Homeಕರ್ನಾಟಕವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ವೇತನ ಪಾವತಿ ಮಾಡದಿರುವುದು 1936 ರ ವೇತನ ಪಾವತಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕನಿಷ್ಟ ವೇತನ ಪಾವತಿ ಮಾಡದಿರುವುದು ಮತ್ತು ಹೆಚ್ಚುವರಿ ದುಡಿಮೆಯ ವೇತನ ನೀಡದಿರುವುದು 1948 ರ ಕನಿಷ್ಟ ವೇತನ ಕಾಯ್ದೆಯ ಉಲ್ಲಂಘನೆಯಾಗಿದೆ.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ತೈವಾನ್ ಮೂಲದ ಆಪಲ್ ಐಫೋನ್ ತಯಾರಿಕಾ ಕಂಪೆನಿಯಾದ ’ವಿಸ್ಟ್ರಾನ್’ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ AICCTU ಕಾರ್ಮಿಕ ಸಂಘಟನೆಯು ಸತ್ಯಶೋಧನೆ ನಡೆಸಿದೆ. ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಕಾನೂನುಗಳ ಉಲ್ಲಂಘನೆ ಮತ್ತು ಕೈಗಾರಿಕಾ ಶಾಂತಿಯನ್ನು ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿಯಲ್ಲಿ ತಿಳಿಸಿದೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದೇವೆ ಎಂದು ನಿನ್ನೆ ತಿಳಿಸಿದ್ದಾರೆ.

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಕೈಗಾರಿಕಾ ಶಾಂತಿಯನ್ನು ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಾರ್ಮಿಕ ಸಂಘಟನೆ AICCTU ರಾಜ್ಯ ಸರ್ಕಾರಕ್ಕೆ ನೀಡಿರುವ ವರದಿ ಮತ್ತು ಸಲಹೆಗಳ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ

ಘಟನೆಯಲ್ಲಿ ಕಾರ್ಖಾನೆಯ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಒಪ್ಪಿಕೊಂಡಿರುವ AICCTU, “ಪೊಲೀಸರೂ ಕಾರ್ಮಿಕರ ಮೇಲೆ ದಾಳಿ ಕೂಡಾ ನಡೆಸಿದ್ದಾರೆ. ಪ್ರಸ್ತುತ ಕಾರ್ಖಾನೆಯ ಜಾಗವನ್ನು ಸಂಪೂರ್ಣವಾಗಿ ಪೊಲೀಸ್ ಪಡೆಗಳ ಮೂಲಕ ನಿರ್ಬಂಧಿಸಲಾಗಿದ್ದು ಸಾರ್ವಜನಿಕರಿಗೆ ಪ್ರವೇಶ ಇಲ್ಲದಂತಾಗಿದೆ. ಕಾರ್ಮಿಕರು ಮಾತನಾಡಲು ಭಯಪಡುತ್ತಿದ್ದು, ಬೀಡುಬಿಟ್ಟಿರುವ ಪೊಲೀಸರ ಭೀತಿಯಿಂದ ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ” ಎಂದು ಹೇಳಿದೆ.

“ಲಾಕ್‌ಡೌನ್ ನಂತರದಲ್ಲಿ ಕಾರ್ಯಾರಂಭ ಮಾಡಿದ ಈ ಕಾರ್ಖಾನೆಯು 1343 ಖಾಯಂ ನೌಕರರನ್ನು, 8490 ಗುತ್ತಿಗೆ ಕಾರ್ಮಿಕರನ್ನೂ ನೇಮಕ ಮಾಡಿಕೊಂಡಿದ್ದು, ಒಟ್ಟು ಆರು ಗುತ್ತಿಗೆದಾರರು ಈ ಕಾರ್ಮಿಕರನ್ನು ನೇಮಿಸಿದ್ದಾರೆ. ಕಾರ್ಮಿಕರ ಪೈಕಿ ಇಂಜಿನಿಯರಿಂಗ್ ಪದವೀಧರರು, ಐಟಿಐ ಡಿಪ್ಲೊಮಾ ಹೊಂದಿರುವವರು, 10 ನೆ ತರಗತಿ ಮತ್ತು ಪಿಯುಸಿ ವ್ಯಾಸಂಗ ಮುಗಿಸಿರುವವರು ಇದ್ದಾರೆ” ಎಂದು ವರದಿ ಹೇಳಿದೆ.

ಗುತ್ತಿಗೆ ಕಾರ್ಮಿಕರಲ್ಲಿ ತಮಿಳುನಾಡು, ಆಂಧ್ರ ಪ್ರದೇಶ, ಬಿಹಾರ ಮತ್ತಿತರ ರಾಜ್ಯಗಳಿಂದ ವಲಸೆ ಕಾರ್ಮಿಕರು, ಕರ್ನಾಟಕದ ಇತರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರು ಮತ್ತು ನರಸಾಪುರ ಸುತ್ತಲಿನ ತಾಲೂಕು ಮತ್ತು ಹಳ್ಳಿಗಳಿಂದ ಬಂದಿರುವ ಕಾರ್ಮಿಕರು ಸೇರಿದಂತೆ ಒಟ್ಟು ಮೂರು ವರ್ಗಗಳಿವೆ ಎಂದು AICCTU ಸೂಚಿಸಿದೆ.

ಘಟನೆಯ ಬಗ್ಗೆ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿ

ಕಂಪೆನಿಯಲ್ಲಿನ ಕಾರ್ಮಿಕ ವರ್ಗ ಯುವಕರಾಗಿದ್ದು, 26 ವರ್ಷಕ್ಕೂ ಮೇಲ್ಪಟ್ಟ ಕಾರ್ಮಿಕರ ಎಲ್ಲ ಅರ್ಜಿಗಳನ್ನೂ ವಿಸ್ಟ್ರಾನ್ ಅಧಿಕಾರಿಗಳು ತಿರಸ್ಕರಿಸಿದ್ದಾರೆ ಎಂದಿರುವ ಕಾರ್ಮಿಕ ಸಂಘಟನೆ, “ಖಾಯಂ ನೌಕರರಿಗೆ ಒದಗಿಸಬೇಕಾದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ತಪ್ಪಿಸುವ ಸಲುವಾಗಿ ಕಂಪೆನಿಯು ಗುತ್ತಿಗೆದಾರರನ್ನು ನೇಮಿಸಿದ್ದು, ನೇಮಕಾತಿ ಆದೇಶವನ್ನು ಕಾರ್ಮಿಕರಿಗೆ ನೀಡುವುದು ಮತ್ತು ವೇತನ ಪಾವತಿ ಮಾಡುವುದನ್ನು ಹೊರತುಪಡಿಸಿ ಗುತ್ತಿಗೆದಾರರು ಮತ್ತಾವುದೇ ಪಾತ್ರ ವಹಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

“ಹತ್ತಿರದ ಹಳ್ಳಿಗಳಿಂದ ಬಂದಿರುವ ಕಾರ್ಮಿಕರು ತೀವ್ರ ಬಡತನದ ಹಿನ್ನೆಲೆ ಹೊಂದಿದ್ದು ಹೆಚ್ಚಿನವರು ದಲಿತ ಸಮುದಾಯದವರಾಗಿದ್ದಾರೆ. ಲಾಕ್‌ಡೌನ್‌ನಿಂದಾಗಿ‌‌ ಕಾಲೇಜುಗಳನ್ನು ಮುಚ್ಚಲಾಗಿದ್ದರಿಂದ ಇವರಲ್ಲಿ ಅನೇಕರು ಕಾರ್ಖಾನೆಯ ಕೆಲಸಕ್ಕೆ ಸೇರಿಕೊಂಡಿದ್ದು, ಇವರ ನೇಮಕಾತಿಯ ಸಂದರ್ಭದಲ್ಲಿ ತಿಂಗಳಿಗೆ 22000/- ರೂಗಳ ವೇತನದ ಜೊತೆಗೆ, ಹೆಚ್ಚುವರಿ ದುಡಿಮೆಯ ವೇತನವನ್ನೂ ನೀಡುವುದಾಗಿ ಹೇಳಿತ್ತಾದರೂ ಇದನ್ನು ಕಂಪೆನಿ ನೀಡುತ್ತಿಲ್ಲ. ಜೊತೆಗೆ ರಜೆಯ ಸೌಲಭ್ಯಗಳನ್ನೂ ನೀಡುತ್ತಿಲ್ಲ” ಎಂದು AICCTU ಆರೋಪಿಸಿದೆ. ಇದುವರೆಗೂ ಯಾವುದೇ ಗುತ್ತಿಗೆ ಕಾರ್ಮಿಕರಿಗೆ 12,000 ಕ್ಕಿಂತ ಹೆಚ್ಚಿನ ಸಂಬಳ ನೀಡಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

“ಕಾನೂನು ಪ್ರಕಾರ ನೀಡಬೇಕಾದ ಹೆಚ್ಚುವರಿ ದುಡಿಮೆಯ ವೇತನವನ್ನು ಈವರೆಗೂ ಪಾವತಿ ಮಾಡದಿರುವುದು ಮಾತ್ರವಲ್ಲದೆ, ಪ್ರತಿ ತಿಂಗಳೂ ಕಾರ್ಮಿಕರ ಖಾತೆಗಳಿಗೆ ಜಮಾ ಆಗುವ ವೇತನಗಳು ಕಡಿಮೆಯಾಗುತ್ತಲೇ ಇದೆ. ಕಾರ್ಮಿಕರು ತಮ್ಮ ಕುಂದುಕೊರತೆಗಳನ್ನು ಕಂಪನಿಯ ಅಧಿಕಾರಿಗಳಿಗೆ ಸಲ್ಲಿಸುವುದರ ಜೊತೆಗೆ ಕೋಲಾರದ ಜಿಲ್ಲಾಧಿಕಾರಿಗಳನ್ನೂ ಸಂಪರ್ಕಿಸಿದ್ದರು” ಎಂದು AICCTU ಹೇಳಿದೆ.

“ಡಿಸೆಂಬರ್‌ 9 ರಂದು ಕಾರ್ಮಿಕರು ಸಿಬ್ಬಂದಿ ಇಲಾಖೆಯ ಅಧಿಕಾರಿಯನ್ನು ಸಂಪರ್ಕಿಸಿ ತಮ್ಮ ವೇತನ ಪಾವತಿ ಮಾಡುವಂತೆ ವಿನಂತಿಸಿದ್ದಾರಾದರೂ, ಅವರ ವಿನಂತಿಯನ್ನು ಆಲಿಸಲಾಗಿಲ್ಲ. ಆದರೆ ಇದಾಗಿ ಕೆಲವೆ ದಿನದಲ್ಲಿ ಒಮ್ಮೆಲೆ ಪರಿಸ್ಥಿತಿ ಕೈಮೀರಿಹೋಗಿದ್ದು, ಕೆಲವು ಕಾರ್ಮಿಕರು ಕಂಪನಿಯ ಆಸ್ತಿಪಾಸ್ತಿಯ ಹಾನಿ ಮಾಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ವಿಡಿಯೋ ಚಿತ್ರಗಳ ಅನುಸಾರ ಕಾರ್ಮಿಕರು ಗಾಜಿನ ಕಿಟಕಿಗಳನ್ನು ಒಡೆದುಹಾಕಿದ್ದು, ವಾಹನಗಳನ್ನು ತಲೆಕೆಳಗು ಮಾಡಿರುವುದು, ಹಾನಿ ಮಾಡಿರುವುದು ಕಂಡುಬಂದಿದೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಮಿಕರನ್ನು ಚದುರಿಸಿದ್ದಾರೆ”

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ಹೊರಗಿನಿಂದ ಕೆಲವು ವ್ಯಕ್ತಿಗಳು ಕಾರ್ಖಾನೆಯೊಳಗೆ ಬಂದು ಧ್ವಂಸ ಮಾಡಿದ್ದಾರೆ ಎಂದು ಕೆಲವು ಕಾರ್ಮಿಕರು ಹೇಳಿದ್ದಾರೆಂದು ಹೇಳಿರುವ AICCTU, “ವಿಡಿಯೋ ಚಿತ್ರಣವನ್ನು ನೋಡಿದರೆ, ಬಹುಪಾಲು ಜನರು ಕೇವಲ ವೀಕ್ಷಕರಾಗಿ ಕಾಣುತ್ತಿದ್ದು, ಕೆಲವರು ಮಾತ್ರವೇ ಕಂಪನಿಯ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದು ಕಂಡುಬರುತ್ತದೆ” ಎಂದಿದೆ. ಇದುವರೆಗೂ ಒಟ್ಟು 160 ಕಾರ್ಮಿಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆಯಾದರೂ ಬಂಧಿತರನ್ನು ಕುರಿತಂತೆ ಯಾವುದೇ ಮಾಹಿತಿ ನೀಡಲಾಗಿಲ್ಲ ಎಂದು AICCTU ಆರೋಪಿಸಿದೆ.

“ರಾಜ್ಯ ಸರ್ಕಾರವು ಕಂಪನಿಯ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದನ್ನು ಖಂಡಿಸಿದೆ. ಆದರೆ ಕಾರ್ಮಿಕರ ಬವಣೆಯ ಬಗ್ಗೆ ಯಾವುದೇ ಅನುಕಂಪ ವ್ಯಕ್ತಪಡಿಸಿಲ್ಲ. ಡಿ.12 ರಂದು ನಡೆದ ಘಟನೆಗಳು ಶೋಷಣೆಗೊಳಗಾದ, ಅಸಂಘಟಿತ ಕಾರ್ಮಿಕರ ಹತಾಶೆ ಮತ್ತು ಆಕ್ರೋಶದ ಪರಿಣಾಮವಾಗಿದ್ದು, ತಮ್ಮ ಕುಂದುಕೊರತೆಗಳನ್ನು ನಿವಾರಿಸಲು ಯಾವುದೇ ಮಾರ್ಗ ಕಾಣದೆ ಈ ದಾಂಧಲೆಯಲ್ಲಿ ತೊಡಗಿದೆ. ತಮ್ಮ ವಿರುದ್ದ ನಡೆಯುತ್ತಿರುವ ಶೋಷಣೆಯ ಒತ್ತಡ ಒಮ್ಮೆಲೆ ಸ್ಫೋಟಿಸಿದ್ದು ಈ ಹಿಂಸಾತ್ಮಕ ಘಟನೆಯಲ್ಲಿ ಪರ್ಯವಸಾನ ಹೊಂದಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಕಾರ್ಮಿಕರು ನಡೆದಿರುವ ಘಟನೆಯ ಬಗ್ಗೆ ಭಯಗೊಂಡಿದ್ದು, ಈ ಸನ್ನಿವೇಶದಲ್ಲಿ ರಾಜ್ಯ ಸರ್ಕಾರ, ಕಾರ್ಮಿಕ ಇಲಾಖೆ ಮತ್ತು ಪೊಲೀಸರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಾರ್ಮಿಕ ಸಂಘಟನೆಯು ಸಲಹೆ ನೀಡಿದೆ.

“ವೇತನ ಪಾವತಿಯಾಗದಿರುವುದು ಮತ್ತು ತಡವಾಗಿ ಪಾವತಿಯಾಗಿರುವುದು 1936 ರ ವೇತನ ಪಾವತಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು. ಕನಿಷ್ಟ ವೇತನ ಪಾವತಿ ಮಾಡದಿರುವುದು ಮತ್ತು ಹೆಚ್ಚುವರಿ ದುಡಿಮೆಯ ವೇತನ ನೀಡದಿರುವುದು 1948 ರ ಕನಿಷ್ಟ ವೇತನ ಕಾಯ್ದೆಯ ಉಲ್ಲಂಘನೆಯಾಗಿದೆ. ಕಾರ್ಖಾನೆ ಕಾಯ್ದೆಯ ಸೆಕ್ಷನ್ 59 ರ ಉಲ್ಲಂಘಿಸಿ ಹೆಚ್ಚುವರಿ ದುಡಿಮೆಗೆ ಪಾವತಿ ಮಾಡಿಲ್ಲ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ” ಎಂದು AICCTU ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

“1947 ರ ಕೈಗಾರಿಕಾ ವಿವಾದಗಳ ಕಾಯ್ದೆಯ ಅನುಸಾರ 100 ಕ್ಕಿಂತಲೂ ಹೆಚ್ಚಿನ ಕಾರ್ಮಿಕರು ಇರುವ ಯಾವುದೇ ಕೈಗಾರಿಕೋದ್ಯಮವು ಕಾರ್ಮಿಕ ಮತ್ತು ಮಾಲಿಕರ ಪ್ರತಿನಿಧಿಗಳನ್ನೊಳಗೊಂಡ ಕ್ರಿಯಾ ಸಮಿತಿಯೊಂದನ್ನು ರಚಿಸುವುದು ಕಡ್ಡಾಯವಾಗಿದೆ. ಆದರೆ ಈ ಕಾರ್ಖಾನೆಯಲ್ಲಿ ಈ ಯಾವುದೇ ನಿಯಮಗಳನ್ನು ಪಾಲಿಸಲಾಗಿಲ್ಲ” ಎಂದು AICCTU ಹೇಳಿದೆ.

ಕಂಪೆನಿಯು ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ನಿಯಮಗಳನ್ನು ಮೀರಿ ದುಡಿಸಿಕೊಳ್ಳುತ್ತಿದೆ. 10 ಸಾವಿರಕ್ಕಿಂತಲೂ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಒಂದು ಉದ್ದಿಮೆಯಲ್ಲಿ ಕಾರ್ಮಿಕರಿಗೆ ಸಂಘಟನೆ ಇಲ್ಲ ಎಂದು ಕಾರ್ಮಿಕ ಸಂಘಟನೆಯು ವಿಷಾದ ವ್ಯಕ್ತಪಡಿಸಿದ್ದು, “ಗುತ್ತಿಗೆ ಕಾರ್ಮಿಕರನ್ನು ಹಿಂಬಾಗಿಲಿನಿಂದ ನೇಮಕ ಮಾಡಿ, ಗುತ್ತಿಗೆ ಕಾರ್ಮಿಕ ಕಾಯ್ದೆಗಳನ್ನೂ ಉಲ್ಲಂಘನೆ ಮಾಡಿದೆ. ಈ ವಿಷಯದಲ್ಲಿ ಸರ್ಕಾರವು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

“ಡಿಸೆಂಬರ್ 12 ರ ಘಟನೆಗಳು ಕಂಪನಿಯಲ್ಲಿ ಅನುಸರಿಸಲಾಗಿರುವ ಶೋಷಕ ನೀತಿಗಳ ಪರಿಣಾಮವಾಗಿದ್ದು, ಎಲ್ಲ ಕಾರ್ಮಿಕ ಕಾನೂನು ನಿಯಮಗಳನ್ನೂ ಉಲ್ಲಂಘಿಸಿ, ಬಡ ಕಾರ್ಮಿಕರ ಮೂಲ ವೇತನವನ್ನೂ ಪಾವತಿ ಮಾಡದೆ ಇರುವುದರಿಂದ ನೊಂದ ಶೋಷಿತ ಕಾರ್ಮಿಕರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಕಾರ್ಮಿಕರು ಅಸಹಾಯಕ ಪರಿಸ್ಥಿತಿಗೆ ದೂಡಲ್ಪಟ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವುದು, ಕಾರ್ಮಿಕರನ್ನು ಬಂಧಿಸುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡುತ್ತದೆ. ರಾಜ್ಯ ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕಿದೆ. ಹಾಗಾಗಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ದಾಖಲಾಗಿರುವ ಎಲ್ಲ ದೂರುಗಳನ್ನು ಹಿಂಪಡೆಯಬೇಕು” ಎಂದು AICCTU  ಒತ್ತಾಯಿಸಿದೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...