Homeಕರ್ನಾಟಕವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ವೇತನ ಪಾವತಿ ಮಾಡದಿರುವುದು 1936 ರ ವೇತನ ಪಾವತಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕನಿಷ್ಟ ವೇತನ ಪಾವತಿ ಮಾಡದಿರುವುದು ಮತ್ತು ಹೆಚ್ಚುವರಿ ದುಡಿಮೆಯ ವೇತನ ನೀಡದಿರುವುದು 1948 ರ ಕನಿಷ್ಟ ವೇತನ ಕಾಯ್ದೆಯ ಉಲ್ಲಂಘನೆಯಾಗಿದೆ.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ತೈವಾನ್ ಮೂಲದ ಆಪಲ್ ಐಫೋನ್ ತಯಾರಿಕಾ ಕಂಪೆನಿಯಾದ ’ವಿಸ್ಟ್ರಾನ್’ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ AICCTU ಕಾರ್ಮಿಕ ಸಂಘಟನೆಯು ಸತ್ಯಶೋಧನೆ ನಡೆಸಿದೆ. ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಕಾನೂನುಗಳ ಉಲ್ಲಂಘನೆ ಮತ್ತು ಕೈಗಾರಿಕಾ ಶಾಂತಿಯನ್ನು ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿಯಲ್ಲಿ ತಿಳಿಸಿದೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದೇವೆ ಎಂದು ನಿನ್ನೆ ತಿಳಿಸಿದ್ದಾರೆ.

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಕೈಗಾರಿಕಾ ಶಾಂತಿಯನ್ನು ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಾರ್ಮಿಕ ಸಂಘಟನೆ AICCTU ರಾಜ್ಯ ಸರ್ಕಾರಕ್ಕೆ ನೀಡಿರುವ ವರದಿ ಮತ್ತು ಸಲಹೆಗಳ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ

ಘಟನೆಯಲ್ಲಿ ಕಾರ್ಖಾನೆಯ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಒಪ್ಪಿಕೊಂಡಿರುವ AICCTU, “ಪೊಲೀಸರೂ ಕಾರ್ಮಿಕರ ಮೇಲೆ ದಾಳಿ ಕೂಡಾ ನಡೆಸಿದ್ದಾರೆ. ಪ್ರಸ್ತುತ ಕಾರ್ಖಾನೆಯ ಜಾಗವನ್ನು ಸಂಪೂರ್ಣವಾಗಿ ಪೊಲೀಸ್ ಪಡೆಗಳ ಮೂಲಕ ನಿರ್ಬಂಧಿಸಲಾಗಿದ್ದು ಸಾರ್ವಜನಿಕರಿಗೆ ಪ್ರವೇಶ ಇಲ್ಲದಂತಾಗಿದೆ. ಕಾರ್ಮಿಕರು ಮಾತನಾಡಲು ಭಯಪಡುತ್ತಿದ್ದು, ಬೀಡುಬಿಟ್ಟಿರುವ ಪೊಲೀಸರ ಭೀತಿಯಿಂದ ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ” ಎಂದು ಹೇಳಿದೆ.

“ಲಾಕ್‌ಡೌನ್ ನಂತರದಲ್ಲಿ ಕಾರ್ಯಾರಂಭ ಮಾಡಿದ ಈ ಕಾರ್ಖಾನೆಯು 1343 ಖಾಯಂ ನೌಕರರನ್ನು, 8490 ಗುತ್ತಿಗೆ ಕಾರ್ಮಿಕರನ್ನೂ ನೇಮಕ ಮಾಡಿಕೊಂಡಿದ್ದು, ಒಟ್ಟು ಆರು ಗುತ್ತಿಗೆದಾರರು ಈ ಕಾರ್ಮಿಕರನ್ನು ನೇಮಿಸಿದ್ದಾರೆ. ಕಾರ್ಮಿಕರ ಪೈಕಿ ಇಂಜಿನಿಯರಿಂಗ್ ಪದವೀಧರರು, ಐಟಿಐ ಡಿಪ್ಲೊಮಾ ಹೊಂದಿರುವವರು, 10 ನೆ ತರಗತಿ ಮತ್ತು ಪಿಯುಸಿ ವ್ಯಾಸಂಗ ಮುಗಿಸಿರುವವರು ಇದ್ದಾರೆ” ಎಂದು ವರದಿ ಹೇಳಿದೆ.

ಗುತ್ತಿಗೆ ಕಾರ್ಮಿಕರಲ್ಲಿ ತಮಿಳುನಾಡು, ಆಂಧ್ರ ಪ್ರದೇಶ, ಬಿಹಾರ ಮತ್ತಿತರ ರಾಜ್ಯಗಳಿಂದ ವಲಸೆ ಕಾರ್ಮಿಕರು, ಕರ್ನಾಟಕದ ಇತರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರು ಮತ್ತು ನರಸಾಪುರ ಸುತ್ತಲಿನ ತಾಲೂಕು ಮತ್ತು ಹಳ್ಳಿಗಳಿಂದ ಬಂದಿರುವ ಕಾರ್ಮಿಕರು ಸೇರಿದಂತೆ ಒಟ್ಟು ಮೂರು ವರ್ಗಗಳಿವೆ ಎಂದು AICCTU ಸೂಚಿಸಿದೆ.

ಘಟನೆಯ ಬಗ್ಗೆ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿ

ಕಂಪೆನಿಯಲ್ಲಿನ ಕಾರ್ಮಿಕ ವರ್ಗ ಯುವಕರಾಗಿದ್ದು, 26 ವರ್ಷಕ್ಕೂ ಮೇಲ್ಪಟ್ಟ ಕಾರ್ಮಿಕರ ಎಲ್ಲ ಅರ್ಜಿಗಳನ್ನೂ ವಿಸ್ಟ್ರಾನ್ ಅಧಿಕಾರಿಗಳು ತಿರಸ್ಕರಿಸಿದ್ದಾರೆ ಎಂದಿರುವ ಕಾರ್ಮಿಕ ಸಂಘಟನೆ, “ಖಾಯಂ ನೌಕರರಿಗೆ ಒದಗಿಸಬೇಕಾದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ತಪ್ಪಿಸುವ ಸಲುವಾಗಿ ಕಂಪೆನಿಯು ಗುತ್ತಿಗೆದಾರರನ್ನು ನೇಮಿಸಿದ್ದು, ನೇಮಕಾತಿ ಆದೇಶವನ್ನು ಕಾರ್ಮಿಕರಿಗೆ ನೀಡುವುದು ಮತ್ತು ವೇತನ ಪಾವತಿ ಮಾಡುವುದನ್ನು ಹೊರತುಪಡಿಸಿ ಗುತ್ತಿಗೆದಾರರು ಮತ್ತಾವುದೇ ಪಾತ್ರ ವಹಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

“ಹತ್ತಿರದ ಹಳ್ಳಿಗಳಿಂದ ಬಂದಿರುವ ಕಾರ್ಮಿಕರು ತೀವ್ರ ಬಡತನದ ಹಿನ್ನೆಲೆ ಹೊಂದಿದ್ದು ಹೆಚ್ಚಿನವರು ದಲಿತ ಸಮುದಾಯದವರಾಗಿದ್ದಾರೆ. ಲಾಕ್‌ಡೌನ್‌ನಿಂದಾಗಿ‌‌ ಕಾಲೇಜುಗಳನ್ನು ಮುಚ್ಚಲಾಗಿದ್ದರಿಂದ ಇವರಲ್ಲಿ ಅನೇಕರು ಕಾರ್ಖಾನೆಯ ಕೆಲಸಕ್ಕೆ ಸೇರಿಕೊಂಡಿದ್ದು, ಇವರ ನೇಮಕಾತಿಯ ಸಂದರ್ಭದಲ್ಲಿ ತಿಂಗಳಿಗೆ 22000/- ರೂಗಳ ವೇತನದ ಜೊತೆಗೆ, ಹೆಚ್ಚುವರಿ ದುಡಿಮೆಯ ವೇತನವನ್ನೂ ನೀಡುವುದಾಗಿ ಹೇಳಿತ್ತಾದರೂ ಇದನ್ನು ಕಂಪೆನಿ ನೀಡುತ್ತಿಲ್ಲ. ಜೊತೆಗೆ ರಜೆಯ ಸೌಲಭ್ಯಗಳನ್ನೂ ನೀಡುತ್ತಿಲ್ಲ” ಎಂದು AICCTU ಆರೋಪಿಸಿದೆ. ಇದುವರೆಗೂ ಯಾವುದೇ ಗುತ್ತಿಗೆ ಕಾರ್ಮಿಕರಿಗೆ 12,000 ಕ್ಕಿಂತ ಹೆಚ್ಚಿನ ಸಂಬಳ ನೀಡಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

“ಕಾನೂನು ಪ್ರಕಾರ ನೀಡಬೇಕಾದ ಹೆಚ್ಚುವರಿ ದುಡಿಮೆಯ ವೇತನವನ್ನು ಈವರೆಗೂ ಪಾವತಿ ಮಾಡದಿರುವುದು ಮಾತ್ರವಲ್ಲದೆ, ಪ್ರತಿ ತಿಂಗಳೂ ಕಾರ್ಮಿಕರ ಖಾತೆಗಳಿಗೆ ಜಮಾ ಆಗುವ ವೇತನಗಳು ಕಡಿಮೆಯಾಗುತ್ತಲೇ ಇದೆ. ಕಾರ್ಮಿಕರು ತಮ್ಮ ಕುಂದುಕೊರತೆಗಳನ್ನು ಕಂಪನಿಯ ಅಧಿಕಾರಿಗಳಿಗೆ ಸಲ್ಲಿಸುವುದರ ಜೊತೆಗೆ ಕೋಲಾರದ ಜಿಲ್ಲಾಧಿಕಾರಿಗಳನ್ನೂ ಸಂಪರ್ಕಿಸಿದ್ದರು” ಎಂದು AICCTU ಹೇಳಿದೆ.

“ಡಿಸೆಂಬರ್‌ 9 ರಂದು ಕಾರ್ಮಿಕರು ಸಿಬ್ಬಂದಿ ಇಲಾಖೆಯ ಅಧಿಕಾರಿಯನ್ನು ಸಂಪರ್ಕಿಸಿ ತಮ್ಮ ವೇತನ ಪಾವತಿ ಮಾಡುವಂತೆ ವಿನಂತಿಸಿದ್ದಾರಾದರೂ, ಅವರ ವಿನಂತಿಯನ್ನು ಆಲಿಸಲಾಗಿಲ್ಲ. ಆದರೆ ಇದಾಗಿ ಕೆಲವೆ ದಿನದಲ್ಲಿ ಒಮ್ಮೆಲೆ ಪರಿಸ್ಥಿತಿ ಕೈಮೀರಿಹೋಗಿದ್ದು, ಕೆಲವು ಕಾರ್ಮಿಕರು ಕಂಪನಿಯ ಆಸ್ತಿಪಾಸ್ತಿಯ ಹಾನಿ ಮಾಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ವಿಡಿಯೋ ಚಿತ್ರಗಳ ಅನುಸಾರ ಕಾರ್ಮಿಕರು ಗಾಜಿನ ಕಿಟಕಿಗಳನ್ನು ಒಡೆದುಹಾಕಿದ್ದು, ವಾಹನಗಳನ್ನು ತಲೆಕೆಳಗು ಮಾಡಿರುವುದು, ಹಾನಿ ಮಾಡಿರುವುದು ಕಂಡುಬಂದಿದೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಮಿಕರನ್ನು ಚದುರಿಸಿದ್ದಾರೆ”

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ಹೊರಗಿನಿಂದ ಕೆಲವು ವ್ಯಕ್ತಿಗಳು ಕಾರ್ಖಾನೆಯೊಳಗೆ ಬಂದು ಧ್ವಂಸ ಮಾಡಿದ್ದಾರೆ ಎಂದು ಕೆಲವು ಕಾರ್ಮಿಕರು ಹೇಳಿದ್ದಾರೆಂದು ಹೇಳಿರುವ AICCTU, “ವಿಡಿಯೋ ಚಿತ್ರಣವನ್ನು ನೋಡಿದರೆ, ಬಹುಪಾಲು ಜನರು ಕೇವಲ ವೀಕ್ಷಕರಾಗಿ ಕಾಣುತ್ತಿದ್ದು, ಕೆಲವರು ಮಾತ್ರವೇ ಕಂಪನಿಯ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದು ಕಂಡುಬರುತ್ತದೆ” ಎಂದಿದೆ. ಇದುವರೆಗೂ ಒಟ್ಟು 160 ಕಾರ್ಮಿಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆಯಾದರೂ ಬಂಧಿತರನ್ನು ಕುರಿತಂತೆ ಯಾವುದೇ ಮಾಹಿತಿ ನೀಡಲಾಗಿಲ್ಲ ಎಂದು AICCTU ಆರೋಪಿಸಿದೆ.

“ರಾಜ್ಯ ಸರ್ಕಾರವು ಕಂಪನಿಯ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದನ್ನು ಖಂಡಿಸಿದೆ. ಆದರೆ ಕಾರ್ಮಿಕರ ಬವಣೆಯ ಬಗ್ಗೆ ಯಾವುದೇ ಅನುಕಂಪ ವ್ಯಕ್ತಪಡಿಸಿಲ್ಲ. ಡಿ.12 ರಂದು ನಡೆದ ಘಟನೆಗಳು ಶೋಷಣೆಗೊಳಗಾದ, ಅಸಂಘಟಿತ ಕಾರ್ಮಿಕರ ಹತಾಶೆ ಮತ್ತು ಆಕ್ರೋಶದ ಪರಿಣಾಮವಾಗಿದ್ದು, ತಮ್ಮ ಕುಂದುಕೊರತೆಗಳನ್ನು ನಿವಾರಿಸಲು ಯಾವುದೇ ಮಾರ್ಗ ಕಾಣದೆ ಈ ದಾಂಧಲೆಯಲ್ಲಿ ತೊಡಗಿದೆ. ತಮ್ಮ ವಿರುದ್ದ ನಡೆಯುತ್ತಿರುವ ಶೋಷಣೆಯ ಒತ್ತಡ ಒಮ್ಮೆಲೆ ಸ್ಫೋಟಿಸಿದ್ದು ಈ ಹಿಂಸಾತ್ಮಕ ಘಟನೆಯಲ್ಲಿ ಪರ್ಯವಸಾನ ಹೊಂದಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಕಾರ್ಮಿಕರು ನಡೆದಿರುವ ಘಟನೆಯ ಬಗ್ಗೆ ಭಯಗೊಂಡಿದ್ದು, ಈ ಸನ್ನಿವೇಶದಲ್ಲಿ ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ ಮತ್ತು ಪೊಲೀಸರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಾರ್ಮಿಕ ಸಂಘಟನೆಯು ಸಲಹೆ ನೀಡಿದೆ.

“ವೇತನ ಪಾವತಿಯಾಗದಿರುವುದು ಮತ್ತು ತಡವಾಗಿ ಪಾವತಿಯಾಗಿರುವುದು 1936 ರ ವೇತನ ಪಾವತಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು. ಕನಿಷ್ಟ ವೇತನ ಪಾವತಿ ಮಾಡದಿರುವುದು ಮತ್ತು ಹೆಚ್ಚುವರಿ ದುಡಿಮೆಯ ವೇತನ ನೀಡದಿರುವುದು 1948 ರ ಕನಿಷ್ಟ ವೇತನ ಕಾಯ್ದೆಯ ಉಲ್ಲಂಘನೆಯಾಗಿದೆ. ಕಾರ್ಖಾನೆ ಕಾಯ್ದೆಯ ಸೆಕ್ಷನ್ 59 ರ ಉಲ್ಲಂಘಿಸಿ ಹೆಚ್ಚುವರಿ ದುಡಿಮೆಗೆ ಪಾವತಿ ಮಾಡಿಲ್ಲ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ” ಎಂದು AICCTU ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

“1947 ರ ಕೈಗಾರಿಕಾ ವಿವಾದಗಳ ಕಾಯ್ದೆಯ ಅನುಸಾರ 100 ಕ್ಕಿಂತಲೂ ಹೆಚ್ಚಿನ ಕಾರ್ಮಿಕರು ಇರುವ ಯಾವುದೇ ಕೈಗಾರಿಕೋದ್ಯಮವು ಕಾರ್ಮಿಕ ಮತ್ತು ಮಾಲಿಕರ ಪ್ರತಿನಿಧಿಗಳನ್ನೊಳಗೊಂಡ ಕ್ರಿಯಾ ಸಮಿತಿಯೊಂದನ್ನು ರಚಿಸುವುದು ಕಡ್ಡಾಯವಾಗಿದೆ. ಆದರೆ ಈ ಕಾರ್ಖಾನೆಯಲ್ಲಿ ಈ ಯಾವುದೇ ನಿಯಮಗಳನ್ನು ಪಾಲಿಸಲಾಗಿಲ್ಲ” ಎಂದು AICCTU ಹೇಳಿದೆ.

ಕಂಪೆನಿಯು ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ನಿಯಮಗಳನ್ನು ಮೀರಿ ದುಡಿಸಿಕೊಳ್ಳುತ್ತಿದೆ. 10 ಸಾವಿರಕ್ಕಿಂತಲೂ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಒಂದು ಉದ್ದಿಮೆಯಲ್ಲಿ ಕಾರ್ಮಿಕರಿಗೆ ಸಂಘಟನೆ ಇಲ್ಲ ಎಂದು ಕಾರ್ಮಿಕ ಸಂಘಟನೆಯು ವಿಷಾದ ವ್ಯಕ್ತಪಡಿಸಿದ್ದು, “ಗುತ್ತಿಗೆ ಕಾರ್ಮಿಕರನ್ನು ಹಿಂಬಾಗಿಲಿನಿಂದ ನೇಮಕ ಮಾಡಿ, ಗುತ್ತಿಗೆ ಕಾರ್ಮಿಕ ಕಾಯ್ದೆಗಳನ್ನೂ ಉಲ್ಲಂಘನೆ ಮಾಡಿದೆ. ಈ ವಿಷಯದಲ್ಲಿ ಸರ್ಕಾರವು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

“ಡಿಸೆಂಬರ್ 12 ರ ಘಟನೆಗಳು ಕಂಪನಿಯಲ್ಲಿ ಅನುಸರಿಸಲಾಗಿರುವ ಶೋಷಕ ನೀತಿಗಳ ಪರಿಣಾಮವಾಗಿದ್ದು, ಎಲ್ಲ ಕಾರ್ಮಿಕ ಕಾನೂನು ನಿಯಮಗಳನ್ನೂ ಉಲ್ಲಂಘಿಸಿ, ಬಡ ಕಾರ್ಮಿಕರ ಮೂಲ ವೇತನವನ್ನೂ ಪಾವತಿ ಮಾಡದೆ ಇರುವುದರಿಂದ ನೊಂದ ಶೋಷಿತ ಕಾರ್ಮಿಕರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಕಾರ್ಮಿಕರು ಅಸಹಾಯಕ ಪರಿಸ್ಥಿತಿಗೆ ದೂಡಲ್ಪಟ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವುದು, ಕಾರ್ಮಿಕರನ್ನು ಬಂಧಿಸುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡುತ್ತದೆ. ರಾಜ್ಯ ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕಿದೆ. ಹಾಗಾಗಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ದಾಖಲಾಗಿರುವ ಎಲ್ಲ ದೂರುಗಳನ್ನು ಹಿಂಪಡೆಯಬೇಕು” ಎಂದು AICCTU  ಒತ್ತಾಯಿಸಿದೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...