Homeಕರ್ನಾಟಕಇಂದಿನಿಂದ ಚಳಿಗಾಲದ ಅಧಿವೇಶನ : ಅಭಿವೃದ್ದಿ ಚರ್ಚೆ ಅನುಮಾನ

ಇಂದಿನಿಂದ ಚಳಿಗಾಲದ ಅಧಿವೇಶನ : ಅಭಿವೃದ್ದಿ ಚರ್ಚೆ ಅನುಮಾನ

- Advertisement -
- Advertisement -

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು (ಡಿ.9) ಪ್ರಾರಂಭಗೊಳ್ಳಲಿದೆ.

ಡಿಸೆಂಬರ್ 20ರವರೆಗೆ ನಡೆಯುವ ಅಧಿವೇಶನ ರಾಜ್ಯದ ಸಮಸ್ಯೆಗಳ ಕುರಿತ ಚರ್ಚೆಗೆ ವೇದಿಕೆಯಾಗುವ ಬದಲು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರದ ಕಣವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಎರಡೂ ಕಡೆಯವರು ಕಲಹಕ್ಕೆ ಅಸ್ತ್ರಗಳನ್ನು ಸಿದ್ದಪಡಿಸಿಕೊಂಡಿದ್ದಾರೆ.

ಅಡಳಿತ ಪಕ್ಷ ಅಥವಾ ಸರ್ಕಾರ ಮುಖ್ಯಮಂತ್ರಿಯಿಂದ ಹಿಡಿದು ಶಾಸಕರವರೆಗಿನ ತಮ್ಮ ಒಗ್ಗಟ್ಟನ್ನೇ ದೊಡ್ಡ ಅಸ್ತ್ರ ಮಾಡಿಕೊಂಡತಿದೆ. ಇದರ ಹೊರತಾಗಿ ಕೇಂದ್ರ ಸಂಸ್ಥೆಗಳ ದುರ್ಬಳಕೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ನಡೆದ 7 ಸಾವಿರ ಕೋಟಿ ರೂಪಾಯಿಯ ಹಗರಣ, ಅದರಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಹೆಸರು ಉಲ್ಲೇಖ, ಯಡಿಯೂರಪ್ಪ ಕುಟುಂಬದ ವಿರುದ್ದದ ಬಿಡಿಎ ಹಗರಣ. ಮುನಿರತ್ನ ವಿರುದ್ದ ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಆರೋಪಗಳು ಆಡಳಿತ ಪಕ್ಷದ ಬಳಿಯಿರುವ ಅಸ್ತ್ರಗಳು.

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಬಿಜೆಪಿಯೊಳಗಿನ ಬಣ ರಾಜಕೀಯವೂ ಧನಾತ್ಮಕ ಪರಿಣಾಮ ಬೀರಿದಂತಿದೆ. ಅವುಗಳ ಲಾಭ ಹೇಗೆ ಪಡೆಯಲಿದೆ ಎಂದು ನೋಡಬೇಕಿದೆ.

ಪ್ರಮುಖ ಪ್ರತಿಪಕ್ಷ ಬಿಜೆಪಿ ಮತ್ತು ಅದರ ಮಿತ್ರ ಜೆಡಿಎಸ್ ಕೂಡ ಸರ್ಕಾರವನ್ನು ಕಟ್ಟಿಹಾಕಲು ತಮ್ಮದೇ ಸಿದ್ದತೆಗಳನ್ನು ಮಾಡಿಕೊಂಡಿದೆ. ಸಿಎಂ ವಿರುದ್ದದ ಮೂಡಾ ಪ್ರಕರಣ, ವಾಲ್ಮೀಕಿ ಹಗರಣ ಮತ್ತು ಸಚಿವರೊಬ್ಬರ ತಲೆದಂಡ, ಅಬಕಾರಿ ಸಚಿವರ ವಿರುದ್ದದ 7 ಸಾವಿರ ಕೋಟಿ ರೂ. ಅಕ್ರಮ ಆರೋಪ, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು, ವಕ್ಫ್, ಬಿಪಿಎಲ್‌ ಕಾರ್ಡ್ ವಿವಾದ ಪ್ರತಿಪಕ್ಷಗಳ ಬಳಿಯಿರುವ ಅಸ್ತ್ರಗಳಾಗಿವೆ.

ಆದರೆ, ಬಣ ರಾಜಕೀಯ ಮತ್ತು ಉಪಚುನಾವಣೆ ಸೋಲಿನ ಮುಜುಗರ ಬಿಜೆಪಿ-ಜೆಡಿಎಸ್‌ಗೆ ದೊಡ್ಡ ಹಿನ್ನಡೆ ತಂದಿಟ್ಟಿದೆ. ಅವುಗಳನ್ನು ಮೆಟ್ಟಿ ನಿಂತು ಸರ್ಕಾರದ ವಿರುದ್ದ ಹೇಗೆ ಸಮರ ಸಾರಲಿವೆ ಎಂದು ಕಾದು ನೋಡಬೇಕಿದೆ. ಬಿಜೆಪಿಯೊಳಗಿನ ಬಣ ರಾಜಕೀಯ ಸದನದಲ್ಲಿ ಸರ್ಕಾರವನ್ನು ಎದುರಿಸಲು ಸವಾಲಾಗಬಹುದು.

ಅಭಿವೃದ್ದಿ ಚರ್ಚೆ ಅನುಮಾನ

ಈಗಾಗಲೇ ವಿವರಿಸಿದಂತೆ ಆಡಳಿತ ಮತ್ತು ವಿಪಕ್ಷಗಳ ಬಳಿ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವ ಮತ್ತು ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಅಸ್ತ್ರಗಳು ಬಹಳಷ್ಟಿವೆ. ಆದರೆ, ರಾಜ್ಯದ ಅಭಿವೃದ್ದಿಯ ಚರ್ಚೆಗಳು ಯಾವುದೂ ಮುನ್ನಲೆಯಲ್ಲಿ ಇಲ್ಲ. ಹಾಗಾಗಿ, ಸುಮಾರು 21-25 ಕೋಟಿ ರೂಪಾಯಿ ಜನರ ದುಡ್ಡು ನೀರಿನಲ್ಲಿ ಹೋಮ ಇಟ್ಟಂತಾಗುವುದರಲ್ಲಿ ಅನುಮಾನವಿಲ್ಲ.

ನಾಲ್ಕು ದಿನ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಚಳಿಗಾಲದ ಅಧಿವೇಶನದ ನಾಲ್ಕು ದಿನ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ (ಡಿ.8) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ. 10 ಮತ್ತು 11 ಹಾಗೂ 17 ಮತ್ತು 18ರಂದು ಕೃಷ್ಣಾ ಮೇಲ್ದಂಡೆ, ಮಹದಾಯಿ-ಕಳಸಾ ಬಂಡೂರಿ, ತುಂಗ ಭದ್ರಾ, ಕಾರಂಜಾ, ಕೃಷಿ, ಅರಣ್ಯಭೂಮಿ ಅತಿಕ್ರಮ ಮತ್ತು ಸಂತ್ರಸ್ತರ ಸಮಸ್ಯೆ, ಸಕ್ಕರೆ ಕಾರ್ಖಾನೆ, ತೋಟಗಾರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿಸ್ಕೃತ ಚರ್ಚೆಯ ನಡೆಯಲಿದೆ ಎಂದಿದ್ದಾರೆ. ಈ ಹಿಂದಿನ ಅಧಿವೇಶನಗಳಲ್ಲೂ ಉತ್ತರ ಕರ್ನಾಟಕದ ಕುರಿತು ಹಲವು ಚರ್ಚೆಗಳು ನಡೆದಿವೆ. ಅವುಗಳಿಂದ ಆದ ಲಾಭಗಳು ಮಾತ್ರ ಅಷ್ಟಕಷ್ಟೆ. ಆದ್ದರಿಂದ ಈ ಬಾರಿಯ ಕಲಾಪದ ಕುರಿತೂ ಜನರು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದಂತೆ ಕಾಣುತ್ತಿಲ್ಲ.

ವಿಧೇಯಕಗಳ ಮಂಡನೆ ಸಾಧ್ಯತೆ 

ನ.28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಮತ್ತು ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ, ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024, ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ- 2024, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ-2024, ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ-2024, Karnataka State Allied and Healthcare Professions Councilನಿಯಮಗಳು-2024ಕ್ಕೆ ಅನುಮೋದನೆ ನೀಡಲಾಗಿದೆ. ಅವುಗಳ ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ : ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಅದಾನಿ ವಿರುದ್ಧ ಪ್ರಕರಣ ದಾಖಲಾಗಲಿ: ಬಿ.ಕೆ. ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...