Homeಕರ್ನಾಟಕವಿಪ್ರೋ ಕ್ಯಾಂಪಸ್ ರಸ್ತೆ ಸಾರ್ವಜನಿಕರಿಗೆ ತೆರೆಯಬೇಕೆಂಬ ಸರ್ಕಾರದ ಮನವಿ ನಿರಾಕರಿಸಿದ ಅಜೀಂ ಪ್ರೇಮ್‌ಜಿ

ವಿಪ್ರೋ ಕ್ಯಾಂಪಸ್ ರಸ್ತೆ ಸಾರ್ವಜನಿಕರಿಗೆ ತೆರೆಯಬೇಕೆಂಬ ಸರ್ಕಾರದ ಮನವಿ ನಿರಾಕರಿಸಿದ ಅಜೀಂ ಪ್ರೇಮ್‌ಜಿ

- Advertisement -
- Advertisement -

ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕ್ಯಾಂಪಸ್ ರಸ್ತೆ ಮೂಲಕ ಸೀಮಿತ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ, ಸರ್ಕಾರದ ವಿನಂತಿಯನ್ನು ನಿರಾಕರಿಸಿದರು.

“ಸರ್ಜಾಪುರ ಕ್ಯಾಂಪಸ್ ಖಾಸಗಿ ಆಸ್ತಿ ಮತ್ತು ಜಾಗತಿಕ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್‌) ದ ಭಾಗವಾಗಿದೆ” ಎಂದು ಹೇಳಿದ ಪ್ರೇಮ್‌ಜಿ, ‘ಕಾನೂನು, ಆಡಳಿತ ಮತ್ತು ಶಾಸನಬದ್ಧ ಸವಾಲುಗಳನ್ನು’ ಎತ್ತಿ ಸರ್ಕಾರದ ಮುಂದಿಟ್ಟಿದ್ದಾರೆ.

“ಒಪ್ಪಂದದ ಬಾಧ್ಯತೆಗಳು ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣವನ್ನು ಕಡ್ಡಾಯಗೊಳಿಸುತ್ತವೆ, ಕ್ಯಾಂಪಸ್‌ನ ಸಾರ್ವಜನಿಕ ಬಳಕೆಗೆ ಅವಕಾಶ ನೀಡುವುದು ಸುಸ್ಥಿರ, ದೀರ್ಘಕಾಲೀನ ಪರಿಹಾರವನ್ನು ನೀಡುವುದಿಲ್ಲ” ಎಂದು ಅವರು ಹೇಳಿದರು.

ಆದರೂ, ಬೆಂಗಳೂರಿನ ಸಂಚಾರ ಸವಾಲುಗಳನ್ನು ಪರಿಹರಿಸಲು ಸಹಯೋಗದ, ಡೇಟಾ-ಚಾಲಿತ ವಿಧಾನದ ಮೇಲೆ ರಾಜ್ಯ ಸರ್ಕಾರದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಇಚ್ಛೆಯನ್ನು ಕಂಪನಿಯು ವ್ಯಕ್ತಪಡಿಸಿತು. ಕಾರ್ಯಗತಗೊಳಿಸಬಹುದಾದ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ನಗರ ಸಾರಿಗೆ ನಿರ್ವಹಣೆಯ ತಜ್ಞರ ನೇತೃತ್ವದಲ್ಲಿ ಸಮಗ್ರ ಅಧ್ಯಯನವನ್ನು ನಿಯೋಜಿಸಲು ಸೂಚಿಸಿತು.

ಕರ್ನಾಟಕಕ್ಕೆ ವಿಪ್ರೋ ನೀಡಿದ ಕೊಡುಗೆಗಳನ್ನು ಗುರುತಿಸಿದ್ದಕ್ಕಾಗಿ ಅಜೀಂ ಪ್ರೇಮ್‌ಜಿ ತಮ್ಮ ಪತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು. ರಫ್ತು-ಆಧಾರಿತ ಆರ್ಥಿಕ ಕೇಂದ್ರವೆಂದು ಗುರುತಿಸಲ್ಪಟ್ಟ ಹೊರ ವರ್ತುಲ ರಸ್ತೆ ಪ್ರದೇಶದ ಉದ್ದಕ್ಕೂ ಸಂಚಾರ ಸಮಸ್ಯೆಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒಪ್ಪಿಕೊಂಡರು. “ಹಲವು ಕಾರಣಗಳಿಂದ ಉಂಟಾಗುವ ಸಮಸ್ಯೆಯ ಸಂಕೀರ್ಣತೆಯು ಒಂದೇ ಪರಿಹಾರವನ್ನು ಹೊಂದಿರುವುದು ಅಸಂಭವ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Image

ನಗರ ಸಾರಿಗೆ ನಿರ್ವಹಣೆಯಲ್ಲಿ ತಜ್ಞರ ನೇತೃತ್ವದಲ್ಲಿ ವೈಜ್ಞಾನಿಕ ಅಧ್ಯಯನವನ್ನು ನಿಯೋಜಿಸುವ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದಾರೆ.

“ಇಂತಹ ಉಪಕ್ರಮಗಳು ಅಲ್ಪ, ಮಧ್ಯಮ ಮತ್ತು ದೀರ್ಘಾವಧಿಯಲ್ಲಿ ಕಾರ್ಯಗತಗೊಳಿಸಬಹುದಾದ ಪರಿಣಾಮಕಾರಿ ಪರಿಹಾರಗಳ ಸಮಗ್ರ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಲು ನಮಗೆ ಅನುವು ಮಾಡಿಕೊಡುತ್ತದೆ. ಪರಿಹಾರದ ಭಾಗವಾಗಲು ನಮ್ಮ ಬದ್ಧತೆಯನ್ನು ಪ್ರದರ್ಶಿಸಲು, ವಿಪ್ರೋ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಈ ತಜ್ಞರ ಅಧ್ಯಯನಕ್ಕಾಗಿ ವೆಚ್ಚದ ಗಮನಾರ್ಹ ಭಾಗವನ್ನು ಭರಿಸಲು ಸಂತೋಷಪಡುತ್ತದೆ” ಎಂದು ಅವರು ಬರೆದಿದ್ದಾರೆ.

ಈ ನಿರ್ಬಂಧಗಳ ಹೊರತಾಗಿಯೂ, ಅಜೀಂ ಪ್ರೇಮ್‌ಜಿ ಅವರು ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ವಿಪ್ರೋದ ಬದ್ಧತೆಯನ್ನು ಪುನರುಚ್ಚರಿಸಿದರು. “ಡೇಟಾ-ಚಾಲಿತ ವಿಧಾನವು ನಮ್ಮ ನಗರಕ್ಕೆ ಅತ್ಯಂತ ಪರಿಣಾಮಕಾರಿ ಫಲಿತಾಂಶಗಳನ್ನು ನೀಡುತ್ತದೆ” ಎಂದು ಒತ್ತಿ ಹೇಳಿದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...