Homeಮುಖಪುಟನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

ನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

- Advertisement -
- Advertisement -

ಚಳಿಗಾಲದ ಅಧಿವೇಶನ ನವೆಂಬರ್ 18ರಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ನವೆಂಬರ್ 18 ರಿಂದ ಡಿಸೆಂಬರ್ 13ರವರೆಗೆ ಅಂದರೆ 25 ದಿನಗಳು ಕಲಾಪ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಸುಮಾರು 35 ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ತೀರ್ಮಾನಿಸಿದೆ. ವಿವಾದಾತ್ಮಕ ಭಾರತೀಯ ಪೌರತ್ವ ತಿದ್ದುಪಡಿ ಮಸೂದೆ, ಅಕ್ರಮ ವಲಸೆ ಮಸೂದೆ, ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಸೇರಿದಂತೆ ಹಲವು ಮಸೂದೆಗಳು ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿವೆ.

ಹಿಂದಿನ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸಲು 43 ಮಸೂದೆಗಳು ಬಾಕಿ ಇದ್ದು ಅದರಲ್ಲಿ 12 ಮಸೂದೆ ಗಳನ್ನು ಪಾಸು ಮಾಡಲು ಭಾರತ ಸರ್ಕಾರ ತೀರ್ಮಾನಿಸಿದೆ. ಜೊತೆಗೆ 7 ಮಸೂದೆಗಳನ್ನು ವಾಪಸ್ ಪಡೆಯಲಿದೆ. 27 ಮಸೂದೆಗಳನ್ನು ಮಂಡನೆ ಮಾಡಿ ಪರಿಶೀಲಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಶಿವಸೇನೆ ಎನ್.ಡಿ.ಎ. ಸರ್ಕಾರದಿಂದ ಹೊರಬಂದಿದೆ. ಇದ್ದ ಒಬ್ಬ ಸಚಿವರೂ ಕೂಡ ರಾಜಿನಾಮೆ ನೀಡಿ ಹೊರ ಬಂದಿರುವುದರಿಂದ ಸಂಸತ್‌ನಲ್ಲಿ ಶಿವಸೇನೆಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕಾಗಿದೆ.

ಶಿವಸೇನೆಯ 18 ಮಂದಿ ಲೋಕಸಭಾ ಸದಸ್ಯರು ಮತ್ತು ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ. ಅವರಿಗೆ ಉಭಯ ಸದಗಳಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ.

ಜಾರ್ಖಂಡ್ ನಲ್ಲಿ ಎಲ್.ಜೆ.ಪಿಯು ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿದ್ದು ಸ್ವತಂತ್ರವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆದಿದೆ. ಇದರ ಜೊತೆಗೆ ಶಿವಸೇನೆಯೂ ಬಿಜೆಪಿಯ ಬಹುಕಾಲದ ಮೈತ್ರಿಯಿಂದ ಹೊರಬಂದಿರುವುದು ಪ್ರತಿಪಕ್ಷಗಳಿಗೆ ಸರ್ಕಾರವನ್ನು ಹಣಿಯಲು ಸಾಕಷ್ಟು ಅಸ್ತ್ರಗಳು ದೊರೆತಂತಾಗಿದೆ.

ಪ್ರಮುಖವಾಗಿ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಸಂದರ್ಭದಲ್ಲಿ ಸುಮಾರು 19 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಬಿಟ್ಟಿರುವುದು ಚರ್ಚೆಗೆ ಬರಲಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಕದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಿರುವುದನ್ನು ಹಾಗೂ ಪೌರತ್ವಕ್ಕೆ ಅರ್ಹರಾಗಿರುವ ಮುಸ್ಲಿಮರನ್ನು ಪಟ್ಟಿಯಿಂದ ಕೈಬಿಟ್ಟಿರುವ ವಿಷಯವನ್ನು ಪ್ರತಿಪಕ್ಷಗಳು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಾತ್ಮಕವಾಗಿ 370ನೇ ವಿಧಿಯನ್ವಯ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಿರುವುದು ಮತ್ತು ಜಮ್ಮು ಕಾಶ್ಮೀರ ಮತ್ತು ಲಡಕ್ ನ್ನು ಎರಡು ಭಾಗಗಳಾಗಿ ವಿಂಗಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಹಾಗೂ ಕಣಿವೆ ರಾಜ್ಯದ ಕಾಂಗ್ರೆಸ್, ಪಿಡಿಪಿ, ನ್ಯಾಷನಲ್‌ ಕಾನ್ಸರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಜೊತೆಗೆ ವಿದ್ಯಾರ್ಥಿಗಳು, ಸಂಘ-ಸಂಸ್ಥೇಗಳ ಮುಖಂಡರು, ವಕೀಲರನ್ನು ಬಂಧನಕ್ಕೊಳಪಡಿಸಿರುವದನ್ನು ಹಾಗೂ ಎಲ್ಲಾ ರೀತಿಯ ಹಕ್ಕುಗಳನ್ನು ಮೊಟುಕುಗೊಳಿಸಿರುವುದನ್ನು ಪ್ರಸ್ತಾಪಿಸಿ ಸರ್ಕಾರವನ್ನು ಟೀಕೆಗೆ ಗುರಿಪಡಿಸಲಿವೆ.

ಕರ್ನಾಟಕದಲ್ಲಿ 17 ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಲು ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವೂ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ಆಡಿಯೋ ಕೂಡ ಸಂಸತ್ ನಲ್ಲಿ ಸದ್ದು ಮಾಡಲಿದೆ. ಪದೇ ಪದೇ ಆಪರೇಷನ್ ಕಮಲ ಮಾಡಿ ಅನೈತಿಕತೆ ಮತ್ತು ಅಸಂವಿಧಾನದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ.

ದೇಶದಲ್ಲಿ ಕಳೆದ ಆರು ತಿಂಗಳಲ್ಲಿ 90 ಲಕ್ಷ ಉದ್ಯೋಗಗಳು ನಷ್ಟವಾಗಿರುವುದು, ಉದ್ದಿಮೆಗಳು ಬಾಗಿಲು ಮುಚ್ಚಿಸಿರುವುದು, ಅದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಂಡಿರುವುದು, ಮಹಾರಾಷ್ಟ್ರ-ಪಂಜಾಬ್ ಸಹಕಾರ ಬ್ಯಾಂಕ್ ನಲ್ಲಿ ನಡೆದಿರುವ ಹಗರಣ, ಅದರಿಂದಾದ ಸಾವು ನೋವು, ಆರ್ಥಿಕ ಕುಸಿತ, ರೈತರ ಆತ್ಮಹತ್ಯೆ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮೊದಲಾದ ವಿಷಯಗಳು ಉಭಯ ಸದನಗಳಲ್ಲಿ ಚರ್ಚೆಗೆ ಗ್ರಾಸವಾಗಲಿವೆ.

ಆಟೋ ಮೊಬೈಲ್, ಜವಳಿ, ಕಟ್ಟಡ ನಿರ್ಮಾಣ, ವಾಹನ ತಯಾರಿಕೆ ಮತ್ತು ಮಾರಾಟದಲ್ಲಿ ವ್ಯಾಪಕವಾಗಿ ಕುಸಿತ ಕಂಡಿರುವುದು, ನಿರುದ್ಯೋಗ ಸಮಸ್ಯೆ ಕಳೆದ 49 ವರ್ಷಗಳಲ್ಲೇ ಅತ್ಯಧಿಕವಾಗಿ ಕಾಡುತ್ತಿರುವುದು ಹೀಗೆ ಹತ್ತು ಹಲವು ವಿಷಯಗಳನ್ನು ಕಲಾಪದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ , ಶಿವಸೇನೆ, ಎನ್.ಸಿ.ಪಿ, ಡಿಎಂಕೆ ಪಕ್ಷಗಳಿಗೆ ಅವಕಾಶವಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಡವಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಿಟ್ಟು ಪ್ರತಿಪಕ್ಷಗಳ ಮುಖಂಡರನ್ನು ಜೈಲಿಗೆ ಕಳಿಸಿರುವನ್ನು ಪ್ರಮುಖವಾಗಿ ಎತ್ತಿ ಕಲಾಪಕ್ಕೆ ಅಡ್ಡಿಸಲಿವೆ. ಪಿ.ಚಿದಂಬರಂ ಬಂಧನ ಮುಂದುವರಿಕೆ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಇಡಿ ಬಳಕೆ, ಡಿಕೆಶಿವಕುಮಾರ್ ಬಂಧನ, ಹೀಗೆ ಹಲವು ವಿಷಯಗಳು ಸರ್ಕಾರವನ್ನು ಟೀಕೆಗೊಳಪಡಿಸಲು ಅವಕಾಶವಿದೆ.

ವಿದೇಶಾಂಗ ನೀತಿ, ರಾಜತಾಂತ್ರಿಕತೆಯಲ್ಲಿ ವೈಫಲ್ಯ ಅವೈಜ್ಞಾನಿಕ ಸರಕು ಮತ್ತು ಸೇವಾ ತೆರಿಗೆ, ನೋಟು ರದ್ದುಗೊಳಿಸಿ ಮೂರು ವರ್ಷವಾಗಿದ್ದು ಅದರಿಂದಾದ ದುಷ್ಪರಿಣಾಮಗಳು,  ಸಾಲ ಮನ್ನಾ ಮಾಡದೇ ಇರುವುದು, ದೇಶದಲ್ಲಿ ಬಿಜೆಪಿ ಕೋಮು ದ್ವೇಷದ ಮೂಲಕ ಸಮಾಜವನ್ನು ವಿಭಜಿಸಿ ಸೌಹಾರ್ದತೆಯನ್ನು ಹಾಳು ಮಾಡುತ್ತಿರುವುದು ಮತ್ತು ಮುಸ್ಲೀಮರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟಿಸಲು ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಟಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...