Homeಮುಖಪುಟವಿಂಟರ್ ಒಲಿಂಪಿಕ್ಸ್-2022 | ತ್ರಿವರ್ಣ ಧ್ವಜವನ್ನು ಹೊತ್ತು ನಡೆದ ಭಾರತದ ಏಕೈಕ ಅಥ್ಲೀಟ್‌ ಆರಿಫ್‌ ಖಾನ್

ವಿಂಟರ್ ಒಲಿಂಪಿಕ್ಸ್-2022 | ತ್ರಿವರ್ಣ ಧ್ವಜವನ್ನು ಹೊತ್ತು ನಡೆದ ಭಾರತದ ಏಕೈಕ ಅಥ್ಲೀಟ್‌ ಆರಿಫ್‌ ಖಾನ್

- Advertisement -
- Advertisement -

ಫೆಬ್ರವರಿ 4ರ ಶುಕ್ರವಾರದಂದು ಬೀಜಿಂಗ್ ವಿಂಟರ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಪರೇಡ್ ಆಫ್ ನೇಷನ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಏಕೈಕ ಭಾರತೀಯ ಅಥ್ಲೀಟ್ ಆರಿಫ್ ಖಾನ್ ಅವರು ರಾಷ್ಟ್ರಧ್ವಜವನ್ನು ಹೊತ್ತು ಮುನ್ನಡೆದರು. ಆಕರ್ಷಕ ಉದ್ಘಾಟನಾ ಸಮಾರಂಭವು ಐಕಾನಿಕ್ ಬರ್ಡ್ಸ್ ನೆಸ್ಟ್ ಸ್ಟೇಡಿಯಂನಲ್ಲಿ ನಡೆಯಿತು.

ಆರಿಫ್ ಖಾನ್, ಕೆಂಪು ಜಾಕೆಟ್ ಧರಿಸಿ, ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜವನ್ನು ಹೊತ್ತಿದ್ದರು. ಅವರು ಜೊತೆಗೆ ಒಂದೆರಡು ಸಹಾಯಕ ಸಿಬ್ಬಂದಿ ಇದ್ದರು.

ಇದನ್ನೂ ಓದಿ: ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಬೀಜಿಂಗ್ ಒಲಿಂಪಿಕ್ಸ್‌ನ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರು ಚಳಿಗಾಲದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ಆರಿಫ್ ಖಾನ್ ಅವರನ್ನು ಟ್ವಿಟರ್‌‌ನಲ್ಲಿ ಶ್ಲಾಘಿಸಿದ್ದಾರೆ.

“ಕಾಶ್ಮೀರದಿಂದ ಒಲಿಂಪಿಕ್ಸ್‌ವರೆಗೆ! #Beijing2022ರಲ್ಲಿ ಭಾರತವನ್ನು ಪ್ರತಿನಿಧಿಸುವ ಏಕೈಕ ಕ್ರೀಡಾಪಟು #ArifKhan ತ್ರಿವರ್ಣ ಧ್ವಜವನ್ನು ಹೊತ್ತಿರುವುದನ್ನು ನೋಡಲು ನಿಜವಾಗಿಯೂ ಹೆಮ್ಮೆಪಡುತ್ತೇನೆ!” ಎಂದು ಅವರು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ದೇಶಗಳ ನಡುವೆ ನಡೆದ ಗಡಿ ಸಂಘರ್ಷದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದ ಚೀನಾ ಸೈನಿಕ ಒಲಿಂಪಿಕ್ ಜ್ಯೋತಿಯನ್ನು ಹೊತ್ತೊಯ್ದಿದ್ದನು. ಇದನ್ನು ವಿರೋಧಿಸಿರುವ ಭಾರತವು ಬೀಜಿಂಗ್‌ನಲ್ಲಿರುವ ತನ್ನ ಉನ್ನತ ರಾಜತಾಂತ್ರಿಕರನ್ನು ಚಳಿಗಾಲದ ಒಲಿಂಪಿಕ್ಸ್‌ಗೆ ಕಳುಹಿಸುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಕಾಶ್ಮೀರದ ‘ಆಲ್ಪೈನ್ ಸ್ಕೀಯರ್’ ಪಟು ಆರಿಫ್ ಖಾನ್ ಅವರು ಫೆಬ್ರವರಿ 13 ಮತ್ತು 16 ರಂದು ಬೀಜಿಂಗ್‌ನಲ್ಲಿ ನಡೆಯಲಿರುವ ‘ಸ್ಲಾಲೋಮ್’ ಮತ್ತು ‘ಜೈಂಟ್ ಸ್ಲಾಲೋಮ್’ ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ.

31 ವರ್ಷದ ಆರಿಫ್ ಖಾನ್, ತನ್ನ ತಂದೆಯಿಂದ 4 ನೇ ವಯಸ್ಸಿನಲ್ಲಿ ಸ್ಕೀಯಿಂಗ್‌ಗೆ ಪಾದಾರ್ಪಣೆ ಮಾಡಿದ್ದರು. ಅವರು ತನ್ನ 18ನೇ ವಯಸ್ಸಿನಲ್ಲಿ ವೃತ್ತಿಪರ ಸ್ಕೀಯಿಂಗ್‌ ಪ್ರಾರಂಭಿಸಿದರು. ಈವರೆಗೆ 127 ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಆರಿಫ್‌ ಖಾನ್ ಅವರನ್ನು JSW ಗ್ರೂಪ್‌ನ ಕ್ರೀಡಾ ವಿಭಾಗವಾದ JSW ಸ್ಪೋರ್ಟ್ಸ್ ಬೆಂಬಲಿಸುತ್ತಿದ್ದು, ಇದು ಅವರ ವೆಚ್ಚದ 40% ಅನ್ನು ಭರಿಸುತ್ತಿದೆ. ಜಮ್ಮು ಕಾಶ್ಮೀರ ಸರ್ಕಾರವು 10% ಅನ್ನು ಭರಿಸುತ್ತದೆ ಮತ್ತು ಉಳಿದ ಹಣವನ್ನು ಅವರೇ ಭರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...