Homeಮುಖಪುಟನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

ನಾಳೆಯಿಂದ ಚಳಿಗಾಲದ ಅಧಿವೇಶನ: ಸರ್ಕಾರ ವಿರುದ್ದ ದಾಳಿ ನಡೆಸಲು ಪ್ರತಿಪಕ್ಷಗಳ ಸಜ್ಜು

- Advertisement -
- Advertisement -

ಚಳಿಗಾಲದ ಅಧಿವೇಶನ ನವೆಂಬರ್ 18ರಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ನವೆಂಬರ್ 18 ರಿಂದ ಡಿಸೆಂಬರ್ 13ರವರೆಗೆ ಅಂದರೆ 25 ದಿನಗಳು ಕಲಾಪ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಸುಮಾರು 35 ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ತೀರ್ಮಾನಿಸಿದೆ. ವಿವಾದಾತ್ಮಕ ಭಾರತೀಯ ಪೌರತ್ವ ತಿದ್ದುಪಡಿ ಮಸೂದೆ, ಅಕ್ರಮ ವಲಸೆ ಮಸೂದೆ, ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಸೇರಿದಂತೆ ಹಲವು ಮಸೂದೆಗಳು ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿವೆ.

ಹಿಂದಿನ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸಲು 43 ಮಸೂದೆಗಳು ಬಾಕಿ ಇದ್ದು ಅದರಲ್ಲಿ 12 ಮಸೂದೆ ಗಳನ್ನು ಪಾಸು ಮಾಡಲು ಭಾರತ ಸರ್ಕಾರ ತೀರ್ಮಾನಿಸಿದೆ. ಜೊತೆಗೆ 7 ಮಸೂದೆಗಳನ್ನು ವಾಪಸ್ ಪಡೆಯಲಿದೆ. 27 ಮಸೂದೆಗಳನ್ನು ಮಂಡನೆ ಮಾಡಿ ಪರಿಶೀಲಿಸಲು ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಶಿವಸೇನೆ ಎನ್.ಡಿ.ಎ. ಸರ್ಕಾರದಿಂದ ಹೊರಬಂದಿದೆ. ಇದ್ದ ಒಬ್ಬ ಸಚಿವರೂ ಕೂಡ ರಾಜಿನಾಮೆ ನೀಡಿ ಹೊರ ಬಂದಿರುವುದರಿಂದ ಸಂಸತ್‌ನಲ್ಲಿ ಶಿವಸೇನೆಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕಾಗಿದೆ.

ಶಿವಸೇನೆಯ 18 ಮಂದಿ ಲೋಕಸಭಾ ಸದಸ್ಯರು ಮತ್ತು ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ. ಅವರಿಗೆ ಉಭಯ ಸದಗಳಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ.

ಜಾರ್ಖಂಡ್ ನಲ್ಲಿ ಎಲ್.ಜೆ.ಪಿಯು ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿದ್ದು ಸ್ವತಂತ್ರವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆದಿದೆ. ಇದರ ಜೊತೆಗೆ ಶಿವಸೇನೆಯೂ ಬಿಜೆಪಿಯ ಬಹುಕಾಲದ ಮೈತ್ರಿಯಿಂದ ಹೊರಬಂದಿರುವುದು ಪ್ರತಿಪಕ್ಷಗಳಿಗೆ ಸರ್ಕಾರವನ್ನು ಹಣಿಯಲು ಸಾಕಷ್ಟು ಅಸ್ತ್ರಗಳು ದೊರೆತಂತಾಗಿದೆ.

ಪ್ರಮುಖವಾಗಿ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಸಂದರ್ಭದಲ್ಲಿ ಸುಮಾರು 19 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಬಿಟ್ಟಿರುವುದು ಚರ್ಚೆಗೆ ಬರಲಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಕದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಿರುವುದನ್ನು ಹಾಗೂ ಪೌರತ್ವಕ್ಕೆ ಅರ್ಹರಾಗಿರುವ ಮುಸ್ಲಿಮರನ್ನು ಪಟ್ಟಿಯಿಂದ ಕೈಬಿಟ್ಟಿರುವ ವಿಷಯವನ್ನು ಪ್ರತಿಪಕ್ಷಗಳು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಾತ್ಮಕವಾಗಿ 370ನೇ ವಿಧಿಯನ್ವಯ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಿರುವುದು ಮತ್ತು ಜಮ್ಮು ಕಾಶ್ಮೀರ ಮತ್ತು ಲಡಕ್ ನ್ನು ಎರಡು ಭಾಗಗಳಾಗಿ ವಿಂಗಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಹಾಗೂ ಕಣಿವೆ ರಾಜ್ಯದ ಕಾಂಗ್ರೆಸ್, ಪಿಡಿಪಿ, ನ್ಯಾಷನಲ್‌ ಕಾನ್ಸರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಜೊತೆಗೆ ವಿದ್ಯಾರ್ಥಿಗಳು, ಸಂಘ-ಸಂಸ್ಥೇಗಳ ಮುಖಂಡರು, ವಕೀಲರನ್ನು ಬಂಧನಕ್ಕೊಳಪಡಿಸಿರುವದನ್ನು ಹಾಗೂ ಎಲ್ಲಾ ರೀತಿಯ ಹಕ್ಕುಗಳನ್ನು ಮೊಟುಕುಗೊಳಿಸಿರುವುದನ್ನು ಪ್ರಸ್ತಾಪಿಸಿ ಸರ್ಕಾರವನ್ನು ಟೀಕೆಗೆ ಗುರಿಪಡಿಸಲಿವೆ.

ಕರ್ನಾಟಕದಲ್ಲಿ 17 ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಲು ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವೂ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ಆಡಿಯೋ ಕೂಡ ಸಂಸತ್ ನಲ್ಲಿ ಸದ್ದು ಮಾಡಲಿದೆ. ಪದೇ ಪದೇ ಆಪರೇಷನ್ ಕಮಲ ಮಾಡಿ ಅನೈತಿಕತೆ ಮತ್ತು ಅಸಂವಿಧಾನದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ.

ದೇಶದಲ್ಲಿ ಕಳೆದ ಆರು ತಿಂಗಳಲ್ಲಿ 90 ಲಕ್ಷ ಉದ್ಯೋಗಗಳು ನಷ್ಟವಾಗಿರುವುದು, ಉದ್ದಿಮೆಗಳು ಬಾಗಿಲು ಮುಚ್ಚಿಸಿರುವುದು, ಅದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಂಡಿರುವುದು, ಮಹಾರಾಷ್ಟ್ರ-ಪಂಜಾಬ್ ಸಹಕಾರ ಬ್ಯಾಂಕ್ ನಲ್ಲಿ ನಡೆದಿರುವ ಹಗರಣ, ಅದರಿಂದಾದ ಸಾವು ನೋವು, ಆರ್ಥಿಕ ಕುಸಿತ, ರೈತರ ಆತ್ಮಹತ್ಯೆ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮೊದಲಾದ ವಿಷಯಗಳು ಉಭಯ ಸದನಗಳಲ್ಲಿ ಚರ್ಚೆಗೆ ಗ್ರಾಸವಾಗಲಿವೆ.

ಆಟೋ ಮೊಬೈಲ್, ಜವಳಿ, ಕಟ್ಟಡ ನಿರ್ಮಾಣ, ವಾಹನ ತಯಾರಿಕೆ ಮತ್ತು ಮಾರಾಟದಲ್ಲಿ ವ್ಯಾಪಕವಾಗಿ ಕುಸಿತ ಕಂಡಿರುವುದು, ನಿರುದ್ಯೋಗ ಸಮಸ್ಯೆ ಕಳೆದ 49 ವರ್ಷಗಳಲ್ಲೇ ಅತ್ಯಧಿಕವಾಗಿ ಕಾಡುತ್ತಿರುವುದು ಹೀಗೆ ಹತ್ತು ಹಲವು ವಿಷಯಗಳನ್ನು ಕಲಾಪದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ , ಶಿವಸೇನೆ, ಎನ್.ಸಿ.ಪಿ, ಡಿಎಂಕೆ ಪಕ್ಷಗಳಿಗೆ ಅವಕಾಶವಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಡವಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಿಟ್ಟು ಪ್ರತಿಪಕ್ಷಗಳ ಮುಖಂಡರನ್ನು ಜೈಲಿಗೆ ಕಳಿಸಿರುವನ್ನು ಪ್ರಮುಖವಾಗಿ ಎತ್ತಿ ಕಲಾಪಕ್ಕೆ ಅಡ್ಡಿಸಲಿವೆ. ಪಿ.ಚಿದಂಬರಂ ಬಂಧನ ಮುಂದುವರಿಕೆ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಇಡಿ ಬಳಕೆ, ಡಿಕೆಶಿವಕುಮಾರ್ ಬಂಧನ, ಹೀಗೆ ಹಲವು ವಿಷಯಗಳು ಸರ್ಕಾರವನ್ನು ಟೀಕೆಗೊಳಪಡಿಸಲು ಅವಕಾಶವಿದೆ.

ವಿದೇಶಾಂಗ ನೀತಿ, ರಾಜತಾಂತ್ರಿಕತೆಯಲ್ಲಿ ವೈಫಲ್ಯ ಅವೈಜ್ಞಾನಿಕ ಸರಕು ಮತ್ತು ಸೇವಾ ತೆರಿಗೆ, ನೋಟು ರದ್ದುಗೊಳಿಸಿ ಮೂರು ವರ್ಷವಾಗಿದ್ದು ಅದರಿಂದಾದ ದುಷ್ಪರಿಣಾಮಗಳು,  ಸಾಲ ಮನ್ನಾ ಮಾಡದೇ ಇರುವುದು, ದೇಶದಲ್ಲಿ ಬಿಜೆಪಿ ಕೋಮು ದ್ವೇಷದ ಮೂಲಕ ಸಮಾಜವನ್ನು ವಿಭಜಿಸಿ ಸೌಹಾರ್ದತೆಯನ್ನು ಹಾಳು ಮಾಡುತ್ತಿರುವುದು ಮತ್ತು ಮುಸ್ಲೀಮರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟಿಸಲು ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...