Homeಮುಖಪುಟನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

ನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

- Advertisement -
- Advertisement -

ಚಳಿಗಾಲದ ಅಧಿವೇಶನ ನವೆಂಬರ್ 18ರಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ನವೆಂಬರ್ 18 ರಿಂದ ಡಿಸೆಂಬರ್ 13ರವರೆಗೆ ಅಂದರೆ 25 ದಿನಗಳು ಕಲಾಪ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಸುಮಾರು 35 ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ತೀರ್ಮಾನಿಸಿದೆ. ವಿವಾದಾತ್ಮಕ ಭಾರತೀಯ ಪೌರತ್ವ ತಿದ್ದುಪಡಿ ಮಸೂದೆ, ಅಕ್ರಮ ವಲಸೆ ಮಸೂದೆ, ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಸೇರಿದಂತೆ ಹಲವು ಮಸೂದೆಗಳು ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿವೆ.

ಹಿಂದಿನ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸಲು 43 ಮಸೂದೆಗಳು ಬಾಕಿ ಇದ್ದು ಅದರಲ್ಲಿ 12 ಮಸೂದೆ ಗಳನ್ನು ಪಾಸು ಮಾಡಲು ಭಾರತ ಸರ್ಕಾರ ತೀರ್ಮಾನಿಸಿದೆ. ಜೊತೆಗೆ 7 ಮಸೂದೆಗಳನ್ನು ವಾಪಸ್ ಪಡೆಯಲಿದೆ. 27 ಮಸೂದೆಗಳನ್ನು ಮಂಡನೆ ಮಾಡಿ ಪರಿಶೀಲಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಶಿವಸೇನೆ ಎನ್.ಡಿ.ಎ. ಸರ್ಕಾರದಿಂದ ಹೊರಬಂದಿದೆ. ಇದ್ದ ಒಬ್ಬ ಸಚಿವರೂ ಕೂಡ ರಾಜಿನಾಮೆ ನೀಡಿ ಹೊರ ಬಂದಿರುವುದರಿಂದ ಸಂಸತ್‌ನಲ್ಲಿ ಶಿವಸೇನೆಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕಾಗಿದೆ.

ಶಿವಸೇನೆಯ 18 ಮಂದಿ ಲೋಕಸಭಾ ಸದಸ್ಯರು ಮತ್ತು ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ. ಅವರಿಗೆ ಉಭಯ ಸದಗಳಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ.

ಜಾರ್ಖಂಡ್ ನಲ್ಲಿ ಎಲ್.ಜೆ.ಪಿಯು ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿದ್ದು ಸ್ವತಂತ್ರವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆದಿದೆ. ಇದರ ಜೊತೆಗೆ ಶಿವಸೇನೆಯೂ ಬಿಜೆಪಿಯ ಬಹುಕಾಲದ ಮೈತ್ರಿಯಿಂದ ಹೊರಬಂದಿರುವುದು ಪ್ರತಿಪಕ್ಷಗಳಿಗೆ ಸರ್ಕಾರವನ್ನು ಹಣಿಯಲು ಸಾಕಷ್ಟು ಅಸ್ತ್ರಗಳು ದೊರೆತಂತಾಗಿದೆ.

ಪ್ರಮುಖವಾಗಿ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಸಂದರ್ಭದಲ್ಲಿ ಸುಮಾರು 19 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಬಿಟ್ಟಿರುವುದು ಚರ್ಚೆಗೆ ಬರಲಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಕದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಿರುವುದನ್ನು ಹಾಗೂ ಪೌರತ್ವಕ್ಕೆ ಅರ್ಹರಾಗಿರುವ ಮುಸ್ಲಿಮರನ್ನು ಪಟ್ಟಿಯಿಂದ ಕೈಬಿಟ್ಟಿರುವ ವಿಷಯವನ್ನು ಪ್ರತಿಪಕ್ಷಗಳು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಾತ್ಮಕವಾಗಿ 370ನೇ ವಿಧಿಯನ್ವಯ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಿರುವುದು ಮತ್ತು ಜಮ್ಮು ಕಾಶ್ಮೀರ ಮತ್ತು ಲಡಕ್ ನ್ನು ಎರಡು ಭಾಗಗಳಾಗಿ ವಿಂಗಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಹಾಗೂ ಕಣಿವೆ ರಾಜ್ಯದ ಕಾಂಗ್ರೆಸ್, ಪಿಡಿಪಿ, ನ್ಯಾಷನಲ್‌ ಕಾನ್ಸರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಜೊತೆಗೆ ವಿದ್ಯಾರ್ಥಿಗಳು, ಸಂಘ-ಸಂಸ್ಥೇಗಳ ಮುಖಂಡರು, ವಕೀಲರನ್ನು ಬಂಧನಕ್ಕೊಳಪಡಿಸಿರುವದನ್ನು ಹಾಗೂ ಎಲ್ಲಾ ರೀತಿಯ ಹಕ್ಕುಗಳನ್ನು ಮೊಟುಕುಗೊಳಿಸಿರುವುದನ್ನು ಪ್ರಸ್ತಾಪಿಸಿ ಸರ್ಕಾರವನ್ನು ಟೀಕೆಗೆ ಗುರಿಪಡಿಸಲಿವೆ.

ಕರ್ನಾಟಕದಲ್ಲಿ 17 ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಲು ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವೂ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ಆಡಿಯೋ ಕೂಡ ಸಂಸತ್ ನಲ್ಲಿ ಸದ್ದು ಮಾಡಲಿದೆ. ಪದೇ ಪದೇ ಆಪರೇಷನ್ ಕಮಲ ಮಾಡಿ ಅನೈತಿಕತೆ ಮತ್ತು ಅಸಂವಿಧಾನದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ.

ದೇಶದಲ್ಲಿ ಕಳೆದ ಆರು ತಿಂಗಳಲ್ಲಿ 90 ಲಕ್ಷ ಉದ್ಯೋಗಗಳು ನಷ್ಟವಾಗಿರುವುದು, ಉದ್ದಿಮೆಗಳು ಬಾಗಿಲು ಮುಚ್ಚಿಸಿರುವುದು, ಅದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಂಡಿರುವುದು, ಮಹಾರಾಷ್ಟ್ರ-ಪಂಜಾಬ್ ಸಹಕಾರ ಬ್ಯಾಂಕ್ ನಲ್ಲಿ ನಡೆದಿರುವ ಹಗರಣ, ಅದರಿಂದಾದ ಸಾವು ನೋವು, ಆರ್ಥಿಕ ಕುಸಿತ, ರೈತರ ಆತ್ಮಹತ್ಯೆ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮೊದಲಾದ ವಿಷಯಗಳು ಉಭಯ ಸದನಗಳಲ್ಲಿ ಚರ್ಚೆಗೆ ಗ್ರಾಸವಾಗಲಿವೆ.

ಆಟೋ ಮೊಬೈಲ್, ಜವಳಿ, ಕಟ್ಟಡ ನಿರ್ಮಾಣ, ವಾಹನ ತಯಾರಿಕೆ ಮತ್ತು ಮಾರಾಟದಲ್ಲಿ ವ್ಯಾಪಕವಾಗಿ ಕುಸಿತ ಕಂಡಿರುವುದು, ನಿರುದ್ಯೋಗ ಸಮಸ್ಯೆ ಕಳೆದ 49 ವರ್ಷಗಳಲ್ಲೇ ಅತ್ಯಧಿಕವಾಗಿ ಕಾಡುತ್ತಿರುವುದು ಹೀಗೆ ಹತ್ತು ಹಲವು ವಿಷಯಗಳನ್ನು ಕಲಾಪದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ , ಶಿವಸೇನೆ, ಎನ್.ಸಿ.ಪಿ, ಡಿಎಂಕೆ ಪಕ್ಷಗಳಿಗೆ ಅವಕಾಶವಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಡವಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಿಟ್ಟು ಪ್ರತಿಪಕ್ಷಗಳ ಮುಖಂಡರನ್ನು ಜೈಲಿಗೆ ಕಳಿಸಿರುವನ್ನು ಪ್ರಮುಖವಾಗಿ ಎತ್ತಿ ಕಲಾಪಕ್ಕೆ ಅಡ್ಡಿಸಲಿವೆ. ಪಿ.ಚಿದಂಬರಂ ಬಂಧನ ಮುಂದುವರಿಕೆ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಇಡಿ ಬಳಕೆ, ಡಿಕೆಶಿವಕುಮಾರ್ ಬಂಧನ, ಹೀಗೆ ಹಲವು ವಿಷಯಗಳು ಸರ್ಕಾರವನ್ನು ಟೀಕೆಗೊಳಪಡಿಸಲು ಅವಕಾಶವಿದೆ.

ವಿದೇಶಾಂಗ ನೀತಿ, ರಾಜತಾಂತ್ರಿಕತೆಯಲ್ಲಿ ವೈಫಲ್ಯ ಅವೈಜ್ಞಾನಿಕ ಸರಕು ಮತ್ತು ಸೇವಾ ತೆರಿಗೆ, ನೋಟು ರದ್ದುಗೊಳಿಸಿ ಮೂರು ವರ್ಷವಾಗಿದ್ದು ಅದರಿಂದಾದ ದುಷ್ಪರಿಣಾಮಗಳು,  ಸಾಲ ಮನ್ನಾ ಮಾಡದೇ ಇರುವುದು, ದೇಶದಲ್ಲಿ ಬಿಜೆಪಿ ಕೋಮು ದ್ವೇಷದ ಮೂಲಕ ಸಮಾಜವನ್ನು ವಿಭಜಿಸಿ ಸೌಹಾರ್ದತೆಯನ್ನು ಹಾಳು ಮಾಡುತ್ತಿರುವುದು ಮತ್ತು ಮುಸ್ಲೀಮರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟಿಸಲು ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...