Homeಮುಖಪುಟನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

ನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

- Advertisement -
- Advertisement -

ಚಳಿಗಾಲದ ಅಧಿವೇಶನ ನವೆಂಬರ್ 18ರಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ನವೆಂಬರ್ 18 ರಿಂದ ಡಿಸೆಂಬರ್ 13ರವರೆಗೆ ಅಂದರೆ 25 ದಿನಗಳು ಕಲಾಪ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಸುಮಾರು 35 ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ತೀರ್ಮಾನಿಸಿದೆ. ವಿವಾದಾತ್ಮಕ ಭಾರತೀಯ ಪೌರತ್ವ ತಿದ್ದುಪಡಿ ಮಸೂದೆ, ಅಕ್ರಮ ವಲಸೆ ಮಸೂದೆ, ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಸೇರಿದಂತೆ ಹಲವು ಮಸೂದೆಗಳು ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿವೆ.

ಹಿಂದಿನ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸಲು 43 ಮಸೂದೆಗಳು ಬಾಕಿ ಇದ್ದು ಅದರಲ್ಲಿ 12 ಮಸೂದೆ ಗಳನ್ನು ಪಾಸು ಮಾಡಲು ಭಾರತ ಸರ್ಕಾರ ತೀರ್ಮಾನಿಸಿದೆ. ಜೊತೆಗೆ 7 ಮಸೂದೆಗಳನ್ನು ವಾಪಸ್ ಪಡೆಯಲಿದೆ. 27 ಮಸೂದೆಗಳನ್ನು ಮಂಡನೆ ಮಾಡಿ ಪರಿಶೀಲಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಶಿವಸೇನೆ ಎನ್.ಡಿ.ಎ. ಸರ್ಕಾರದಿಂದ ಹೊರಬಂದಿದೆ. ಇದ್ದ ಒಬ್ಬ ಸಚಿವರೂ ಕೂಡ ರಾಜಿನಾಮೆ ನೀಡಿ ಹೊರ ಬಂದಿರುವುದರಿಂದ ಸಂಸತ್‌ನಲ್ಲಿ ಶಿವಸೇನೆಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕಾಗಿದೆ.

ಶಿವಸೇನೆಯ 18 ಮಂದಿ ಲೋಕಸಭಾ ಸದಸ್ಯರು ಮತ್ತು ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ. ಅವರಿಗೆ ಉಭಯ ಸದಗಳಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ.

ಜಾರ್ಖಂಡ್ ನಲ್ಲಿ ಎಲ್.ಜೆ.ಪಿಯು ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿದ್ದು ಸ್ವತಂತ್ರವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆದಿದೆ. ಇದರ ಜೊತೆಗೆ ಶಿವಸೇನೆಯೂ ಬಿಜೆಪಿಯ ಬಹುಕಾಲದ ಮೈತ್ರಿಯಿಂದ ಹೊರಬಂದಿರುವುದು ಪ್ರತಿಪಕ್ಷಗಳಿಗೆ ಸರ್ಕಾರವನ್ನು ಹಣಿಯಲು ಸಾಕಷ್ಟು ಅಸ್ತ್ರಗಳು ದೊರೆತಂತಾಗಿದೆ.

ಪ್ರಮುಖವಾಗಿ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಸಂದರ್ಭದಲ್ಲಿ ಸುಮಾರು 19 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಬಿಟ್ಟಿರುವುದು ಚರ್ಚೆಗೆ ಬರಲಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಕದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಿರುವುದನ್ನು ಹಾಗೂ ಪೌರತ್ವಕ್ಕೆ ಅರ್ಹರಾಗಿರುವ ಮುಸ್ಲಿಮರನ್ನು ಪಟ್ಟಿಯಿಂದ ಕೈಬಿಟ್ಟಿರುವ ವಿಷಯವನ್ನು ಪ್ರತಿಪಕ್ಷಗಳು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಾತ್ಮಕವಾಗಿ 370ನೇ ವಿಧಿಯನ್ವಯ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಿರುವುದು ಮತ್ತು ಜಮ್ಮು ಕಾಶ್ಮೀರ ಮತ್ತು ಲಡಕ್ ನ್ನು ಎರಡು ಭಾಗಗಳಾಗಿ ವಿಂಗಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಹಾಗೂ ಕಣಿವೆ ರಾಜ್ಯದ ಕಾಂಗ್ರೆಸ್, ಪಿಡಿಪಿ, ನ್ಯಾಷನಲ್‌ ಕಾನ್ಸರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಜೊತೆಗೆ ವಿದ್ಯಾರ್ಥಿಗಳು, ಸಂಘ-ಸಂಸ್ಥೇಗಳ ಮುಖಂಡರು, ವಕೀಲರನ್ನು ಬಂಧನಕ್ಕೊಳಪಡಿಸಿರುವದನ್ನು ಹಾಗೂ ಎಲ್ಲಾ ರೀತಿಯ ಹಕ್ಕುಗಳನ್ನು ಮೊಟುಕುಗೊಳಿಸಿರುವುದನ್ನು ಪ್ರಸ್ತಾಪಿಸಿ ಸರ್ಕಾರವನ್ನು ಟೀಕೆಗೆ ಗುರಿಪಡಿಸಲಿವೆ.

ಕರ್ನಾಟಕದಲ್ಲಿ 17 ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಲು ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವೂ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ಆಡಿಯೋ ಕೂಡ ಸಂಸತ್ ನಲ್ಲಿ ಸದ್ದು ಮಾಡಲಿದೆ. ಪದೇ ಪದೇ ಆಪರೇಷನ್ ಕಮಲ ಮಾಡಿ ಅನೈತಿಕತೆ ಮತ್ತು ಅಸಂವಿಧಾನದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ.

ದೇಶದಲ್ಲಿ ಕಳೆದ ಆರು ತಿಂಗಳಲ್ಲಿ 90 ಲಕ್ಷ ಉದ್ಯೋಗಗಳು ನಷ್ಟವಾಗಿರುವುದು, ಉದ್ದಿಮೆಗಳು ಬಾಗಿಲು ಮುಚ್ಚಿಸಿರುವುದು, ಅದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಂಡಿರುವುದು, ಮಹಾರಾಷ್ಟ್ರ-ಪಂಜಾಬ್ ಸಹಕಾರ ಬ್ಯಾಂಕ್ ನಲ್ಲಿ ನಡೆದಿರುವ ಹಗರಣ, ಅದರಿಂದಾದ ಸಾವು ನೋವು, ಆರ್ಥಿಕ ಕುಸಿತ, ರೈತರ ಆತ್ಮಹತ್ಯೆ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮೊದಲಾದ ವಿಷಯಗಳು ಉಭಯ ಸದನಗಳಲ್ಲಿ ಚರ್ಚೆಗೆ ಗ್ರಾಸವಾಗಲಿವೆ.

ಆಟೋ ಮೊಬೈಲ್, ಜವಳಿ, ಕಟ್ಟಡ ನಿರ್ಮಾಣ, ವಾಹನ ತಯಾರಿಕೆ ಮತ್ತು ಮಾರಾಟದಲ್ಲಿ ವ್ಯಾಪಕವಾಗಿ ಕುಸಿತ ಕಂಡಿರುವುದು, ನಿರುದ್ಯೋಗ ಸಮಸ್ಯೆ ಕಳೆದ 49 ವರ್ಷಗಳಲ್ಲೇ ಅತ್ಯಧಿಕವಾಗಿ ಕಾಡುತ್ತಿರುವುದು ಹೀಗೆ ಹತ್ತು ಹಲವು ವಿಷಯಗಳನ್ನು ಕಲಾಪದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ , ಶಿವಸೇನೆ, ಎನ್.ಸಿ.ಪಿ, ಡಿಎಂಕೆ ಪಕ್ಷಗಳಿಗೆ ಅವಕಾಶವಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಡವಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಿಟ್ಟು ಪ್ರತಿಪಕ್ಷಗಳ ಮುಖಂಡರನ್ನು ಜೈಲಿಗೆ ಕಳಿಸಿರುವನ್ನು ಪ್ರಮುಖವಾಗಿ ಎತ್ತಿ ಕಲಾಪಕ್ಕೆ ಅಡ್ಡಿಸಲಿವೆ. ಪಿ.ಚಿದಂಬರಂ ಬಂಧನ ಮುಂದುವರಿಕೆ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಇಡಿ ಬಳಕೆ, ಡಿಕೆಶಿವಕುಮಾರ್ ಬಂಧನ, ಹೀಗೆ ಹಲವು ವಿಷಯಗಳು ಸರ್ಕಾರವನ್ನು ಟೀಕೆಗೊಳಪಡಿಸಲು ಅವಕಾಶವಿದೆ.

ವಿದೇಶಾಂಗ ನೀತಿ, ರಾಜತಾಂತ್ರಿಕತೆಯಲ್ಲಿ ವೈಫಲ್ಯ ಅವೈಜ್ಞಾನಿಕ ಸರಕು ಮತ್ತು ಸೇವಾ ತೆರಿಗೆ, ನೋಟು ರದ್ದುಗೊಳಿಸಿ ಮೂರು ವರ್ಷವಾಗಿದ್ದು ಅದರಿಂದಾದ ದುಷ್ಪರಿಣಾಮಗಳು,  ಸಾಲ ಮನ್ನಾ ಮಾಡದೇ ಇರುವುದು, ದೇಶದಲ್ಲಿ ಬಿಜೆಪಿ ಕೋಮು ದ್ವೇಷದ ಮೂಲಕ ಸಮಾಜವನ್ನು ವಿಭಜಿಸಿ ಸೌಹಾರ್ದತೆಯನ್ನು ಹಾಳು ಮಾಡುತ್ತಿರುವುದು ಮತ್ತು ಮುಸ್ಲೀಮರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟಿಸಲು ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...