅಜಿತ್ ಪವಾರ್ ಜೊತೆಗೆ ಡೀಲ್ ಮಾಡುತ್ತದೆ. 11.55ಕ್ಕೆ ಬಿಜೆಪಿ ನಾಯಕ ಫಡ್ನವೀಸ್ ತನ್ನ ನಾಯಕರಿಗೆ ಬೆಳಗ್ಗೆ ಪ್ರತಿಜ್ಞಾವಿಧಿ ತೆಗೆದುಕೊಳ್ಳುವುದಾಗಿ ಹೇಳುತ್ತಾರೆ. ರಾತ್ರಿ 12.30ಕ್ಕೆ ಗೌರ್ನರ್ ಬಿ.ಎಸ್.ಕೋಶ್ಯಾನಿ ತನ್ನ ಡೆಲ್ಲಿಗೆ ಹೋಗುವ ಪ್ರಯಾಣವನ್ನು ರದ್ದುಗೊಳಿಸುತ್ತಾರೆ.

ಬೆಳಗಿನ ಜಾವ 5.47ಕ್ಕೆ ರಾಷ್ಟ್ರಪತಿ ಆಡಳಿತ ರದ್ದುಗೊಳಿಸುವ ನೋಟಿಫಿಕೇಷನ್ ಜಾರಿಗೊಳಿಸುವಂತೆ ರಾತ್ರಿ 2.10 ರಲ್ಲಿ ಸೂಚನೆ ನೀಡಲಾಗುತ್ತದೆ. ಪ್ರತಿಜ್ಞಾವಿಧಿ ಸ್ವೀಕರಿಸಲು ಬೆಳಗಿನ 7.30ರ ಸಮಯವನ್ನು ನಿಗದಿಮಾಡಿರುವುದಾಗಿ ಕಾರ್ಯದರ್ಶಿ ಬೆಳಗಿನ 2.30ರಲ್ಲಿ ರಾಜ್ಯಪಾಲರಿಗೆ ತಿಳಿಸುತ್ತಾರೆ.

ಫಡ್ನವೀಸ್ ಮತ್ತು ಅಜಿತ್‍ಪವಾರ್ ಬೆಳಗಿನ ಜಾವ 5.30ಕ್ಕೆ ರಾಜಭವನಕ್ಕೆ ಆಗಮಿಸುತ್ತಾರೆ. 5.47ಕ್ಕೆ ಅಧ್ಯಕ್ಷರ ಆಡಳಿತದ ಆಜ್ಞೆಯನ್ನು ಹಿಂಪಡೆಯಲಾಗುತ್ತದೆ. 7.30ಕ್ಕೆ ಫಡ್ನವೀಸ್ ಮುಖ್ಯಮಂತ್ರಿಯಾಗಿ ಅಜಿತ್‍ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸುತ್ತಾರೆ.

ಈ ಎಲ್ಲ ಬೆಳವಣಿಗೆಯನ್ನು ಫಡ್ನವೀಸ್‍ರಿಂದಲೂ ಮುಚ್ಚಿಡಲಾಗಿತ್ತು ದೆಹಲಿಯಲ್ಲೆ ಈ Coup ಜನ್ಮತಳೆದದ್ದು. ಈ ‘ಚಾಣಕ್ಯ ರಾಜಕೀಯ’ ಷಾರವರ ಕೊಡುಗೆ. ಷಾರವರ ಆಪ್ತರೂ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಗಳೂ ಆದ ಭೂಪೇಂದ್ರಯಾದವ್‍ರವರು ಶುಕ್ರವಾರ ರಾತ್ರಿಯೇ ಮುಂಬೈಗೆ ತೆರಳಿ ಈ ಪ್ರಹಸನಕ್ಕೆ ಬೇಕಾದ ಎಲ್ಲಾ ಸಿದ್ಧತೆಯನ್ನು ಮಾಡಿದರು. ಪ್ರಧಾನಿ ಮೋದಿಯವರಿಗೆ ಈ ಹುನ್ನಾರದ ವಿವರಗಳೆಲ್ಲಾ ತಿಳಿದಿತ್ತು.

ಈ ಪ್ಲಾನ್ ಪರಾಭವಗೊಂಡದ್ದರಿಂದ ಮೋದಿ ಮತ್ತು ಷಾರವರು ಇತರ ರಾಜ್ಯಗಳಿಗೂ ಈ ವ್ಯಾಧಿ ಹರಡುವಂತೆ ಮಾಡುವ ಪ್ರಯತ್ನಗಳಿಗೆ ಕಲ್ಲುಬಿದ್ದಂತೆ ಆಗಿದೆ.

ಮಹಾರಾಷ್ಟ್ರದಲ್ಲಿ ಆದ ಈ ಪರಾಭವ, ದೇಶದ ಎಲ್ಲ ಮತದಾರರನ್ನೂ ಬಿಜೆಪಿಯ ನಡವಳಿಕೆಯ ಬಗೆಗೆ ಚಿಂತಿಸುವಂತೆ ಮಾಡಿದೆ. ಮುಂದೆ ನಡೆಯುವ ರಾಜ್ಯಗಳಲ್ಲಿನ ಚುನಾವಣೆಗಳಲ್ಲೂ, 2024ರಲ್ಲಿ ನಡೆಯುವ ಪಾರ್ಲಿಮೆಂಟ್ ಚುನಾವಣೆ ಸಂದರ್ಭದಲ್ಲೂ ಇಂತಹ ಕುತಂತ್ರಿಗಳಿಗೆ ಮತಹಾಕಿ ದೇಶವನ್ನು ಅಧೋಗತಿಗೆ ತರಲು ಸಹಕಾರಿಗಳಾಗಬೇಕೇ ಎಂದು ಚಿಂತಿಸುವ ಹಾಗೆ ಮಾಡಿದೆ.

ಭಾರತಕ್ಕೆ ಸ್ವಾತಂತ್ರ್ಯ ದೊರೆತಾಗ ಇಂಗ್ಲೆಂಡಿನ ಮಾಜಿ ಪ್ರಧಾನಿ ಚರ್ಚಿಲ್ ಆಗಿನ ಪ್ರಧಾನಮಂತ್ರಿಯಾಗಿದ್ದ ಲಾರ್ಡ್ ಅಟ್ಲೀ ಅವರಿಗೆ ಹೇಳುವ ಮಾತು ಇದು. ‘ಸ್ಕೌಂಡ್ರಲ್ಸ್ ಮತ್ತು ಥಗ್ಸ್ ಕೈಯಲ್ಲಿ ಭಾರತವನ್ನು ಕೊಟ್ಟು ಬಂದಿದ್ದೀರಿ’ ಎಂದು. ಆದರೆ ಅಂದು ರಾಜಕೀಯದಲ್ಲಿ ಇದ್ದವರು ಸ್ಕೌಂಡ್ರಲ್ಸ್ ಮತ್ತು ಥಗ್ಸ್ ಆಗಿರಲಿಲ್ಲ. ಏನೇ ಕೊರತೆಗಳಿದ್ದರೂ, ಭಾರತವು ಒಂದು ಪ್ರಜಾತಂತ್ರ ದೇಶವಾಗಿ ಸ್ಥಿರಗೊಳ್ಳುತ್ತಾ ಸಾಗಿತ್ತು. ಇಂದಿನ ರಾಜಕೀಯದಲ್ಲಿ ಅಂತಹ ಬದಲಾವಣೆ ಆಗಿದೆಯೆ? ಎಂಬ ಸಂದೇಹ ಮೂಡುತ್ತದೆ. ಅದಕ್ಕೆ ಒಂದು ಕಾರಣ ಮಹಾರಾಷ್ಟ್ರದ ರಾಜಕೀಯದಲ್ಲಿ ಇತ್ತೀಚೆಗೆ ಆಗಿರುವ ರಾಜಕೀಯ ಗೋಲ್ ಮಾಲ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಾರಾಷ್ಟ್ರದಲ್ಲಿ ಮನುವಾದಿಗಳ ಕುತಂತ್ರಕ್ಕೆ ಸೋಲುಂಟಾಗಿರುವುದು ಆಶಾದಾಯಕ ಬೆಳವಣಿಗೆ.

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...