Homeಮುಖಪುಟವಿಂಟರ್ ಒಲಿಂಪಿಕ್ಸ್-2022 | ತ್ರಿವರ್ಣ ಧ್ವಜವನ್ನು ಹೊತ್ತು ನಡೆದ ಭಾರತದ ಏಕೈಕ ಅಥ್ಲೀಟ್‌ ಆರಿಫ್‌ ಖಾನ್

ವಿಂಟರ್ ಒಲಿಂಪಿಕ್ಸ್-2022 | ತ್ರಿವರ್ಣ ಧ್ವಜವನ್ನು ಹೊತ್ತು ನಡೆದ ಭಾರತದ ಏಕೈಕ ಅಥ್ಲೀಟ್‌ ಆರಿಫ್‌ ಖಾನ್

- Advertisement -
- Advertisement -

ಫೆಬ್ರವರಿ 4ರ ಶುಕ್ರವಾರದಂದು ಬೀಜಿಂಗ್ ವಿಂಟರ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಪರೇಡ್ ಆಫ್ ನೇಷನ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಏಕೈಕ ಭಾರತೀಯ ಅಥ್ಲೀಟ್ ಆರಿಫ್ ಖಾನ್ ಅವರು ರಾಷ್ಟ್ರಧ್ವಜವನ್ನು ಹೊತ್ತು ಮುನ್ನಡೆದರು. ಆಕರ್ಷಕ ಉದ್ಘಾಟನಾ ಸಮಾರಂಭವು ಐಕಾನಿಕ್ ಬರ್ಡ್ಸ್ ನೆಸ್ಟ್ ಸ್ಟೇಡಿಯಂನಲ್ಲಿ ನಡೆಯಿತು.

ಆರಿಫ್ ಖಾನ್, ಕೆಂಪು ಜಾಕೆಟ್ ಧರಿಸಿ, ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜವನ್ನು ಹೊತ್ತಿದ್ದರು. ಅವರು ಜೊತೆಗೆ ಒಂದೆರಡು ಸಹಾಯಕ ಸಿಬ್ಬಂದಿ ಇದ್ದರು.

ಇದನ್ನೂ ಓದಿ: ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಬೀಜಿಂಗ್ ಒಲಿಂಪಿಕ್ಸ್‌ನ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರು ಚಳಿಗಾಲದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ಆರಿಫ್ ಖಾನ್ ಅವರನ್ನು ಟ್ವಿಟರ್‌‌ನಲ್ಲಿ ಶ್ಲಾಘಿಸಿದ್ದಾರೆ.

“ಕಾಶ್ಮೀರದಿಂದ ಒಲಿಂಪಿಕ್ಸ್‌ವರೆಗೆ! #Beijing2022ರಲ್ಲಿ ಭಾರತವನ್ನು ಪ್ರತಿನಿಧಿಸುವ ಏಕೈಕ ಕ್ರೀಡಾಪಟು #ArifKhan ತ್ರಿವರ್ಣ ಧ್ವಜವನ್ನು ಹೊತ್ತಿರುವುದನ್ನು ನೋಡಲು ನಿಜವಾಗಿಯೂ ಹೆಮ್ಮೆಪಡುತ್ತೇನೆ!” ಎಂದು ಅವರು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ದೇಶಗಳ ನಡುವೆ ನಡೆದ ಗಡಿ ಸಂಘರ್ಷದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದ ಚೀನಾ ಸೈನಿಕ ಒಲಿಂಪಿಕ್ ಜ್ಯೋತಿಯನ್ನು ಹೊತ್ತೊಯ್ದಿದ್ದನು. ಇದನ್ನು ವಿರೋಧಿಸಿರುವ ಭಾರತವು ಬೀಜಿಂಗ್‌ನಲ್ಲಿರುವ ತನ್ನ ಉನ್ನತ ರಾಜತಾಂತ್ರಿಕರನ್ನು ಚಳಿಗಾಲದ ಒಲಿಂಪಿಕ್ಸ್‌ಗೆ ಕಳುಹಿಸುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಕಾಶ್ಮೀರದ ‘ಆಲ್ಪೈನ್ ಸ್ಕೀಯರ್’ ಪಟು ಆರಿಫ್ ಖಾನ್ ಅವರು ಫೆಬ್ರವರಿ 13 ಮತ್ತು 16 ರಂದು ಬೀಜಿಂಗ್‌ನಲ್ಲಿ ನಡೆಯಲಿರುವ ‘ಸ್ಲಾಲೋಮ್’ ಮತ್ತು ‘ಜೈಂಟ್ ಸ್ಲಾಲೋಮ್’ ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ.

31 ವರ್ಷದ ಆರಿಫ್ ಖಾನ್, ತನ್ನ ತಂದೆಯಿಂದ 4 ನೇ ವಯಸ್ಸಿನಲ್ಲಿ ಸ್ಕೀಯಿಂಗ್‌ಗೆ ಪಾದಾರ್ಪಣೆ ಮಾಡಿದ್ದರು. ಅವರು ತನ್ನ 18ನೇ ವಯಸ್ಸಿನಲ್ಲಿ ವೃತ್ತಿಪರ ಸ್ಕೀಯಿಂಗ್‌ ಪ್ರಾರಂಭಿಸಿದರು. ಈವರೆಗೆ 127 ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಆರಿಫ್‌ ಖಾನ್ ಅವರನ್ನು JSW ಗ್ರೂಪ್‌ನ ಕ್ರೀಡಾ ವಿಭಾಗವಾದ JSW ಸ್ಪೋರ್ಟ್ಸ್ ಬೆಂಬಲಿಸುತ್ತಿದ್ದು, ಇದು ಅವರ ವೆಚ್ಚದ 40% ಅನ್ನು ಭರಿಸುತ್ತಿದೆ. ಜಮ್ಮು ಕಾಶ್ಮೀರ ಸರ್ಕಾರವು 10% ಅನ್ನು ಭರಿಸುತ್ತದೆ ಮತ್ತು ಉಳಿದ ಹಣವನ್ನು ಅವರೇ ಭರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...