Homeಕರ್ನಾಟಕಇಂದಿನಿಂದ ಚಳಿಗಾಲದ ಅಧಿವೇಶನ : ಅಭಿವೃದ್ದಿ ಚರ್ಚೆ ಅನುಮಾನ

ಇಂದಿನಿಂದ ಚಳಿಗಾಲದ ಅಧಿವೇಶನ : ಅಭಿವೃದ್ದಿ ಚರ್ಚೆ ಅನುಮಾನ

- Advertisement -
- Advertisement -

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು (ಡಿ.9) ಪ್ರಾರಂಭಗೊಳ್ಳಲಿದೆ.

ಡಿಸೆಂಬರ್ 20ರವರೆಗೆ ನಡೆಯುವ ಅಧಿವೇಶನ ರಾಜ್ಯದ ಸಮಸ್ಯೆಗಳ ಕುರಿತ ಚರ್ಚೆಗೆ ವೇದಿಕೆಯಾಗುವ ಬದಲು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರದ ಕಣವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಎರಡೂ ಕಡೆಯವರು ಕಲಹಕ್ಕೆ ಅಸ್ತ್ರಗಳನ್ನು ಸಿದ್ದಪಡಿಸಿಕೊಂಡಿದ್ದಾರೆ.

ಅಡಳಿತ ಪಕ್ಷ ಅಥವಾ ಸರ್ಕಾರ ಮುಖ್ಯಮಂತ್ರಿಯಿಂದ ಹಿಡಿದು ಶಾಸಕರವರೆಗಿನ ತಮ್ಮ ಒಗ್ಗಟ್ಟನ್ನೇ ದೊಡ್ಡ ಅಸ್ತ್ರ ಮಾಡಿಕೊಂಡತಿದೆ. ಇದರ ಹೊರತಾಗಿ ಕೇಂದ್ರ ಸಂಸ್ಥೆಗಳ ದುರ್ಬಳಕೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ನಡೆದ 7 ಸಾವಿರ ಕೋಟಿ ರೂಪಾಯಿಯ ಹಗರಣ, ಅದರಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಹೆಸರು ಉಲ್ಲೇಖ, ಯಡಿಯೂರಪ್ಪ ಕುಟುಂಬದ ವಿರುದ್ದದ ಬಿಡಿಎ ಹಗರಣ. ಮುನಿರತ್ನ ವಿರುದ್ದ ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಆರೋಪಗಳು ಆಡಳಿತ ಪಕ್ಷದ ಬಳಿಯಿರುವ ಅಸ್ತ್ರಗಳು.

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಬಿಜೆಪಿಯೊಳಗಿನ ಬಣ ರಾಜಕೀಯವೂ ಧನಾತ್ಮಕ ಪರಿಣಾಮ ಬೀರಿದಂತಿದೆ. ಅವುಗಳ ಲಾಭ ಹೇಗೆ ಪಡೆಯಲಿದೆ ಎಂದು ನೋಡಬೇಕಿದೆ.

ಪ್ರಮುಖ ಪ್ರತಿಪಕ್ಷ ಬಿಜೆಪಿ ಮತ್ತು ಅದರ ಮಿತ್ರ ಜೆಡಿಎಸ್ ಕೂಡ ಸರ್ಕಾರವನ್ನು ಕಟ್ಟಿಹಾಕಲು ತಮ್ಮದೇ ಸಿದ್ದತೆಗಳನ್ನು ಮಾಡಿಕೊಂಡಿದೆ. ಸಿಎಂ ವಿರುದ್ದದ ಮೂಡಾ ಪ್ರಕರಣ, ವಾಲ್ಮೀಕಿ ಹಗರಣ ಮತ್ತು ಸಚಿವರೊಬ್ಬರ ತಲೆದಂಡ, ಅಬಕಾರಿ ಸಚಿವರ ವಿರುದ್ದದ 7 ಸಾವಿರ ಕೋಟಿ ರೂ. ಅಕ್ರಮ ಆರೋಪ, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು, ವಕ್ಫ್, ಬಿಪಿಎಲ್‌ ಕಾರ್ಡ್ ವಿವಾದ ಪ್ರತಿಪಕ್ಷಗಳ ಬಳಿಯಿರುವ ಅಸ್ತ್ರಗಳಾಗಿವೆ.

ಆದರೆ, ಬಣ ರಾಜಕೀಯ ಮತ್ತು ಉಪಚುನಾವಣೆ ಸೋಲಿನ ಮುಜುಗರ ಬಿಜೆಪಿ-ಜೆಡಿಎಸ್‌ಗೆ ದೊಡ್ಡ ಹಿನ್ನಡೆ ತಂದಿಟ್ಟಿದೆ. ಅವುಗಳನ್ನು ಮೆಟ್ಟಿ ನಿಂತು ಸರ್ಕಾರದ ವಿರುದ್ದ ಹೇಗೆ ಸಮರ ಸಾರಲಿವೆ ಎಂದು ಕಾದು ನೋಡಬೇಕಿದೆ. ಬಿಜೆಪಿಯೊಳಗಿನ ಬಣ ರಾಜಕೀಯ ಸದನದಲ್ಲಿ ಸರ್ಕಾರವನ್ನು ಎದುರಿಸಲು ಸವಾಲಾಗಬಹುದು.

ಅಭಿವೃದ್ದಿ ಚರ್ಚೆ ಅನುಮಾನ

ಈಗಾಗಲೇ ವಿವರಿಸಿದಂತೆ ಆಡಳಿತ ಮತ್ತು ವಿಪಕ್ಷಗಳ ಬಳಿ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವ ಮತ್ತು ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಅಸ್ತ್ರಗಳು ಬಹಳಷ್ಟಿವೆ. ಆದರೆ, ರಾಜ್ಯದ ಅಭಿವೃದ್ದಿಯ ಚರ್ಚೆಗಳು ಯಾವುದೂ ಮುನ್ನಲೆಯಲ್ಲಿ ಇಲ್ಲ. ಹಾಗಾಗಿ, ಸುಮಾರು 21-25 ಕೋಟಿ ರೂಪಾಯಿ ಜನರ ದುಡ್ಡು ನೀರಿನಲ್ಲಿ ಹೋಮ ಇಟ್ಟಂತಾಗುವುದರಲ್ಲಿ ಅನುಮಾನವಿಲ್ಲ.

ನಾಲ್ಕು ದಿನ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಚಳಿಗಾಲದ ಅಧಿವೇಶನದ ನಾಲ್ಕು ದಿನ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ (ಡಿ.8) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ. 10 ಮತ್ತು 11 ಹಾಗೂ 17 ಮತ್ತು 18ರಂದು ಕೃಷ್ಣಾ ಮೇಲ್ದಂಡೆ, ಮಹದಾಯಿ-ಕಳಸಾ ಬಂಡೂರಿ, ತುಂಗ ಭದ್ರಾ, ಕಾರಂಜಾ, ಕೃಷಿ, ಅರಣ್ಯಭೂಮಿ ಅತಿಕ್ರಮ ಮತ್ತು ಸಂತ್ರಸ್ತರ ಸಮಸ್ಯೆ, ಸಕ್ಕರೆ ಕಾರ್ಖಾನೆ, ತೋಟಗಾರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿಸ್ಕೃತ ಚರ್ಚೆಯ ನಡೆಯಲಿದೆ ಎಂದಿದ್ದಾರೆ. ಈ ಹಿಂದಿನ ಅಧಿವೇಶನಗಳಲ್ಲೂ ಉತ್ತರ ಕರ್ನಾಟಕದ ಕುರಿತು ಹಲವು ಚರ್ಚೆಗಳು ನಡೆದಿವೆ. ಅವುಗಳಿಂದ ಆದ ಲಾಭಗಳು ಮಾತ್ರ ಅಷ್ಟಕಷ್ಟೆ. ಆದ್ದರಿಂದ ಈ ಬಾರಿಯ ಕಲಾಪದ ಕುರಿತೂ ಜನರು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದಂತೆ ಕಾಣುತ್ತಿಲ್ಲ.

ವಿಧೇಯಕಗಳ ಮಂಡನೆ ಸಾಧ್ಯತೆ 

ನ.28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಮತ್ತು ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ, ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024, ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ- 2024, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ-2024, ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ-2024, Karnataka State Allied and Healthcare Professions Councilನಿಯಮಗಳು-2024ಕ್ಕೆ ಅನುಮೋದನೆ ನೀಡಲಾಗಿದೆ. ಅವುಗಳ ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ : ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ವಿರುದ್ಧ ಪ್ರಕರಣ ದಾಖಲಾಗಲಿ: ಬಿ.ಕೆ. ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...