Homeಕರ್ನಾಟಕಬೆಳಗಾವಿ ಸುವರ್ಣಸೌಧ: ಡಿಸೆಂಬರ್‌‌‌‌ನಲ್ಲಿ ಚಳಿಗಾಲದ ಅಧಿವೇಶನ

ಬೆಳಗಾವಿ ಸುವರ್ಣಸೌಧ: ಡಿಸೆಂಬರ್‌‌‌‌ನಲ್ಲಿ ಚಳಿಗಾಲದ ಅಧಿವೇಶನ

ಕಳೆದ ಎರಡು ವರ್ಷಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನಗಳನ್ನು ನಡೆಸಲಾಗಿಲ್ಲ

- Advertisement -
- Advertisement -

ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಂದಿನ ಸಂಪುಟ ಸಭೆಯಲ್ಲಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಸೋಮವಾರ ತಿಳಿಸಿದ್ದಾರೆ.

ಪ್ರವಾಹ ಮತ್ತು ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನಗಳನ್ನು ನಡೆಸಲಾಗಿಲ್ಲ. ಅದರ ಬದಲಿಗೆ ಬೆಂಗಳೂರಿನಲ್ಲಿ ಅಧಿವೇಶನವನ್ನು ನಡೆಸಲಾಗಿತ್ತು. ಗಡಿ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ 2006 ರಿಂದ ವರ್ಷಕ್ಕೊಮ್ಮೆ ವಿಧಾನಮಂಡಲದ ಅಧಿವೇಶನಗಳನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ನಿನ್ನೆ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ, “ನಾವು ಚಳಿಗಾಲದ ಅಧಿವೇಶನದ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಮುಂದಿನ ಸಂಪುಟ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲಾಗುವುದು. ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ. ಅಂದುಕೊಂಡಂತೆ ನಡೆದರೆ, ಆಪರೇಷನ್ ಕಮಲ ಮೂಲಕ 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬೆಳಗಾವಿಯಲ್ಲಿ ನಡೆಯಲಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ.

ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಳೆದ ವಾರ ಪತ್ರ ಬರೆದಿದ್ದರು. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಅದನ್ನು ಸಂಪುಟದ ಒಪ್ಪಿಗೆಗಾಗಿ ಇಡಲಾಗುವುದು ಎಂದು ಬೊಮ್ಮಾಯಿ ಅವರು ಕಳೆದ ತಿಂಗಳು ಹೇಳಿದ್ದರು.

ಈ ಮಧ್ಯೆ ಸೋಮವಾರ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಕುರಿತಂತೆ ಅಧಿಕಾರಿಗಳ ಪೂರ್ವ ಸಿದ್ಧತೆ ಸಭೆ ನಡೆಸಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, “2018 ರ ನಂತರ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ. ಈ ಬಾರಿ ವಿಧಾನಮಂಡಲದ ಕಲಾಪಗಳ ನೇರಪ್ರಸಾರ ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್ 20 ರೊಳಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿವೇಶನ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯುವುದು ಖಚಿತವಾಗಿದ್ದು, ದಿನಾಂಕವನ್ನು ಸರ್ಕಾರ ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ನೆರೆಯ ಮಹಾರಾಷ್ಟ್ರ ಬೆಳಗಾವಿ ತನಗೆ ಸೇರಿದ್ದು ಎಂದು ಈ ವರೆಗೆ ಹೇಳಿಕೊಳ್ಳುತ್ತಾ ಬಂದಿದೆ. ಈ ಮಧ್ಯೆ ಸರ್ಕಾರಿ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸುವ ಕೆಲಸವನ್ನೂ ಕರ್ನಾಟಕ ಸರ್ಕಾರ ಮಾಡುತ್ತಿದೆ. ವರ್ಷಕ್ಕೊಮ್ಮೆ ಸುಮಾರು ಎರಡು ವಾರಗಳ ಕಾಲ ನಡೆಯುವ ಅಧಿವೇಶನ ಹೊರತುಪಡಿಸಿದರೆ ಸುವರ್ಣ ವಿಧಾನಸೌಧ ಕಟ್ಟಡ ಬಹುತೇಕ ಬಳಕೆಯಾಗದೆ ಉಳಿದಿದೆ.

ನಾಗರಿಕರ ಅನುಕೂಲಕ್ಕಾಗಿ ಮತ್ತು ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬುವುದು ಉತ್ತರ ಕರ್ನಾಟಕ ಜನರ ಬಹುಕಾಲದ ಬೇಡಿಕೆಯಾಗಿತ್ತು.

2018 ರಲ್ಲಿ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು, ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಕೆಲವು ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ಆಯೋಗಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ತಾತ್ವಿಕವಾಗಿ ಅನುಮೋದನೆ ನೀಡಿತ್ತು. ಇದರ ನಂತರ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುವ ರಾಜ್ಯ ಮಟ್ಟದ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳೊಳಗೆ ಗುರುತಿಸಿ ಕಾರ್ಯಗತಗೊಳಿಸುವಂತೆ ಕಳೆದ ವರ್ಷ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...